ಲೇಖಕ: admin

ಮಡಿಕೇರಿ, ಫೆ.22: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬದ ಅಂಗವಾಗಿ ಮಾ.8 ರಂದು ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಡಗಿನ ಮಹಿಳಾ ಪತ್ರಕರ್ತೆಯರ ಸಾರಥ್ಯದಲ್ಲಿ ನಡೆಯಲಿರುವ ದಿನಾಚರಣೆಯಲ್ಲಿ, ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲದೆ ಸಾಧಕರಿಗೆ ಸನ್ಮಾನ ಮತ್ತಿತರ ಚಟುವಟಿಕೆಗಳು ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಹೇಳಿದರು. ಮಡಿಕೇರಿ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬ ಮಹೋತ್ಸವ ಅಂಗವಾಗಿ ಬೆಳ್ಳಿ ಹಬ್ಬ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಕುಶಾಲನಗರ ಗೌಡ ಸಮಾಜ ಮತ್ತು ಕೊಡವ ಕೊಡವ ಸಮಾಜ, ಟಿಟಿಡಿ ಮತ್ತು ಕುಶಾಲನಗರದ ಸಮಸ್ತ ಮಹಿಳಾ ಭಜನಾ ಮಂಡಳಿ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳಾ ಪತ್ರಕರ್ತರಿಂದ ವಿಭಿನ್ನ ಮನರಂಜನೆ, ಕಾರ್ಯಕ್ರಮಗಳು ನಡೆಯಲಿವೆ ಎಂದರು. ಅಂದು ಬೆಳಿಗ್ಗೆ ಕುಶಾಲನಗರ ಗಣಪತಿ…

Read More

ಮಡಿಕೇರಿ ಫೆ.22 : ನವೀಕರಣಗೊಂಡಿರುವ ಕೊಡಗು ಜಿಲ್ಲಾ ಬಂಟರ ಶಾಂತಿಧಾಮವನ್ನು ‘ಶಾಂತಿಧಾಮ ನಿರ್ವಹಣಾ ಸಮಿತಿ’ಗೆ ಹಸ್ತಾಂತರಿಸಲಾಯಿತು. ನಗರದ ಸ್ಟೋನ್ ಹಿಲ್‍ನಲ್ಲಿರುವ ಶಾಂತಿ ಧಾಮದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ಕೊರಗಪ್ಪ ರೈ, ಜಯಕೃಷ್ಣ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಐತಪ್ಪರೈ ಅವರುಗಳು ಶಾಂತಿಧಾಮ ನಿರ್ವಹಣಾ ಸಮಿತಿ ಯ.ಎಚ್. ಪ್ರಭಾಕರ್ ರೈ, ಶೇಷಪ್ಪ(ಪುಟ್ಟು) ರೈ, ಅರುಣ್ ಶೆಟ್ಟಿ ಅವರಿಗೆ ದಾಖಲಾತಿ ಪುಸ್ತಕ ಹಾಗೂ ರಶೀದಿ ಪುಸ್ತಕವನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಕೊರಗಪ್ಪರೈ, ಶಾಂತಿಧಾಮವನ್ನು ನವೀಕರಣಗೊಳಿಸಿ ಸ್ವಚ್ಛಂದವಾಗಿಸಬೇಕೆಂಬುದು ಹಲವು ವರ್ಷಗಳ ಕನಸಾಗಿತ್ತು. ಜಗದೀಶ್‍ ರೈಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನದಲ್ಲಿ ಅದು ಈಡೇರಿದೆ. ಮುಂದೆ ಇದರ ನಿರ್ವಹಣೆಗೆ ಸಮಾಜದ ಎಲ್ಲರೂ ಸಹಕಾರ ನೀಡಬೇಕೆಂದರು. ಬಂಟ ಸಮಾಜ ಸಾಮಾಜಿಕವಾಗಿ ಹಿಂದೆ ಇದೆ. ಮುಂದಿನ ದಿನದಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದವರನ್ನು ಮುನ್ನೆಲೆಗೆತರಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಂಘಟನಾತ್ಮಕ ವಿಚಾರದಲ್ಲಿ ಆಸಕ್ತಿ ವಹಿಸಬೇಕೆಂದು ಕಿವಿಮಾತು ಹೇಳಿದರು. ಬಿ.ಬಿ.ಐತಪ್ಪರೈ ಮಾತನಾಡಿ, ಬಂಟರ ಶಾಂತಿಧಾಮ ನಿರ್ಮಾಣಕ್ಕೆ ಕಾರಣಕರ್ತರಾದವರ ಶ್ರಮವನ್ನು ಸದಾ ಸ್ಮರಿಸಿಕೊಳ್ಳಬೇಕೆಂದರು.…

Read More

ಮಡಿಕೇರಿ ಫೆ.22 : ಜಾತ್ಯತೀತ ಜನತಾದಳದ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ ಅವರು ಪಕ್ಷವನ್ನು ತೊರೆದಿರುವುದರಿಂದ ಯಾವುದೇ ಲಾಭ ಅಥವಾ ನಷ್ಟವಿಲ್ಲವೆಂದು ಜೆಡಿಎಸ್ ಜಿಲ್ಲಾ ವಕ್ತಾರ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಯಾಣಿಕರು ಒಂದು ಬಸ್ ನಿಂದ ಇಳಿದು ಮತ್ತೊಂದು ಬಸ್ ಗೆ ಏರಿದಂತೆ, ಸಂಕೇತ್ ಅವರು ಮತ್ತೊಂದು ಬಸ್ ನ್ನು ಹತ್ತಿದ್ದಾರೆ. ಅಲ್ಲಿ ಅವರಿಗೆ ರಾಜಕೀಯ ಲಾಭವಾಗುವುದಾದರೆ ಸ್ವಾಗತಾರ್ಹ, ಇದರಿಂದ ಜೆಡಿಎಸ್ ಗೇನು ನಷ್ಟವಿಲ್ಲ. ಸರಳ ಸಜ್ಜನಿಕೆ ಮತ್ತು ರೈತಪರ ಕಾಳಜಿಯ ಹೆಚ್.ಡಿ.ಕುಮಾರಸ್ವಾಮಿ ಅವರ ಮಾನವೀಯ ಗುಣಗಳ ಸಿದ್ಧಾಂತವನ್ನು ಒಪ್ಪಿರುವ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಹಾಗೂ ನಾವುಗಳು ಜೆಡಿಎಸ್ ನಲ್ಲಿಯೇ ಮುಂದುವರೆಯಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇತರೆ ರಾಜಕೀಯ ಪಕ್ಷಗಳು ಅಥವಾ ನಾಯಕರ ವಿರುದ್ಧ ಟೀಕೆ ಮಾಡದೆ ಜೆಡಿಎಸ್ ವಿಚಾರಧಾರೆಗಳನ್ನು ಜನಸಾಮಾನ್ಯರು ಹಾಗೂ ಮತದಾರರಿಗೆ ತಲುಪಿಸುವ ಕಾರ್ಯವನ್ನು ನಾವು ಮಾಡಲಿದ್ದೇವೆ. ಕೋರ್ ಕಮಿಟಿ ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ಮುಂದಿನ ವಿಧಾನಸಭಾ ಚುನಾವಣೆಗೂ ಇದೇ ನಿಯಮ…

