ಲೇಖಕ: admin

ಕುಶಾಲನಗರ, ಜ.16 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.3 ರಂದು ಕುಶಾಲನಗರದಲ್ಲಿ ಹಮ್ಮಿಕೊಂಡಿರುವ ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾದ ಕುಶಾಲನಗರದಲ್ಲಿ ನೆಲೆಸಿರುವ ಬಿ.ಆರ್.ನಾರಾಯಣ ಆಯ್ಕೆಯಾಗಿದ್ದಾರೆ. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಬಿ.ಆರ್.ನಾರಾಯಣ್ ಅವರನ್ನು ಕುಶಾಲನಗರ ಕಸಾಪ ದಿಂದ ಸಿದ್ದಯ್ಯ ಪುರಾಣಿಕ ಬಡಾವಣೆಯಲ್ಲಿರುವ ಅವರ ಮನೆಗೆ ತೆರಳಿ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಗಮಿಸುವಂತೆ ಆತ್ಮೀಯವಾಗಿ ಆಹ್ವಾನ ನೀಡಿ ಸ್ವಾಗತಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಹಾಗೂ ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಸಮ್ಮೇಳನದ ವಿವಿಧ ಉಪಸಮಿತಿಗಳ ಪ್ರಮುಖರು ಸೇರಿದಂತೆ ಸಾಹಿತಿ ಬಿ.ಆರ್.ನಾರಾಯಣ ಅವರನ್ನು ಸನ್ಮಾನಿಸಿ ಫಲ ತಾಂಬೂಲ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೇಶವಕಾಮತ್, ಸುಮಾರು ನಾಲ್ಕು ದಶಕಗಳ ಕಾಲ ಉಪನ್ಯಾಸಕ ವೃತ್ತಿ, ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಿ.ಆರ್.ನಾರಾಯಣ ಅವರು ಸಮ್ಮೇಳನಕ್ಕೆ ಆಯ್ಕೆಯಾಗಿರುವುದು ಸಂತಸದ ವಿಷಯ. ಈ…

Read More

ಸುಂಟಿಕೊಪ್ಪ,ಜ.16: ವಿಶೇಷ ಚೇತನ ಬದುಕಿಗೆ ಆಸರೆಯಾಗಲು ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿಶೇಷ ಚೇತನರ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಕರೆ ನೀಡಿದರು. ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ನಡೆದ ಗ್ರೇಡ್ 1 ಗ್ರಾ.ಪಂ ಯ ವಿಶೇಷ ಚೇತನರ ಗ್ರಾಮ ಸಭೆಯಲ್ಲಿ ಮಾತನಾಡಿದರು. ವಿಕಲಚೇತನರು ಶೇ.75 ಇದ್ದವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಇಲಾಖೆಯಿಂದ ನೀಡಲಾಗುತ್ತಿದೆ. ಇದಕ್ಕೆ ಬಹಳಷ್ಟು ಅರ್ಜಿ ಬರುತ್ತಿದ್ದು, ಕೊಡಗಿಗೆ ಕೇವಲ 5 ದ್ವಿಚಕ್ರ ವಾಹನಕ್ಕೆ ಅನುದಾನ ಲಭ್ಯವಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುತ್ತಿದೆ. ಗ್ರಾಮ 1 ಸೇವಾಸಿಂಧು ಕೇಂದ್ರ ತೆರೆಯಲು ವಿಶೇಷ ಚೇತನರಿಗೆ ಸಹಾಯಧನ ನೀಡಲಾಗುತ್ತಿದೆ. ರಿಯಾಯಿತಿ ದರದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತಿದೆ. ರೈಲಿನಲ್ಲಿ ಸಂಚರಿಸಲು ಉಚಿತಪಾಸ್ ನೀಡಲಾಗುತ್ತಿದೆ. ವಿಕಲಚೇತನರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಮಾನಸಿಕ ಸಮಸ್ಯೆ ಇರುವ ವಿಕಲಚೇತನರಿಗೆ ಉಚಿತ ವೈಧ್ಯಕೀಯ ಚಿಕಿತ್ಸೆ ಲಭ್ಯವಾಗುತ್ತಿದೆ. ಮಲಗಿದಲ್ಲೇ ಇರುವ ವಿಕಲಚೇತನರಿಗೆ ವಾಟರ್ ಬೆಡ್ ಕಲ್ಪಿಸಲಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಪಾಸಾದ ಟೈಲರಿಂಗ್…

