ಮಡಿಕೇರಿ ಜ.14 : ಪ್ರಸಕ್ತ(2022-23) ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಬಗ್ಗೆ ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ, 18 ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಜನವರಿ, 27 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.14 : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಪಣೀಂದ್ರ ಅವರು ಜನವರಿ, 21 ಮತ್ತು 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ.21 ರಂದು ಬೆಳಗ್ಗೆ 10.30 ರಿಂದ 1.30 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಮಾಡಲಿದ್ದಾರೆ. ಹಾಗೆಯೇ ಜನವರಿ, 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರು ಮಾಡಿಕೊಡಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ…
ಮಡಿಕೇರಿ ಜ.14 : ಪ್ರಸಕ್ತ(2022-23) ಸಾಲಿನಲ್ಲಿ ಪಜಾತಿ ಮತ್ತು ಪ.ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ, ನೀಟ್ ಲಾಂಗ್ ಟರ್ಮ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಜನವರಿ, 31 ರೊಳಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 08272-22553, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.14 : ನಿವೃತ್ತ ರಾಜ್ಯ ಸರ್ಕಾರಿ ನೌಕರರ ‘ಪಿಂಚಣಿ ಅದಾಲತ್’ ಜನವರಿ, 24 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕುಂದು ಕೊರತೆಗಳೇನಾದರೂ ಇದ್ದಲ್ಲಿ, ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸೂಕ್ತ ದಾಖಲೆಗಳೊಂದಿಗೆ ಜನವರಿ, 20 ರೊಳಗೆ ಕೊಡಗು ಜಿಲ್ಲೆಯ ಸಹಾಯಕ ನಿರ್ದೇಶಕರು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ, ಕೊಠಡಿ ಸಂಖ್ಯೆ 06, ಜಿಲ್ಲಾಡಳಿತ ಭವನ, ಮಡಿಕೇರಿ ಅವರಿಗೆ ಸಲ್ಲಿಸಲು ಹಾಗೂ ಅದಾಲತ್ನಲ್ಲಿ ಭಾಗವಹಿಸುವಂತೆ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಜ.14 : ಕುಶಲ ಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ ಪಡೆದಲ್ಲಿ, ಇಲಾಖಾ ವತಿಯಿಂದ ಶೇ.30 ರಷ್ಟು ಹಾಗೂ ಗರಿಷ್ಟ ರೂ. 15 ಸಾವಿರಗಳ ವರೆಗೆ ಸಹಾಯಧನ ನೀಡಲಾಗುವುದು. ಕುಶಲಕರ್ಮಿಯು 18 ವರ್ಷ ವಯಸ್ಸಾಗಿರಬೇಕು, ಹಾಗೂ ಇಲಾಖೆ ನಿಗಧಿ ಪಡಿಸಿದ ಯಾವುದಾದರೂ ಒಂದು ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್, ಪ್ರಾದೇಶಿಕ ಬ್ಯಾಂಕ್ ವತಿಯಿಂದ ಸಾಲ (ಅವಧಿ ಹಾಗೂ ದುಡಿಮೆ ಬಂಡವಾಳ) ಪಡೆಯಬೇಕು. ಅಭ್ಯರ್ಥಿಯು ನಿಗಧಿ ಪಡಿಸಿದ ಅರ್ಜಿಯ ಜೊತೆಗೆ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ, ಕುಶಲಕರ್ಮಿ ವೃತ್ತಿಯ ಬಗ್ಗೆ ಧೃಡೀಕರಣ ಪತ್ರಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಜನವರಿ, 21 ರೊಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯನ್ನು (08272-228431/…
