ಲೇಖಕ: admin

ಸೋಮವಾರಪೇಟೆ ಜ.15 : ಯುವಕನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಗರ್ವಾಲೆ ಗ್ರಾಮದ ನಾಪಂಡ ಕುಶಾಲಪ್ಪ ಎಂಬುವವರ ಪುತ್ರ ರಾಜೇಶ್ ಚಂಗಪ್ಪ(28) ಮೃತ ವ್ಯಕ್ತಿ. ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಭಾನುವಾರ ಕುಟುಂಬದವರು ಸೋಮವಾರಪೇಟೆ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಂಜೆ ಮೃತದೇಹ ಪತ್ತೆಯಾಗಿದ್ದು, ಪೊಲಿಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಇನ್ಸ್ ಪೆಕ್ಟರ್ ರಾಮಚಂದ್ರನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ವಿರಾಜಪೇಟೆ ಜ.15 : ಕಾಫಿ ತೋಟದ ಲೈನ್ ಮನೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ದಿನಗಳ ಹಿಂದೆ ಶ್ರೀಮಂಗಲದ ಕಾಫಿ ತೋಟವೊಂದರಲ್ಲಿ ಕಾಫಿ ಕೊಯ್ಯುವ ಕೆಲಸಕ್ಕಾಗಿ ಕಾರ್ಮಿಕರೊಬ್ಬರು ನೇಮಕಗೊಂಡಿದ್ದರು. ಇಂದು ಲೈನ್‌ಮನೆಯಲ್ಲಿ ಇವರ ಮೃತದೇಹ ಪತ್ತೆಯಾಗಿತ್ತು. ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವದ ವಾರಸುದಾರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Read More

ಮಡಿಕೇರಿ ಜ.15 : ಆರೋಗ್ಯಯುತ ಬದುಕಿಗೆ ಯೋಗ ಮತ್ತು ವ್ಯಾಯಾಮ ಸಹಕಾರಿ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸದಾಶಿವ ಪಲ್ಲೇದ್ ಇದ್ದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಆಯೂಷ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯೋಗ ಒಕ್ಕೂಟ ಸಹಕಾರದಲ್ಲಿ ನಗರದ ಸಾಯಿ ಹಾಕಿ ಟರ್ಫ್ ನಲ್ಲಿ ಭಾನುವಾರ ಯೋಗಥಾನ್ ಕಾರ್ಯಕ್ರಮ ನಡೆಯಿತು. ಯೋಗಥಾನ್ ಗೆ ಚಾಲನೆ ನೀಡಿ ಮಾತನಾಡಿದ ಶಾಸಕರು ಪ್ರತಿಯೊಬ್ಬರು ಪ್ರತಿನಿತ್ಯ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರತಿ 15 ದಿನಗಳಿಗೊಮ್ಮೆ ಯೋಗಥಾನ್ ಕಾರ್ಯಕ್ರಮವನ್ನು ನಡೆಸುವಂತಾಗಬೇಕು ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ ಉತ್ತಮ ಜೀವನಕ್ಕೆ ಪ್ರತಿನಿತ್ಯ ಯೋಗ ಮಾಡುವುದು ಸೂಕ್ತ ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಮಾತನಾಡಿ ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆಯ ಹಾಕಿ ಟರ್ಫ್ ನಲ್ಲಿ…

Read More

ಮಡಿಕೇರಿ ಜ.15 : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ 3 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಸಂಘಟಿಸುವ ದಿಸೆಯಿಂದ ನಗರದ ಸೋಮೇಶ್ವರ ದೇವಾಲಯದ ಬಳಿಯ ಚಂದ್ರಶೀ ವಾಣಿಜ್ಯ ಸಂಕೀರ್ಣದಲ್ಲಿ ತೆರೆದ ಸಾಹಿತ್ಯ ಸಮ್ಮೇಳನ ಕಛೇರಿಯನ್ನು ಕುಶಾಲನಗರ ತಾಲ್ಲೂಕಿನ ತಹಸೀಲ್ದಾರ್ ಟಿ.ಎಂ.ಪ್ರಕಾಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ ತಾಲ್ಲೂಕಿನಲ್ಲಿ ನಡೆಯುತ್ತಿರುವ ಪ್ರಥಮ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಹಾಗು ಅರ್ಥವತ್ತಾಗಿ ನಡೆಯುವ ಸಂಬoಧ ತಾಲ್ಲೂಕು ಆಡಳಿತ ದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಹಾಗೆಯೇ ಸಾಹಿತ್ಯ ಪರಿಷತ್ತು ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಿ ಕೊಡುವುದಾಗಿ ತಹಸೀಲ್ದಾರ್ ಪ್ರಕಾಶ್ ಘೋಷಿಸಿದರು. ಮುಖ್ಯ ಅತಿಥಿಗಳಾಗಿದ್ದ ಪೋಲೀಸ್ ಉಪ ಅಧೀಕ್ಷಕ ಆರ್.ವಿ.ಗಂಗಾಧರ್ ಮಾತನಾಡಿ, ಸಾಹಿತ್ಯ ಪರಿಷತ್ತು ಹಾಗು ವರ್ಷಕ್ಕೊಮ್ಮೆ ಜರುಗುವ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರ ಅಸ್ಮಿತೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಮನಸುಗಳು ಸಮ್ಮೇಳನಕ್ಕೆ ಆಗಮಿಸಬೇಕು. ಹಾಗೆಯೇ ಇಲಾಖೆಯಿಂದ ಎಲ್ಲಾ ರೀತಿಯ…

