ಮಡಿಕೇರಿ ಜ.17 : ಸಿಮೆಂಟ್ ತುಂಬಿದ ಲಾರಿಯೊಂದು ಮಗುಚಿಕೊಂಡ ಘಟನೆ ಗೋಣಿಕೊಪ್ಪ ವಿರಾಜಪೇಟೆ ಮುಖ್ಯ ರಸ್ತೆಯ ಹಾತೂರು ಗ್ರಾಮದ ತಿರುವಿನಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುಮಾರು 11.45 ಗಂಟೆಗೆ ಈ ಘಟನೆ ನಡೆದಿದ್ದು, ವಿಷಯ ತಿಳಿದ ಸ್ಥಳೀಯ ನಿವಾಸಿ ಕೊಕ್ಕಂಡ ರೂಪ ಭೀಮಯ್ಯ ಹಾಗೂ ಪುತ್ರ ಬಿದ್ದಪ್ಪ ಅವರುಗಳು ಸ್ಥಳಕ್ಕೆ ಆಗಮಿಸಿ ಚಾಲಕ ಹಾಗೂ ನಿರ್ವಾಹಕನನ್ನು ಲಾರಿಯಿಂದ ಹೊರ ತರುವಲ್ಲಿ ಯಶಸ್ವಿಯಾದರು. ನಂತರ ಪೊಲೀಸ್ ಹಾಗೂ ಆಂಬ್ಯುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಇದೀಗ ಇಬ್ಬರು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಜ.17 : ಚೆಟ್ಟಳ್ಳಿ ಪ್ರೌಢಶಾಲೆಯ ಸಮೀಪದಲ್ಲಿರುವ ಶ್ರೀಗಣಪತಿ ದೇವಾಲಯಕ್ಕೆ ಕಳ್ಳರು ನುಗ್ಗಿದ್ದು, ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಇಂದು ಬೆಳಗ್ಗೆ ದೇವಾಲಯ ಸಮಿತಿಯ ಅಧ್ಯಕ್ಷ ಮುಳ್ಳಂಡ ರತ್ತುಚಂಗಪ್ಪ ಅವರು ಪೂಜೆ ಸಲ್ಲಿಸಲು ಆಗಮಿಸಿದಾಗ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ. ಚೆಟ್ಟಳ್ಳಿ ಪೊಲೀಸ್ ಉಪಠಾಣೆಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಕಳ್ಳರು ಹುಂಡಿಯ ಬೀಗವನ್ನು ಮುರಿದು ಸುಮಾರು 5 ಸಾವಿರ ರೂ.ಗಳಷ್ಟು ಹಣವನ್ನು ದೋಚಿರುವುದು ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಡಿಕೇರಿ ಜ.17 : ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿ ಹಾಗೂ ವಕೀಲ ಎಂ.ಸಿ.ವಾಸುದೇವ್ (80) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬೆಂಗಳೂರಿನ ಪುತ್ರಿಯ ಮನೆಯಲ್ಲೇ ವಾಸುದೇವ್ ಅವರು ನಿಧನ ಹೊಂದಿದರು. ಪುರಸಭೆಯ ಅಧ್ಯಕ್ಷರಾಗಿದ್ದಾಗ ಅವರು ಉತ್ತಮ ಆಡಳಿತ ನೀಡಿದ್ದರು. ::: ಸಂತಾಪ ::: ಹಿರಿಯ ಕಾಂಗ್ರೆಸ್ಸಿಗ ಎಂ.ಸಿ.ವಾಸುದೇವ್ ಅವರ ನಿಧನಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ, ಯುವ ಮುಖಂಡ ಡಾ.ಮಂತರ್ ಗೌಡ, ಮಾಜಿ ಸಚಿವ ಬಿ.ಎ.ಜೀವಿಜಯ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಪ್ರಮುಖರಾದ ಕೆ.ಎ.ಯಾಕುಬ್, ಕೆ.ಯು.ಅಬ್ದುಲ್ ರಜಾಕ್, ಅಯ್ಯಪ್ಪ ಸೇರಿದಂತೆ ಎಲ್ಲಾ ಬ್ಲಾಕ್ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು…
