ಲೇಖಕ: admin

ಮಡಿಕೇರಿ ಜ.19 :  ಚಾಲಕನ ನಿಯಂತ್ರಣ ತಪ್ಪಿದ ಸರಕು ಸಾಗಾಣಿಕಾ ಲಾರಿಯೊಂದು ಪಲ್ಟಿಯಾದ ಘಟನೆ ಮೇಕೇರಿಯ ಮಸೀದಿ ಸಮೀಪದಲ್ಲಿ ನಡೆದಿದೆ. ಮಡಿಕೇರಿಯಿಂದ ವಿರಾಜಪೇಟೆ ಕಡೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಪಲ್ಟಿಯಾದ ರಭಸಕ್ಕೆ  ಲಾರಿ ಜಖಂಗೊಂಡಿದೆ.  ಅದೃಷ್ಟವಶತ್ ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಸೋಮವಾರಪೇಟೆ ಜ.18 : ಹಬ್ಬಾಚರಣೆ-ಜಾತ್ರೋತ್ಸವಗಳು ಎಲ್ಲರೂ ಬೆರೆಯಲು ಪೂರಕವಾಗಿದ್ದು, ಪರಸ್ಪರ ಪ್ರೀತಿ-ವಿಶ್ವಾಸದಿಂದ ಬದುಕಿದರೆ ಮಾತ್ರ ಉತ್ಸವಗಳಿಗೆ ಸಾರ್ಥಕತೆ ಬರುತ್ತದೆ. ಈ ನಿಟ್ಟಿನಲ್ಲಿ ಶಾಂತಳ್ಳಿಯಲ್ಲಿ ಜರುಗುವ ವಾರ್ಷಿಕ ಜಾತ್ರಾ ಮಹೋತ್ಸವ ಮಾದರಿಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. ಕಳೆದ ತಾ. 13ರಿಂದ ಚಾಲನೆಗೊಂಡು ಇಂದು ಮುಕ್ತಾಯಗೊಂಡ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವಗಳು ಪ್ರೀತಿ ವಿಶ್ವಾಸವನ್ನು ವೃದ್ಧಿಸಲು ಸಹಕಾರಿಯಾಗಬೇಕು. ಹಣ ಸಂಪಾದಿಸಿದರೂ ನೆಮ್ಮದಿಯನ್ನು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ದೇವಾಲಯಗಳು ನೆಮ್ಮದಿಯ ಕೇಂದ್ರಗಳಾಗಿ ರೂಪುಗೊಳ್ಳಬೇಕು ಎಂದು ಸ್ವಾಮೀಜಿ ಹೇಳಿದರು. ಅರಿಷಡ್ವರ್ಗಗಳನ್ನು ಮೀರಿ ಬದುಕು ನಡೆಸಿದರೆ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ಕಿವಿಮಾತು ನುಡಿದ ಶ್ರೀ ಸದಾಶಿವ ಸ್ವಾಮೀಜಿಗಳು, ವೈಜ್ಞಾನಿಕತೆ ಎಷ್ಟೇ ಮುಂದುವರೆದೂ ಬದುಕಿನ ಸಾರ್ಥಕತೆ ಕಾಣಲು ದೇವಾಲಯಗಳ ಮಾರ್ಗದರ್ಶನ ಪಡೆಯಬೇಕು. ಧಾರ್ಮಿಕ ತಳಹದಿಯ ಮೇಲೆ ಸಮಾಜ ನಿರ್ಮಾಣಗೊಂಡರೆ ಮಾತ್ರ ಸಾಮರಸ್ಯದ…