Read More

ಸುಂಟಿಕೊಪ್ಪ,ಜ.16 : ಕೊಡಗರಹಳ್ಳಿ ನೇತಾಜಿ ಯುವಕ ಸಂಘದ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಮಂಡುವಂಡ ಪುನೀತ್ ಪೂಣ್ಣಚ್ಚ ಆಯ್ಕೆಯಾಗಿದ್ದಾರೆ. ಸಂಘದ ನೇತಾಜಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಕೊಡಗರಹಳ್ಳಿ ಗ್ರಾ.ಪಂ ಸದಸ್ಯ ಸುನಿಲ್ ಹಾಗೂ ಖಜಾಂಜಿಯಾಗಿ ಮಿಥುನ್ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಡಾ.ಶಶಿಕಾಂತರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಸಿ.ಸಿ.ನಾರಾಯಣಸ್ವಾಮಿ ವರದಿ ವಾಚಿಸಿದರು. ಖಜಾಂಜಿ ಸಿ.ಎನ್.ದತ್ತ ಸೋಮಣ್ಣ ಲೆಕ್ಕ ಪತ್ರ ಮಂಡಿಸಿದರು. ನಿರ್ಗಮಿತ ಅಧ್ಯಕ್ಷ ಡಾ.ಶಶಿಕಾಂತರೈ ಮಾತನಾಡಿ ಸಂಘವು ಜಿಲ್ಲೆಯಲ್ಲಿ ಹೆಸರು ಪಡೆದ ಸಂಘವಾಗಿದ್ದು ಪುಟ್ಬಾಲ್ ಕ್ರೀಡೆಯಲ್ಲಿ ಜಿಲ್ಲಾ ಚಾಂಪಿಯನ್ ಮಟ್ಟವನ್ನು ಪಡೆದಿದೆ. ಕ್ರೀಡೆ ಮಾತ್ರವಲ್ಲದೆ ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಾಗಿ ಆರೋಗ್ಯ ಶಿಬಿರ, ಪಶುವೈಧ್ಯಕೀಯ ಶಿಬಿರ, ಅಂತರ ಶಾಲಾ ಹಾಕಿ ಪಂದ್ಯಾವಳಿಗಳನ್ನು ನಡೆಸಿಕೊಂಡು ಬರುತ್ತಿವೆ. 1959 ರಷ್ಟು ಹಿಂದೆಯೇ ಈ ಸಂಘ ಸ್ಥಾಪನೆಯಾಗಿದ್ದು, ಸಂಘದ ಹಿರಿಯ ಸದಸ್ಯರಾದ ಡಾ.ಎಂ.ಪಿ.ಗಣೇಶ್ ಅವರು ಪದ್ಮಶ್ರೀ ಪುರಸ್ಕøತರಾಗಿರುವುದು ಹೆಮ್ಮೆಯ ವಿಚಾರ. ಹಾಗೆಯೇ ಸಂಘದ ಸದಸ್ಯರುಗಳು…

Read More

ಮಡಿಕೇರಿ ಜ.16 : ಕ್ಷೇತ್ರಗಳ ಪುನರ್ ವಿಂಗಡಣೆ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು 29 ರಿಂದ 25 ಕ್ಕೆ ಇಳಿಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪಂಚಾಯತ್ ರಾಜ್ ನಿರ್ದೇಶಕರು ಮತ್ತು ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಹಾಗೂ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಸದಸ್ಯ ಕಾರ್ಯದರ್ಶಿಗಳಿಗೆ ಆಕ್ಷೇಪ ಸಲ್ಲಿಸಿದೆ. ಈ ಹಿಂದೆ ಇದ್ದ 29 ಕ್ಷೇತ್ರಗಳಿಗೆ 5 ನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಿ 34 ಜಿ.ಪಂ ಕ್ಷೇತ್ರಗಳನ್ನು ರಚಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಕೊಡಗು ಜಿಲ್ಲೆಯು ಗುಡ್ಡಗಾಡು ಪ್ರದೇಶವಾಗಿದ್ದು, ಜನಸಂಖ್ಯೆಯೂ ಕೂಡ ಚದುರಿರುತ್ತದೆ. ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರವನ್ನು ವಿಂಗಡಿಸುವ ಸಂದರ್ಭ ಮತದಾರರು ಬಹಳಷ್ಟು ದೂರ ಕ್ರಮಿಸುವುದು ಅವೈಜ್ಞಾನಿಕ ರೀತಿಯ ಪ್ರಕ್ರಿಯೆಯಾಗಿರುತ್ತದೆ. ಭೌಗೋಳಿಕ ಹಿನ್ನೆಲೆಯಲ್ಲಿ ಈ ಹಿಂದೆ ಇದ್ದ 29 ಕ್ಷೇತ್ರಗಳನ್ನು ಪರಿಷ್ಕರಿಸುವ ಸಂದರ್ಭ ಕನಿಷ್ಟ 5 ಸ್ಥಾನಗಳನ್ನು ಹೆಚ್ಚುವರಿ ಮಾಡಿ ಒಟ್ಟು 34 ಕ್ಷೇತ್ರವನ್ನು ಮಾಡಬೇಕೆಂಬ ಜಿಲ್ಲೆಯ ಜನತೆಯ ಬೇಡಿಕೆಯನ್ನು ಪರಿಗಣಿಸದೇ ಇದ್ದು 29…

Read More

ಮಡಿಕೇರಿ ಜ.16 :  ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಆಂತರಿಕ ಗುಣಮಟ್ಟ ಭರವಸಾ ಕೋಶ , ಎನ್.ಎಸ್.ಎಸ್ ಘಟಕ , ರಾಜ್ಯಶಾಸ್ತ್ರ ವಿಭಾಗ ಹಾಗೂ ಉಡುಪಿ  ಡಿವೈನ್ ಪಾರ್ಕ್ ಟ್ರಸ್ಟ್ , ವಿವೇಕ ಜಾಗೃತ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ  ‘ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ‘ ರಾಷ್ಟ್ರೀಯ ಯುವ ದಿನ ‘ ಹಾಗೂ ‘ ಯುವ ಸಪ್ತಾಹದ ‘ಪ್ರಯುಕ್ತ ವಿದ್ಯಾರ್ಥಿಗಳಿಗೆ ‘ಕಿವಿಮಾತು’  ವಿಶೇಷ ಉಪನ್ಯಾಸ  ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರಿನ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ನಿವೃತ್ತ  ಉಪನ್ಯಾಸಕರು ಹಾಗೂ ಡಿವೈನ್ ಪಾರ್ಕ್ ಟ್ರಸ್ಟನ H2 ಅಧಿಕಾರಿ ಪದ್ಮಲತಾ ರಾವ್ ಮಾತನಾಡಿ, ” ದೇಶ ಭಕ್ತ ಸಂತ ಎಂದು ಹೆಮ್ಮೆಯಿಂದ ಕರೆಸಿ ಕೊಳ್ಳುವ ಸ್ವಾಮಿ ವಿವೇಕಾನಂದರ ಜೀವನ , ಆದರ್ಶಗಳು , ಯುವ ಜನಾಂಗದ ಬೆಳವಣಿಗೆ, ವಿದ್ಯಾರ್ಥಿಗಳ ಕಲಿಕೆ, ಏಕಾಗ್ರತೆ, ವೈಚಾರಿಕತೆಗಳಿಗೆ ವಿವೇಕವಾಣಿ, ವಿವೇಕ ಸಂದೇಶಗಳ…

