ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ.14 ರಂದು ಶ್ರೀ ಅಯ್ಯಪ್ಪ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ, ಶ್ರೀ ಗಣಪತಿ ಹವನ, ಪಂಚಾಮೃತ ಅಭಿಷೇಕ, ಮಹಿಳಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಜರುಗಲಿದ್ದು, ಸಂಜೆ ಮಕರ ಜ್ಯೋತಿ ಪೂಜೆ ನಡೆದು ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಪುತ್ತೂರು ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ವಸಂತ ನಾಯಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ಖ್ಯಾತ ಕಲಾವಿದ ಶ್ರೀ ಪ್ರಹ್ಲಾದ ಆಚಾರ್ಯ ತಂಡದಿಂದ ಮಾತನಾಡುವ ಗೊಂಬೆ ಹಾಗೂ ನೆರಳಿನಾಟ ನಡೆಯಲಿದೆ. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.13 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಸತಿ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಎ.ಎಂ ಚೈತನ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಇವಳು 100 ಮೀ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಇವರ ಸಾಧನೆಗೆ ಶಾಲಾ ಪ್ರಾಂಶುಪಾಲರು , ಶಿಕ್ಷಕ ವೃಂದ , ದೈಹಿಕ ಶಿಕ್ಷಕರು ಮತ್ತು ಮನೆಯವರು ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
ಮಡಿಕೇರಿ ಜ.13 : ಮಂಗಳೂರು ವಿಶ್ವ ವಿದ್ಯಾನಿಲಯ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಪ್ರಥಮ ವರ್ಷದ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿ ಗಳಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಆರೋಗ್ಯ ಮತ್ತು ನೈರ್ಮಲ್ಯ’ ಕುರಿತು ಪ್ರೌಢಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ನೇರುಗಳಲೆ ಗ್ರಾ.ಪಂ ಅಧ್ಯಕ್ಷರಾದ ಕೆ.ಜಿ .ಪುಷ್ಪ ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಎಚ್ಚರ ವಹಿಸಿಕೊಳ್ಳಲಿದ್ದಾರೆ ಎಂದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಲೋಕೇಶ ಭರಣಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ಶುಶ್ರೂಷಕಿ ಎಂ.ಜಿ.ದಿವ್ಯ, ಅಬ್ಬೂರು ಕಟ್ಟೆಯ ಸಮುದಾಯ ಆರೋಗ್ಯ ಅಧಿಕಾರಿ ಡಿ.ನಂದಿನಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಕುರಿತು ಮನದಟ್ಟು ಮಾಡಿಸಿದರು. ವೈಯಕ್ತಿಕ ಆರೋಗ್ಯ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಿಂದ ಹೇಗೆ ರಕ್ಷಣೆ ಹೊಂದಬೇಕು…
