ಸಿದ್ದಾಪುರ ಜ.18 : ಮಿಲನ್ಸ್ ಫುಟ್ಬಾಲ್ ಅಸೋಸಿಯೇಷನ್ ಅಮ್ಮತ್ತಿ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಜ.20 ರಿಂದ 29 ರವರೆಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಲಿಜೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾವಳಿಯಲ್ಲಿ ವಿವಿಧ ರಾಜ್ಯ ಹಾಗೂ ಜಿಲ್ಲೆಗಳ ಒಟ್ಟು 16 ತಂಡಗಳು ಭಾಗವಹಿಸುತ್ತಿದ್ದು, ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ಪಂದ್ಯಾವಳಿಯು ನಡೆಯಲಿದೆ ಎಂದು ಮಾಹಿತಿ ನೀಡಿದರು. ಜ.20 ರಂದು ಸಂಜೆ 7.30ಕ್ಕೆ ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಭಾರತ ತಂಡದ ತಾಂತ್ರಿಕ ಸಮಿತಿ ಸಲಹೆಗಾರ ಐ.ಎಂ.ವಿಜಯನ್ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಯಾಪ್ಟನ್ ಅಯ್ಯಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕಾರ್ಮಾಡು ಗ್ರಾ.ಪಂ ಅಧ್ಯಕ್ಷ ನಿರನ್ ನಾಣಯ್ಯ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪಾಣತ್ತಲೆ ಸೇರಿದಂತೆ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ. ಫೈನಲ್ ಪಂದ್ಯಾವಳಿ ಹಾಗೂ ಸಮಾರೋಪ ಸಮಾರಂಭ ಜ.29…
ಲೇಖಕ: admin
ವಿರಾಜಪೇಟೆ ಜ.18 : ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಹೇಳಿದರು. ವಿರಾಜಪೇಟೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಸಮ್ಮೇಳನಕ್ಕೆ ಈಗಾಗಲೇ ಎಲ್ಲಾ ಸಿದ್ದತೆ ನಡೆದಿದ್ದು ವಿವಿಧ ಸಮಿತಿ ರಚನೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಹೆಸರಾಂತ ಪಕ್ಷಿತಜ್ಷ, ಸಾಹಿತಿ, ವೈದ್ಯರಾದ ಡಾ. ಎಸ್.ವಿ ನರಸಿಂಹನ್ ಅವರನ್ನು ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಜ.21ರಂದು ಬೆಳಿಗ್ಗೆ 8.30 ಕ್ಕೆ ಧ್ವಜಾರೋಹಣ ನಂತರ ಸ್ತಬ್ಧ ಚಿತ್ರ ಹಾಗೂ ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಯಲಿದೆ.…
ಮಡಿಕೇರಿ ಜ.18 : ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರು ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಹಿರಿಯರನ್ನು ಭೇಟಿಯಾಗಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಕುಂದಚೇರಿ ಪಂಚಾಯಿತಿ ವ್ಯಾಪ್ತಿಯ ಚೆಟ್ಟಿಮಾನಿ, ಕುಂದಚೇರಿ, ಪದಕಲ್ಲು, ಕೋಪಟ್ಟಿ ಮತ್ತು ಸಿಂಗತ್ತೂರು ಗ್ರಾಮದ ಹಿರಿಯ ಮುಖಂಡರು, ಸಮಾಜ ಸೇವಕರು, ವಿವಿಧ ಸಂಘ ಸಂಸ್ಥೆಗಳ ಮೂಲಕ ಸಮಾಜಿಕ ಕಳಕಳಿ ಮೆರೆಯುತ್ತಿರುವವರ ಮನೆಗಳಿಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷರಾದ ಸವಿತ ಉದಯ ಕುಮಾರ್, ಉಪಾಧ್ಯಕ್ಷ ವಿಶುಪ್ರವೀಣ್ ಕುಮಾರ್, ಹಿರಿಯ ಸದಸ್ಯ ಕೆ.