ಲೇಖಕ: admin

ಕುಶಾಲನಗರ ಜ.14 : ಫಾತೀಮಾ ಕಾನ್ವೆಂಟ್ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಕಾನ್ವೆಂಟ್ ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಕರ ಸಂಕ್ರಾಂತಿ ವರ್ಷದ ಮೊದಲ ಹಬ್ಬವಾಗಿದೆ. ಇದನ್ನು ಸುಗ್ಗಿ ಹಬ್ಬವೆಂದು ಸಹ ಕರೆಯಲಾಗುತ್ತದೆ. ಎಳ್ಳಿನಂತೆ ಶುದ್ದ ಜೀವನ ವಿರಲಿ ಬೆಲ್ಲದಂತೆ ಸವಿಬಾಳು ನಮ್ಮದಾಗಲಿ ಎಂದು ಎಳ್ಳು, ಬೆಲ್ಲ, ನೆಲಗಡಲೆ, ಕೊಬ್ಬರಿ, ಕಬ್ಬು ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡುವುದರ ಮೂಲಕ ಎಲ್ಲಾ ಮಕ್ಕಳು ತಮ್ಮಆಪ್ತರಿಗೆ ಹಾಗೂ ನೆರೆಹೊರೆಯವರಿಗೆ ವಿಶೇಷ ಸಿಹಿಯನ್ನು ಹಂಚಿ ಸಂಭ್ರಮಿಸುತ್ತಾರೆ. ಮಕರ ಸಂಕ್ರಾಂತಿ ಸಮೃದ್ಧಿಯ ಸಂಕೇತವಾಗಿದೆ ಎಂದರು. ನಂತರ ವಿದ್ಯಾರ್ಥಿಗಳು ಎಳ್ಳು ಬೆಲ್ಲಹಂಚಿಕೊಂಡು ಮಕರ ಸಂಕ್ರಮಣದ ಶುಭಾಶಯ ವಿನಿಮಯ ಮಾಡಿಕೊಂಡರು. ಈ ಸಂದರ್ಭ ಫಾತೀಮಾ ಕಾನ್ವೆಂಟ್ ಶಾಲೆಯ ಡಾ. ಸಿಸ್ಟರ್ ಜೆಸ್ವಿನಾ, ಸಿಸ್ಟರ್ ತೆರೇಸ್ ಹಾಗೂ ಶಾಲಾ ಆಡಳಿತ ಮಂಡಳಿಯವರು ಮತ್ತು ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.

Read More

ಕುಶಾಲನಗರ ಜ.14 : ಕೂಡಿಗೆ ಸೈನಿಕ ಶಾಲೆಯಲ್ಲಿ 2022-23 ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ವಲಯ ವಾಲಿಬಾಲ್ ಕ್ರೀಡಾಕೂಟ ನಡೆಯಿತು. 4 ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದ ಉದ್ಘಾಟನೆಯನ್ನು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್ ನೆರವೇರಿಸಿದರು. ಕ್ರೀಡಾಕೂಟದಲಿ ್ಲಉತ್ತರ ವಲಯ, ದಕ್ಷಿಣ ವಲಯ, ಪಶ್ಚಿಮ ವಲಯ, ಪೂರ್ವ ವಲಯ ಮತ್ತು ಮಧ್ಯ ವಲಯದ ಸೈನಿಕ ಶಾಲಾ ತಂಡಗಳು ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಛತ್ತೀಸ್‍ಗಡದ ಅಂಬಿಕಾಪುರ ಸೈನಿಕ ಶಾಲೆ ಪ್ರಥಮ ಸ್ಥಾನವನ್ನು ಪಡೆಯಿತು. ದ್ವಿತೀಯ ಬಂಗಾಳ ರಾಜ್ಯದ ಪುರ್ಲಿಯಾ ಸೈನಿಕ ಶಾಲೆಯ ಪಾಲಾಗಿದೆ.ಛತ್ತೀಸ್‍ಗಡ ಸೈನಿಕ ಶಾಲೆಯಕ್ರೀಡಾಪಟು ಶಶಾಂಕ್‍ಅತ್ಯುತ್ತಮಕ್ರೀಡಾಪಟು ಪ್ರಶಸ್ತಿಗೆ ಭಾಜನರಾದರು.ಸಮಾರೋಪ ಸಮಾರಂಭದಲ್ಲಿಕೊಡಗು ವೃತ್ತದ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್ ನಿರಂಜನ್ ಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಈ ಸಂದರ್ಭ ಉಪ ಪ್ರಾಂಶುಪಾಲರಾದ ಲೆ. ಕ.ಅಜಿತ್ ಸಿಂಗ್, ಹಿರಿಯ ಶಿಕ್ಷಕರಾದ ಗೋವಿಂದರಾಜ, ಕ್ರೀಡಾ ವಿಭಾಗದ ಮೇಲ್ವಿಚಾರಕರಾದ ಜಿ.ಕೆ.ಮಂಜಪ್ಪ, ದೈಹಿಕ ಶಿಕ್ಷಕರಾದ ಎಂ. ರನೀಶ್, ಎಂ. ಸ್ಟಾಲಿನ್ ಮತ್ತಿತರರು…

