ಲೇಖಕ: admin

ಮಡಿಕೇರಿ ಜ.13 : ಅರಣ್ಯ ಇಲಾಖೆಯಿಂದ ಹಿಂಪಡೆಯುವ 2 ಲಕ್ಷ ಏಕರೆ ಜಾಗವನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ದಲಿತರು, ಆದಿವಾಸಿಗಳು ಹಾಗೂ ಕೃಷಿ ಕಾರ್ಮಿಕರಿಗೆ ಹಂಚಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯ ಈಡೇರಿಗಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ದಲಿತರು, ಆದಿವಾಸಿಗಳು ತಲತಲಾಂತರದಿಂದ ಸ್ವಂತ ಭೂಮಿ ಇಲ್ಲದೆ, ಸ್ವಂತ ಸೂರಿಲ್ಲದೆ ಉಳ್ಳವರ ಲೈನ್ ಮನೆಗಳಲ್ಲಿ, ಅರಣ್ಯದಲ್ಲಿ ಟಾರ್ಪಲ್ ಗುಡಿಸಲು ನಿರ್ಮಿಸಿಕೊಂಡು ನರಕಯಾತೆನಲ್ಲಿ ಬದುಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 2 ಲಕ್ಷ ಏಕರೆ ಭೂಮಿಯನ್ನು ಅರಣ್ಯದಿಂದ ಹಿಂಪಡೆದು ಕಂದಾಯ ಭೂಮಿಯಾಗಿ ಪರಿವರ್ತಿಸಿ ದಲಿತರಿಗೆ, ಆದಿವಾಸಿ ಕೃಷಿ ಕಾರ್ಮಿಕ ನಿರಾಶ್ರಿತರಿಗೆ ತಲಾ 3 ಏಕರೆಯಂತೆ ಹಂಚಬೇಕು, ಎಲ್ಲಾ ಲೈನ್ ಮನೆ ನಿವಾಸಿಗಳಿಗೆÉ…

Read More

ಮಡಿಕೇರಿ ಜ.13 : ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಇದೇ ಜ.25 ರ ಒಳಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜ.31 ರಂದು ರಾಜ್ಯವ್ಯಾಪಿ ನಮ್ಮೆಲ್ಲ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ‘ವಿಧಾನಸೌಧ’ ಮುತ್ತಿಗೆ ಮತ್ತು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿರುವುದಾಗಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ. ಈರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರನ್ನು ಮಲತಾಯಿ ಧೋರಣೆಯಿಂದ ನಡೆಸಿಕೊಳ್ಳುತ್ತಿದ್ದು, ಈ ಬಾರಿ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ನೀರು ಸರಬರಾಜು, ಡಾಟಾ ಆಪರೇಟರ್‍ಗಳು, ಸ್ವಚ್ಛತಾ ಕಾರ್ಯದಲ್ಲಿ ನಿರತ ಕಾರ್ಮಿಕರು ತಮ್ಮ ಕೆಲಸವನ್ನು ಪ್ರತಿಭಟನೆಯ ಸಂದರ್ಭ ಸ್ಥಗಿತಗೊಳಿಸಲಿದ್ದಾರೆ. ಸಾರ್ವಜನಿಕರು ನಮ್ಮ ಸಂಕಷ್ಟಗಳನ್ನು ಅರಿತು ಸಹಕರಿಸುವಂತೆ ಮನವಿ ಮಾಡಿಕೊಂಡರು. ಪೌರಕಾರ್ಮಿಕರ ನೇರ ನೇಮಕಾತಿಯನ್ನು ಸ್ವಾಗತಿಸುತ್ತೇವೆ. ಆದರೆ, ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜುದಾರರು, ಡಾಟಾ ಅಪರೇಟರ್ಸ್, ಸಹಾಯಕರು, ಲೋಡರ್ಸ್, ಕ್ಲೀನರ್ಸ್,…