Read More

ಮಡಿಕೇರಿ ಜ 18. ಜಿಲ್ಲೆಯ ಹಿರಿಯ ಸಾಹಿತಿ, ಕತೆಗಾರ ಪೂ ರಾ ಶ್ರೀನಿವಾಸ್ ಮತ್ತು ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷರು ಸಮಾಜ ಸೇವಾಕರ್ತರೂ ಆದ  ಎಂ.ಸಿ.ವಾಸುದೇವ್ ರವರು ನಿನ್ನೆ ನಿಧನರಾಗಿರುತ್ತಾರೆ. ಪೂರಾ ಶ್ರೀನಿವಾಸ್‌ರವರು ಕವಿಗಳು, ಸಾಹಿತಿ ಮತ್ತು ಲೇಖಕರು ಆಗಿದ್ದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ  ಅವರ ಕೊಡುಗೆ ಅಪಾರ ಹಾಗೆಯೇ ಎಂ.ಸಿ ವಾಸುದೇವ್ ರವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಮಡಿಕೇರಿ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದು ಅಪಾರ ಸೇವೆ ಸಲ್ಲಿಸಿರುತ್ತಾರೆ ಎಂದು ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೇಕಲ್ ನವೀನ್ ನುಡಿದರು. ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿ ಆಶ್ರಯದಲ್ಲಿ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು ಸಭೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷರಾದ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ನಿರ್ದೇಶಕರಾದ ಟಿ.ಪಿ ರಮೇಶ್ ರವರು ಮಾತನಾಡಿ…

Read More

ಮಡಿಕೇರಿ ಜ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವು ಜನವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಸುಂಟಿಕೊಪ್ಪ,ಜ.18 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದ್ದೆಹಳ್ಳ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ ಸೇವಾ ಪ್ರತಿನಿಧಿ ಜ್ಯೋತಿ ವಾಸು, ಗದ್ದೆಹಳ್ಳದ ಒಕ್ಕೂಟದ ಉಪಾಧ್ಯಕ್ಷ ಆನಂದ ಹಾಗೂ ಶ್ರೀಮುತ್ತಪ್ಪ ದೇವಸ್ಥಾನದ ಆರ್ಚಕ ಶಿವಮಣಿ, ಸುಂಟಿಕೊಪ್ಪ, ಗದ್ದೆಹಳ್ಳ ಹಾಗೂ ನಾರ್ಗಾಣೆ, ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.18 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ನಲ್ಲೂರು ಮತ್ತು ಎಫ್2 ಬಾಳೆಲೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜನವರಿ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ಸ್ಥಗಿತಗೊಳ್ಳಲಿದೆ. ಆದ್ದರಿಂದ ಕಿರುಗೂರು, ನಲ್ಲೂರು, ಪೊನ್ನಪ್ಪಸಂತೆ, ಸುಳುಗೋಡು, ಬಾಳೆಲೆ, ಮತ್ತೂರು, ಕಾನೂರು, ದೇವನೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಎಫ್6 ಹುದಿಕೇರಿ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜನವರಿ, 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಬಲ್ಯಮಂಡೂರು, ಚಿಕ್ಕಮಂಡೂರು, ತಾವರೆಕೆರೆ, ಮುಗಟಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಅವರು ಕೋರಿದ್ದಾರೆ.