Read More

ಮಡಿಕೇರಿ ಫೆ.22 : ಕೊಡಗು ಜಿಲ್ಲೆಯಲ್ಲಿ 12 ಗ್ರಾಮ ಪಂಚಾಯತ್‍ಗಳಲ್ಲಿ (ಗ್ರೇಡ್-2ರಡಿ) ಸಮಗ್ರ ನಾಗರಿಕ ಸೇವಾ ಕೇಂದ್ರ ‘ಗ್ರಾಮ ಒನ್’ ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ದೊಡ್ಡಮಳ್ತೆ, ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ, ಸೋಮವಾರಪೇಟೆ ಹೋಬಳಿಯ ಗರ್ವಾಲೆ, ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್, ಕುಶಾಲನಗರ ಹೋಬಳಿಯ ನಾಲ್ಕೂರು ಶಿರಂಗಾಲ, ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ ಹೋಬಳಿಯ ಕಾಕೋಟು ಪರಂಬು, ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು, ಹುದಿಕೇರಿ ಹೋಬಳಿಯ ಬಲ್ಯಮಂಡೂರು, ಶ್ರೀಮಂಗಲ ಹೋಬಳಿಯ ಕೆ.ಬಾಡಗ, ಬಾಳೆಲೆ ಹೋಬಳಿಯ ಪೊನ್ನಪ್ಪಸಂತೆ, ಪೊನ್ನಂಪೇಟೆ ಹೋಬಳಿಯ ಬಿ.ಶೆಟ್ಟಿಗೇರಿ ಮತ್ತು ಕಿರುಗೂರು ಈ ಗ್ರಾ.ಪಂ.ಗಳಲ್ಲಿ ಪ್ರಾಂಚೈಸಿಗಳಿಗೆ ಅವಕಾಶ ಇದೆ. ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿ ಅವರ ಕಚೇರಿ (ದೂ.ಸಂ.8861672120/ 8553226664) ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.22 : 2022-23 ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮೈಸೂರು ರವರ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ 10+1 ಕುರಿ/ ಮೇಕೆ ಘಟಕ ಸಂಬಂಧ ಪ.ಜಾತಿ-1, ಸಾಮಾನ್ಯ ವರ್ಗದ 4 ಒಟು ್ಟ5 ಘಟಕಗಳನ್ನು (ಘಟಕ ವೆಚ್ಚ 70 ಸಾವಿರ ಸಹಾಯಧನ ಪರಿಶಿಷ್ಟ ಜಾತಿ/ ಸಾಮಾನ್ಯ ವರ್ಗ ಶೇ.50, ಸಹಾಯಧನ 35 ಸಾವಿರ ಫಲಾನುಭವಿಯ ವಂತಿಗೆ 35 ಸಾವಿರ) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಸಾಮಾನ್ಯ ವರ್ಗ/ ಪರಿಶಿಷ್ಟ ಜಾತಿಯ 18 ರಿಂದ 60 ವರ್ಷದ ಕೂಲಿ ಕಾರ್ಮಿಕರು, ಕೃಷಿ, ಕಾರ್ಮಿಕರು ಮತ್ತು ಕುರಿ ಸಾಕಾಣಿಕೆಯಲ್ಲಿ ತೊಡಗಿಕೊಂಡವರಿಗೆ ಆದ್ಯತೆ ನೀಡಲಾಗುವುದು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಫಲಾನುಭವಿಗಳು ಆರ್‍ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಬಿಪಿಎಲ್ ಪಡಿತರ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಪಶು ಆಸ್ಪತ್ರೆ ಮಡಿಕೇರಿ…

Read More

ಮಡಿಕೇರಿ ಫೆ.22 :ಜಿಲ್ಲೆಯ ಮಡಿಕೇರಿ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು, 12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರಬೇಕು. 19 ರಿಂದ 35 ವರ್ಷ ವಯೋಮಿತಿಯೊಳಗಿರುವ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ.40 ಕ್ಕಿಂತ ಅಧಿಕವಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ಮಡಿಕೇರಿ, ಸೋಮವಾರಪೇಟೆ ಹಾಗೂ…