ಮಡಿಕೇರಿ ಜ.14 : ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿ ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ ಭಾಷೆ ವಿಷಯಗಳಿಗೆ ಜ.16 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದೆ. ಇಂಗ್ಲೀಷ್ ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ, ಸಂಖ್ಯಾ ಶಾಸ್ತ್ರ ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆಯವರೆಗೆ ಹಾಗೂ ಕೊಡವ ಭಾಷೆ ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಹೊಂದಿದ್ದು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳು), ಯುಜಿಸಿ, ಎನ್ಇಟಿ/ ಎಸ್ಎಲ್ಇಟಿ ಉತ್ತೀರ್ಣತೆ, ಎಂ.ಫಿಲ್/ ಪಿಎಚ್ಡಿ ಪದವಿ ಪ್ರಮಾಣಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅವಶ್ಯಕತೆಗೆ…
ಮಡಿಕೇರಿ ಜ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆ.3 ರಿಂದ 6 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ರಿಂದ 12 ಸಾವಿರ ಸಂಖ್ಯೆಯ 15-20 ರೀತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಗಿಡಗಳನ್ನು ಪಾತಿಯಲ್ಲಿ ಹಾಗೂ ಕುಂದಗಳಲ್ಲಿ ನಾಟಿ ಮಾಡಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುವುದು. ಫಲಪುಷ್ಪ ಪ್ರದರ್ಶನದ ಮುಖ್ಯ ಆರ್ಕಷಣೆಯಾಗಿ ವಿವಿಧ ಹೂಗಳಿಂದ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕೆ ಇಡಲಾಗುವುದು ಹಾಗೂ ಅಲಂಕಾರಿಕ ವಿವಿಧ ಹೂ ಕುಂದಗಳ ಪ್ರದರ್ಶನ, ಬೋನ್ ಸಾಯ್ ಪ್ರದರ್ಶನ, ತರಕಾರಿ ಕೆತ್ತನೆ ಪ್ರದರ್ಶಿಸಲಾಗುವುದು. ಫಲಪುಷ್ಪ ಪ್ರದರ್ಶನ ಜೊತೆಗೆ ವೈನ್ ಉತ್ಸವ (Wine Festival) ಆಯೋಜಿಸಲಾಗುವುದು ವೈನ್ ಉತ್ಸವದಲ್ಲಿ ವಿವಿಧ ಹಣ್ಣುಗಳಿಂದ ತಯಾರಿಸಿದ ವೈನ್…
ಕುಶಾಲನಗರ, ಜ.14: ಕುಶಾಲನಗರ ಸಮೀಪದ ಕೊಪ್ಪ ಭಾರತ್ ಮಾತಾ ಪದವಿ ಕಾಲೇಜಿನಲ್ಲಿ ಅಂತರ ಜಿಲ್ಲಾ ಮಟ್ಟದ ಪಿಯು ಕಾಲೇಜಿನ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾವಳಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಫಾ.ಜೋಸೇಫ್ ವರ್ಗಿಸ್ ಪಂದ್ಯಾವಳಿಗೆ ಚಾಲನೆ ನೀಡಿದರು. ಪಂದ್ಯಾವಳಿಯಲ್ಲಿ ಒಟ್ಟು 15 ತಂಡಗಳು ಪಾಲ್ಗೊಂಡಿದ್ದವು. ವಾಲಿಬಾಲ್ ಪಂದ್ಯಾವಳಿಯಲ್ಲಿ ಅರಕಲಗೂಡು ಬಿಜಿಎಸ್ ತಂಡ ಪ್ರಥಮ, ದ್ವೀತಿಯ ಸ್ಥಾನವನ್ನು ಹುಣಸೂರು ಟಾಲೆಂಟ್ ಪಿಯು ಕಾಲೇಜ್ ಮತ್ತು ತೃತೀಯ ಸ್ಥಾನವನ್ನು ಪಾಲಿಬೆಟ್ಟ ಸರ್ಕಾರಿ ಪಿಯು ಕಾಲೇಜು ಪಡೆದುಕೊಂಡಿತ್ತು. ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪ ಸೆಂಟ್ ಮೇರಿಸ್ ಪ್ರಥಮ, ನೆಲ್ಲಿಹುದಿಕೇರಿ ಸರ್ಕಾರಿ ಪಿಯು ಕಾಲೇಜು ದ್ವಿತೀಯ ಸ್ಥಾನ ಮತ್ತು ತೃತೀಯ ಸ್ಥಾನವನ್ನು ಕೊಪ್ಪ ಭಾರತ್ ಮಾತಾ ಪಿಯು ಕಾಲೇಜು ತನ್ನದಾಗಿಸಿಕೊಂಡಿತು. ಸಮಾರೋಪ ಸಮಾರಂಭದಲ್ಲಿ ಉಪಪ್ರಾಂಶುಪಾಲರಾದ ಫಾ.