ಲೇಖಕ: admin

ಕುಶಾಲನಗರ ಜ.16 : ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ಕಚೇರಿಯನ್ನು ಸ್ಥಳೀಯ ಹಿಲಾಲ್ ಮಸೀದಿ ಧರ್ಮಗುರು ಸೂಫಿದಾರಿಮಿ ಉದ್ಘಾಟಿಸಿದರು. ಕುಶಾಲನಗರದ ದಂಡಿನಪೇಟೆಯಲ್ಲಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯದ ಹಿತಕ್ಕಾಗಿ ಒಕ್ಕೂಟ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು. ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷಅಬ್ದುಲ್ ಕರೀಂ ಮಾತನಾಡಿ, ತಾಲ್ಲೂಕು ಮುಸ್ಲಿಂ ಒಕ್ಕೂಟ ಸ್ಥಾಪನೆಯಾಗಿ ಆರು ವರ್ಷಗಳು ಕಳೆದಿದೆ. ಒಕ್ಕೂಟವು ಸಮುದಾಯದಲ್ಲಿ ಅನ್ಯಾಯಕ್ಕೊಳಗದವರ, ದೌರ್ಜನ್ಯಕ್ಕೊಳಗಾದವರ ಪರ ನಿಂತು ಹೋರಾಟ ನಡೆಸುತ್ತಾ ಬಂದಿದೆ. ಮುಂದೆಯೂ ಸಮುದಾಯ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದರು. ಈ ಸಂದರ್ಭ ಜಾಮಿಯಾ ಮಸೀದಿ ಅಧ್ಯಕ್ಷರಾದ ಮುಜೀಬುರ್ ರಹಮಾನ್, ಹಿಲಾಲ್ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ಅಬ್ದುಲ್ ರಹಮಾನ್, ರಶೀದ್ ಅಹ್ಮದ್, ತಾಲ್ಲೂಕು ಮುಸ್ಲಿಂ ಒಕ್ಕೂಟದ ಪ್ರಮುಖರು ಇದ್ದರು.

Read More

ಕುಶಾಲನಗರ ಜ.16 : ಕೂಡುಮಂಗಳೂರು ಗ್ರಾ.ಪಂ ಎರಡನೇ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತು  ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧಿನ್ ಪರಿಶೀಲನೆ ನಡೆಸಿದರು. ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಸಾರ್ವಜನಿಕ ಕಾರ್ಯ ಇಲಾಖೆ ವತಿಯಿಂದ ಅಂದಾಜು 9.8 ಲಕ್ಷ ರೂ.ಗಳ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

Read More

ಕುಶಾಲನಗರ ಜ.17 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಕುಶಾಲನಗರದ ಬ್ಯಾಂಕ್ ಆಫ್ ಬರೋಡ ಸಂಯುಕ್ತಾಶ್ರಯದಲ್ಲಿ ಕುಶಾಲನಗರದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಅಭಾಕಾರ್ಡ್ ನೊಂದಣಿ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಶಿಬಿರವನ್ನು ಚೇಂಬರ್ ಆಫ್‍ಕಾಮರ್ಸ್ ಅಧ್ಯಕ್ಷ ಅಮೃತ್‍ರಾಜ್ ಉದ್ಘಾಟಿಸಿದರು. ಶಿಬಿರದಲ್ಲಿ ರಕ್ತದೊತ್ತಡ, ಡಯಾಬಿಟಿಸ್, ಮತ್ತಿತರ ಸಣ್ಣಪುಟ್ಟ ಕಾಯಿಲೆಗಳ ಬಗ್ಗೆ ಪರೀಕ್ಷೆ ನಡೆದುಚಿಕಿತ್ಸೆ ನೀಡಲಾಯಿತು. ಪಿಎಂಜೆವೈ, ಅಭಾಕಾರ್ಡ್ ನೊಂದಣಿಕಾರ್ಯ ಹಮ್ಮಿಕೊಳ್ಳಲಾಯಿತು. ತಾಲೂಕು ಆರೋಗ್ಯ ಅಧಿಕಾರಿ ಶಾಂತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಪ್ರಯೋಜನವನ್ನು ಪಡೆಯುವ ಮೂಲಕ ತಮ್ಮ ಆರೋಗ್ಯದ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಕೋರಿದರು. ಈ ಸಂದರ್ಭ ಡಾ.ತೇಜಸ್ವಿನಿ, ಡಾ. ನಿಜಾಮುದ್ದಿನ್, ಡಾ.ನಂದಿನಿ, ಬ್ಯಾಂಕ್‍ಆಫ್ ಬರೋಡ ವ್ಯವಸ್ಥಾಪಕರಾದ ಸತೀಶ್, ಅಶೋಕ್ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ರಾಣಿ ಇದ್ದರು.