ಯು.ಹಾರಿಸ್, ವಲಯಾಧ್ಯಕ್ಷ ಕೆದಂಬಾಡಿ ಹರೀಶ್, ಹಿರಿಯ ಮುಖಂಡರಾದ ಕೆದಂಬಾಡಿ ರಘುನಾಥ್, ಕೆದಂಬಾಡಿ ಸುರೇಂದ್ರ, ಕೆದಂಬಾಡಿ ರಮೇಶ್, ಮುಕ್ಕಾಟಿ ನೇತ್ರಾವತಿ, ಚೂದಾಡಮ್ಮನ ರುಕ್ಮಿಣಿ, ಹೆಚ್.ಎಂ.ಕೃಷ್ಣಪ್ಪ (ಕಿಟ್ಟ) ಸಿ.ಎಸ್.ರಶೀದ್, ಕೆ.ಕೆ.ಹಂಸ, ತಮ್ಲೀಮ್, ಕೆದಂಬಾಡಿ ಹೂವಣ್ಣ, ಕೆದಂಬಾಡಿ ವಿಶ್ವನಾಥ್, ಕೆ.ಎಂ.ಇಸ್ಮಾಯಿಲ್ ಹಾಜಿ, ಸಾಂಧೀಪನಿ ವಿದ್ಯಾಪೀಠದ ಮುಖ್ಯಸ್ಥರಾದ ಕೆ.ಆರ್.ಯೋಗೇಶ್, ವಕೀಲ ಎಂ.ಆರ್.ಗಣೇಶ್, ಕೆ.ಪಿಸಿಸಿ ಸದಸ್ಯ ರಮಾನಾಥ್ ಬೇಕಲ್, ಡಿಸಿಸಿ ಸದಸ್ಯ ಸುನಿಲ್ ಪತ್ರಾವೊ,…
ಸಿದ್ದಾಪುರ ಜ.18 : ಕೊಡಗು ಕಾವೇರಿ ತಮಿಳು ಸಂಘದ ವತಿಯಿಂದ 7ನೇ ವರ್ಷದ ಪೊಂಗಲ್ ಹಬ್ಬವನ್ನು ಸಿದ್ದಾಪುರದ ಸೆಂಟೇನರಿ ಹಾಲ್ ಸಭಾಂಗಣದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ಸುತ್ತಮುತ್ತಲಿನಿಂದ ಆಗಮಿಸಿದ ತಮಿಳು ಬಾಂಧವರು ಒಗ್ಗೂಡಿ ಸಂಪ್ರದಾಯ ಆಚರಣೆಯೊಂದಿಗೆ ವಿಶೇಷ ಪೂಜಾ ಕಾರ್ಯಕ್ಕೆ ಸಂಘದ ಅಧ್ಯಕ್ಷ ತಿರುಮಲ ರಾಜ ಚಾಲನೆ ನೀಡಿದರು. ಹೊರಾಂಗಣದಲ್ಲಿ ವಿಶೇಷ ಪೊಂಗಲ್ ಖಾದ್ಯವನ್ನು ತಯಾರಿಸಿ ತಿನ್ನುವುದರೊಂದಿಗೆ ಪರಸ್ಪರ ಶುಭಾಶಯ ಹಂಚಿಕೊಂಡರು. ಕಾರ್ಯಕ್ರಮ ಉದ್ಘಾಟನೆ : ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಬ್ಬ ಆಚರಣೆಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ. ಆಚಾರ, ವಿಚಾರ, ಸಂಸ್ಕೃತಿ ಪರಂಪರೆಯನ್ನು ಉಳಿಸುವುದರೊಂದಿಗೆ ಸರ್ಕಾರದ ಸೌಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದರು. ಮಕ್ಕಳನ್ನು ಶಾಲೆಗಳಿಗೆ ಕಳಿಸಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು, ತಮಿಳು ಜನಾಂಗದವರಿಗಾಗಿಯೇ ಜಿಲ್ಲೆಯಲ್ಲಿ ಐದು ತಮಿಳು ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ…
