ಲೇಖಕ: admin

ವಿರಾಜಪೇಟೆ ಜ.2 : ಕುಶಾಲನಗರದ ಹಾರಂಗಿಯಲ್ಲಿರುವ ಜ್ಞಾನ ಗಂಗಾ ವಸತಿ ಶಾಲೆಯಲ್ಲಿ ಏರ್ಪಡಿಸಿದ ಜಿಲ್ಲಾಮಟ್ಟದ ಅಂತರ್ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಆಕರ್ಷ್ ಕೊಂಗಂಡ, ಅಯ್ಯಪ್ಪ ಎಂ.ಜಿ, ತಹನ್ ಪೂವಯ್ಯ ಸಿ, ಮತ್ತು 8 ನೇ ತರಗತಿ ವಿದ್ಯಾರ್ಥಿ ಸೋಹನ್ ಗೌಡ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ ಟ್ರೋಫಿ ಮತ್ತು ನಗದು ಬಹುಮಾನ ತಮ್ಮದಾಗಿಸಿಕೊಂಡಿದ್ದು, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.

Read More

ಮಡಿಕೇರಿ ಜ.1 : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು-2023ರ ಜ.6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸಾಧಕರನ್ನು ಸನ್ಮಾನಿಸುವ, ಸಾಹಿತಿಗಳಿಗೆ ಕವನ ವಾಚನ ಮತ್ತು ವಿಷಯ ಮಂಡನೆಗೆ ಅವಕಾಶ ನೀಡಲಾಗಿದೆ. ಜ.6 ರಂದು  ಸಂಜೆ  4 ಗಂಟೆಗೆ ಜರಗುವ ಕವಿಗೋಷ್ಠಿಯಲ್ಲಿ ಕೊಡಗಿನ ಹಿರಿಯ ಚುಟುಕು ಕವಿ ಹಾ.ತಿ ಜಯಪ್ರಕಾಶ್  ಕವನ ವಾಚನ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ನಡೆಯಲಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪುತ್ರ  ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರಿಯಪ್ಪ ಅವರಿಗೆ ರಕ್ಷಣಾ ಕ್ಷೇತ್ರದಲ್ಲಿ ದೇಶ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸನ್ಮಾನ ನಡೆಯಲಿದೆ.  ಇದು ಕೊಡಗು ಜಿಲ್ಲೆಗೆ ಮತ್ತು ಕೊಡಗಿನ ರಕ್ಷಣಾ ಕ್ಷೇತ್ರದ ಸೇವೆಗೆ ನೀಡಿದ ಗೌರವವಾಗಿದೆ. ಜ.7 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ “ಶಿಕ್ಷಣದಲ್ಲಿ ಕನ್ನಡ ಅಸ್ಮಿತೆ” ಎಂಬ ವಿಚಾರ ಗೋಷ್ಠಿಯಲ್ಲಿ ಕೊಡಗಿನವರಾದ, ಇದೀಗ ಹಂಪಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾದ ಡಾ.ಮಾಧವ…

Read More

ಮಡಿಕೇರಿ, ಜ.1 : ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ( ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ , ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಕೊಡಗು ಜಿಲ್ಲಾಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2022 ನ್ನು ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಜ.3 ರಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10  ಗಂಟೆಗೆ ನಡೆಯಲಿರುವ ಸಮ್ಮೇಳನವನ್ನು  ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್  ಉದ್ಘಾಟಿಸಲಿದ್ದು, ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಜಿ.ಎಚ್. ಮಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಸಮಾವೇಶದ ಕುರಿತು…