Read More

ವಿರಾಜಪೇಟೆ ಜ.17 ಕೊಡಗಿನಾದ್ಯಂತ ಘಂಟೆ ಕಳ್ಳತನ ಮಾಡುವುದರ ಮೂಲಕ ದೇವಸ್ಥಾನಗಳಲ್ಲಿ ಘಂಟೆಯ ಸದ್ದು ಕೇಳದಂತೆ ಮಾಡಿದ ಘಂಟೆ ಕಳ್ಳರನ್ನು ಹಿಡಿದು ಎಡೆಮುರಿ ಕಟ್ಟಿದ ಪೊಲೀಸರು ಆರೋಪಿಗಳನ್ನು ಹಳ್ಳಿಗಟ್ಟು ಭದ್ರಕಾಳಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭದ್ರತೆಯೊಂದಿಗೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಲಾಯಿತು. ದೇವರ ಶಕ್ತಿ ಎಂಬಂತೆ ಹಳ್ಳಿಗಟ್ಟು ಭದ್ರಕಾಳಿ ದೇವಸ್ಥಾನದ ಘಂಟೆ ಕಳ್ಳತನವೇ ಜಿಲ್ಲೆಯ ಕೊನೆಯ ಕಳ್ಳತನವಾಗಿತ್ತು ಎನ್ನುವುದು ಗಮನಾರ್ಹ. ಇದಕ್ಕೂ ಮುಂಚೆ ಕೂಡ ಹಲವಾರು ಕಡೆ ಹುಂಡಿ ಕಳ್ಳತನ ಮಾಡಿದ ಕಳ್ಳರು ಇದೇ ದೇವಸ್ಥಾನದಲ್ಲಿ ಹುಂಡಿ ಕಳ್ಳತನ ಮಾಡಲು ಪ್ರಯತ್ನಿಸಿ ವಿಫಲರಾಗಿ 24 ಗಂಟೆಯೊಳಗೆ ತಾವಾಗಿಯೇ ಪೊಲೀಸ್ ಠಾಣೆಗೆ ಹೋಗಿ ಸಿಕ್ಕಿಹಾಕಿಕೊಂಡಿದ್ದು ವಿಶೇಷ.

Read More

ಮಡಿಕೇರಿ ಜ.19 :  ಭಾರತ ಸರ್ಕಾರ,  ನೆಹರು ಯುವ ಕೇಂದ್ರ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಆದರ್ಶ ಮಹಿಳಾ ಸಮಾಜ  ಸಂಯುಕ್ತಾಶ್ರಯದಲ್ಲಿ ಯುವ ಮುಂದಾಳತ್ವದ ಮತ್ತು ಸಮುದಾಯ ಅಭಿವೃದ್ಧಿ ತರಬೇತಿ  ಕಾರ್ಯಕ್ರಮ  ಬಲ್ಲಮಾವಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ನೇತಾಜಿ ಕೇಂದ್ರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಉದ್ಘಾಟಿಸಿದರು.  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜಗತ್ ತಿಮ್ಮಯ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ  75 ಶಿಬಿರಾರ್ಥಿಗಳು ಮೂರು ದಿನದ ತರಬೇತಿಯ ಪ್ರಯೋಜನವನ್ನು ಯಶಸ್ವಿಗೊಳಿಸಿದರು.