ಮಡಿಕೇರಿ ಜ.18 : ಸದಸ್ಯರೇ ರೋಟರಿ ಸಂಸ್ಥೆಗಳ ಜೀವಾಳವಾಗಿದ್ದು, ಹೊಸಪೀಳಿಗೆಯ ಸದಸ್ಯರ ಸೇಪ೯ಡೆ ಮೂಲಕ ರೋಟರಿಯಲ್ಲಿ ಬದಲಾವಣೆಯ ಗಾಳಿ ಬೀಸುವ ಅಗತ್ಯವಿದೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಪ್ರಕಾಶ್ ಕಾರಂತ್, ಅಂತರ ರಾಷ್ಟ್ರೀಯ ರೋಟರಿಯ 118 ವಷ೯ಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯಾದ ಜೆನಿಫರ್ ಜೋನ್ಸ್ ಅಧ್ಯಕ್ಷೆಯಾಗಿದ್ದು, ಈ ಮೂಲಕ ಮಹಿಳೆಯರಿಗೆ ರೋಟರಿ ಸಂಸ್ಥೆ ಪ್ರಾಮುಖ್ಯತೆಯನ್ನು ನೀಡಿದೆ. ಪ್ರತೀ ರೋಟರಿ ಸಂಸ್ಥೆಯಲ್ಲಿಯೂ ಶೇ.30 ರಷ್ಟು ಮಹಿಳಾ ಸದಸ್ಯರು ಇರುವಂತೆ ಗಮನ ಹರಿಸಲಾಗುತ್ತಿದೆ. ಮಹಿಳೆಯರ ಆಡಳಿತದಲ್ಲಿ ಅಭಿವೃದ್ಧಿಪರ ಚಿಂತನೆಗಳು ಹೆಚ್ಚುತ್ತದೆ ಎಂಬುದಕ್ಕೆ ಅನೇಕ ನಿದಶ೯ನಗಳಿದೆ. ಹೀಗಾಗಿ ರೋಟರಿ ಸಂಸ್ಥೆಗಳಲ್ಲಿ ಮಹಿಳಾ ಸದಸ್ಯೆಯರೂ ಸಕ್ರಿಯರಾಗಿ ಪಾಲ್ಗೊಳ್ಳುವಂತಾಗಬೇಕೆಂದು ಕರೆ ನೀಡಿದರು. ಸದಸ್ಯರೇ ರೋಟರಿಯ ಜೀವಾಳವಾಗಿರುವ ಹಿನ್ನಲೆಯಲ್ಲಿ ರೋಟರಿಯಲ್ಲಿ ಸದಸ್ಯತ್ವ ಹೆಚ್ಚಳಕ್ಕೆ ಪ್ರತೀ ವಷ೯ ಪ್ರಯತ್ನಿಸಲಾಗುತ್ತಿದೆ. ಸೇವಾ ಮನೋಭಾವ…
ಮಡಿಕೇರಿ ಜ.18 : ಶ್ರೀ ರಾಮಚಂದ್ರಪುರ ಮಠದ ಅಧೀನದಲ್ಲಿರುವ ಸಂಪಾಜೆಯ ಜೇಡ್ಲದಲ್ಲಿನ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನಾ ಕೇಂದ್ರದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಗೋವುಗಳ ಆರೋಗ್ಯ ಸುಧಾರಣೆ ಹಾಗೂ ಗ್ರಾಮದ ಕ್ಷೇಮಾಭಿವೃದ್ಧಿಗೆ ಪ್ರಾರ್ಥಿಸಿ ಗೋಪೂಜೆ ಮತ್ತು ಗೋವುಗಳ ಕಿಚ್ಚು ಹಾಯಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಬಯಲುಸೀಮೆಯಲ್ಲಿ ಚಿರಪರಿಚಿತವಾಗಿದ್ದ ಸುಗ್ಗಿಹಬ್ಬದ ಈ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ಆಚರಿಸಲಾಯಿತು. ಸರಳವಾಗಿ ಅಲಂಕರಿಸಿದ್ದ ಗೋವುಗಳನ್ನು ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಕರೆತರಲಾಯಿತು. ಸುಳ್ಯದ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಿತಿನ್ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಗೋವುಗಳನ್ನು ಕಿಚ್ಚು ಹಾಯಿಸುವದರ ಪ್ರಾಮುಖ್ಯತೆ ಹಾಗೂ ಇದರ ಹಿಂದೆ ಇರುವ ವೈಜ್ಞಾನಿಕ ಕಾರಣವನ್ನು ವಿವರಿಸಿದರು. ಗೋಶಾಲೆಯ ಪ್ರಧಾನ ಕಾರ್ಯದರ್ಶಿ ವಿಜಯಕೃಷ್ಣ ಕಬ್ಬಿನಗದ್ದೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಲ್ಲುಗುಂಡಿಯ ವೈದ್ಯರಾದ ಡಾ.ಜಯರಾಮ್ ಭಟ್ ಗೋಬಂಧು ಯೋಜನೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಕಾರ್ಯಾಧ್ಯಕ್ಷ ಡಾ.ರಾಜಾರಾಮ್ ಅಖಿಲಾತಿ ವಹಿಸಿದ್ದರು. ಸಂಪಾಜೆ ಗ್ರಾ.ಪಂ ಅಧ್ಯಕ್ಷೆ ನಿರ್ಮಲಾ ಭರತ್ ಪಾಲ್ಗೊಂಡಿದ್ದರು. ನಿರಂತರ ಗೋಸೇವೆಯಲ್ಲಿ ತೊಡಗಿಸಿಕೊಂಡಿರುವ ನಾಲ್ವರು ಗೋಪ್ರೇಮಿಗಳನ್ನು …