Read More

ಸೋಮವಾರಪೇಟೆ ಜ.14: ಜನಪ್ರತಿನಿಧಿಗಳು ಚುನಾವಣೆ ಸಂದರ್ಭ ಮಾತ್ರ ರಾಜಕೀಯ ಮಾಡಬೇಕು. ನಂತರ ಕ್ಷೇತ್ರದ ಜನರೆಲ್ಲರೂ ಒಂದೇ ಎಂಬ ಭಾವನೆಯಿಂದ ಸಾಮಾಜಿಕ ಸೇವೆ ಕೈಗೊಳ್ಳಬೇಕು ಎಂದು ಶಾಸಕ ಅಪ್ಪಚ್ಚುರಂಜನ್ ಹೇಳಿದರು. ಬೆಸೂರು ಕೆರೆಕೇರಿ ಗ್ರಾಮದ ಅರೆಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದನಂತರ ರಾಜಕೀಯವನ್ನು ಬದಿಗಿಟ್ಟು ಜನಸೇವಕರೆಂಬ ಕಾಳಜಿಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ ಎಂದರು. 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಕ್ಷೇತ್ರದಲ್ಲಿ 7,500 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. 12,000 ಮಂದಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಾಗಕ್ಕೆ ಹಕ್ಕುಪತ್ರ ನೀಡಲಾಗಿದೆ. ಅಕಾಲಿಕ ಮಳೆಯಿಂದ ಬೆಳೆಹಾನಿಯಾದ ರೈತರಿಗೆ 113 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಶಾಸಕರು ತಿಳಿಸಿದರು. ರೈತ ಸಮ್ಮಾನ್ ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕ 10 ಸಾವಿರ ಪ್ರೋತ್ಸಾಹ ಹಣ ವಿತರಿಸಲಾಗುತ್ತಿದೆ. ಉಜ್ವಲ ಯೋಜನೆಯಡಿ 10 ಕೋಟಿ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ವಿತರಿಸಲಾಗಿದೆ. ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ…

Read More

ಮಡಿಕೇರಿ ಜ.14 : ಹುಬ್ಬಳ್ಳಿಯ ಗ್ಲೋಬಲ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಮಡಿಕೇರಿಯ ವಿ.ಎ.ನಮ್ರೀನ್ ಆಸಿಫ್ ಮಂಡಿಸಿದ ಪ್ರಬಂಧಕ್ಕೆ ಅತ್ಯುತ್ತಮ ಪತ್ರಿಕೆ ಪ್ರಶಸ್ತಿ ಲಭಿಸಿದೆ. ಇವರು Entrepeneurship to private Limited Company SLN Coffee Pvt. Ltd. Co’s Success Story On Creating a Successful Brand Levista ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಮ್ಮೇಳನದಲ್ಲಿ 62 ಸ್ಪರ್ಧಿಗಳು ಹಾಗೂ ಪತ್ರಿಕೆಗಳು ಸ್ಪರ್ಧಿಸಿದ್ದವು. ನಮ್ರೀನ್ ಆಸಿಫ್ ದಕ್ಷಿಣ ಕನ್ನಡ ಮಂಗಳೂರು ಶ್ರೀನಿವಾಸ್ ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ವಾಂಸಕಿಯಾಗಿದ್ದು, ಇವರು ಮಡಿಕೇರಿಯ ಕೊಹಿನೂರು ರಸ್ತೆ ನಿವಾಸಿ ವಿ.ಎಸ್.ಮೊಹಮ್ಮದ್ ಆಸಿಫ್ ಹಾಗೂ ವಿ.ಎಸ್. ನಸೀಮಾ ದಂಪತಿಗಳ ಪುತ್ರಿ.

