ಮಡಿಕೇರಿ ಫ.27 : ಇನ್ನರ್ ವೀಲ್ ಸಂಸ್ಥೆಯಿಂದ ಮಡಿಕೇರಿಯ ಮಡಿಲು ದತ್ತು ಸ್ವೀಕಾರ ಕೇಂದ್ರಕ್ಕೆ ಫ್ರಿಡ್ಜ್ ನ್ನು ಕೊಡುಗೆಯಾಗಿ ನೀಡಲಾಯಿತು. ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯೆಯರಾದ ಶಫಾಲಿ ರೈ, ಮಲ್ಲಿಗೆ ಪೈ, ಜ್ಯುಬಿ ಗಣಪತಿ, ಲತಾ ಸುಬ್ಬಯ್ಯ, ಪೂಣಿ೯ಮಾ ರವಿ, ಲಕ್ಷ್ಮಿ ಈಶ್ವರ ಭಟ್, ಲತಾ ಚಂಗಪ್ಪ, ಉಮಾಗೌರಿ, ಕನ್ನು ದೇವರಾಜ್ ಶಿಶುಗಳ ಪ್ರಯೋಜನಕ್ಕಾಗಿ ಫ್ರಿಡ್ಜ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.
ಲೇಖಕ: admin
ಮಡಿಕೇರಿ ಫೆ.27 : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಳ್ಳಬೇಕು ಎನ್ನುವ ನಿಯಮ ಜಾರಿಯಲ್ಲಿದೆ. ಇದರ ಪಾಲನೆಯೊಂದಿಗೆ 5 ವರ್ಷಗಳ ಅವಧಿ ಪೂರ್ಣಗೊಳ್ಳುವ ಸಂದರ್ಭವೂ ಎಲ್ಲಾ ಜನಪ್ರತಿನಿಧಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಿಕೊಳ್ಳಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ನ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಯಾಂಗವನ್ನು ಹಿಡಿತದಲ್ಲಿಟ್ಟು ಪಾರದರ್ಶಕ ಆಡಳಿತ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಶಾಸಕಾಂಗ ಇಂದು ಹಾದಿ ತಪ್ಪುತ್ತಿದೆ. ರಾಜಕೀಯ ಕ್ಷೇತ್ರ ಕಲುಷಿತವಾಗುತ್ತಿದೆ, ಇದರಿಂದ ಜನ ಬೇಸತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು 10 ರಿಂದ 100 ಕೋಟಿ ರೂ.ಗಳವರೆಗೆ ಖರ್ಚು ಮಾಡಲು ಸಿದ್ಧರಿದ್ದಾರೆ. ನ್ಯಾಯಯುತವಾಗಿ ಬೆವರು ಸುರಿಸಿ ದುಡಿದ ಹಣವನ್ನು ಈ ರೀತಿ ಖರ್ಚು ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆ ಮತದಾರರನ್ನು ಕಾಡುತ್ತಿದೆ. ಆದ್ದರಿಂದ ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಲು ಚುನಾವಣೆಗೆ ಸ್ಪರ್ಧಿಸುವಾಗ ನೀಡಿದ ಆಸ್ತಿಯ ಮೌಲ್ಯಕ್ಕೂ…
ಮಡಿಕೇರಿ ಫೆ.27 : ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮತ್ತು ಅಣಕು ಮತದಾನ ಕಾರ್ಯದ ವೇಳಾಪಟ್ಟಿ ವಿವರ ಇಂತಿದೆ. ಮಾರ್ಚ್, 3 ರಿಂದ 06 ರವರೆಗೆ ಮಲ್ಲಿಕಾರ್ಜುನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತ್ನಳ್ಳಿ, ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಳ್ಳಿ ಅಂಗನವಾಡಿ ಕೇಂದ್ರ, ಹರಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಾಂತಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತಾಳ್ತಾರೆಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಬ್ಬಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತೋಳೂರುಶೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೂತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೋಳೂರು ಮತ್ತು ಚಿಕ್ಕತೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ. ಮಾರ್ಚ್, 07 ರಿಂದ 09 ರವರೆಗೆ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆ(ಎಲ್ಡಬ್ಲ್ಯು) ಒಎಲ್ವಿ ಕಾನ್ವೆಂಟ್, ಸೋಮವಾರಪೇಟೆ ಆರ್ಡಬ್ಲ್ಯು ಒಎಲ್ವಿ…
ಮಡಿಕೇರಿ ಫೆ.27 : ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಟ್ಯಾಬ್, ಸ್ಕೂಲ್ ಕಿಟ್ ಹಾಗೂ ಕಟ್ಟಡ ಕಾರ್ಮಿಕರಿಗೆ ಪೈಂಟಿಂಗ್ ಕಿಟ್, ಕಾರ್ಪೆಂಟರ್ ಕಿಟ್ ಅನ್ನು ಶಾಸಕ ಕೆ.ಜಿ.ಬೋಪಯ್ಯ ವಿತರಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಇಲಾಖೆ ಸಿಬ್ಬಂದಿಗಳು, ಫಲಾನುಭವಿಗಳು ಹಾಜರಿದ್ದರು.