Read More

ಮಡಿಕೇರಿ ಜ.15 : ಕುಶಾಲನಗರ ಸರ್ಕಾರಿ ಎಂಜಿನಿಯರಿoಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಎನ್.ಎಸ್.ಸತೀಶ್ ಅವರು ಪ್ರಬಾರ ಪ್ರಾಂಶುಪಾಲ ಡಾ.ಸೀನಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ನೂತನ ಪ್ರಾಂಶುಪಾಲರು ಸರ್ಕಾರದ ನೆರವಿನೊಂದಿಗೆ ಕಾಲೇಜಿನ ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಪರಶಿವಮೂರ್ತಿ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಡಾ.ಸತೀಶ್ ಅವರು ಈ ಹಿಂದೆ ಇದೇ ಕಾಲೇಜಿನ ಪ್ರಾಂಶುಪಾಲರಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂದರ್ಭ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ನಂತರ 2014 ರಲ್ಲಿ ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿoಗ್ ಕಾಲೇಜಿಗೆ ವರ್ಗವಾಗಿದ್ದರು.

Read More

ಮಡಿಕೇರಿ ಜ.15 : ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ “ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನಾ ವಿಭಾಗದ ವತಿಯಿಂದ ಮೊದಲ ಬಾರಿಗೆ ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಮಕ್ಕಳ “ಕಲಿಕಾ ಹಬ್ಬ’ ಎಂಬ ಚೇತೋಹಾರಿ ಕಾರ್ಯಕ್ರಮ ಎರಡು ದಿನಗಳ ಕಾಲ ಉತ್ತರ ಕೊಡಗಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕಲಿಕಾ ಹಬ್ಬದಲ್ಲಿ 11 ಸರ್ಕಾರಿ ಶಾಲೆಯ 120 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಗುವಿಗೆ ಕಲಿಕೆಯೇ ಒಂದು ಹಬ್ಬವಾಗಿದೆ, ಇಲ್ಲಿ ಮಗುವಿನ ಪ್ರಶ್ನೆಯೇ ಪ್ರಜ್ಞೆಯಾಗಲಿದೆ, ಏಕೆಂದರೆ “ಪ್ರಶ್ನೆಯು ಪ್ರಜ್ಞೆ ಯಾಗಲಿ’ ಎಂಬುವುದು “ಕಲಿಕಾ ಹಬ್ಬ’ದ ಮೂಲ ಆಶಯವಾಗಿದೆ ಎಂದರು. ಸಿ ಆರ್ ಪಿ ಕೆ.ಶಾಂತಕುಮಾರ್ ಮಾತನಾಡಿ, ಇದೇ ಮೊದಲ ಬಾರಿಗೆ ಆರಂಭಗೊAಡ ಕಲಿಕಾ ಹಬ್ಬದಲ್ಲಿ ಮಕ್ಕಳು ಸಂಭ್ರಮದಿoದ ಕಲಿಕೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಸಂತಸದ ವಿಚಾರ. ಮಕ್ಕಳು ಸ್ವಯಂ ಪ್ರೇರಿತರಾಗಿ ತಮ್ಮನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.…