Read More

ಮಡಿಕೇರಿ ಜ.14 : ಕೊಡಗು ಆಮ್ ಆದ್ಮಿ ಪಕ್ಷದ ಸಭೆಯು  ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಐಬಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಗೆ ಪಕ್ಷದ ಸಿದ್ದತೆ ಬಗ್ಗೆ ಚರ್ಚೆ ನಡೆಯಿತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಸಲಹೆಯನ್ನು ಮುಖಂಡರುಗಳಾದ ಶಶಿಧರ್, ಬೆಳ್ಳಿಯಪ್ಪ ಮುಂದಿಟ್ಟರು. ಇದೇ ಸಂದರ್ಭ  ನೂತನ ಕಾರ್ಯಕರ್ತರನ್ನುಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಎಎಪಿ ಪಕ್ಷ ಚುನಾವಣೆಗೆ ಸಿದ್ಧವಾಗಿದ್ದು, ಜಿಲ್ಲೆಯಲ್ಲೂ ತನ್ನ ಬಲವನ್ನು ವೃದ್ಧಿಸಿಕೊಳ್ಳಲಿದೆ ಎಂದು ಗ್ರಾಮ ಸಂಪರ್ಕ ಅಭಿಯಾನದ ಅಧ್ಯಕ್ಷರು ಎಂ.ಕೆ. ಅಪ್ಪಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸಭೆಯಲ್ಲಿ  ಮಾಧ್ಯಮ ಉಸ್ತುವಾರಿ ಭೋಜಣ್ಣ, ಸೋಮಯ್ಯ  ಹಾಜರಿದ್ದರು.

Read More

ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ಯುವ ರಾಷ್ಟ್ರವಾಗಿದೆ. ಸುಮಾರು 27% ಜನಸಂಖ್ಯೆಯು 15-29 ವಯಸ್ಸಿನ ನಡುವೆ ಇದೆ. 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಜನಸಂಖ್ಯೆಯ 66% ರಷ್ಟಿದ್ದಾರೆ. ಆದುದರಿಂದ, ಹೆಚ್ಚಿನ ಜನಸಂಖ್ಯೆ ಯುವ ಸಮೂಹವಾಗಿದ್ದು, ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆ ಮತ್ತು ತಾಂತ್ರಿಕ ಆವಿಷ್ಕಾರಕ್ಕೆ ಯುವ ಜನ ಪ್ರಮುಖ ಹರಿಕಾರರಾಗಿದ್ದಾರೆ. ಯುವಶಕ್ತಿ ವಿಕಸಿತವಾದರೆ ದೇಶ ವಿಕಸಿತವಾಗುತ್ತದೆ ಎಂಬುದು ಈ ಉತ್ಸವದ ದ್ಯೇಯ ವಾಕ್ಯ. “ವಿಕಸಿತ ಯುವ-ವಿಕಸಿತ ಭಾರತ”. ಜನವರಿ 12-16 ರವರೆಗೆ ನಡೆಯುವ 26 ನೇ ರಾಷ್ಟ್ರೀಯ ಯುವ ಉತ್ಸವವನ್ನು ಕರ್ನಾಟಕದ ಅವಳಿ ನಗರಗಳಾದ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಆಯೋಜಿಸಲಾಗಿದ್ದು, 7500 ಯುವಪ್ರತಿನಿಧಿಗಳು ಭಾಗವಹಿಸಿದ್ದಾರೆ. ಇವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ರಾಷ್ಟ್ರೀಯ ಯುವ ಉತ್ಸವ 2023 “ಯುವ ಶೃಂಗಸಭೆಯಲ್ಲಿ”. ರಾಷ್ಟ್ರೀಯ/ಅಂತಾರಾಷ್ಟ್ರೀಯ ತಜ್ಞರೊಂದಿಗೆ ಸಂವಹನ ನಡೆಸಲು ಯುವಜನರಿಗೆ ಅವಕಾಶ ಕಲ್ಪಿಸಲಾಗಿದೆ. ಕೆಲಸದ ಭವಿಷ್ಯ, ಕೈಗಾರಿಕೆ, ನಾವೀನ್ಯತೆ ಮತ್ತು 21 ನೇ ಶತಮಾನದ ಕೌಶಲ್ಯಗಳು…