ಮಡಿಕೇರಿ ಜ.17 : ಕಪಿಲಾ ನದೀತೀರದಲ್ಲಿರುವ ಶ್ರೀ ಸುತ್ತೂರು ಕ್ಷೇತ್ರವನ್ನು ತಮ್ಮ ತಪಸ್ಸಿದ್ಧಿಯಿಂದ ಜಾಗೃತ ಧರ್ಮಕ್ಷೇತ್ರವನ್ನಾಗಿ ನೆಲೆಗೊಳಿಸಿದ ಮಹಾಮಹಿಮರು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರು. ಪೂಜ್ಯರು ಸಂಸ್ಥಾಪಿಸಿದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಸಹಸ್ರಾರು ವರ್ಷಗಳಿಂದ ಜನತೆಯ ಸಮಗ್ರ ಉನ್ನತಿಗಾಗಿ ಜ್ಞಾನಾನ್ನದಾಸೋಹಗಳ ಕೈಂಕರ್ಯವನ್ನು ನಡೆಸುತ್ತಾ ಬಂದಿದೆ. ಇಂಥ ಭವ್ಯ ಇತಿಹಾಸವುಳ್ಳ ಶ್ರೀಮಠದ ಎಲ್ಲ ಪೂಜ್ಯ ಜಗದ್ಗುರುಗಳು ತಮ್ಮ ಅನುಪಮ ತಪೋನುಷ್ಠಾನದಿಂದ ಲೋಕೋದ್ಧಾರದ ಸೇವಾಕಾರ್ಯಗಳನ್ನು ಕೈಗೊಂಡಿದ್ದಾರೆ. ಶ್ರೀಮಠದ ಬಹುಮುಖ ಚಟುವಟಿಕೆಗಳ ನಿರ್ವಹಣೆಗಾಗಿ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರಿಂದ ಸ್ಥಾಪಿತವಾದ ಜೆಎಸ್ಎಸ್ ಮಹಾವಿದ್ಯಾಪೀಠ ಹಾಗೂ ಇದರ ಅಂಗಸಂಸ್ಥೆಗಳ ಮೂಲಕ ದೇಶವಿದೇಶಗಳಲ್ಲಿ ಧರ್ಮ, ಸಂಸ್ಕೃತಿ, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಸಮಾಜಸುಧಾರಣೆ ಮುಂತಾದ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾಕಾರ್ಯಗಳು ನಡೆಯುತ್ತಿವೆ. ಆದಿ ಜಗದ್ಗುರುಗಳವರ ಜಾತ್ರಾ ಮಹೋತ್ಸವವು ಪ್ರತಿ ವರ್ಷ ಪುಷ್ಯ ಬಹುಳ ದ್ವಾದಶಿಯಂದು ಪ್ರಾರಂಭವಾಗುತ್ತದೆ. ಮಾಸಶಿವರಾತ್ರಿಯಂದು ರಥೋತ್ಸವ ಹಾಗೂ ಮಾಘ ಶುದ್ಧ ಪಾಡ್ಯಮಿಯಂದು ತೆಪ್ಪೋತ್ಸವ ಜರುಗುತ್ತವೆ. ಆರು ದಿನಗಳ ಕಾಲ…
ಮಡಿಕೇರಿ ಜ.17 : ಹುದಿಕೇರಿ ಜನತಾ ಪ್ರೌಢಶಾಲೆ ಆಡಳಿತ ಮಂಡಳಿಯಿಂದ ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹುದಿಕೇರಿ ಜನತಾ ಪ್ರೌಢಶಾಲೆ ಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪೊನ್ನಣ್ಣ , ಈ ಶಾಲೆಯಲ್ಲಿ ಓದಿದವರು ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದಾರೆ. ಶಾಲೆ ಆಡಳಿತ ಮಂಡಳಿಯವರು ಶಾಲೆಯ ಕಟ್ಟಡಗಳ ದುಸ್ಥಿತಿಯ ಬಗ್ಗೆ ತಿಳಿಸಿದಾಗ ಶಾಲೆಯನ್ನು ಉಳಿಸಿಕೊಳ್ಳಬೇಕೆಂಬ ಸಂಕಲ್ಪದೊಂದಿಗೆ ವಿವಿಧ ಆಯಾಮಗಳಲ್ಲಿ ಪ್ರಯತ್ನಿಸಿ ಕೊನೆಗೆ ಕೋಲಾರ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರಿಂದ 10 ಲಕ್ಷ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, ಈ ಶಾಲೆಯಲ್ಲಿ ತಂದೆಯವರು ಓದಿದ ಶಾಲೆ ಎಂದು ಸ್ಮರಿಸಿದರು. ಶಾಲಾ ಅಡತ ಮಂಡಳಿ ಅಧ್ಯಕ್ಷ ಮಂಡೆಚಂಡ ದಿನೇಶ್ ಚಿಟ್ಯಪ್ಪ ಮಾತನಾಡಿ, ಹಲವಾರು ವರ್ಷಗಳಿಂದ ಶಾಲೆಯ ದುರಸ್ತಿಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ರಾಜಕೀಯ ಲೆಕ್ಕಾಚಾರಗಳಿಂದಾಗಿ ಯಾರೊಬ್ಬರೂ ಆಸಕ್ತಿ ವಹಿಸಿರಲಿಲ್ಲ. ಆದರೆ ಪೊನ್ನಣ್ಣ ಅವರು ತಮ್ಮ ಸೇವಾ ಮನೋಭಾವದಿಂದ ಶಾಲಾ ಆಡಳಿತ ಮಂಡಳಿಯವರೊಂದಿಗೆ ಕೈಜೋಡಿಸಿ ಶಾಲೆಯನ್ನು…
ಮಡಿಕೇರಿ ಜ.17 : ಕೊಡಗು ಪ್ರೆಸ್ಕ್ಲಬ್ ಬೆಳ್ಳಿಹಬ್ಬದ ಸಂಭ್ರಮ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಕೊಡಗು ಪ್ರೆಸ್ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಉದ್ಘಾಟನಾ ಸಮಾರಂಭ ಜ. 22ರಂದು ನಡೆಯಲಿದೆ. ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11.30ಕ್ಕೆ ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಮಾರಂಭವನ್ನು ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದಾರೆ. ಕ್ರಿಕೆಟ್ ಪಂದ್ಯ ಉದ್ಘಾಟನೆಯನ್ನು ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ನೆರವೇರಿಸಲಿದ್ದಾರೆ. ಮುಳಿಯ ಜ್ಯುವೆಲ್ಸ್ಚೇರ್ಮನ್, ಮೇನೆಂಜಿಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ, ನಂದಿಗುಂದದ ದೇವ್ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಚಾಮೇರ ಪವನ್ ದೇವಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಮತ್ತು ಕೊಡಗು…
ಮಡಿಕೇರಿ ಜ.17 : ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 64ನೇ ವರ್ಷದ ವಾರ್ಷಿಕ ಮಹಾರಥೋತ್ಸವವು ವಿವಿಧ ಧಾರ್ಮಿಕ ಕೈಂಕರ್ಯಗೊಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. 800ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 64ನೇ ವರ್ಷದ ಮಹಾ ರಥೋತ್ಸವಕ್ಕೆ ಕೊಡಗು ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಸಹಸ್ತಾರು ಮಂದಿ ಭಕ್ತರು ಆಗಮಿಸಿ ವಿವಿಧ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು. ಜ.13 ರಂದು ಪ್ರಾರ್ಥನಾ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆಗೊಂಡಿರುವ ಜಾತ್ರೆಗೆ (ಜ.17) ಇಂದು ತೆರೆಬಿಳಲಿದೆ. ಜಾತ್ರೆಯ ಪ್ರಯುಕ್ತ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವುದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯದಲ್ಲಿ ದೀಪೋತ್ಸವ, ಅರುಸು ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿತು. ಸಮೀಪದ ಕೂತಿನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ ಹೊರ ಜಿಲ್ಲೆಯ ನೂರಾರು ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಶಾಂತಳ್ಳಿಯ ರಥಬೀದಿಯಲ್ಲಿ ಹೊರಟ ರಥವನ್ನು ಭಕ್ತಾಧಿಗಳು ಹರ್ಷೋದ್ಗಾರದೊಂದಿಗೆಗೆ…
ಮಡಿಕೇರಿ ಜ.17 : ಅಡ್ವಾನ್ಸ್ಡ್ ಗ್ರೋಥ್ ಲರ್ನಿಂಗ್ (ಎಜಿಎಲ್) ಸಂಸ್ಥೆ ಕೊಡಮಾಡುವ ಆರ್ಟಿಸ್ಟ್ ಆಫ್ ದಿ ಇಯರ್ ಪ್ರಶಸ್ತಿಗೆ ಮಡಿಕೇರಿಯ ಕಾವ್ಯಶ್ರೀ ಕಪಿಲ್ ಭಾಜನರಾಗಿದ್ದಾರೆ. ಕಲಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದ್ದು, ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲೆಯ ಗುರುಗಳಾಗಿರುವ ವಿದುಷಿ ಕಾವ್ಯಶ್ರೀ ನಗರದ ಬಾಲಭವನದಲ್ಲಿ ಭರತನಾಟ್ಯ ತರಗತಿ ನಡೆಸುತ್ತಿದ್ದಾರೆ. ಮಡಿಕೇರಿಯಲ್ಲಿ ವಕೀಲರಾಗಿರುವ ಕಪಿಲ್ ಕುಮಾರ್ ದುಗ್ಗಳ ಅವರ ಪತ್ನಿಯಾಗಿರುವ ಕಾವ್ಯಶ್ರೀ ಅವರಿಗೆ ಎಎಲ್ಜಿ ಸಂಸ್ಥೆಯ ಸಂಸ್ಥಾಪಕ ರಾಜೇಶ್ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ನಾಪೋಕ್ಲು ಜ.17 : ಮಳೆಯಿಂದಾಗಿ ಕಾಫಿನಷ್ಟಕ್ಕೊಳಗಾದ ಕೊಡಗು ಜಿಲ್ಲೆಯ 47 ಸಾವಿರ ಬೆಳೆಗಾರರಿಗೆ 138 ಕೋಟಿ ರೂ. ಪರಿಹಾರ ವಿತರಣೆ ಮಾಡಲಾಗಿದೆ ಎಂದು ಶಾಸಕ ಕೆ.ಜಿ ಬೋಪಯ್ಯ ಹೇಳಿದರು. ಸಮೀಪದ ಶಾಲಿಮಾರು ಮಿಲ್-ಕೂರುಳಿಯಲ್ಲಿ 2.