Read More

ವೀರಾಜಪೇಟೆ ಜ.15 : ಸಮಾಜವು ವೈದ್ಯರ ಸೇವೆಯು ದೇವರ ಸೇವೆ ಎಂದು ನಂಬಿ ಕೊಂಡು ಸಾಗುತ್ತಿದೆ. ಸಮಾಜಕ್ಕೆ ಉತ್ತಮ ಸೇವೆ ಕಲ್ಪಿಸುವುದು ಸಾಮಾನ್ಯ ವೈದ್ಯನ ಬಹುಮುಖ್ಯ ಕರ್ತವ್ಯವಾಗಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾನಿಯಲಯದ ಉಪ ಕುಲಪತಿಗಳಾದ ಡಾ. ಎಂ.ಕೆ. ರಮೇಶ್ ಅವರು ಅಭಿಪ್ರಾಯಪಟ್ಟರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ವಿರಾಜಪೇಟೆ. ಅಂತಿಮ ವರ್ಷ ಪೂರೈಸಿದ  ವಿಧ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಪತ್ರ ವಿತರಿಸಿ ಮಾತನಾಡಿದ ಡಾ. ರಮೇಶ್ ಅವರು ವಿದ್ಯಾರ್ಥಿ ಜೀವನದಲ್ಲಿ ಪದವಿ ಪಡೆದುಕೊಳ್ಳುವ ಸುದಿನವು  ಸಮಾಜಿಕ ಜೀವನದ ಮೈಲಿಗಲ್ಲು.  ಈ ನಿಟ್ಟಿನಲ್ಲಿ ಕೊಡಗು ದಂತ ಮಹಾವಿದ್ಯಾಲಯ ಗುರುಕುಲದ ಮಾದರಿಯಲ್ಲಿ ಮೌಲ್ಯಯುತವಾದ ಶಿಕ್ಷಣವನ್ನು ಒದಗಿಸಿದೆ. ವೈದ್ಯನಾದವನು ರೋಗಿಗಳನ್ನು ಹಸನ್ಮುಖಿಯಾಗಿ ನಗುಮುಖದೊಂದಿಗೆ ಸ್ವಾಗತಿಸಬೇಕು ಹಾಗೂ ರೋಗಿಯ ಚಿಕಿತ್ಸಾವಿಧಿಗಳನ್ನು ಅನುಸರಿಸಬೇಕು. ಬೃಹತ್ ಸಮಾಜವು ನಮಗೆ ಹಲವು ಉತ್ತಮ ವ್ಯಾವಹಾರಿಕ,ಆರೋಗ್ಯಕರ, ಹಿತವಾದ ಸ್ವಸ್ಥ ಪ್ರಾಕೃತಿಕ ಜಗತನ್ನು ಕಲ್ಪಿಸಿದೆ. ಇಂತಹ ಸಮಾಜಕ್ಕೆ ದ್ರೋಹಬಗೆಯದೆ…

Read More

ಸೋಮವಾರಪೇಟೆ ಜ.15 : ಜನಪ್ರತಿನಿಧಿಗಳು ಚುನಾವಣೆ ಸಂದರ್ಭ ಮಾತ್ರ ರಾಜಕೀಯ ಮಾಡಬೇಕು. ನಂತರ ಕ್ಷೇತ್ರದ ಜನರೆಲ್ಲರೂ ಒಂದೇ ಎಂಬ ಭಾವನೆಯಿಂದ ಸಾಮಾಜಿಕ ಸೇವೆ ಕೈಗೊಳ್ಳಬೇಕು ಎಂದು ಶಾಸಕ ಅಪ್ಪಚ್ಚುರಂಜನ್ ಹೇಳಿದರು. ಸಮೀಪದ ಬೆಸೂರು ಕೆರೆಕೇರಿ ಗ್ರಾಮದ ಅರೆಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದನಂತರ ರಾಜಕೀಯವನ್ನು ಬದಿಗಿಟ್ಟು ಜನಸೇವಕರೆಂಬ ಕಾಳಜಿಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ ಎಂದರು. 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಕ್ಷೇತ್ರದಲ್ಲಿ 7,500 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. 12,000 ಮಂದಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಾಗಕ್ಕೆ ಹಕ್ಕುಪತ್ರ ನೀಡಲಾಗಿದೆ. ಅಕಾಲಿಕ ಮಳೆಯಿಂದ ಬೆಳೆಹಾನಿಯಾದ ರೈತರಿಗೆ 113 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಶಾಸಕರು ತಿಳಿಸಿದರು. ರೈತ ಸಮ್ಮಾನ್ ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕ 10 ಸಾವಿರ ಪ್ರೋತ್ಸಾಹ ಹಣ ವಿತರಿಸಲಾಗುತ್ತಿದೆ. ಉಜ್ವಲ ಯೋಜನೆಯಡಿ 10 ಕೋಟಿ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ವಿತರಿಸಲಾಗಿದೆ. ಹೆಣ್ಣುಮಕ್ಕಳಿಗೆ…