ಅಭಿನ್ ಬೇಬಿ, ಉದ್ಯಮಿ ಬಾಷಾ, ಉಲ್ಲಾಸ್ ಕೃಷ್ಣ, ಸೆಂಟ್ ಮೇರಿಸ್ ಕಾಲೇಜಿನ ಆಡಳಿತಾಧಿಕಾರಿ ಅರುಲ್ ಸೆಲ್ವಿ, ಲೋಕೋಪಯೋಗಿ ಅಧಿಕಾರಿ ಸೈಜನ್ ಕೆ.ಪೀಟರ್, ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಂಚಾಲಕರಾದ…
ಮಡಿಕೇರಿ ಜ.13 : ಕೊಡಗು ಜಿಲ್ಲೆಯಲ್ಲಿರುವ ತುಳುನಾಡಿನ ದೈವಸ್ಥಾನದ ಹೆಸರು, ಊರು, ದೈವ ನರ್ತಕರು, ದೈವ ಆರಾಧಕರು ಮತ್ತು ದೈವ ಸಂಪ್ರದಾಯದ ಮಾಹಿತಿಯನ್ನೊಳಗೊಂಡ ದಾಖಲೀಕರಣದ ಪುಸ್ತಕವನ್ನು ಹೊರ ತರುವ ಯೋಜನೆಯನ್ನು ರೂಪಿಸುವ ಅಗತ್ಯವಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ. ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ದೈವ ಆರಾಧಕರು ಹಾಗೂ ದೈವ ನರ್ತಕರ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ತುಳುನಾಡಿನ ದೈವಾರಾಧನೆಯ ಬಹಳಷ್ಟು ದೈವ ಕ್ಷೇತ್ರಗಳಿವೆ. ದೈವ ಆರಾಧಕರು ಹಾಗೂ ದೈವ ನರ್ತಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದೈವ ಮತ್ತು ದೈವಾರಾಧನೆಯನ್ನು ಅವಮಾನಿಸುವ, ದೈವದ ಬಗ್ಗೆ ಅಪಹಾಸ್ಯ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ. ಶಾಲಾ, ಕಾಲೇಜು ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲಿ ದೈವದ ವೇಷಭೂಷಣ ತೊಟ್ಟು ಪಾತ್ರ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದರು. ಸರಕಾರದ ಆದೇಶದಂತೆ ದೈವ…
ಮಡಿಕೇರಿ ಜ.13 : ಪ್ರಸಕ್ತ ಸಾಲಿನ 15ನೇ ಹಣಕಾಸು ಆಯೋಗದಡಿ ಸುಮಾರು 148 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಮತ್ತು ನಗರಸಭಾ ನಿಧಿ ಆಯೋಗ ಅನುದಾನದಡಿ ಸುಮಾರು 111.72 ಲಕ್ಷ ರೂ. ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ವಾರ್ಡ್ ನಂಬರ್ 2 ಭಗವತಿ ನಗರದ ಹೌಸಿಂಗ್ ಬೋರ್ಡ್ನಲ್ಲಿ ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.10 ರಲ್ಲಿ ಕಾಲೇಜು ರಸ್ತೆಯ ಐಡಿಬಿಐ ಬ್ಯಾಂಕ್ ಹತ್ತಿರ ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.16 ರಲ್ಲಿ ಕುಮಾರವಿಲಾಸ ರಸ್ತೆಯ ಮೈಲಾರಿ ಹೋಟೆಲ್ ಮುಂಭಾಗ ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.1 ರಲ್ಲಿ ವಿದ್ಯಾನಗರದ ಹೌಸಿಂಗ್ ಬೋರ್ಡ್ನಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ವಾರ್ಡ್ ನಂಬರ್ 8 ರಲ್ಲಿ ಮಾರುಕಟ್ಟೆ ಬಳಿ ರಾಣಿಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಪಾದಚಾರಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.6 ರ ಕನ್ನಂಡ ಬಾಣೆ ಪಂಪ್ಹೌಸ್ ಹಿಂಭಾಗ ಫುಟ್ಪಾತ್ ನಿರ್ಮಾಣ ಕಾಮಗಾರಿ, ವಾರ್ಡ್ ನಂ.14 ರಲ್ಲಿ…