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈಗಾಗಲೇ ಅರ್ಜಿ ಸಲ್ಲಿಸಲಾಗಿದ್ದು, ಪರಿಹಾರ ದೊರಕದ ಬೆಳೆಗಾರರಿಗೆ ಪರಿಹಾರ ವಿತರಿಸಲೆಂದು ಹೆಚ್ಚುವರಿ ಆರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಬೆಳೆಗಾರರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳನ್ನು ದುರಸ್ತಿಪಡಿಸಲಾಗುವುದು. ಬಿಜೆಪಿ ಸರ್ಕಾರದ ವತಿಯಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಧರ್ಮಕ್ಕೆ ಕುತ್ತು ತರುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಆ ಬಗ್ಗೆ ಜಾಗೃತಿ ಆಗಿರಬೇಕಾಗಿದೆ. ಮಳೆಹಾನಿ ಪರಿಹಾರದಡಿಯಲ್ಲಿ ಹಲವು ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮಳೆಹಾನಿ ಪರಿಹಾರದಡಿ 1.25 ಕೋಟಿ ಹಣ ಬಿಡುಗಡೆಯಾಗಿದೆ. ಇದರಲ್ಲಿ ನಾಪೋಕ್ಲು ವ್ಯಾಪ್ತಿಯ ಗ್ರಾಮೀಣ ರಸ್ತೆಗಳನ್ನು ದುರಸ್ತಿಪಡಿಸಲಾಗುವುದು. ಇದಲ್ಲದೆ ಲೋಕೋಪಯೋಗಿ ಇಲಾಖೆ ವತಿಯಿಂದಲೂ ರಸ್ತೆಗಳ ಅಭಿವೃದ್ಧಿಗೆ…
ಮಡಿಕೇರಿ ಜ.16 : ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಸ್ವಾಮಿ ವಿವೇಕಾನಂದರ ಯೂತ್ ಮೂವ್ಮೆಂಟ್ ಹಾಗೂ ಎಫ್.ಎಂ.ಸಿ ಕಾಲೇಜಿನ ಎನ್.ಎಸ್.ಎಸ್ ಘಟಕ, ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಸಲಾಯಿತು. ಡಾ.ಮೇಜರ್ ಕುಶ್ವಂತ್ ಕೋಳಿಬೈಲು ವಿವೇಕಾನಂದರ ಜೀವನ ಚರಿತ್ರೆಯ ಬಗ್ಗೆ ಹಾಗೂ ಅವರು ಚಿಕ್ಕ ವಯಸ್ಸಿನಲ್ಲಿ ಮಾಡಿದ ಅನನ್ಯ ಸಾಧನೆಯ ಕುರಿತು ವಿಶ್ಲೇಷಿಸಿದರು. ತಮ್ಮ ವಯಸ್ಸಿಗೆ ಮೀರಿದ ಬುದ್ಧಿವಂತಿಕೆ ಹೊಂದಿದ್ದ ವಿವೇಕಾನಂದರು, ವಯಸ್ಸಿಗೆ ಮೀರಿದ ವಾಕ್ಚಾತುರ್ಯವನ್ನು ಹೊಂದಿದ್ದರು. 1893 ರ ಕಾಲಘಟ್ಟದಲ್ಲಿ, ಬೇರೊಂದು ದೇಶಕ್ಕೆ ತೆರಳಿ ನನ್ನ ಅಕ್ಕ ತಂಗಿ, ಅಣ್ಣ ತಮ್ಮಂದಿರೇ ಎಂದು ಸಂಬೋಧಿಸುತ್ತಾರೆ ಅವರ ಮನಸ್ಥೈರ್ಯವನ್ನು ಮೆಚ್ಚಬೇಕು. ಇಂದು ಸ್ವತಂತ್ರವಾಗಿ ಹೇಳಿಕೆಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. 130 ವರ್ಷಗಳ ಹಿಂದೆ ಹಾಗೊಂದು ಅವಕಾಶ ಬಹಳ ಕಷ್ಟದ ವಿಚಾರವಾಗಿತ್ತು. ಆದರೆ ಅವರು ಅಸಾಧ್ಯವನ್ನು ಸಾಧಿಸಿದಂತವರು. ನಮಗೆಲ್ಲಾ ಪ್ರೇರಣೆ. “ವಿವೇಕಾನಂದರು ಆಧುನಿಕ ಭಾರತದ ನಿರ್ಮಾತೃ” ಎನ್ನುವ ಸುಭಾಷ್…