Read More

ಸುಂಟಿಕೊಪ್ಪ,ಜ.14: ಬಿಹಾರದ ಮುಜಾರ್ಪುರ್ ಪರಸ್ ಮಹಲ್ ಗಾರ್ಡನ್ ಮೈದಾನದಲ್ಲಿ ನಡೆದ ಮೂರನೇ ಫೆಡರೇಶನ್ ಕಪ್ ಚಾಂಪಿಯನ್ ಶಿಫ್  ಸೆಸ್ಟೋ ಬಾಲ್ ಟೂರ್ನಿಯಲ್ಲಿ ಕರ್ನಾಟಕದ ಬಾಲಕಿಯರ ತಂಡ ಜಯ ಗಳಿಸಿದರೆ, ಬಾಲಕರ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಬಿಹಾರದ ಸೆಸ್ಟೋಬಾಲ್ ಪೆಡರೇಶನ್ ವತಿಯಿಂದ  ಪರಸ್ ಗಾರ್ಡನ್ ಮೈದಾನದಲ್ಲಿ ಈಚೆಗೆ ನಡೆದ ರೋಮಾಂಚನಕಾರಿ ಫೈನಲ್ ಟೂರ್ನಿಯಲ್ಲಿ ಕರ್ನಾಟಕದ ಬಾಲಕಿಯರ ತಂಡವು 42-30 ಅಂಕಗಳಿಂದ ಛತ್ತಿಸ್ ಗಡ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಎತ್ತಿ ಹಿಡಿಯಿತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ಪ್ರವೇಶ ಪಡೆದಿತ್ತು. ಮತ್ತೊಂದು ಪಂದ್ಯದಲ್ಲಿ ಕರ್ನಾಟಕ ಬಾಲಕರ ತಂಡವು ಉತ್ತರಪ್ರದೇಶ ತಂಡದ ವಿರುದ್ದ 92-78 ಅಂಕಗಳಿಂದ ಸೋಲನ್ನು ಒಪ್ಪಿಕೊಂಡು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಸೋಲಿಸಿ ಫೈನಲ್ ಗೆ ಪ್ರವೇಶ ಪಡೆದಿತ್ತು. ಕೊಡಗಿನ ಕುಶಾಲನಗರದ ಜಾನ್ಸನ್ ಅವರ ತರಬೇತುದಾರರ ನೇತೃತ್ವದಲ್ಲಿ  ಕೊಡಗಿನ ಶಾಹಿಲ್ ಉಸ್ಮಾನ್ ಸುಂಟಿಕೊಪ್ಪ, ಇರ್ಷಾದ್, ಸಹಲ್, ಪ್ರೀಮಿತ್, ಸುಪ್ರೀತ ರಾಜ್ಯ…

Read More

ಮಡಿಕೇರಿ ಜ.14 : ಖಾಸಗಿ ವ್ಯಕ್ತಿಗೆ ಸೇರಿದ ಪ್ಯಾರಾ ಗ್ಲೈಡರ್ ಒಂದು ಹಾರಾಟ ನಡೆಸುತ್ತಿದ್ದ ಸಂದರ್ಭ ತಾಂತ್ರಿಕ ದೋಷದಿಂದ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಪೊನ್ನಂಪೇಟೆ ಸಮೀಪದ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಎಂ.ಮುತ್ತಣ್ಣ ಎಂಬುವವರು ತಮಗೆ ಸೇರಿದ ಸ್ವಂತ ಸ್ಥಳದಲ್ಲಿ ಕಳೆದ ಕೆಲವು ಸಮಯದಿಂದ ರನ್ ವೇ ಸಹಿತ 2 ಸೀಟಿನ ಪ್ಯಾರಾ ಗ್ಲೈಡಿಂಗ್ ನಡೆಸುತ್ತಿದ್ದರು. ಎಂದಿನಂತೆ ಶನಿವಾರ ಸಂಜೆ 4 ಗಂಟೆ 45 ನಿಮಿಷ ಸಮಯದಲ್ಲಿ ಪ್ಯಾರಾ ಗ್ಲೈಡಿಂಗ್ ಹಾರಾಟ ನಡೆಸುತ್ತಿದ್ದ ಸಂದರ್ಭ ಅದರ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನಿಯಂತ್ರಣ ಕಳೆದುಕೊಂಡು ನೇರವಾಗಿ ಬಾನಿನಿಂದ ಕೆಳಗೆ ಇಳಿದ ಗ್ಲೈಡರ್, ನಿಟ್ಟೂರು ಲಕ್ಷ್ಮಣ ತೀರ್ಥ ನದಿಯ ಸೇತುವೆ ಪಕ್ಕದ ಕಾಂಕ್ರೀಟ್ ರಸ್ತೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ತುರ್ತು ಭೂ ಸ್ಪರ್ಶದ ಪರಿಣಾಮ ಪ್ಯಾರಾ ಗ್ಲೈಡರ್ ನ ಮುಂಭಾಗ ಮುರಿಯಲ್ಪಟ್ಟಿದ್ದು, ಚಕ್ರ ಸಹಿತ ಕೆಲವು ಭಾಗಗಳಿಗೆ ಹಾನಿಯಾಗಿದೆ. ಗ್ಲೈಡರ್ ನ ಪೈಲಟ್ ಹಾಗೂ ಹಿಂಬದಿ ಸವಾರ…

Read More