ಮಡಿಕೇರಿ ಜ.18 : ವಿರಾಜಪೇಟೆಯ ಬಿಟ್ಟಂಗಾಲದ ನಾಂಗಾಲ ಗ್ರಾಮದಲ್ಲಿ ಭಾನುವಾರ ನಡೆದ ಯುವತಿ ಬುಟ್ಟಿಯಂಡ ಆರತಿ (24) ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಕೊಲೆ ಆರೋಪಿ ತಿಮ್ಮಯ್ಯನ ಮೃತದೇಹ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಆರತಿಯನ್ನು ಆಕೆಯ ಮನೆಯ ಬಳಿಯೇ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿತ್ತು. ಈ ಘಟನೆಯ ನಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಆರೋಪಿ ತಿಮ್ಮಯ್ಯನ ಹೆಲ್ಮೆಟ್ ಪತ್ತೆಯಾಗಿತ್ತು. ಅಲ್ಲದೆ ಪಕ್ಕದಲೇ ಇದ್ದ ಕೆರೆಯ ಮೇಲ್ಭಾಗ ಆತನ ಚಪ್ಪಲಿ, ಮೊಬೈಲ್, ಮದ್ಯ ಹಾಗೂ ವಿಷದ ಬಾಟಲ್ ಇರುವುದು ಕಂಡು ಬಂದಿತ್ತು. ಆರತಿಯನ್ನು ಕೊಲೆ ಮಾಡಿದ ಆರೋಪಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯ ವ್ಯಕ್ತಪಡಿಸಿದ ಪೊಲೀಸರು ಈಜು ತಜ್ಞರ ಮೂಲಕ ಪತ್ತೆ ಕಾರ್ಯಾಚರಣೆ ಆರಂಭಿಸಿದರು. ಆದರೆ ಎರಡು ದಿನಗಳ ಕಾರ್ಯಾಚರಣೆಯ ನಂತರವೂ ಮೃತದೇಹ ಪತ್ತೆಯಾಗದೆ ಇದ್ದ ಕಾರಣ ಕೆರೆಯ ನೀರನ್ನು ಖಾಲಿ ಮಾಡಿ ಶೋಧ ಕಾರ್ಯ ಮುಂದುವರೆಸಲಾಯಿತು. ಮಂಗಳವಾರ ಮಧ್ಯರಾತ್ರಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಮುಂದಿನ ತನಿಖೆ…
ಲೇಖಕ: admin
ಮಡಿಕೇರಿ ಜ.18 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಜ.20 ರಂದು ವಿರಾಜಪೇಟೆಯಲ್ಲಿ ಮೂಳೆ ಮತ್ತು ಸಂಧಿವಾತ ತಪಾಸಣೆ ನಡೆಯಲಿದೆ. ವಿರಾಜಪೇಟೆಯ ಮಗ್ಗುಲ ನಾರಾಯಣ ಮೆಡಿಕಲ್ ಸೆಂಟರ್ನಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ1 ಗಂಟೆ ವರೆಗೆ ಮೂಳೆ ಚಿಕಿತ್ಸಾ ತಜ್ಞ ಡಾ. ವೈ.ಬಿ.ಜಯವರ್ಧನ್ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 9513408004, 8904258788, 8904736606 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.18 : ಚಾಲಕ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿ ಯಿಂದ ಸುಳ್ಯ ಕಡೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ಜ.18 : ಮಕ್ಕಳ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪೋಷಕರ ಜವಾಬ್ದಾರಿಯೂ ಮುಖ್ಯ ಎಂದು ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ ಹಾಗೂ ಅಂತಾರಾಷ್ಟ್ರೀಯ ಅಥ್ಲೇಟ್ ತೀತಮಾಡ ಅರ್ಜುನ್ ದೇವಯ್ಯ ಹೇಳಿದರು. ಕೊಡಗು ವಿಕಸನ ಸಂಸ್ಥೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪರೀಕ್ಷಾ ಸಿದ್ದತೆ ಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ಮಕ್ಕಳಿಗೆ ಮನೆಯಲ್ಲಿ ಒಳ್ಳೆಯ ವಾತಾವರಣ ಇದ್ದರೆ ಮಾತ್ರ ಕಲಿಕೆಗೆ ಆಸಕ್ತಿ ಇರುತ್ತದೆ. ಇದರೊಂದಿಗೆ ಆತ್ಮವಿಶ್ವಾಸ ಮತ್ತು ಏಕಾಗ್ರತೆ ವಿದ್ಯಾರ್ಥಿ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲಾ ಮಕ್ಕಳಲ್ಲೂ ಅಗಾಧವಾದ ಪ್ರತಿಭೆ ಇದ್ದೇ ಇರುತ್ತದೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಕೆಲವೊಮ್ಮೆ ಮಾರ್ಗದರ್ಶನದ ಕೊರತೆ ಸಾಧನೆಯ ಹಾದಿಗೆ ಅಡ್ಡ ಬರುತ್ತದೆ. ಇಂತಹ ಸಂದರ್ಭದಲ್ಲಿ ಯಾರೂ ವಿಚಲಿತರಾಗುವ ಅವಶ್ಯಕತೆಯಿಲ್ಲ. ಸಾಧನೆಗೆ ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಪಠ್ಯದ ಪ್ರತಿಯೊಂದು ವಿಷಯಗಳನ್ನು ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಯುವಂತಾಗಬೇಕು.…
ಸೋಮವಾರಪೇಟೆ,ಜ.18 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪ್ರಶಿಕ್ಷಣ ವರ್ಗಕ್ಕೆ ಚಾಲನೆ ದೊರೆಯಿತು. ಸೋಮವಾರಪೇಟೆ ಪಟ್ಟಣ ಸಮೀಪದ ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ, ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಮಹಿಳಾ ಮೋರ್ಚಾ ಹೆಚ್ಚಿನ ಒತ್ತು ನೀಡಬೇಕು. ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಬೇಕು. ಪಕ್ಷದ ಅಸ್ತಿತ್ವದ ಮಾನದಂಡ ಚುನಾವಣೆಯಾಗಿದೆ. ಇದರ ಫಲಿತಾಂಶದ ಮೇಲೆ ಪಕ್ಷದ ಬಲ ಪ್ರದರ್ಶನಗೊಳ್ಳಲಿದೆ. ಈ ಹಿನ್ನೆಲೆ ಮಹಿಳಾ ಮೋರ್ಚಾವು ಸಂಘಟನೆಗೆ ಇನ್ನಷ್ಟು ಒತ್ತು ನೀಡಬೇಕು ಎಂದರು. ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಹಿರಿಯರ ಪರಿಶ್ರಮದಿಂದ ಇಂದು ಭಾರತೀಯ ಜನತಾ ಪಾರ್ಟಿ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ರಾಜ್ಯ ರಾಷ್ಟ್ರದಲ್ಲಿ ಅಧಿಕಾರದಲ್ಲಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಅಭಿವೃದ್ಧಿಗೆ ಹೊಸ ಆಯಾಮ ಬಂದಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಹಿಳಾ…
ಮಡಿಕೇರಿ ಜ.18 : 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಭೇತಿ ಕೇಂದ್ರದ ಮೂಲಕ ಜೆಇಇ(ಅಡ್ವಾನ್ಸ್ ಅಂಡ್ ಮೈನ್ಸ್) ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ಲೈನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜನವರಿ, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ಸ್ಶೆಟ್ www.sw.kar.nic.in ನಲ್ಲಿ ನೋಡಬಹುದು. ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ರಾಜ್ಯದ ಅನುಸೂಚಿತ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿರತಕ್ಕದ್ದು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 300 ಕ್ಕಿಂತ ಹೆಚ್ಚು ಅಂಕ ಪಡೆದಿರತಕ್ಕದ್ದು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.5 ಲಕ್ಷಗಳ ಮಿತಿಯಲ್ಲಿರತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರತಕ್ಕದ್ದು. ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ…
ಮಡಿಕೇರಿ ಜ.18 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಟ್ಟಗೇರಿಯಲ್ಲಿ ನಡೆಯಲಿದೆ. ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನ ಆಹ್ವಾನಿಸಲಾಗಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕತೆ, ಕವನ, ಚುಟುಕ, ಒಗಟು, ಗಾದೆ, ನಾಟಿ ಔಷಧಿ, ವೈಚಾರಿಕ ಲೇಖನ., ನಾಡಿನ ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಬರೆದು ಕಳುಹಿಸಬಹುದಾಗಿದೆ. ಲೇಖನಗಳು ಕೈಬರಹವಾದರೆ ಒಂದೇ ಮಗ್ಗುಲಲ್ಲಿ ಮೂರು ಪುಟ, ಡಿಟಿಪಿ ಆದರೆ ಎರಡು ಪುಟಗಳು, ಕವನಗಳು 20 ಸಾಲುಗಳನ್ನು ಮೀರಬಾರದು. ಲೇಖನಗಳನ್ನು ಸಂಪಾದಕರು, ಸ್ಮರಣ ಸಂಚಿಕೆ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ, ಸಾಮಥ್ರ್ಯ ಸೌಧ ಭವನ, ಫೀ.ಮಾ.ಕಾರ್ಯಪ್ಪ ವೃತ್ತ, ಮಡಿಕೇರಿ, ಇಲ್ಲಿಗೆ, ಅಥವಾ kudekalsanthu@gmail.com ಗೆ ಇಮೇಲ್ ಮುಖಾಂತರ, ಇಲ್ಲವೇ 8672110948, 9535615759 ಈ ಸಂಖ್ಯೆಗಳಿಗೆ ವ್ಯಾಟ್ಸಪ್ ಮಾಡಬಹುದಾಗಿದೆ. ಲೇಖನಗಳನ್ನು ಕಳುಹಿಸಲು ಜನವರಿ, 25 ಕೊನೆಯ ದಿನವಾಗಿದೆ. ಸಂಪಾದಕೀಯ ಮಂಡಳಿಯಲ್ಲಿ ಆಯ್ಕೆಯಾಗುವ ಅರ್ಹ ಲೇಖನಗಳನ್ನು…
ಮಡಿಕೇರಿ ಜ.17 : ಭಾರತ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಉಚಿತವಾಗಿ ಎರಡನೆಯ ವರಸೆಯ ಹಾಗೂ ಮುಂಜಾಗ್ರತಾ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕೂಡ ಎಲ್ಲಾ ಆರೋಗ್ಯ ಕೇಂದ್ರಗಳ ಲಸಿಕಾ ವಿಭಾಗದಲ್ಲಿ ಕೋವಿಡ್ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎರಡನೇ ವರಸೆಯ ಒಟ್ಟು 10,707 ಫಲಾನುಭವಿಗಳು ಹಾಗೂ ಎರಡನೇ ವರಸೆಯ ಕೋವಿಡ್ ಲಸಿಕೆಯನ್ನು ಪಡೆದು 6 ತಿಂಗಳು ಪೂರೈಸಿರುವ 18 ವರ್ಷ ಮೇಲ್ಪಟ್ಟ ಒಟ್ಟು 3,14,296 ಫಲಾನುಭವಿಗಳು ಮುಂಜಾಗ್ರತಾ ಕೋವಿಡ್ ಲಸಿಕಾಕರಣಕ್ಕೆ ಬಾಕಿ ಇದ್ದು, ಈ ಎಲ್ಲಾ ಅರ್ಹರು ತಮ್ಮ ಸಮೀಪದ ಆರೋಗ್ಯ ಕೇಂದ್ರದಲ್ಲಿ ಪ್ರತಿ ದಿನ ನಡೆಯುವ ಲಸಿಕಾ ಶಿಬಿರದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಪಡೆಯುವಂತೆ ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್…