Read More

ಮಡಿಕೇರಿ ಫೆ.22 : ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ದುಬೈ ವತಿಯಿಂದ ಆಯೋಜಿಸಲಾಗಿದ್ದ 9ನೇ ಅಂತರರಾಷ್ಟ್ರೀಯ ಆನ್‌ಲೈನ್ ಬ್ರೈನೋಬ್ರೈನ್ -2023 ಸ್ಪರ್ಧೆಯಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿ, ಚಿನ್ನ ಮತ್ತು ಬೆಳ್ಳಿ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿoದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ಒಟ್ಟು 44 ವಿದ್ಯಾರ್ಥಿಗಳು ಭಾಗವಹಿಸಿ ಕೇವಲ 4 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ 17 ಚಾಂಪಿಯನ್ ಟ್ರೋಫಿ, 12 ಚಿನ್ನದ ಪದಕ ಮತ್ತು 15 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ::: ಚಾಂಪಿಯನ್ ಟ್ರೋಫಿ ವಿಜೇತರು ::: ಬಿ.ಎಂ.ಆರವ್ ಬೋಪಣ್ಣ, ಎಸ್.ಐಶ್ವರ್ಯ, ಆನ್‌ಶೀಲ್ ಲೋಬೊ, ಅಪೇಕ್ಷಾ ಆರ್ ರೈ, ಎನ್.ಕೆ.ಚಹನಾ, ಚಿರಂತನ್ ಆರ್ ಕಾಮತ್, ದೃತಿ ಜೆ ಪೂಜಾರಿ, ಹೆಚ್.ಎಸ್.ಹವಿಂತಾ, ಪಿ.ಕೆ.ಕೃಷ್ಣ ಪ್ರಿಯಾ, ಆರ್.ಕೃಪಾ, ಡಿ.ಎಂ.ಮೀನಾಕ್ಷಿ, ಎನ್. ನಿರನ್ ಪೂವಣ್ಣ, ನಾಪಂಡ ನಿಶಾ ಪೂವಣ್ಣ, ನೈಷಾ ನಾಚಯ್ಯ ಪಾಲೆಕಂಡ, ಎಸ್.ಪಿ.ಪ್ರಣತಿ, ಬಿ.ಪಿ.ರಕ್ಷ್ ಪೊಣ್ಣನ್ನ, ಬಿ.ಎಸ್.ತನ್ಮಯ್…

Read More

ಮಡಿಕೇರಿ ಫೆ.22 :  ಕೊಡಗು ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ  ಫೆ.25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಮಡಿಕೇರಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ  ಮೈಸೂರು ಸುಯೋಗ್ ಆಸ್ಪತ್ರೆಯ ಹೃದಯ ತಜ್ಞರು, ಸ್ತ್ರೀರೋಗ ತಜ್ಞರು, ಫಿಜಿಷಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೊ ಪರೀಕ್ಷೆ, ಇಸಿಜಿ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಡೆಯಲಿದೆ.  ಕಾರ್ಯಕ್ರಮವನ್ನು ಬೆಳಿಗ್ಗೆ 10.30 ಗಂಟೆಗೆ ಕೆಪಿಸಿಸಿ ಪ್ರಮುಖರು, ಹೈಕೋರ್ಟಿನ ನಿಕಟಪೂರ್ವ ಅಭಿಯೋಜಕ  ಹೆಚ್.ಎಸ್.ಚಂದ್ರಮೌಳಿ‌ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು  ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ.ಪಿ.ಸುನಿಲ್ ಸುಬ್ರಮಣಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತ, ಕೊಡಗು ಪತ್ರಕರ್ತರ…

Read More

ಮಡಿಕೇರಿ ಫೆ.22 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕವಿಗೋಷ್ಠಿ ಸಮಿತಿ ಸಹಯೋಗದಲ್ಲಿ ಮಾ.26 ರಂದು ಯುಗಾದಿ ಕವಿಗೋಷ್ಠಿ ಆಯೋಜಿಸಲಾಗಿದೆ. ಮಾ.26 ರಂದು ತಿತಿಮತಿ ಜಂಗಲ್ ಹಾಡಿಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಬೆಳ್ಳಿ ಮಹೋತ್ಸವ ನೆನಪಿನ ಅಂಗವಾಗಿ ಕವಿತೆ ವಾಚಿಸುವ ಕವಿಗಳ ಕವನಗಳನ್ನು ಸಂಕಲನ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕೊಡಗು ಬೆಳ್ಳಿ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪ್ರಯುಕ್ತ ಕೊಡಗು ಜಿಲ್ಲೆಯ ಕವಿಗಳಿಂದ ಕನ್ನಡ ಕವನಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಕವಿಗಳು ಫೆ. 28ರ ಒಳಗೆ ಎಲ್ಲಿಯೂ ಪ್ರಕಟವಾಗದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ತಮ್ಮ ಸ್ವರಚಿತ ಕವನಗಳನ್ನು ನುಡಿ ಅಥವಾ ಬರಹದಲ್ಲಿ ಟೈಪಿಸಿ ಸಂಚಾಲಕರು, ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಯುಗಾದಿ ಕವಿಗೋಷ್ಠಿ ಸಮಿತಿ, ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೋಣಿಕೊಪ್ಪ-571213 ಈ ವಿಳಾಸಕ್ಕೆ…