Read More

ಬೇಕಾಗುವ ಸಾಮಾಗ್ರಿಗಳು :  ಕುರಿಯ ಕಾಲುಗಳು -4,  ಶುಂಠಿ-ಬೆಳ್ಳುಳ್ಳಿ ಪೇಸ್ಟ್ –  ಅರ್ಧ ಚಮಚ,  ಸಣ್ಣಗೆ ಹೆಚ್ಚಿದ ಈರುಳ್ಳಿ- 3,  ಹಸಿರು ಮೆಣಸಿನಕಾಯಿ -4 ರಿಂದ 6,  ಟೊಮೆಟೊ 1,  ಕೊತ್ತಂಬರಿ ಸೊಪ್ಪು – ಒಂದು ಬಟ್ಟಲು, ಕೆಂಪು ಮೆಣಸಿನ ಪುಡಿ ಒಂದು ಚಮಚ, ಕರಿಮೆಣಸು ಪುಡಿ -1 ಚಮಚ,  ಎಣ್ಣೆ 3 ಚಮಚ,  ಗರಂ ಮಸಾಲ ಪುಡಿ 1 1/2 ಚಮಚ, ಅರಶಿನ ಪುಡಿ -ಅರ್ಧ ಚಮಚ, ಏಲಕ್ಕಿ 2 ರಿಂದ 4 ಕಾಳುಗಳು,  ರುಚಿಗೆ ತಕ್ಕಷ್ಟು ಉಪ್ಪು,  ಅಗತ್ಯಕ್ಕೆ ತಕ್ಕಂತೆ ನೀರು ಮಾಡುವ ವಿಧಾನ :  ತಂದು ಇಟ್ಟಿರುವ ಅಂತಹ ಮಟನ್ ಕಾಲುಗಳನ್ನು ಚೆನ್ನಾಗಿ ನೀರಿನಲ್ಲಿ ತೊಳೆದು ಅದನ್ನು ಪ್ರೆಶರ್ ಕುಕ್ಕರ್ ನಲ್ಲಿ ಹಾಕಿ ಅದೇ ಕುಕ್ಕರ್ ಗೆ ಅರಿಶಿನಪುಡಿ ಏಲಕ್ಕಿ ಪುಡಿ ಮತ್ತು ಕರಿಮೆಣಸು ಪುಡಿಯನ್ನು ಸೇರಿಸಿ. ಹಾಗೆ ಮುಂದೆ 5 ಕಪ್ ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ಸುಮಾರು ಹತ್ತರಿಂದ ಹದಿನೈದು ನಿಮಿಷಗಳ ಕಾಲ ಕುಕ್ಕರ್…

Read More

ಮಡಿಕೇರಿ ಜ.2 : ಸೋಮವಾರಪೇಟೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.9 ರಂದು ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಬಸ್ಸು ನಿಲ್ದಾಣ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜೆ.ಸಿ.ವೇದಿಕೆಯಿಂದ ವಿವಿಧ ಕಲಾ ತಂಡಗಳು ಹಾಗೂ ಪೂರ್ಣ ಕುಂಭ ಕಳಸದೊಂದಿಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮೆರವಣಿಗೆ ನಡೆಯಲಿದೆ. ನಂತರ 10 ಗಂಟೆಗೆ ತುಮಕೂರು ಶ್ರೀ ಸಿದ್ದಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ವಿರಾಜಪೇಟೆ ಅರಮೇರಿ, ಕಳಂಚೇರ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಮ್ಮತ್ತಿ ಕನ್ನಡಮಠದ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲುಮಠದ ಸದಾಶಿವ ಸ್ವಾಮೀಜಿ, ಬಸವಪಟ್ಟಣ ತೋಂಟದಾರ್ಯ ಸಂಸ್ಥಾನಮಠದ ಸ್ವತಂತ್ರ ಬಸವಲಿಂಗ ಸ್ವಾಮಿಜಿ, ತೊರೆನೂರು ವಿರಕ್ತಮಠದ ಮಲ್ಲೇಶ ಸ್ವಾಮೀಜಿ, ಅಂಕನಳ್ಳಿ ಮನೆಹಳ್ಳಿಮಠದ ತಪೋಕ್ಷೇತ್ರ ಮಹಾಂತ ಶಿವಲಿಂಗ ಸ್ವಾಮೀಜಿ, ಮಾದ್ರೆ ಮುದ್ದಿನಕಟ್ಟೆಮಠ ಅಭಿನವ ಸಿದ್ದಲಿಂಗ ಶಿವಾರ್ಚರ್ಯ ಸ್ವಾಮೀಜಿ, ಕೆಸವತ್ತೂರುಮಠದ ಬಸವರಾಜೇಂದ್ರ ಸ್ವಾಮಿಜಿ,…