Read More

ಮಡಿಕೇರಿ ಜ.13 : ಕಾಡಾನೆ ಸೆರೆ ಕಾರ್ಯಾಚರಣೆಯ ಸಂದರ್ಭ ಕಾಡಾನೆಯೊಂದು ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿತೋಟವೊಂದರಲ್ಲಿ ಸೆರೆ ಸಿಕ್ಕ 20 ವರ್ಷದ ಗಂಡಾನೆಯನ್ನು ಸಾಕಾನೆಗಳ ಸಹಾಯದಿಂದ ಸ್ಥಳಾಂತರಿಸುವ ಸಂದರ್ಭ ಈ ಘಟನೆ ನಡೆದಿದೆ. ಅತ್ತೂರು ನಲ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದರಿಂದ ಕಳೆದ 3 ದಿನಗಳಿಂದ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ದುಬಾರೆ ಸಾಕಾನೆ ಶಿಬಿರದ ಪ್ರಶಾಂತ್, ಹರ್ಷ, ಸುಗ್ರೀವ, ಶ್ರೀರಾಮ ಹಾಗೂ ಲಕ್ಷ್ಮಣ ಎಂಬ 5 ಸಾಕಾನೆಗಳ ಸಹಕಾರ ಪಡೆಯಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರಂಜನ್, ಇಲಾಖೆಯ ವೈದ್ಯರಾದ ಡಾ.ಚಿಟ್ಟಿಯಪ್ಪ ಮತ್ತು ಡಾ. ರಮೇಶ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಸೆರೆ ಹಿಡಿದಿದ್ದರು. ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಮೋದೂರು ತೋಟವೊಂದರಲ್ಲಿ ಪುಂಡಾನೆ ಬೀಡು ಬಿಟ್ಟಿರುವುದನ್ನು ಕಾರ್ಯಾಚರಣೆ ತಂಡ ಗುರುತಿಸಿತು. ಬಳಿಕ…

Read More

ಸುಂಟಿಕೊಪ್ಪ, ಜ.13: ಸ್ವಸ್ಥ ವಿಶೇಷ ಶಿಕ್ಷಣ ಪುನರ್ವಸತಿ ಕೇಂದ್ರದ 10ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಚೇತನ ಮಕ್ಕಳು ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು. ಭಾರತದ ಏಕತೆಯನ್ನು ಸಾರುವ ವೈವಿಧ್ಯಮಯ ನೃತ್ಯಗಳನ್ನು ತಾಳೆ ಮದಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಪೋಷಕರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

Read More

ಮಡಿಕೇರಿ ಜ.13 :  ಬೇಂಗೂರು ಗ್ರಾ.ಪಂ  ವ್ಯಾಪ್ತಿಯ ಬಿ.ಬಾಡಗ ಗ್ರಾಮದಲ್ಲಿ 2.46 ಕೋಟಿ ವೆಚ್ಚ ಮತ್ತು ಕೊಳಗದಾಳು ಗ್ರಾಮದಲ್ಲಿ 2.45 ಕೋಟಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗೆ ಶಾಸಕ  ಕೆ.ಜಿ.ಬೋಪಯ್ಯ  ಭೂಮಿ ಪೂಜೆ ಮಾಡಿದರು. ಬಳಿಕ ಬಿ.ಬಾಡಗ ಮತ್ತು ಬಲ್ಲಮಾವಟ್ಟಿ ಗ್ರಾಮದ ಸಂಪರ್ಕ ಸೇತುವೆ ಕಾಮಗಾರಿ ಪರಿಶೀಲಿಸಿದರು.

Read More

ಸುಂಟಿಕೊಪ್ಪ,ಜ.13: ಶ್ರದ್ಧಾಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಕಾನ್‍ಬೈಲ್ ಶ್ರೀ ರಾಮ ಮಂದಿರದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು. ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಚಗೊಳಿಸಿದರು. ನಂತರ ದೇವಾಲಯದ ಒಳಭಾಗವನ್ನು ಶುಚಿಗೊಳಿಸಲಾಯಿತು. ಕಾನ್‍ಬೈಲ್ ಶ್ರೀರಾಮ ಮಂದಿರ ಅಧ್ಯಕ್ಷ ಬಿ.ಜಿ.ರಮೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾ ಮೇಲ್ವಿಚಾರಕಿ ಭವ್ಯ, ಕಾನ್‍ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಉಪಾಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಯಶೋಧ ಬಸವರಾಜು, ಒಕ್ಕೂಟದ ಪದಾಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರು ಹಾಗೂ ನಾಕೂರು ಶಿರಂಗಾಲ, ಕಾನ್‍ಬೈಲ್, ಮಂಜಿಕೆರೆ, ಮಳ್ಳೂರು, ಹೆರೂರು ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Read More

ವಿರಾಜಪೇಟೆ ಜ.13 : ವಿರಾಜಪೇಟೆ ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಹೇಳಿದರು. ಆರ್ಜಿ ಗ್ರಾ.ಪಂ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೇಟೋಳಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿ ಸಮ್ಮೇಳನಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಲ್ಲಾ ಜನರ ಸಹಕಾರವು ಅಗತ್ಯವಾಗಿದೆ ಎಂದರು. ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಜ.21ರಂದು ಬೆಳಿಗ್ಗೆ…