Read More

ಮಡಿಕೇರಿ ಜ.18 : ಜಿಲ್ಲಾ ವಲಯ ಕೈಮಗ್ಗ ಉದ್ದಿಮೆಗಳಿಗೆ ಸಹಾಯ ಯೋಜನೆಯಡಿ 2022-23 ನೇ ಸಾಲಿನಲ್ಲಿ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜ.30 ರಿಂದ ಫೆ .5 ರವರೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಜನವರಿ 30 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.18 : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಪ್ರಯುಕ್ತ ನರಿಯಂದಡ ಗ್ರಾಮ ಪಂಚಾಯಿತಿ ವಾಪ್ತಿಯ ಚೆಯ್ಯಂಡಾಣೆ ವೃತ್ತಕ್ಕೆ ಒಳಪಡುವ ನರಿಯಂದಡ, ಕೋಕೇರಿ, ಚೇಲವಾರ ಗ್ರಾಮಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಜನವರಿ, 21 ರಂದು ಬೆಳಗ್ಗೆ 10 ಗಂಟೆಗೆ ನರಿಯಂದಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.18 : ಬಾಳಿ ಬದುಕಬೇಕಾಗಿದ್ದ ಸಹೋದರರ ಬಾಳಿನಲ್ಲಿ ಆಕಸ್ಮಿಕವಾಗಿ ಕತ್ತಲು ಆವರಿಸಿ ದೃಷ್ಟಿ ಹೀನರಾದರು, ಗುಡಿಸಲು ಮನೆಯು ಆಸರೆಯಾದ ಹಿನ್ನಲೆಯಲ್ಲಿ ಗ್ರಾ.ಪಂ ಸುಮಾರು ಎರಡು ತಿಂಗಳ ಅವಧಿಯಲ್ಲಿ ಮನೆ ನಿರ್ಮಾಣ ಮಾಡಿ ಅಂಧ ಸಹೋದರರಿಗೆ ಮಕರ ಸಂಕ್ರಾಂತಿಯ ಉಡುಗೊರೆಯಾಗಿ ನೀಡಿತು. ವಿರಾಜಪೇಟೆ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಬಾರಿಕಾಡು ಪೈಸಾರಿ ನಿವಾಸಿ ಪಿ.ಕೆ.ರಾಮಚಂದ್ರ ಮತ್ತು ಸರೋಜ ದಂಪತಿಗಳ ಪುತ್ರರಾದ ಪಿ.ಆರ್. ಕೃಷ್ಣೇಂದ್ರ ಮತ್ತು ಪಿ.ಆರ್. ಜಯೇಂದ್ರ ದೃಷ್ಟಿ ಕಳೆದುಕೊಂಡು ಜೀವನ ಸಾಗಿಸುತ್ತಿರುವ ಸಹೋದರರು. ಬಡ ಜೀವಗಳ ಬಾಳಿಗೆ ಕೆದಮುಳ್ಳೂರು ಗ್ರಾ.ಪಂ ಯು ಬಸವ ಕಲ್ಯಾಣ ಯೋಜನೆ ಅಡಿಯಲ್ಲಿ ಮನೆಯೊಂದು ನಿರ್ಮಾಣ ಮಾಡಿ ಸಂಕ್ರಾಂತಿ ದಿನದ ಕಾಣಿಕೆಯಾಗಿ ನೀಡಿತು. ಕೆದಮುಳ್ಳೂರು ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು, ಪಿ.ಡಿ.ಓ, ಕಾರ್ಯದರ್ಶಿ, ಸಿಬ್ಬಂದಿಗಳು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸರಳವಾಗಿ ನಡೆದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ತಾಲ್ಲೂಕು ದಂಢಾಧಿಕಾರಿ ಹಾಗೂ ತಹಶೀಲ್ದಾರ್ ಅರ್ಚನಾ ಭಟ್, ಸಮಾಜ ಸಬಲೀಕರಣ ಎಂಬುದು ಬಡವರ, ದೀನ ದಲಿತರನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು…

Read More

ಮಡಿಕೇರಿ ಜ.18 : ಭಾರತೀಯ ಸೇನೆಯ ಮಾಜಿ ಮುಖ್ಯಸ್ಥರು, ಕಾರ್ಗಿಲ್ ಸಮರದ ನೇತೃತ್ವ ವಹಿಸಿದ್ದ ಜನರಲ್ ವೇದ್ ಪ್ರಕಾಶ್ ಮಲ್ಲಿಕ್ ಪಿವಿಎಸ್ ಎಂ, ಎವಿಎಸ್‍ಎಂ ಅವರು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ವೀಕ್ಷಿಸಿದರು. ಪತ್ನಿ ಡಾ.ಅಂಜನಾ ಮಲ್ಲಿಕ್ ಅವರೊಂದಿಗೆ ಭೇಟಿ ನೀಡಿದ ವಿ.ಪಿ.ಮಲ್ಲಿಕ್ ಅವರು ಸ್ಮಾರಕ ಭವನ ವೀಕ್ಷಿಸಿ ಇಲ್ಲಿನ ವ್ಯವಸ್ಥಿತ ಸಂಗ್ರಹದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಜನರಲ್ ತಿಮ್ಮಯ್ಯ ಅವರ ಸೇನಾ ಜೀವನ ಪ್ರತೀಯೊಬ್ಬ ಭಾರತೀಯನಿಗೂ ಆದರ್ಶಪ್ರಾಯ ಎಂದು ಮಲ್ಲಿಕ್ ಹೇಳಿದರು. ತಿಮ್ಮಯ್ಯ ಸ್ಮಾರಕ ಭವನದ ವ್ಯವಸ್ಥಾಪಕ ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ, ನಾಯಕ್ ಸುಬೇದಾರ್ ಮೋಹನ್ ಹಾಜರಿದ್ದರು.

Read More