ಮಡಿಕೇರಿ ಜ.18 : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮಾಲ್ದಾರೆ ಗ್ರಾಮದ ಅವರೆಗುಂದದಲ್ಲಿ ನಿತ್ರಾಣಗೊಂಡಿದ್ದ ಹುಲಿಯೊಂದನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸೆರೆಯಾದ ಹುಲಿಯನ್ನು ಮೈಸೂರು ಬಳಿಯ ಕೂರ್ಗಳ್ಳಿಗೆ ಸ್ಥಳಾಂತರಿಸಲಾಗಿದೆ. 12 ವರ್ಷದ ಹುಲಿ ಕಳೆದ ಕೆಲವು ದಿನಗಳ ಹಿಂದೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಈ ಹುಲಿಯ ಮೇಲೆ ನಿಗಾ ಇರಿಸಿದ್ದ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಮಾಲ್ದಾರೆ ಗ್ರಾಮದ ಆಸ್ತಾನ ಕೆರೆಯ ಬಳಿ ಸಾಕಾನೆಗಳಾದ ಪ್ರಶಾಂತ್, ಸುಗ್ರೀವ, ಶ್ರೀರಾಮ, ವಿಕ್ರಮ, ಹರ್ಷ, ಈಶ್ವರ ಸಹಯೋಗದೊಂದಿಗೆ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅರವಳಿಕೆ ಪ್ರಯೋಗಿಸಿದರು. ಆಹಾರ ಸೇವಿಸದೆ ನಿತ್ರಾಣಗೊಂಡಿದ್ದ ಹುಲಿಗೆ ವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ ಹಾಗೂ ಡಾ.ರಮೇಶ್ ಚಿಕಿತ್ಸೆ ನೀಡಿದರು. ನಂತರ ಹುಲಿಯನ್ನು ಕೂರ್ಗಳ್ಳಿಗೆ ಸ್ಥಳಾಂತರಿಸಲಾಯಿತು. ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಮೂರ್ತಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಎಫ್ಓ ಎಂ.ಟಿ.ದೇವಯ್ಯ, ಎಸಿಎಫ್ ಎ.ಎ.ಗೋಪಾಲ, ಕುಶಾಲನಗರ ವಲಯ…
ಮಡಿಕೇರಿ ಜ.18 : ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹದ ಅಂಗವಾಗಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ರತಿಷ್ ರೈ ಉದ್ಘಾಟಿಸಿ, ಯುವಕರು ಮಾದಕ ವ್ಯಸನಕ್ಕೆ ಒಳಗಾಗದೆ ಶಿಕ್ಷಕಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಕಿವಿ ಮಾತು ಹೇಳಿದರು. ತರಬೇತುದಾರ ಜೆಸಿಐ ಭಾರತದ ವಲಯ 14ರ ಪೂರ್ವ ಕಾರ್ಯದರ್ಶಿ ಜೆಸಿ ಡೆನ್ನಿಸ್ ಡಿಸೋಜ ಮಾತನಾಡಿ, ವಿವೇಕಾನಂದರ ಹಿತನುಡಿಗಳನ್ನು ತಿಳಿಸಿ ಯುವಕರ ಮುಂದಿನ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ರೂಪಿಸಲು ತರಬೇತಿ ನೀಡಿದರು. ಜೇಸಿ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಜೆಸಿ ಅಂತೋಣಿ ಟಿ.ಜೆ, ಘಟಕದ ಸದಸ್ಯರು, ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜೇಸಿ ನೀತ್ ಅಯ್ಯಪ್ಪ ಸರ್ವರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಜೆಸಿ ಚೆಟ್ಟೋಳಿರ ಶರತ್ ಸೋಮಣ್ಣ ವಂದಿಸಿದರು.
