ನಾಪೋಕ್ಲು ಫೆ.22 : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಪ್ರಯುಕ್ತ ಎಮ್ಮೆಮಾಡು ಗ್ರಾಮದ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಯತ್ ವತಿಯಿಂದ ಪ್ರತಿ ವರ್ಷ ನಡೆಯುವ ವಾರ್ಷಿಕ ಮಖಾಂ ಉರುಸ್ ಸಮಾರಂಭಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಿತು. ನಿತ್ಯದ ನಮಾಜ್ ಬಳಿಕ ದಫ್ ನೊಂದಿಗೆ ದರ್ಗಾಕ್ಕೆ ತೆರಳಿದ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕೊಡಿ ತೂಕಲ್ ಮೂಲಕ ಚಾಲನೆ ನೀಡಿದರು. ಜಮಾಯತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫೀ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸ್ಥಳೀಯ ಮುದರಿಸರಾದ ಅಬ್ದುಲ್ ಸಲಾಂ ಶಾಮಿಲ್ ಇರ್ಫಾನಿ, ಖತೀಬರಾದ ಮುಹ್ಸಿನ್ ಹುದವಿ ಕೆ.ಎಂ.ಹುಸೈನ್ ಸಖಾಫಿ ಅಲಿ ನೆರೂಟ್, ಸೈಯದ್ ಅಬ್ದುಲ್ ಅಝೀಜ್, ಸಹದಿಯ ಅನಾಥಾಲಯದ ಅಧ್ಯಕ್ಷ ಅಬ್ದುಲ್ ರೆಹಮಾನ್ ಪೂಡಿಯೋಡಿ, ಗ್ರಾ.ಪಂ ಸದಸ್ಯರಾದ ಚಕ್ಕೆರ ಇಸ್ಮೈಲ್, ಅಬ್ದುಲ್ ಗಫೂರ್ ಪಡಿಯಾಣಿ, ಯೂಸುಫ್ ಪಡಿಯಾಣಿ, ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಧ್ವಜಾರೋಹಣದೊಂದಿಗೆ ಆರಂಭಗೊಳ್ಳಲಿದ್ದು, ಫೆ.27ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ.…
ಲೇಖಕ: admin
ಮಡಿಕೇರಿ ಫೆ.22 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ 450 ಹಾಸಿಗೆ ಸಾಮರ್ಥ್ಯದ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಅವರು ಸಭೆಯಲ್ಲಿ ಹಾಜರಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರ್, ವೈದ್ಯಕೀಯ ಕಾಲೇಜು ಅಧಿಕಾರಿಗಳು ಹಾಗೂ ಕಟ್ಟಡ ಕಾಮಗಾರಿ ನಿರ್ಮಿಸುತ್ತಿರುವ ಕಂಪನಿಯ ಪ್ರತಿನಿಧಿಗಳಿಂದ ಮಾಹಿತಿ ಪಡೆದರು. ಹಾಲಿ ಬೋಧಕ ಆಸ್ಪತ್ರೆಯ ಮುಖ್ಯ ಕಟ್ಡಡದ ಬಳಿ 8 ಅಂತಸ್ತಿನ 300 ಹಾಸಿಗೆ ಸಾಮಥ್ರ್ಯದ ಕಟ್ಟಡ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಬಳಿ 7 ಅಂತಸ್ತಿನ 150 ಹಾಸಿಗೆ ಸಾಮಥ್ರ್ಯದ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಮುಕ್ತಾಯ ದಿನಾಂಕ 18-11-2023 ಆಗಿದ್ದು, ಇಲ್ಲಿಯವರೆಗೆ 95.91 ಕೋಟಿ ಅನುದಾನ ಬಿಡಗಡೆಯಾಗಿದೆ. ಹೆಚ್ಚುವರಿಯಾಗಿ 39.09 ಕೋಟಿ ಅನುದಾನ ಬಿಡುಗಡೆ ಆಗಬೇಕಿದೆ. ಹಾಗೂ ಎರಡನೇ ಹಂತದಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳಿಗೆ ಪ್ರಸ್ತಾವನೆಯನ್ನು ಮುಖ್ಯ ಎಂಜಿನಿಯರ್ ಅವರಿಗೆ…
ಶಿಡ್ಲಘಟ್ಟ ಫೆ.22 : ಸುಟ್ಟು ಕರಕಲಾದ ಮೂವರ ಮೃತದೇಹ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಯಣ್ಣೂರು ಗ್ರಾಮದ ಮನೆಯೊಂದರಲ್ಲಿ ಪತ್ತೆಯಾಗಿದೆ. ಒಂದೇ ಕುಟುಂಬದ ನೇತ್ರಾ(35), ಪುತ್ರಿಯರಾದ ವರ್ಷಿತ(7 ತರಗತಿ) ಹಾಗೂ ಸ್ನೇಹ(4 ತರಗತಿ) ಅವರುಗಳ ಮೃತದೇಹ ಮನೆಯೊಳಗೆ ಕಂಡು ಬಂದಿದೆ. ನೇತ್ರಾರ ಪತಿ ಸೊಣ್ಣಪ್ಪ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಈ ಸಾವಿಗೆ ಕಾರಣ ಏನು ಮತ್ತು ಯಾವ ರೀತಿ ನಡೆದಿದೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸೊಣ್ಣಪ್ಪ ಅವರಿಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮಡಿಕೇರಿ ಫೆ.22 : ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ಸ್ಪರ್ಷಗೊಂಡು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತ ದುರ್ದೈವಿ. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿದಾಗ ಆಘಾತಕ್ಕೊಳಗಾದ ಅಬ್ರುದ್ದೀನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಫೆ.22 : ಮಡಿಕೇರಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಫೆ.24 ರಿಂದ ಮಾ.3ರವರೆಗೆ ನಡೆಯಲಿದೆಯೆಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಪಿ.ಎ.ಅಬೂಬಕ್ಕರ್ ಸಖಾಫಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯುದ್ ಹಸನ್ ಸಖಾಫ್ ಹಳ್ರಮಿ(ರ) ಮತ್ತು ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕ ಉರೂಸ್ ಜಾತಿ ಮತ ಧರ್ಮಗಳನನ್ನು ಮೀರಿ ಜಿಲ್ಲೆ, ರಾಜ್ಯ, ಹೊರ ರಾಜ್ಯದ ಜನರನ್ನು ತನ್ನೆಡೆಗೆ ಆಕರ್ಷಿಸುತ್ತಿದೆ. ಈ ಬಾರಿಯ ಉರೂಸ್ನಲ್ಲಿ ನಾಡಿನ ವಿವಿಧೆಡೆಗಳಿಂದ 55 ಸಾವಿರಕ್ಕೂ ಹೆಚ್ಚಿನ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು. ಫೆ.24 ರಂದು ಎಮ್ಮೆಮಾಡು ಜಮಾಅತ್ ಅಧ್ಯಕ್ಷನಾದ ತಾನು ಧ್ವಜಾರೋಹಣವನ್ನು ನೆರವೇರಿಸಲಿದ್ದು, ಉರೂಸ್ನ್ನು ಕೋಝಿಕೋಡ್ ಖಾಝಿಗಳಾದ ಸಯ್ಯಿದ್ ಮುಹಮ್ಮದ್ ಕೋಯ ಜಮಲುಲ್ಲೈಲಿ ತಂಙಳ್ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗಿನ ನಾಯಿಬ್ ಖಾಝಿ ಶಾದುಲಿ ಫೈಝಿ ವಹಿಸಲಿದ್ದಾರೆ. ಸಂಜೆ 8 ಗಂಟೆಗೆ ಶಾಫಿ…
ಮಡಿಕೇರಿ ಫೆ.22 : ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಕ್ಕಳಿಗೆ ಯೋಗದ ಕುರಿತು ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು. ಗ್ರಾ.ಪಂ.ಅಧ್ಯಕ್ಷರಾದ ಜಯಣ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ಶಾಲೆಯ ಮುಖ್ಯೋಪಾಧ್ಯಾಯರಾದ ರಾಜು, ಶಾಲೆಯ ಶಿಕ್ಷಕರು, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿಎಚ್ಒ, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಫೆ.22 : ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯಲ್ಲಿ “ಆಯುಷ್ ಸೇವಾ ಗ್ರಾಮ”ದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕಿನ ಕೊಡಗರಳ್ಳಿ ಗ್ರಾಮದ ನೇತಾಜಿ ಸಮುದಾಯ ಭವನದಲ್ಲಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ನೀತಾ ಹರೀಶ್, ಚನ್ನಬಸವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ. ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್ಕುಮಾರ್ ಅವರು ಯೋಗದ ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು ಮತ್ತು ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮಡಿಕೇರಿ ಫೆ.21 : ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ ಕೇಂದ್ರಗಳನ್ನು ನಗರದ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ ಮತ್ತು ವಿರಾಜಪೇಟೆಯ ವಿಧಾನಸಭಾ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗುವವರೆಗೆ ಈ ಪ್ರಾತ್ಯಕ್ಷಿಕೆ ನಡೆಯಲಿದೆ. ಜೊತೆಗೆ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ 542 ಮತಗಟ್ಟೆ ವ್ಯಾಪ್ತಿಯಲ್ಲಿಯೂ ಸಹ ಜಾಗೃತಿ ಮೂಡಿಸಲಾಗುತ್ತದೆ. ವಿದ್ಯುನ್ಮಾನ ಮತಯಂತ್ರದ ಬಗ್ಗೆ ಪ್ರಾತ್ಯಕ್ಷಿಕೆ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಭಾರತ ಚುನಾವಣಾ ಆಯೋಗದಿಂದ ಕೊಡಗು ಜಿಲ್ಲೆಗೆ ತೆಲಂಗಾಣ ರಾಜ್ಯದ ಹೈದ್ರಾಬಾದ್ನ ಭಾರತೀಯ ವಿದ್ಯುನ್ಮಾನ ನಿಗಮದಿಂದ ವಿವಿಎಂ ಮತ್ತು ವಿವಿಪ್ಯಾಟ್ ಪೂರೈಕೆಯಾಗಿದ್ದು, ಅದರಲ್ಲಿ ಬ್ಯಾಲೆಟ್ ಯುನಿಟ್ 1013, ಕಂಟ್ರೋಲ್ ಯುನಿಟ್…
ಮಡಿಕೇರಿ ಫೆ.21 : ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಸಂವಿಧಾನದ 8 ನೇ ಶೆಡ್ಯೂಲ್ಗೆ ಕೊಡವ ಭಾಷೆಯನ್ನು ಸೇರಿಸಬೇಕು, ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು, ಆಕ್ಸ್ಫರ್ಡ್ ಡಿಕ್ಷನರಿಯಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸಬೇಕು ಸೇರಿದಂತೆ ಒಟ್ಟು 26 ಹಕ್ಕೊತ್ತಾಯಗಳನ್ನು ಮಂಡಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ವಿವಿಧ ಬೇಡಿಕೆಗಳ ಪರವಾದ ಘೋಷಣೆಗಳನ್ನು ಕೂಗಿದ ಪ್ರಮುಖರು ಒಂದು ಜನಾಂಗದ ಉಳಿವಿಗೆ ಭಾಷೆಯ ಬೆಳವಣಿಗೆಯೂ ಮುಖ್ಯ ಎಂದು ಅಭಿಪ್ರಾಯಪಟ್ಟರು. ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಕೊಡವರ ಮಾತೃಭಾಷೆ ಕೊಡವ ತಕ್ ಗೆ ಸಂವಿಧಾನದ ಭದ್ರತೆ ನೀಡಬೇಕು, ಕೊಡವ ಭಾಷೆಯನ್ನು ಅಧಿಕೃತವೆಂದು ಘೋಷಿಸಿ ಕೊಂಕಣಿ ಭಾಷೆಯ ಮಾದರಿಯಲ್ಲಿ ರಾಜ್ಯದ 3ನೇ ಆಡಳಿತ ಭಾಷೆಯನ್ನಾಗಿ ಮಾಡಬೇಕು. ಸಂವಿಧಾನದ 345, 350, 350 ಎ, 350 ಬಿ ವಿಧಿಯಡಿ 1ನೇ ತರಗತಿಯಿಂದಲೇ ಪಠ್ಯಕ್ರಮದಲ್ಲಿ ಕೊಡವ ತಕ್ ನ್ನು ಕಡ್ಡಾಯಗೊಳಿಸಬೇಕು. ವಿಶ್ವಸಂಸ್ಥೆಯ…
ವಿರಾಜಪೇಟೆ ಫೆ,21 : ಅಮ್ಮತ್ತಿ ಕಾರ್ಮಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಪಾಷಾಣಮೂರ್ತಿ ಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ಪಂಜುರ್ಲಿ ದೈವದ ಪ್ರತಿಷ್ಠಾಪನಾ ಕಾರ್ಯ ಶ್ರದ್ಧಾಭಕ್ತಿಯಿಂದ ಜರುಗಿತು. ಅಮ್ಮತ್ತಿಯ ಗುರುರಾಜ್ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ಗಣಪತಿ ಹೋಮ, ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾಪನೆ ಹಾಗೂ ಪ್ರತಿಷ್ಠಾಪನೆ ಹೋಮ, ಕಲಶ ಪೂಜೆ ಮಹಾಪೂಜೆ, ಶ್ರೀ ಸತ್ಯನಾರಾಯಣ ಸ್ವಾಮಿಯ ಪೂಜೆ, ಅಲಂಕಾರ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪಾರಾಧನೆ ನಂತರ ದೇವರ ಭಂಡಾರವನ್ನು ವಾದ್ಯಗೋಷ್ಠಿಯೊಂದಿಗೆ ತೆಗೆಯಲಾಯಿತು. ಬಳಿಕ ಧಾರ್ಮಿಕ ಪ್ರವಚನವು ನಡೆಯಿತು. ಅಮ್ಮತ್ತಿಯ ಉದ್ದಪಂಡ ಕರುಣ್ ಕುಟ್ಟಪ್ಪ ಪ್ರವಚನದ ಕುರಿತು ಮಾತನಾಡಿದರು. ರಾತ್ರಿ ಪರಿವಾರ ದೈವಗಳಾದ ಶ್ರೀ ಪಾಷಾಣಮೂರ್ತಿ, ಪಂಜುರ್ಲಿ, ಗುಳಿಗ ದೈವಗಳ ನೇಮೋತ್ಸವವು ಬೆಳಗ್ಗಿನವರೆಗೆ ನಡೆಯಿತು. ಶ್ರೀ ಚಾಮುಂಡೇಶ್ವರಿ ಮತ್ತು ಪಾಷಾಣಮೂರ್ತಿ ಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ದೀಪಗಳಿಂದ ಹಾಗೂ ಹೂವುಗಳಿಂದ ಅಲಂಕೃತಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸಮೃದ್ಧಿ ಎ.ವಿ ಪ್ರಾರ್ಥಿಸಿದರು. ಹರ್ಷಿತಾ ಲೋಕೇಶ್ ಸ್ವಾಗತಿಸಿ, ಗುರುರಾಜ್…