Read More

ಕುಶಾಲನಗರ ಜ.14 :  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.3 ರಂದು ಕುಶಾಲನಗರದಲ್ಲಿ  ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಹೇಳಿದರು. ಕುಶಾಲನಗರದ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ತಾಲ್ಲೂಕು ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಮೈಸೂರು ರಸ್ತೆಯ ಕಾವೇರಿ ನದಿ ದಂಡೆಯಿಂದ ಸಮ್ಮೇಳನದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದ ಅವರು ತಾಲ್ಲೂಕು ಸಮ್ಮೇಳನವನ್ನು ಹಬ್ಬದೋಪಾದಿಯಲ್ಲಿ ಆಚರಿಸುವಂತಾಗಬೇಕೆಂದು ಕೋರಿದರು. ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಸಮ್ಮೇಳನದಲ್ಲಿ ಕುಶಾಲನಗರ ತಾಲ್ಲೂಕಿನ ಎಲ್ಲಾ ಗ್ರಾ.ಪಂ  ಗಳ ವ್ಯಾಪ್ತಿಯಿಂದ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಾಲ್ಲೂಕಿನ ಉತ್ಸವವಾಗಿಸಲು ಸಹಕಾರ ನೀಡಬೇಕೆಂದು ಪಂಚಾಯಿತಿಗಳ ಚುನಾಯಿತರು ಹಾಗೂ ಅಧಿಕಾರಿಗಳಲ್ಲಿ ಕೋರಿಕೊಂಡರು. ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ಕುಶಾಲನಗರ ಆಡಳಿತಾತ್ಮಕವಾಗಿ ಉದ್ಘಾಟನೆಯಾಗಿದೆ. ಆದರೆ ತಾಲ್ಲೂಕು…