Read More

ಮಡಿಕೇರಿ ಜ.16 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನದಲ್ಲಿ “ಶ್ರೀಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಅನಾವರಣಗೊಳಿಸಲಾಯಿತು. ಸುಮಾರು 9 ಅಡಿ ಎತ್ತರದ ಆಂಜನೇಯನಿಗೆ ಮಕ್ಕಳಿಂದ ಅಭಿಷೇಕ ಮತ್ತು ಅರ್ಚಕರಿಂದ ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಶೈಕ್ಷಣಿಕ ಪ್ರಗತಿಗೆ ಊರಿನಲ್ಲಿ ಜ್ಞಾನದೇಗುಲವಿರಬೇಕು, ಅದೇ ರೀತಿ ಊರು ಸುಭಿಕ್ಷವಾಗಿರಲು ದೇವಾಲಯಗಳಿರಬೇಕು ಎಂದರು. ಒಗ್ಗಟ್ಟಿನ ಬಲದಿಂದ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ಅಭ್ಯುದಯವನ್ನು ಸಾಧಿಸುತ್ತಿದೆ. ಸಂಘದ ಮೂಲಕ ದೇವರ ಮೂರ್ತಿಗಳನ್ನು ಸ್ಥಾಪಿಸಿ ಶ್ರದ್ಧೆ ಮತ್ತು ಭಕ್ತಿಗೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯವೆಂದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಮಾತನಾಡಿ ಉತ್ತಮ ಕಾರ್ಯಗಳ ಮೂಲಕ ಮನುಷ್ಯ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಕೆತ್ತಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕಾರ್ಕಳದ ಗುಣವಂತೇಶ್ವರ ಭಟ್…

Read More

ನಾಪೋಕ್ಲು ಜ.16 : ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಮನ್ವಯತೆಯಿಂದ ಮಕ್ಕಳ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಹೇಳಿದರು. ಕೊಡವ ಸಮಾಜದಲ್ಲಿ ನಡೆದ ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದಿನದ ಹೆಚ್ಚಿನ ಸಮಯವನ್ನು ಮಕ್ಕಳು ಪೋಷಕರೊಂದಿಗೆ ಕಳೆಯುತ್ತಾರೆ. ಹೀಗಾಗಿ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರಿಗಿಂತಲೂ ಪೋಷಕರ ಪಾತ್ರ ಮಹತ್ವದ್ದು ಎಂದರು. ಪೋಷಕರು ಮಕ್ಕಳು ಕಲಿಯುವ ಶಾಲೆ ಹಾಗೂ ಶಿಕ್ಷಕರ ಬಗ್ಗೆ ಗೌರವವನ್ನು ಹೊಂದಿರಬೇಕು. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ ಬಳಿಕ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಪೋಷಕರು ಸುಮ್ಮನಾಗಬಾರದು. ಶಾಲೆಗೆ ಕಳುಹಿಸಿದ ನಂತರ ಮುಂದಿನ ಬೆಳವಣಿಗೆಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಮಕ್ಕಳ ಆಸೆ ಆಕಾಂಕ್ಷೆಗಳನ್ನು ಈಡೇರಿಸಿದರೆ ಮಾತ್ರ ಜವಾಬ್ದಾರಿಯುತ ಪೋಷಕರಾಗಲು ಸಾಧ್ಯ. ಗುರು ಹಿರಿಯರನ್ನು ಗೌರವಿಸುವಂತೆ ಮಕ್ಕಳಿಗೆ ತಿಳಿ ಹೇಳುವ ಕರ್ತವ್ಯ ಪೋಷಕರದ್ದು ಎಂದರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ…