Read More

ಮಡಿಕೇರಿ ಜ 2 :  ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ವತಿಯಿಂದ ನಗರದ ಚೌಡೇಶ್ವರಿ ದೇವಾಲಯದ ಬಳಿಯಲ್ಲಿನ ಅಂಗನವಾಡಿ ಕೇಂದ್ರಕ್ಕೆ ಕುಚಿ೯ , ಬೋಡ್೯ ಕೊಡುಗೆಯಾಗಿ ನೀಡಲಾಯಿತು. ಮಡಿಕೇರಿ ನಗರಸಭೆಯ ಉಪಾಧ್ಯಕ್ಷೆ ಸವಿತಾ ರಾಕೇಶ್ ಮಾತನಾಡಿ, ಮಕ್ಕಳಿಗೆ ಉಪಯುಕ್ತವಾದ ಕೊಡುಗೆ ನೀಡಿರುವ ಇನ್ನರ್ ವೀಲ್ ತಂಡದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಡಾ.ರೇಣುಕಾಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ನಿದೇ೯ಶಕಿಯರಾದ ಶಫಾಲಿ ರೈ, ಶಮ್ಮಿ ಪ್ರಭು, ಉಮಾಗೌರಿ, ಮಲ್ಲಿಗೆ ಪೈ, ರಶ್ಮಿ ಪ್ರವೀಣ್ , ಆಗ್ನೇಸ್ ಮುತ್ತಣ್ಣ, ಹಾಜರಿದ್ದರು.

Read More

ಮಡಿಕೇರಿ ಜ.2 : ಬ್ರಹ್ಮಕುಮಾರಿ ಮಡಿಕೇರಿ ಶಾಖೆಯಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿ ಅವರು ಹೊಸ ವರ್ಷದ ಪ್ರೇರಣೆಗಳನ್ನು ನೀಡಿ, ಜೀವನದಲ್ಲಿ ಬರುವ ಪರಿಸ್ಥಿತಿಯನ್ನು ಎದುರಿಸಲು ಪರಮಾತ್ಮನ ಶಕ್ತಿಯ ಅವಶ್ಯಕತೆ ಇದೆ. ಆದ್ದರಿಂದ ಜ್ಞಾನದ ಮಹತ್ವ ಅಗತ್ಯ ಎಂದು ಅಶೀರ್ವಾಚನ ನೀಡಿದರು. ಶಾಖೆಯ ಸಭಾಂಗಣದಲ್ಲಿ  ಪರಮಾತ್ಮ ಶಿವನ ಸ್ಮೃತಿಯಲ್ಲಿ ಜ್ಯೋತಿ ಬೆಳೆಗಿಸಿ, ಕೇಕ್ ಕತ್ತರಿಸಿ ನೆರೆದಿದ್ದವರಿಗೆ ಪ್ರಸಾದ ವಿತರಿಸಲಾಯಿತು.  

Read More

ಮಡಿಕೇರಿ ಜ.2 : ಜಿಲ್ಲಾ ದಿವ್ಯಾಂಗರ ಒಕ್ಕೂಟ ಹಾಗೂ ಮಡಿಕೇರಿ ನಗರಸಭೆ ಸಂಯುಕ್ತಾಶ್ರಯದಲ್ಲಿ ಜ.4 ರಂದು ದಿವ್ಯಾಂಗರ ದಿನಾಚರಣೆ ಹಾಗೂ ದಿವ್ಯಾಂಗರ ಕುಂದುಕೊರತೆ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ, ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಕೇತ್ ಪೂವಯ್ಯ, ನಾಪಂಡ ಮುತ್ತಪ್ಪ, ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ರವಿ ಗೌಡ, ಜಿಲ್ಲಾ ದಿವ್ಯಾಂಗರ ಒಕ್ಕೂಟದ ಅಧ್ಯಕ್ಷೆ ಎನ್.ಕೆ.ಈಶ್ವರಿ ಪಾಲ್ಗೊಳ್ಳಲಿದ್ದಾರೆ.  