Read More

ಮಡಿಕೇರಿ ಫೆ.22- : ಮೈಸೂರಿನ ರಂಗಾಯಣದ ವತಿಯಿಂದ ಫೆ.25 ರಂದು ಶನಿವಾರ ಸಂಜೆ 6 ಗಂಟೆಗೆ ಕುಶಾಲನಗರದಲ್ಲಿ ಟಿಪ್ಪು ನಿಜಕನಸುಗಳು ನಾಟಕ ಆಯೋಜಿಸಲಾಗಿದೆ. ಕುಶಾಲನಗರದ ನೂತನ ಕಲಾಮಂದಿರದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಆಯೋಜಿತವಾಗಿದ್ದು, ರಂಗಾಯಣದ ನಿದೇ೯ಶಕ ಅಡ್ಡಂಡ ಕಾಯ೯ಪ್ಪ ಈ ನಾಟಕ ರಚಿಸಿ ನಿದೇ೯ಶನ ಮಾಡಿದ್ದಾರೆ. ಹೆಸರಾಂತ ಕಲಾವಿದ ಶಶಿಧರ ಅಡಪ ರಂಗವಿನ್ಯಾಸ ಮಾಡಿದ್ದು, ಪ್ರಮೋದ್ ಶಿಗ್ಗಾಂವ್ ವಸ್ತ್ರ ವಿನ್ಯಾಸ, ಆರ್.ಸಿ.ಧನಂಜಯ, ಸುಬ್ರಹ್ಮಣ್ಯ ಸಂಗೀತ, ಮಹೇಶ ಕಲ್ಲತ್ತಿ ಅವರ ಬೆಳಕು ರಂಗಸಜ್ಜಿಕೆಗಿದೆ. ಬಚ್ಚಿಡಲಾದ ಅನೇಕ ಸತ್ಯಗಳನ್ನು ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುವ ದೖಷ್ಟಿಯಿಂದ ಹೊರಚೆಲ್ಲಲು 15 ದೃಶ್ಯಗಳುಳ್ಳ ಟಿಪ್ಪು ನಿಜಕನಸು ನಾಟಕ ಪ್ರಸ್ತುತ ಪಡಿಸಲಾಗುತ್ತಿದೆ. ಡಾ. ಐ.ಮಾ.ಮುತ್ತಣ್ಣ, ಆರ್.ಡಿ.ಶಮಾ೯, ಡಾ.ಚಿದಾನಂದಮೂತಿ೯ ಅವರ ಕೖತಿಗಳನ್ನು ಆದರಿಸಿದ್ದಲ್ಲದೇ ಸ್ವತ ಟಿಪ್ಪುವಿನ ಕಾಲಘಟ್ಟದ ಇತಿಹಾಸಕಾರ ಹುಸೇನ್ ಅಲಿ ಕಿಮಾ೯ನಿ ರಚಿಸಿದ ಹೈದರ್ ನಿಶಾನಿ ಕೃತಿಗಳನ್ನು ಕೂಡ ನಾಟಕ ರಚನೆ ಸಂದಭ೯ ಅವಲೋಕಿಸಲಾಗಿದೆ. ಇದೆಲ್ಲದರ ಒಟ್ಟು ಸತ್ಯಾಂಶವಾಗಿಯೇ 38 ಕಲಾವಿದರು ನಟಿಸಿರುವ ಟಿಪ್ಪು ನಿಜ ಕನಸುಗಳು ರೂಪುಗೊಂಡಿದೆ ಎಂದು…

Read More