ಮಡಿಕೇರಿ ಫೆ.27 : ಚಿತ್ರದುರ್ಗ ನವೋದಯ ಪ್ರಕಾಶದ ವತಿಯಿಂದ ನಡೆಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ, ಗಣಿತ ಪ್ರತಿಭಾನ್ವೇಷಣಾ ಪರೀಕ್ಷೆ, ಹಾಗೂ ಚಿತ್ರಕಲಾ ಪರೀಕ್ಷೆಗಳಲ್ಲಿ ಕೊಟ್ಟೂರು-ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಎಂ.ಪಿ.ಧನ್ವಿ ರಾಷ್ಟ್ರಮಟ್ಟದ ಶ್ರೇಣಿಯನ್ನುಗಳಿಸಿ ಸಾಧನೆ ಮಾಡಿದ್ದು, ಹನ್ಸಿಕಾ ರಾಜ್ಯಮಟ್ಟದ ಶ್ರೇಣಿಯನ್ನು ಗಳಿಸಿದ್ದಾಳೆ. ಗಣಿತ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಕೆ.ಕೆ.ಇಂಚರ ರಾಜ್ಯಮಟ್ಟದ ಶ್ರೇಣಿಗಳಿಸಿದ್ದು, ಚಿತ್ರಕಲಾ ಸ್ಪರ್ಧೆಯಲ್ಲಿ ಕೆ.ಎಸ್.ವೃಷ್ಟಿ ರಾಷ್ಟ್ರಮಟ್ಟದ ಶ್ರೇಣಿಯನ್ನು ಗಳಿಸಿದ್ದಾಳೆ. ಎಂ.ಎ.ಜನನಿ ರಾಜ್ಯಮಟ್ಟದ ಶ್ರೇಣಿಯನ್ನು ಗಳಿಸಿ ಸಾಧನೆಯನ್ನು ಮಾಡಿದ್ದಾರೆ. ಮಾರ್ಗದರ್ಶಕರಾಗಿ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶಿಕ್ಷಕಿ ಜಸ್ಮಿ ಹಾಗೂ ಟೀನಾ ಕಾರ್ಯನಿರ್ವಹಿಸಿದ್ದಾರೆ.
ವಿರಾಜಪೇಟೆ ಫೆ.27 : ಕೇಂದ್ರ ಮತ್ತು ರಾಜ್ಯ ಸರಕಾರ ಈ ಬಾರಿಯ ಬಜೆಟ್ನಲ್ಲಿ ಕೊಡಗನ್ನು ಕಡೆಗಣಿಸಿ ಕಾರ್ಮಿಕರಿಗೆ ಮತ್ತು ರೈತರಿಗೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸಿಲ್ಲ ಎಂದು ಭಾರತ ಕಮ್ಯುನಿಸ್ಟ್ ಪಕ್ಷ [ಮಾರ್ಕ್ಸ್ವಾದಿ]ದ ವತಿಯಿಂದ ವಿರಾಜಪೇಟೆ ಗಡಿಯಾರ ಕಂಬದ ಬಳಿ ಜನಾಂದೋಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಡಾ. ಐ.ಆರ್.ದುರ್ಗಾಪ್ರಸಾದ್ ಮಾತನಾಡಿ, ಕೊಡಗಿನಲ್ಲಿ ಕೋವಿಡ್-19 ನಂತರ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಕೇಂದ್ರ ಸರಕಾರದ ಹಣಕಾಸು ಮಂತ್ರಿ ಮತ್ತು ರಾಜ್ಯದ ಮುಖ್ಯ ಮಂತ್ರಿಗಳು ಕೊಡಗನ್ನು ಕಡೆಗಣಿಸಿದ್ದಾರೆ. ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿಕರು ಬೆಳೆದ ಬೆಳೆಗೆ ನ್ಯಾಯವಾದ ಬೆಲೆ ಸಿಗುತ್ತಿಲ್ಲ. ಆದಾಯ ಕಡಿಮೆ, ಖರ್ಚು ಜಾಸ್ತಿಯಾಗುತ್ತಿದೆ. ಬಜೆಟ್ನಲ್ಲಿ ಕಳೆದ ಭಾರಿಗಿಂತ ಕಡಿಮೆ ಅನುದಾನ ನೀಡಿದ್ದಾರೆ. ಕಾರ್ಮಿಕರ ಪರವಾದ ಯಾವುದೆ ಯೋಜನೆಗಳೆ ಇಲ್ಲ. ಈಗಾಗಲೇ 18 ಸಾವಿರ ಜನರನ್ನು ಕಂಪೆನಿ ಉದ್ಯೋಗದಿಂದ ಕೈಬಿಡಲಾಗಿದೆ ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಹೋರಾಟದ ಅನಿವಾರ್ಯವಿದೆ ಎಂದು ಅಭಿಪ್ರಾಯಪಟ್ಟರು. ಸಿಪಿಐ[ಎಂ] ಜಿಲ್ಲಾ ಸಮಿತಿಯ ಎ.ಸಿ.ಸಾಬು ಮಾತನಾಡಿ ಬಜೆಟ್ನಲ್ಲಿ…