Read More

ಮಡಿಕೇರಿ ಜ.17 :  ಜಲ ಮತ್ತು ಮಣ್ಣು ಸಂರಕ್ಷಣೆಯ ಸಂದೇಶದೊಂದಿಗೆ ರೈಡ್ ಪಾರ್ ರೋಟರಿ ಹೆಸರಿನ ರೋಟರಿ ಬೈಕ್ ಜಾಥಾ ಇದೇ 24 ರಂದು ಮಡಿಕೇರಿಗೆ ಬರುತ್ತಿದ್ದು, ವಿದೇಶಿಯರೂ ಸೇರಿದಂತೆ ಭಾರತೀಯ ಮೂಲದ 40 ಬೈಕ್ ಸವಾರರು ಜಾಥಾದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್ ಮಾಹಿತಿ ನೀಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೃತ ಭೇಟಿ ಸಂದಭ೯ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಕಾಶ್ ಕಾರಂತ್, ರೋಟರಿ ಜಿಲ್ಲೆ 3181 ರ ಮಹತ್ವದ ಯೋಜನೆಯಾದ ರೈಡ್ ಫಾರ್ ರೋಟರಿಯ 7 ನೇ ಆವೃತ್ತಿಯು ತಮಿಳುನಾಡಿನ ಮಹಾಬಲಿಪುರಂನಿಂದ ಇದೇ ಭಾನುವಾರ ಪ್ರಾರಂಭಗೊಂಡಿದ್ದು ವಿವಿಧ ನಗರಗಳನ್ನು ಹಾದು ಜಾಥಾದಲ್ಲಿನ ಸವಾರರು ಜ.24 ರಂದು ಮಂಗಳಪಾರ ಮಡಿಕೇರಿಗೆ ಬರುತ್ತಿದ್ದಾರೆ. ವಿದೇಶದ 36 ಬೈಕ್ ಸವಾರರೂ ಒಳಗೊಂಡಂತೆ 40 ಸವಾರರು ಈ ಜಾಥಾದಲ್ಲಿದ್ದಾರೆ. ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಸಾರುವ ಈ ಜಾಥಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಂದವ್ಯ ವೃದ್ಧಿಗೆ ರೋಟರಿಗೆ ಸಹಕಾರಿಯಾಗಿದೆ…

Read More

ಮಡಿಕೇರಿ ಜ.17 : ಮೇಕೇರಿಯ ಸಕಾ೯ರಿ ಮಾದರಿ ಪ್ರಾಥಮಿಕ ಶಾಲೆಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ಜಿಲ್ಲಾ ರೋಟರಿ ಗವನ೯ರ್ ಪ್ರಕಾಶ್ ಕಾರಂತ್ ನೀಡಿದರು. ಮೇಕೇರಿ ಶಾಲೆಯಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ದಾನಿಗಳಾದ ಮಡಿಕೇರಿಯ ಮಹೇಶ್ ಎಂಟರ್ ಪ್ರೈಸಸ್ ನ ಮಾಲೀಕ ಎಸ್.ಹರೀಶ್ ಕುಮಾರ್ ರೋಟರಿ ಮಿಸ್ಟಿ ಹಿಲ್ಸ್ ಮೂಲಕ ನೀಡಿದ ಬಿಸಿ ಮತ್ತು ತಣ್ಣಗಿನ ಶುದ್ಧ ನೀರಿನ ಘಟಕವನ್ನು ವಿತರಿಸಲಾಯಿತು. ಈ ಸಂದಭ೯ ಮಾತನಾಡಿದ ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್, ಅಪೇಕ್ಷಿತರಿಗೆ ದಾನ ಮಾಡುವ ಸಂದಭ೯ ಸಿಗುವ ಆತ್ಮತೖಪ್ತಿಗಿಂತ ಬೇರೆ ಸಮಧಾನ ಯಾವುದರಿಂದಲೂ ದೊರಕುವುದಿಲ್ಲ. ರೋಟರಿ ಸಂಸ್ಥೆ ಕೂಡ ಅಗತ್ಯವುಳ್ಳವರಿಗೆ ವಿದ್ಯಾಸಿರಿ, ಜಲಸಿರಿ, ವನಸಿರಿ, ಆರೋಗ್ಯ ಸಿರಿ ಎಂಬ ಜಿಲ್ಲಾ ಯೋಜನೆಗಳ ಮೂಲಕ ನಾನಾ ರೀತಿಯ ಸಹಾಯ ನೀಡುತ್ತಾ ಬಂದಿದೆ. ಶುದ್ದ ನೀರಿನ ಘಟಕದ ಮೂಲಕ ದೊರಕುವ ಶುದ್ಧ ನೀರಿನಿಂದ ಮಕ್ಕಳಿಗೆ ಉತ್ತಮ ಗುಣಮಟ್ಟದ ನೀರು ಕುಡಿಯಲು ದೊರಕಿ, ಅನಾರೋಗ್ಯಪೀಡಿತರಾಗುವವರ…