Read More

ಮಡಿಕೇರಿ ಜ.13 :  ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. :: ಜ್ಯೋತಿಷ್ಯದ ತಳಹದಿ :: ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ್ಯ. ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ…

Read More

ಮಡಿಕೇರಿ ಜ.13 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಕೊಡಗು ಜಿಲ್ಲಾ ಸಂಸ್ಥೆಯಿಂದ ಮಡಿಕೇರಿಯಲ್ಲಿ   ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ದೇಶ ಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಸಿ.ರಂಗದಾಮಯ್ಯ  ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ಸ್ವಾಮಿ ವಿವೇಕಾನಂದರ ಸಂದೇಶಗಳು ಯುವಜನತೆಗೆ ಸ್ಪೂರ್ತಿದಾಯಕವಾಗಿದ್ದವು.  ಅವರ ಜೀವನ ಸಂದೇಶ, ತತ್ವಚಿಂತನೆಗಳು ಪ್ರತಿಯೊಬ್ಬರು ಪಾಲಿಸುವ ಅಗತ್ಯವಿದೆ ಎಂದು ಹೇಳಿದರು.  ದೇಶಭಕ್ತಿಗೀತೆ ಎಂಬುದು ದೇಶಕ್ಕೆ ಗೌರವ, ಎಲ್ಲಾರಿಗೂ ಶುಭವಾಗಲಿ ಎಂದು  ಹಾರೈಸಿದರು. ಸ್ಕೌಟ್ಸ್ ಮತ್ತು ಗೈಡ್ಸ್  ಜಿಲ್ಲಾ ಪ್ರಧಾನ ಆಯುಕ್ತ  ಕೆ.ಟಿ.ಬೇಬಿ ಮ್ಯಾಥ್ಯೂ ಅವರ ಅಧ್ಯಕ್ಷತೆಯಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಜಿಲ್ಲಾ ಸ್ಥಾನಿಕ ಆಯುಕ್ತ  ಹೆಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತೆ ಮೈಥಿಲಿ ರಾವ್, ಉಪಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖಜಾಂಚಿ  ಪುಷ್ಟವೇಣಿ, ಪ್ರಮುಖರಾದ  ಶೋಭಾ ಸುಬ್ಬಯ್ಯ, ಬೈತಡ ಜಾನಕ್ಕಿ, ಎಲ್ಲಾ ಶಾಲೆಯ ಶಿಕ್ಷಕರು ಹಾಜರಿದ್ದರು. ಹದಿನೆಂಟು ಶಾಲೆಗಳು ಸ್ಪರ್ಧೆಯಲ್ಲಿ…

Read More

ವಿರಾಜಪೇಟೆ ಜ.13 : ಸ್ವಾಮಿ ವಿವೇಕಾನಂದರ ಜೀವನ ಹಾಗೂ ಭೋದನೆಗಳು ನವ ಸಮಾಜಕ್ಕೆ ಆದರ್ಶವಾಗಿವೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸ್ವಾಮಿ ವಿವೇಕಾನಂದರು ತಮ್ಮ ಬಾಲ್ಯ ಜೀವನದಿಂದಲೇ ಸಾಧಕರಾಗಿದ್ದಾರೆ. ಅವರ ತತ್ವಗಳು ಆಧುನಿಕ ಜಗತ್ತಿನಲ್ಲಿ ಮಹತ್ವದ್ದಾಗಿದೆ. ಸದಾ ಯುವ ಜನತೆಯ ಪ್ರೇರಕ ಮಾರ್ಗದರ್ಶಕರಾದ ವಿವೇಕಾನಂದರು ಆದ್ಯಾತ್ಮಿಕತೆಯ ಬಗ್ಗೆ ಒಲವು ಹೊಂದಿದ್ದರು ಎಂದು ಹೇಳಿದರು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಅರ್ಜುನ್ ಎಚ್.ಆರ್.ರಾಷ್ಟ್ರೀಯ ಯುವ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದರು ಮಹಾನ್ ಸಂತರಾಗಿದ್ದರು. ಅವರಿಗೆ ಬುದ್ದಿ, ಏಕಾಗ್ರತೆ, ಆದ್ಯಾತ್ಮಿಕ ಬಗ್ಗೆ ಒಲವು ಇತ್ತು. ಅವರು ಯುವ ಶಕ್ತಿಯ ಮಾರ್ಗದರ್ಶಕರಾಗಿದ್ದರಲ್ಲದೆ ಸಮಾಜ ಸುಧಾರಣೆಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.…

Read More