ಮೂರ್ನಾಡು ಫೆ.27 : ಬಂಟರ ಸಂಘದ ಏಳಿಗೆಗಾಗಿ ಶ್ರಮಿಸಲು ಬದ್ಧನಾಗಿದ್ದು, ಒಳ್ಳೆಯ ಕಾರ್ಯದ ವಿಚಾರದಲ್ಲಿ ಯಾರೂ ತೊಂದರೆ ಕೊಡಬಾರದು ಎಂದು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್ ರೈ ಅಭಿಪ್ರಾಯಪಟ್ಟರು. ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ಎರಡು ದಿನ ಕಾಲ ಕಾಲೇಜು ಮೈದಾನದಲ್ಲಿ ನಡೆದ ‘ಸ್ವಜಾತಿ ಬಂಧುಗಳ ಸಮ್ಮಿಲನ-2023’ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಂಟರ ಸಂಘ ಹಾಗೂ ಸಮುದಾಯದ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಕೊಳ್ಳಲಾಗಿದೆ. ಮುಂದಿನ ದಿನದಲ್ಲಿ ಒಂದೊಂದಾಗಿ ಕಾರ್ಯರೂಪಕ್ಕೆ ತರಲಾಗುವುದು. ಮುಖ್ಯವಾಗಿ ಬಂಟರ ಭವನ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲೇ ಆರಂಭಿಸಬೇಕೆಂಬ ಇರಾದೆ ಇದೆ. ಯಾರು ಕೂಡಾ ವಿನಾ ಕಾರಣ ಅಡ್ಡಗಾಲು ಹಾಕಬಾರದೆಂದು ಮನವಿ ಮಾಡಿದರು. ಜಿಲ್ಲಾ ಬಂಟರ ಶಾಂತಿ ಧಾಮಕ್ಕೆ ಸುಂದರ ರೂಪ ನೀಡಲಾಗಿದೆ. ಮುಂದೆ ಪ್ರತಿಭಾ ಪುರಸ್ಕಾರ, ಸಮುದಾಯದ ಸಾಧಕರನ್ನು ಗುರುತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಸಮುದಾಯದವರ ಏಳಿಗೆಗಾಗಿ ಬಂಟರ ಸಂಘ ಸದಾ ಬೆಂಬಲವಾಗಿರುತ್ತದೆ. ಎಲ್ಲಾ ಹೋಬಳಿಯಲ್ಲೂ ಸಂಘದ ಘಟಕ ಆರಂಭಿಸಿ, ಕಾರ್ಯಚಟುವಟಿಕೆಯಿಂದ ಕೂಡಿರುವಂತೆ ಕಾಳಜಿ ವಹಿಸಬೇಕು. ಸಮುದಾಯದ…
ಮೂರ್ನಾಡು ಫೆ.27 : ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ನಡೆದ ‘ಸ್ವಜಾತಿ ಬಂಧುಗಳ ಸಮ್ಮಿಲನ-2023’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಡಿಕೇರಿಯ ಚಕ್ರವರ್ತಿ ಬಂಟ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ನಗರದ ಕಾಲೇಜು ಮೈದಾನದಲ್ಲಿ ನಡೆದ ಪೈನಲ್ ಪಂದ್ಯದಲ್ಲಿ ಎನ್.ಪಿ. ಬಂಟ್ ವಾರಿಯರ್ಸ್ ಕುಂಜಿಲಗೇರಿ ತಂಡವನ್ನು ಮಣಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚಕ್ರವರ್ತಿ ತಂಡ ನಿಗದಿತ 6 ಓವರ್ಗೆ ನಾಲ್ಕು ವಿಕೆಟ್ ಕಳೆದುಕೊಂಡು 59 ರನ್ ಗಳಿಸಿತು. 60 ರನ್ ಗುರಿ ಬೆನ್ನತ್ತಿದ ಎನ್.ಪಿ. ಬಂಟ್ ವಾರಿಯರ್ಸ್ ಕುಂಜಿಲಗೇರಿ ತಂಡ 6 ಓವರ್ಗೆ 32 ರನ್ಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡು ರನ್ನರಪ್ ಪ್ರಶಸ್ತಿಗೆ ತೃಪ್ತಿಪಟ್ಟಿತು. ಸೆಮಿ ಫೈನಲ್ನಲ್ಲಿ ಟೀಂ ವಿರಾಟ್ ತಂಡವನ್ನು 25 ರನ್ ಅಂತರದಿಂದ ಮಣಿಸಿ ಚಕ್ರವರ್ತಿ ಬಂಟ್ಸ್ ಮಡಿಕೇರಿ ಫೈನಲ್ಗೆ ಅರ್ಹತೆ ಪಡೆಯಿತು. ಮತ್ತೊಂದು ಸೆಮಿಫೈನಲ್ನಲ್ಲಿ ಯಂಗ್ ಬಂಟ್ ಪ್ಯಾಂಥರ್ಸ್ ತಂಡವನ್ನು 6 ವಿಕೆಟ್ನಿಂದ ಸೋಲಿಸಿ ಎನ್.ಪಿ. ಬಂಟ್ ವಾರಿಯರ್ಸ್ ಅಂತಿಮ ಪಂದ್ಯಕ್ಕೆ ಅವಕಾಶ ಗಿಟ್ಟಿಸಿತು.…