Read More

ಮಡಿಕೇರಿ ಜ.14 : ಶಬರಿಮಲೆಗೆ ತೆರಳಿದ್ದ ಮಡಿಕೇರಿ ನಗರದ ಯುವಕನೊಬ್ಬ ಮರಳುವ ಸಂದರ್ಭ ಸಮುದ್ರದಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರ್ ಬೀಚ್ ನಲ್ಲಿ ನಡೆದಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಲೋಕೇಶ್ ಎಂಬುವವರ ಪುತ್ರ ಶಶಾಂಕ್ (25) ಮೃತ ದುರ್ದೈವಿ. ಶಬರಿಮಲೆಯಿಂದ ಮರಳುವಾಗ ಯುವಕರ ತಂಡ ಕೇರಳದ ಕಣ್ಣೂರ್ ಬೀಚ್ ಗೆ ಭೇಟಿ ನೀಡಿತ್ತು. ಈ ಸಂದರ್ಭ ಇವರುಗಳು ಅಲೆಗಳಿಗೆ ಸಿಲುಕಿಕೊಂಡರು ಎಂದು ಹೇಳಲಾಗಿದೆ. ರಕ್ಷಿಸುವ ಪ್ರಯತ್ನ ಮಾಡಲಾಯಿತ್ತಾದರೂ ಶಶಾಂಕ್ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ಮೃತ ಯುವಕ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಜ.14 : ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಏಕೈಕ ಪುತ್ರಿ ಮಿರೇಲ್ ಚಂಗಪ್ಪ(86) ಅವರು ಶನಿವಾರ ಬೆಂಗಳೂರಿನಲ್ಲಿ ವಿಧಿವಶವಾದರು. ಬೆಂಗಳೂರಿನಲ್ಲಿ ನೆಲೆಸಿದ್ದ ಕೊಂಗೆಟ್ಟಿರ ಮೇಜರ್ ಚಂಗಪ್ಪ ಅವರ ಪತ್ನಿ ಮಿರೇಲ್ ಚಂಗಪ್ಪ ಅವರು ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಮಿರೇಲ್ ಚಂಗಪ್ಪ ಅವರು ತಾವು ಹುಟ್ಟಿ ಬೆಳೆದ ಮಡಿಕೇರಿಯ ಸನ್ನಿಸೈಡ್ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಶಕ್ಕೊಪ್ಪಿಸಿ ತಿಮ್ಮಯ್ಯ ಸ್ಮಾರಕ ಭವನ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ::: ಶ್ರದ್ಧಾಂಜಲಿ ::: ಮಿರೇಲ್ ಚಂಗಪ್ಪ (86) ಅವರಿಗೆ ನಗರದ ತಿಮ್ಮಯ್ಯ ಸ್ಮಾರಕ ಭವನ ಸನ್ನಿಸೈಡ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೃತರ ಭಾವಚಿತ್ರಕ್ಕೆ ತಿಮ್ಮಯ್ಯ ಸ್ಮಾರಕ ಭವನದ ವ್ಯವಸ್ಥಾಪಕ ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ, ನಾಯಕ್ ಸುಬೇದಾರ್ ಮೋಹನ್, ಪೊನ್ನುಕಂಡ ರಮ್ಯ ಮಾಚಯ್ಯ, ಕುಶಧರ, ಸುಭಾಷ್ ಚಂದ್ರ ಸೇರಿದಂತೆ ಭವನದ ಸಿಬ್ಬಂದಿಗಳು ಪುಷ್ಪ ನಮನ ಸಲ್ಲಿಸಿದರು. ಮಿರೇಲ್ ಚಂಗಪ್ಪರ ಒತ್ತಾಸೆಯಂತೆ ಸ್ಮಾರಕ ಭವನ ನಿರ್ಮಾಣವಾಗಿದ್ದು, ಅವರ ಕುಟುಂಬ ವರ್ಗದವರ ಸಹಕಾರ ಅತ್ಯಂತ…

Read More

ಮಡಿಕೇರಿ ಜ.14 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 33ನೇ ಮಕರ ಸಂಕ್ರಾಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಶ್ರೀ ಮುತ್ತಪ್ಪ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ ಹಾಗೂ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ಸೇವೆ ನಡೆಯಿತು. ನಂತರ ಶ್ರಿ ಕುಟ್ಟಿಚಾತನ್ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ ಬಳಿಕ, ಶ್ರೀ ಅಯ್ಯಪ್ಪ ದೇವರ ಅಲಂಕಾರ ಪೂಜೆ ನಡೆಯಿತು. ನಂತರ ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ಜರುಗಿತು. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಸಂಜೆ 6 ರಿಂದ ಭಜನೆ ಕಾರ್ಯಕ್ರಮ ಜರುಗಲಿದ್ದು, 7 ಗಂಟೆಗೆ ಅಲಂಕಾರ ಪೂಜೆ, ಪಡಿಪೂಜೆ, ರಾತ್ರಿ 8 ಗಂಟೆಗೆ ದೀಪಾರಾಧನೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ಜ.13 ರಂದು ಗಣಪತಿ ಹೋಮ, ಪಂಚಾಮೃತ ಅಭಿಷೇಕ ಇತ್ಯಾದಿ ಸೇವೆಗಳು ನಡೆಯಿತು.…

Read More