Read More

ಮಡಿಕೇರಿ ಜ.16 : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ನಾವೀನ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು  ವೈದ್ಯ  ಅಮೃತ್ ನಾಣಯ್ಯ ಹೇಳಿದರು. ಜೆಸಿ ವಿದ್ಯಾ ಸಂಸ್ಥೆಯ 33ನೇ ವಾರ್ಷಿಕೋತ್ಸವದ  ಅಧ್ಯಕ್ಷತೆ ವಹಿಸಿ  ಮಾತನಾಡಿದ  ಅವರು,  ಪೋಷಕರಿಗೂ, ಶಿಕ್ಷಕರಿಗೂ ತಮ್ಮ ಅನುಭವದ ಮೂಲಕ ಜ್ಞಾನದ ಬೆಳಕನ್ನು ಚೆಲ್ಲಿದರು. ಕ್ಷೇತ್ರ ಶಿಕ್ಷಣಾಧಿಕಾರಿ  ಶೈಲಬೆಳಗಿ ಮಾತನಾಡಿ, ಸಮಯದ ಮಹತ್ವವನ್ನು ಅರಿತು ಶ್ರದ್ಧೆಯನ್ನು ಹೆಚ್ಚಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ  ಕೋಟ್ರಂಗಡ ಸುಬ್ರಮಣಿ, (ಕರೆಸ್ಪಾಂಡೆಂಟ್  )  ವರದಿಗಾರ ಮಚ್ಚಮಾಡ ಸುರೇಶ್, ಆಡಳಿತಾಧಿಕಾರಿ ಕೋಟ್ರಂಗಡ ತಿಮ್ಮಯ್ಯ , ಟ್ರಸ್ಟಿಗಳಾದ ಕೋಟ್ರಂಗಡ ಯಶೋಧ, ಕೋಟ್ರಂಗಡ ಸುನಿಲ್ ಸುಬ್ಬಯ್ಯ, ಮಚ್ಚಮಾಡ ಅಪ್ಪಣ್ಣ , ಮುಖ್ಯಶಿಕ್ಷಕ  ಎನ್. ಬಿ. ಸತೀಶ್  ಹಾಗೂ ಕೆ.ಕೆ. ಸಿಂಧೂರ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ  ಜನರ ಮನಸೂರೆಗೊಂಡಿತು. ಕೋಟ್ರಂಗಡ ತಿಮ್ಮಯ್ಯ ಸರ್ವರಿಗೂ ಸ್ವಾಗತ ಕೋರಿದರು.  ಮಕ್ಕಳ ಕಾರ್ಯಕ್ರಮಕ್ಕೆ ಜನರಿಂದ ಪ್ರಶಂಸೆಗಳ ಸುರಿಮಳೆಯೇ ಸುರಿಯಿತು. ಶಿಕ್ಷಕ ವೃಂದದವರು ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕ  ಪ್ರಸನ್ನ ಹಾಗೂ ಚಂಚಲ  ಕಾರ್ಯಕ್ರಮದ …

Read More

ಮಡಿಕೇರಿ ಜ.16 :  ಕೊಡಗು ಮಹಾಬೋದಿ ಪತ್ತಿನ ಸಹಕಾರ ಸಂಘದ ವತಿಯಿಂದ 2023 ರ ಕ್ಯಾಲಂಡರ್ ನ್ನು ಸಂಘದ ಸ್ಥಾಪಕ ಅಧ್ಯಕ್ಷ  ಎಸ್.ಸಿ.ಸತೀಶ್  ಬಿಡುಗಡೆ ಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಸಿ.ಸತೀಶ್,  ಸಂಘ ಪ್ರಸ್ತುತ 1850 ಸದಸ್ಯರನ್ನು ಹೊಂದಿದ್ದು, ಸದಸ್ಯರಿಗೆ ಅನೇಕ ಸೌಲಭ್ಯ ಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಸದಸ್ಯತ್ವ ಆಂದೋಲನ ನಡೆಸಿ ಸದಸ್ಯರ ಸಂಖ್ಯೆಯನ್ನು 25,000 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ ಎಂದು ವಿವರಿಸಿದರು. ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಎಸ್.ಬಿ.ಜಯಪ್ಪ, ಕೆ.ಬಿ.ರಾಜು, ಎಸ್.ಎ.ಪ್ರತಾಪ್, ಹೆಚ್.ಎನ್.ಶಾರದ, ಗಾಯಿತ್ರಿ, ನರಸಿಂಹ, ಜೆ.ಎಲ್.ಜನಾರ್ದನ, ಎನ್.ಎಸ್.ಗೀತಾ, ಮೋಹನ್ ಮೌರ್ಯ, ಹೆಚ್.ಎಂ.ಕೃಷ್ಣ, ಕೆ.ಪಳನಿ ಪ್ರಕಾಶ್, ಶೋಭಾ ದೊರೈ  ಹಾಜರಿದ್ದರು.  

Read More

ಮಡಿಕೇರಿ ಜ.16 :  ಯಾವುದೇ ಒಂದು ಜನಾಂಗದ ಜೀವಸೆಲೆಯೇ ಅದರ ಭಾಷೆ. ಭಾಷೆ ಉಳಿದರೆ ಮಾತ್ರ ಜನಾಂಗದ ಉಳಿವು ಸಾಧ್ಯ ಎಂದು ಬೆಂಗಳೂರು ಕೊಡವ ಸಾಮಾಜ ಅಧ್ಯಕ್ಷ  ಕರವಟ್ಟಿರ ಪೆಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡವಾಮೆರ ಕೊಂಡಾಟ ಸಂಘಟನೆಯ ತಿಂಗಕೋರ್ ಅರಿವು ಮಾಲಿಕೆಯ ಹನ್ನೆರಡನೇ ವೆಬಿನಾರ್’ನಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಅತ್ಯಂತ ಪುರಾತನ, ವಿಶಿಷ್ಟವಾದ  ಕೊಡವ ಭಾಷೆಯು, ಅವನತಿಯತ್ತ ಸಾಗುತ್ತಿರುವುದು ವಿಷಾದನೀಯ ಎಂದರು. ಜನಾಂಗ ಉಳಿಯಬೇಕಾದರೆ ಭಾಷೆಯನ್ನು ಬೆಳೆಸಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪ್ರತಿಯೊಬ್ಬ ಕೊಡವರೂ ಜಾಗರೂಕರಾಗಿ ತಮ್ಮ ಮನೆಗಳಲ್ಲಿ ಬಂದುಗಳ ಜೊತೆಯಲ್ಲಿ ಕೊಡವ ಭಾಷೆಯಲ್ಲಿ  ವ್ಯವಹರಿಸುವಂತಾಗಬೇಕು. ಮಕ್ಕಳಲ್ಲಿ ಭಾಷೆಯ ಅಭಿಮಾನವನ್ನು ಜಾಗೃತಿಗೊಳಿಸುವತ್ತ ಪೋಷಕರು ಗಮನ ಹರಿಸಬೇಕು ಎಂದರು. ಕೊಡವರು ಎಲ್ಲೇ ನೆಲೆಸಿದ್ದರೂ ನಮ್ಮ ಸಂಸ್ಕೃತಿ ಸಂಪ್ರದಾಯಗಳ ಪಾಲನೆಗೆ ಒತ್ತುಕೊಡಬೇಕು. ಸಾಧ್ಯವಾದಷ್ಟು ಹಬ್ಬಗಳ ಆಚರಣೆಗೆ ತಮ್ಮ ಗುರುಮನೆಗೆ ಬರುವಂತಾಗಬೇಕು. ಹೀಗಾದಾಗ ಮಾತ್ರ ಮುಂದಿನ ಪೀಳಿಗೆಗೆ ಶ್ರೀಮಂತ ಕೊಡವ ಸಂಸ್ಕೃತಿಯನ್ನು ಉಳಿಸಿಕೊಡಲು ಸಾಧ್ಯ ಎಂದರು.  ಕೊಡವ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ…

Read More