Read More

ಮಡಿಕೇರಿ ಜ.16 :  ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಸಂಯುಕ್ತಶ್ರಯದಲ್ಲಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಯ ಅಂಗವಾಗಿ ನಡೆಸಲಾದ  ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎ.ಎ.ರಾಝಿಕ್  ಮೊದಲ ಸ್ಥಾನ  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

ಚೆಯ್ಯಂಡಾಣೆ ಜ.17 :  ಕೊಡಗು ಜಿಲ್ಲಾ ಪಂಚಾಯತ್,  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಚೆಯ್ಯಂಡಾಣೆ ಕ್ಲಸ್ಟರ್ ಗೆ ಒಳಪಟ್ಟ ಪ್ರಾಥಮಿಕ ಶಾಲೆಗಳ ಮಕ್ಕಳ ಕಲಿಕಾ ಹಬ್ಬಕ್ಕೆ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ ಅಧ್ಯಕ್ಷ  ಬಿದ್ದಂಡ ರಾಜೇಶ್ ಅಚ್ಚಯ್ಯ ದೀಪ ಬೆಳೆಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಅವರು, ಪ್ರಸ್ತುತ ದಿನಗಳಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಸರ್ಕಾರ ವಿನೂತನ ಕಾರ್ಯಕ್ರಮಗಳ ಮೂಲಕ ಸಹಕಾರ ನೀಡುತ್ತಿದ್ದು, ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ  ಸಲಹೆ ನೀಡಿದರು. ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಸಿ ಆರ್ ಪಿ ಉಷಾ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಇದೊಂದು ಉತ್ತಮ ಕಾರ್ಯಕ್ರಮ, ಎರಡು ವರ್ಷ ಕೋವಿಡ್‍ನಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು  ನಷ್ಟ ಉಂಟಾಗಿದ್ದು, ಅದನ್ನು ಈ ವರ್ಷ ಕಲಿಕಾ ವರ್ಷ ಎಂದು ಆಚರಿಸುತ್ತಿದ್ದೇವೆ, ಕಲಿಕಾ ಚೇತರಿಕೆ ಹಾಗೂ ಕಲಿಕಾ ಹಬ್ಬಕ್ಕೆ ಪೂರಕವಾದ ಸಂಬಂಧವಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ…

Read More

ಮಡಿಕೇರಿ ಜ.17 : ಕುಶಾಲನಗರದ ಯುವ ವಕೀಲ ಅಬೂತಾಹಿರ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಬೂತಾಹಿರ್ ಅರ್ಹತೆ ಪಡೆದಿದ್ದು, ಈ ಬಾರಿ ಒಟ್ಟು 40 ಮಂದಿ ವಕೀಲರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Read More