ಮಡಿಕೇರಿ ಜ.17 : ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸುವ ಸಾಮಾಗ್ರಿಗಳಿಗೆ ಮಾರುಕಟ್ಟೆ ದರ ನಿಗದಿ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಭೆ, ಸಮಾರಂಭಕ್ಕೆ ಬಳಸುವ ಫೆಂಡಾಲ್, ಚೇರ್, ಶಾಮಿಯಾನ, ಹ್ಯಾಂಡ್ ಬಿಲ್, ಪೋಸ್ಟರ್, ಜಾಹೀರಾತು, ಫಲಕಗಳು, ವಿಡಿಯೋ, ಆಡಿಯೋ ಪ್ರಚಾರ ಮತ್ತಿತರ ವೆಚ್ಚಪಟ್ಟಿ ಸಂಬಂಧಿಸಿದಂತೆ ಚರ್ಚೆ ನಡೆಯಿತು. ಒಬ್ಬ ಅಭ್ಯರ್ಥಿ ರೂ.40 ಲಕ್ಷ ವರೆಗೆ ವೆಚ್ಚ ಮಾಡಬಹುದಾಗಿದ್ದು, ಚುನಾವಣಾ ಸಂದರ್ಭದಲ್ಲಿ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ನೀಡಲಾಗಿರುವ ಪಟ್ಟಿ ಸಂಬಂಧಿಸಿದಂತೆ ಪರಿಶೀಲಿಸಿ ತಿದ್ದುಪಡಿ ಇದ್ದಲ್ಲಿ ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣಾ ಸಂದರ್ಭದಲ್ಲಿನ ವೆಚ್ಚಪಟ್ಟಿ, ಹಾಗೆಯೇ ಹತ್ತಿರದ ಜಿಲ್ಲೆಗಳಲ್ಲಿ ವೆಚ್ಚಪಟ್ಟಿ ಯಾವ ರೀತಿ ಇದೆ ಎಂದು ಪರಿಶೀಲಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ…
ವಿರಾಜಪೇಟೆ ಜ.17 : ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆಯಲಿರುವ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 9ನೇ ಸಾಹಿತ್ಯ ಸಮ್ಮೇಳನಕ್ಕೆ ಸಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ವೈಧ್ಯರು, ಖ್ಯಾತ ಪಕ್ಷಿ ತಜ್ಞರು ಸಾಹಿತಿಗಳಾದ ವಿರಾಜಪೇಟೆಯ ಡಾ. ಎಸ್.ವಿ.ನರಸಿಂಹನ್ ಅವರಿಗೆ ಕಸಾಪದಿಂದ ಅಧಿಕೃತ ಆಹ್ವಾನ ನೀಡಲಾಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ನೇತೃತ್ವದಲ್ಲಿ ಡಾ. ಎಸ್.ವಿ.ನರಸಿಂಹನ್ ಅವರ ನಿವಾಸದಲ್ಲಿ ಆಹ್ವಾನ ನೀಡಲಾಯಿತು. ಈ ಸಂದರ್ಭ ತಾಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ಟೋಮಿ ಥೋಮಸ್, ಸಮಿತಿ ಸದಸ್ಯರಾದ ಸಾಹಿತಿಗಳಾದ ರಜಿತಾ ಕಾರ್ಯಪ್ಪ, ಉಷಾ ಪ್ರೀತಮ್ ಹಾಜರಿದ್ದರು. ಆಹ್ವಾನ ಸ್ವೀಕರಿಸಿದ ನರಸಿಂಹನ್ ಅವರು ಸಂತಸ ವ್ಯಕ್ತಪಡಿಸಿದ್ದು, ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಸಮಸ್ತ ಸಾಹಿತ್ಯಸಕ್ತರಿಗೆ ಹಾಗೂ ತಾಲೂಕಿನ ಎಲ್ಲ ಸಾಹಿತ್ಯಾಭಿಮಾನಿಗಳಿಗೆ ವಂದನೆ ಸಲ್ಲಿಸಿದರು.