ಮಡಿಕೇರಿ ಜ.13 : ಸ್ವಾಮಿ ವಿವೇಕಾನಂದ ಜನಸೇವ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕ ಬಳಗದ ಮಡಿಕೇರಿ ತಾಲೂಕಿನ ಅಧ್ಯಕ್ಷರಾದ ಪದ್ಮಿನಿ ಮಾತನಾಡಿ, ವಿವೇಕಾನಂದರು ಬೆಳೆದು ಬಂದ ರೀತಿಯನ್ನು ವಿವರಿಸಿದರು. ಸ್ವಾಮಿ ವಿವೇಕಾನಂದರು ತಮ್ಮ ವಾಕ್ಚಾತುರ್ಯದಿಂದ ಯುವಕರನ್ನು ತಮ್ಮೆಡೆಗೆ ಸೆಳೆಯುತ್ತಿದ್ದರು. ಚಿಕಾಗೋ ನಗರದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಪ್ರಸ್ತುತಪಡಿಸಿದ ಭಾಷಣವೇ ಇದಕ್ಕೆ ಸಾಕ್ಷಿ ಎಂದರು. ಈ ಸಂದರ್ಭ ಸ್ವಾಮಿ ವಿವೇಕಾನಂದ ಜನಸೇವಾ ಸಂಘದ ಗೌರವಾಧ್ಯಕ್ಷ ಎಸ್.ಸಿ.ಮಂಜುನಾಥ್, ಅಧ್ಯಕ್ಷ ಕೆ.ಎಸ್.ಗಣೇಶ್, ಉಪಾಧ್ಯಕ್ಷ ಪಿ.ಪಿ.ಪ್ರಸಾದ್, ಕಾರ್ಯದರ್ಶಿ ಎಚ್.ಎಲ್.ನಾರಾಯಣ್, ಖಜಾಂಜಿ ಸೋಮಶೇಖರ್, ಸದಸ್ಯರುಗಳಾದ ಪಿ.ಮಣಿ, ಎ.ಸಿ.ಲವ ಪ್ರಸಾದ್, ಎಸ್.ಎಂ.ಮೋಣ್ಣಪ್ಪ, ಬಿ.ಕೆ.ಬಾಲಕೃಷ್ಣ, ಮೀನಾಕ್ಷಿ ಹಾಗೂ ವಿವೇಕ ಬಳಗದ ಲೀಲಾ ಶೆಟ್ಟಿ, ಜ್ಯೋತಿ ಕುಮಾರಿ, ಪ್ರಭಾವತಿ, ಅಚ್ಚಮ್ಮ, ಅಶೋಕ ಶೆಟ್ಟಿ, ಭೋಜಮ್ಮ , ಪ್ರಭಾವತಿ, ಅಂಬಿಕಾ, ಅಶ್ವಿನಿ, ಚೇತನ್ ಹಾಗೂ ಇತರರು ಹಾಜರಿದ್ದರು. ಕಾರ್ಯಕ್ರಮವು ವಿವೇಕದ ಭಜನೆಯೊಂದಿಗೆ ಪ್ರಾರಂಭವಾಯಿತು.
ಮಡಿಕೇರಿ ಜ.13 : ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಿಲಯದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್. ಎಲ್. ದಿವಾಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಡಿ ಎಸ್ ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಭಾಜನಾರಾಗಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಸಂಯೋಜಕಿ ಡಾ. ಹೆಚ್.ಕೆ.ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು. ಡಿ ಎಸ್ ಎಸ್ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಶಿಕ್ಷಣದಲ್ಲಿರುವ ಹಂತಗಳು, ವಿವಿಧ ಕೋರ್ಸ್ಗಳನ ಬಗ್ಗೆ ಹಾಗೂ ಡಿ ಎಸ್ ಎಸ್ ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಮೊದಲ ಆದ್ಯತೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…
ವಿರಾಜಪೇಟೆ ಜ.14 : ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿರಾಜಪೇಟೆಯ ನಾಟ್ಯಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ಪ್ರೇಮಾಂಜಲಿ ಹಾಗೂ ವಿದ್ಯಾರ್ಥಿಗಳ ತಂಡವು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಲವಾರು ಸಾಹಿತಿಗಳು, ಗಣ್ಯವ್ಯಕ್ತಿಗಳು, ಹಾಗೂ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವ ಕಾಮತ್ ಭಾಗವಹಿಸಿದರು.
ಸುಂಟಿಕೊಪ್ಪ, ಜ.13 : ಸುಂಟಿಕೊಪ್ಪ ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಜ.14 ರಂದು ಮಕರ ಸಂಕ್ರಾಂತಿಯ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಜ.14 ರಂದು ಮಕರ ಜ್ಯೋತಿ ಉತ್ಸವದ ಅಂಗವಾಗಿ ಸಾಯಂಕಾಲ ಶ್ರೀ ಅಯ್ಯಪ್ಪ ಸ್ವಾಮಿಗೆ ಅರ್ಚನೆ ಹಾಗೂ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6.45 ಕ್ಕೆ ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಮಡಿಕೇರಿ ಜ.13 : ಜನನಿ ಮಹಿಳಾ ಮಂಡಳಿ ಹಾಗೂ ಬಾಲಗೋಕುಲ ಸಂಯುಕ್ತಾಶ್ರಯದಲ್ಲಿ ನಗರದ ರಾಘವೇಂದ್ರ ದೇವಾಲಯದ ಆಶಾ ಪ್ರಾವಿಷನ್ ಸ್ಟೋರ್ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ ಧನಂಜಯ ಅಗೋಳಿಕಜೆ ಮಾತನಾಡಿ 1893ರಲ್ಲಿ ಚಿಕಾಗೋದಲ್ಲಿ ನಡೆದ ವರ್ಲ್ಡ್ಸ್ ಪಾರ್ಲಿಮೆಂಟ್ ಆಫ್ ರಿಲಿಜನ್ಸ್ನಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣ ಇಂದಿಗೂ ಪ್ರಸಿದ್ಧ. ವೇದಾಂತ ಮತ್ತು ಯೋಗದ ಭಾರತೀಯ ತತ್ತ್ವ ಚಿಂತನೆಗಳನ್ನು ವಿಶ್ವ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದರು ಕೂಡಾ ಪ್ರಮುಖರಲ್ಲಿ ಒಬ್ಬರು. ತಮ್ಮ ಪ್ರಖರ ಭಾಷಣಗಳು ಮತ್ತು ಉಪನ್ಯಾಸಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ವಿವೇಕಾನಂದರು ಪ್ರಯತ್ನಿಸಿದರು ಎಂದರು. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿ ಮನನ ಮಾಡಿಕೊಂಡರೆ ಜೀವನದಲ್ಲಿ ಎಂತಹ ಕಷ್ಟಕಾರ್ಪಣ್ಯಗಳು ಬಂದರು ಎದೆಗುಂದದೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವು ನಮಗೆ ಬರುತ್ತದೆ ಹಾಗೆ ನಾವೆಲ್ಲರೂ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಭವ್ಯ,…
ಮಡಿಕೇರಿ ಜ.12 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರು ಕೆ.ಆರ್.ನಗರ ನಿವಾಸಿ ಮಂಜುನಾಥ (32) ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಪತ್ತೆ ಮಾಡಿದ ಕುಶಾಲನಗರ ಗ್ರಾಮಾಂತರ ಸಿ.ಪಿ.ಐ ಹಾಗೂ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಪ್ರಶಂಸಿಸಿದ್ದಾರೆ.
ಚೆಟ್ಟಳ್ಳಿ ಜ.12 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯಲ್ಲಿ ಪ್ರತಿಷ್ಠಾಪಿಸಲಿರುವ ಶ್ರೀಪಂಚಮುಖಿ ವಾಯುಪುತ್ರಮೂರ್ತಿಯನ್ನು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಚೆಟ್ಟಳ್ಳಿ ಗ್ರಾಮಸ್ಥರು ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಂಡರು. ವಿಜಯ ಪ್ಲಾಂಟೇಷನ್ ಮಾಲೀಕ ಎಸ್.ಜಿ.ಶ್ರೀನಿವಾಸ್ ಹಾಗೂ ಬಲ್ಲಾರಂಡ ಮಣಿಉತ್ತಪ್ಪ ವಿಶೇಷ ಪೂಜೆ ಸಲ್ಲಿಸಿದರು. ಚೆಟ್ಟಳ್ಳಿ ಶ್ರೀನರೇಂದ್ರ ಮೋದಿ ರೈತ ಸಹಕಾರ ಭವನದಿಂದ ಸಹಕಾರ ಸಂಘದ ಮುಖ್ಯ ಕಚೇರಿಯವರೆಗೆ ಪಟ್ಟಣದುದ್ದಕ್ಕೂ ಮೆರವಣಿಗೆಯಲ್ಲಿ ಸಾಗಿ ಕಾವೇರಿಮಾತೆಗೆ, ಪಶುಪತಿನಾಥನಿಗೆ ಪೂಜೆ ಸಲ್ಲಿಸಲಾಯಿತು. ನಂತರ ಈರಳೆವಳಮುಡಿ ಶಾಖೆಗೆ ಕೊಂಡೊಯ್ಯಲಾಯಿತು. ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಶ್ರೀ ಪಂಚಮುಖಿ ವಾಯುಪುತ್ರಮೂರ್ತಿಯನ್ನು ಪ್ರತಿಷ್ಠಾಪಿಸುತಿದ್ದೇವೆ. ಸಂಕ್ರಾತಿ ದಿನವಾದ ಜ.15ರಂದು ವಿವಿಧ ಪೂಜಾಕೈಂರ್ಕದೊಂದಿಗೆ ಸಂಘದ ಈರಳೆವಳಮುಡಿ ಶಾಖೆಯ ಆವರಣದಲ್ಲಿ ಅನಾವರಣಗೊಳಿಸುವುದಾಗಿ ಮಣಿಉತ್ತಪ್ಪ ತಿಳಿಸಿದರು. ಈ ಸಂದರ್ಭ ವೀರಾಂಜನೆಯ ಯುವಕ ಸಂಘದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ, ಗೌರಿಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಪುತ್ತರಿರ ಶಿವುನಂಜಪ್ಪ, ಕಾರ್ಕಳದ ಶಿಲ್ಪಿ ಗುಣವಂತೇಶ್ವರ ಭಟ್, ಚೆಟ್ಟಳ್ಳಿ ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು…