Read More

ವಿರಾಜಪೇಟೆ ಜ.2 : ಮಲೆತಿರಿಕೆ ಬೆಟ್ಟದ ಶ್ರೀ ಅಯ್ಯಪ್ಪ ಸ್ಪಾಮಿ ದೇವಾಲಯದ ವಾರ್ಷಿಕ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಅಯ್ಯಪ್ಪ ಸ್ಪಾಮಿ ಚಲನವಲನಉಳ್ಳ ಸ್ತದ್ಧಚಿತ್ರ, ಅಯ್ಯಪ್ಪ ಸ್ಪಾಮಿ ಮಾಲಾಧರಿಗಳ ಭಜನೆ, ದೀಪಾರತಿಯ ಶೋಭಯಾತ್ರೆಯೊಂದಿಗೆ ವಾರ್ಷೀಕ ಉತ್ಸವ ತೆರೆಕಂಡಿತು. ಮುಂಜಾನೆಯಿಂದಲೇ ಶ್ರೀ ಅಯ್ಯಪ್ಪ ಸ್ವಾಮಿಗೆ ಗಣಪತಿ ಹೊಮ, ಲಕ್ಷ್ಮೀ ಪೂಜೆ ಸರಸ್ಪತಿ ಪೂಜೆ, ತುಲಭಾರ ಸೇವೆ ಲಕ್ಷಾರ್ಚನೆ ಹಾಗೂ ಮಾಹಾಪೂಜೆ ಜರುಗಿತು. ನಂತರ ಗರುಡ ಪಕ್ಷಿಯ ಆಗಮಾನಗೊಂಡು ಗರುಡಕಂಭಕ್ಕೆ ಮೂರು ಸುತ್ತಿನ ಪ್ರದಕ್ಷಿಣೆಯೊಂದಿಗೆ ಹಿಂದಿರುಗಿತು. ಮಾಹಾಪೂಜೆ ಬಳಿಕ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಬೆಟ್ಟದ ತಪ್ಪಲಿನಿಂದ ಶ್ರೀ ಅಯ್ಯಪ್ಪ ಸ್ಪಾಮಿಯ ಶೋಭಯಾತ್ರೆ ಆರಂಭಗೊಂಡಿತು. ಮೆರವಣಿಗೆಯು ತೆಲುಗರ ಬೀದಿ, ದೊಡ್ಡಟ್ಟಿ ಚೌಕಿ, ಎಫ್.ಎಂ.ಸಿ ರಸ್ತೆ, ಮಲಬಾರ್ ರಸ್ತೆಯ ಶ್ರೀ ಚೈತನ್ಯ ಮಠಪುರ, ಮುತ್ತಪ್ಪ ದೇವಾಲಯದಲ್ಲಿ ಕೊನೆಗೊಂಡಿತು. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ದೇವಾಲಯಕ್ಕೆ ಆಗಮಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಶೋಭಯಾತ್ರೆಯಲ್ಲಿ ಹೆಣ್ಣು ಮಕ್ಕಳ ದೀಪಾರತಿ ಸೇವೆ, ಶ್ರೀ ಅಯ್ಯಪ್ಪ…

Read More

ಮಡಿಕೇರಿ ಜ.2 :  ಸಾಹಿತ್ಯ ಹಾಗೂ ಪತ್ರಿಕೋದ್ಯಮದ ಅನನ್ಯ ಸೇವೆಗಾಗಿ ಮೈಸೂರು ಹಾಗೂ ಹಾಸನ ಬ್ಯುರೊ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ “ಕಾವೇರಿ ಕರ್ನಾಟಕ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾವೇರಿ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಅಕಾಡೆಮಿ ಈ ಪ್ರಶಸ್ತಿ ಕೊಡಮಾಡುತ್ತಿದೆ. ಕಳೆದ 28 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಗಲೇ ಮೈಸೂರಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ವಿದ್ಯಾನಿಧಿ ಪ್ರಶಸ್ತಿ, ಪತ್ರಿಕೋದ್ಯಮದಲ್ಲಿ ರಾಜ್ಯಮಟ್ಟದ 10 ಪ್ರಶಸ್ತಿ, ಯುಜಿಸಿಯಿಂದ ಚಿನ್ನದ ಪದಕ ಪಡೆದಿದ್ದಾರೆ. ಇಲ್ಲಿಯವರೆಗೆ 31 ಕೃತಿಗಳನ್ನು ಬರೆದಿದ್ದಾರೆ.  

Read More