ಸುಂಟಿಕೊಪ್ಪ ಫೆ.27 : ಗ್ರಾಮೀಣ ಪ್ರತಿಭೆಗಳು ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಕಾರ್ಯಕ್ರಮದ ಯಶಸ್ವಿಗೆ ದುಡಿದವರ ಶ್ರಮ ಸಾರ್ಥವಾಗುತ್ತದೆ ಎಂದು ನಾಕೂರು ಕಾನ್ಬೈಲ್ ಗ್ರಾ.ಪಂ ಅಧ್ಯಕ್ಷ ಮಂದೋಡಿ ಸಿ.ಜಗನ್ನಾಥ ತಿಳಿಸಿದರು. ನಾಕೂರು ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 23ನೇ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದ್ದು, ಗ್ರಾಮೀಣ ಪ್ರತಿಭೆಗಳನ್ನು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ಕ್ರೀಡಾಪಟುಗಳಿಗೆ ಗ್ರಾ.ಪಂ ವತಿಯಿಂದ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರವನ್ನು ನೀಡಿದ್ದು, ಗ್ರಾ.ಪಂ ಅನುದಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಎಲ್ಲಿಯೂ ಕೂಡ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿ.ಪಿ.ಶಶಿಧರ್, 23 ವರ್ಷಗಳಿಂದ ಯುವಕ ಸಂಘ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ನಾಯಕತ್ವದ ಗುಣ ಸಂಘಟನೆಗೆ ಬಲ…
ಮಡಿಕೇರಿ ಫೆ.27 : ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ, ಆದರೆ ಪಕ್ಷ ಯಾರಿಗೆ ಸ್ಪರ್ಧಿಸಲು ಅವಕಾಶ ನೀಡಿದರೂ ಶಿಸ್ತಿನ ಸಿಪಾಯಿಯಂತೆ ಕಾಂಗ್ರೆಸ್ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾನು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತೆಯಾಗಿ ಕಳೆದ 39 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಇದರ ಪರಿಣಾಮವಾಗಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ವಿಧಾನ ಪರಿಷತ್ ಗೂ ನನ್ನನ್ನು ಕಳುಹಿಸಿಕೊಡಲಾಗಿದೆ. ಪ್ರಸ್ತುತ ವಿಧಾನಸಭೆಗೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿರುವುದರಿಂದ ಯಾರೇ ಅಭ್ಯರ್ಥಿಯಾದರು ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.