ಮಡಿಕೇರಿ ಜ.18 : ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಜನ ಸಮಾಜ ಪಕ್ಷ ಸ್ಪರ್ಧಿಸಲಿದ್ದು, ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಬಿಎಸ್ಪಿ ಯ ಜಿಲ್ಲಾ ಉಸ್ತುವಾರಿ ಜಯಪ್ಪ ಹಾನಗಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಪಕ್ಷ ನಿರ್ಧರಿಸಿದೆ. ಸದಸ್ಯತ್ವ ನೋಂದಣಿ ಅಭಿಯಾನ ಈಗಾಗಲೇ ಪ್ರಾರಂಭವಾಗಿದ್ದು, ಕಾರ್ಯಕರ್ತರು ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಕೊಡಗು ಜಿಲ್ಲೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ, ಮೂಲಭೂತ ಸೌಲಭ್ಯ, ನಿವೇಶನ ಮತ್ತು ವಸತಿಗಾಗಿ ಹೋರಾಟಗಳು ನಡೆಯುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಸಮಸ್ಯೆಗಳು ಜೀವಂತವಾಗಿರುವುದು ಮತ್ತು ಮೂಲಭೂತ ಸೌಲಭ್ಯಕ್ಕೂ ಹೋರಾಟಗಳು ನಡೆಯುತ್ತಿರುವುದು ವಿಷಾದನೀಯವೆಂದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಮಂದಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಸಹಾಯಧನದ ಲಾಭವೂ ಅರ್ಹರ ಪಾಲಾಗುತ್ತಿಲ್ಲವೆಂದು ಆರೋಪಿಸಿದರು. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು ಬಡವರ ಹಾಗೂ ದುರ್ಬಲ ವರ್ಗದವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕೆಂದು ಜಯಪ್ಪ ಹಾನಗಲ್ ಒತ್ತಾಯಿಸಿದರು.…
ಮಡಿಕೇರಿ ಜ.18 : ಆಟೋರಿಕ್ಷಾವೊಂದು ಅಗ್ನಿಗಾಹುತಿಯಾದ ಘಟನೆ ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ನಡೆದಿದೆ. ಅಂದಗೋವೆ ನಿವಾಸಿ ಶಿವರಾಜ್ ಎಂಬುವವರಿಗೆ ಸೇರಿದ ಆಟೋರಿಕ್ಷಾ ಇದಾಗಿದ್ದು, ಮಂಗಳವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಾವು ಕುಳಿತ್ತಿದ್ದ ಸೀಟ್ ಬಿಸಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಶಿವರಾಜ್ ಆಟೋ ನಿಲ್ಲಿಸಿ ತಕ್ಷಣ ಹೊರ ಬಂದಿದ್ದಾರೆ. ಭಯದಿಂದ ದೂರ ಸರಿಯುತ್ತಿದ್ದಂತೆ ಬೆಂಕಿ ವ್ಯಾಪಿಸಿ ಆಟೋರಿಕ್ಷಾ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.






