ಲೇಖಕ: admin

ಮಡಿಕೇರಿ ಜ.11 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀನ ಬೋಧಕ ಆಸ್ಪತ್ರೆ ಮಡಿಕೇರಿಯಲ್ಲಿ ಸರ್ಕಾರಿ ಸ್ವಾಮ್ಯದ 4 ಡಯಾಲಿಸಿಸ್ ಉಪಕರಣಗಳು ಮತ್ತು ಖಾಸಗಿ ಸಹಭಾಗಿತ್ವದಲ್ಲಿ 7 ಉಪಕರಣಗಳು ಒಟ್ಟು 11 ಡಯಾಲಿಸಿಸ್ ಉಪಕರಣಗಳು ಕಾರ್ಯನಿರ್ವಹಿಸುತ್ತದೆ. ಅವುಗಳಲ್ಲಿ ಖಾಸಗಿ ಸಹಭಾಗಿತ್ವದ 4 ಉಪಕರಣಗಳು ದುರಸ್ತಿಯಾಗಿದ್ದು, ತುರ್ತು ರಿಪೇರಿ ಕ್ರಮವಹಿಸಲಾಗಿದೆ. ಅದಾಗ್ಯೂ ಒಟ್ಟು 7 ಉಪಕರಣಗಳಿಂದ ನಿರಂತರವಾಗಿ ಡಯಾಲಿಸಿಸ್ ಅನ್ನು ಸಾರ್ವಜನಿಕ ರೋಗಿಗಳಿಗೆ ಒದಗಿಸಲಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.11 : ಪ್ರಸಕ್ತ ಸಾಲಿನಲ್ಲಿ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‍ಸಿಗಳು ಹೀಗೆ ಎಲ್ಲರೂ ಶ್ರಮಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ‘ಎಸ್‍ಎಸ್‍ಎಲ್‍ಸಿ ಫಲಿತಾಂಶ ವಿಶ್ಲೇಷಣೆ ಮತ್ತು ಸುಧಾರಣೆ’ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಜೊತೆ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕೊಡಗು ಜಿಲ್ಲೆ 11ನೇ ಸ್ಥಾನ ಪಡೆದಿತ್ತು, ಈ ಬಾರಿ 3 ನೇ ಸ್ಥಾನದೊಳಗೆ ಫಲಿತಾಂಶ ಬರುವಂತೆ ಗುಣಮಟ್ಟದ ಕಲಿಕೆಗೆ ಎಲ್ಲರೂ ಶ್ರಮಿಸಬೇಕು ಎಂದರು. ‘ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೂ ಮೊದಲು ಜನವರಿ ಕೊನೆ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ…

Read More

ಮಡಿಕೇರಿ ಜ.11 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೂತನ ಸಂಘಟನಾ ಸಂಚಾಲಕರಾಗಿ ಭಾವ ಮಾಲ್ದಾರೆ, ಎಂ.ಮನೋಜ್ ಕುಮಾರ್, ರಘು ವಿರಾಜಪೇಟೆ, ರಫೀಕ್ ಪೊನ್ನಂಪೇಟೆ ಹಾಗೂ ಸದಸ್ಯರಾಗಿ ಕುಮಾರಸ್ವಾಮಿ ಕುಶಾಲನಗರ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ತಾಲ್ಲೂಕು ಸಂಚಾಲಕರಾಗಿ ಮನು ವಿರಾಜಪೇಟೆ, ಉಮೇಶ್ ಕುಶಾಲನಗರ, ಶ್ರೀನಿವಾಸ್ ಮಡಿಕೇರಿ, ಅರುಣ ಪೊನ್ನಂಪೇಟೆ ಹಾಗೂ ನಾಗರಾಜ್ ಸೋಮವಾರಪೇಟೆ ನೇಮಕಗೊಂಡಿದ್ದಾರೆ. ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾಗಿ ಪವಿತ್ರ ಶಿವಕುಮಾರ್, ಸಂಘಟನಾ ಸಂಚಾಲಕಿಯರಾಗಿ ಪದ್ಮಾವತಿ ಕುಶಾಲನಗರ, ನಾಗಮ್ಮ ಕೊಡ್ಲಿಪೇಟೆ, ಶಶಿಕಲಾ ಹಾಗೂ ಖಜಾಂಚಿಯಾಗಿ ಭಾಗ್ಯವತಿ, ತಾಲ್ಲೂಕು ಸಂಚಾಲಕರಾಗಿ ಗೌರಮ್ಮ ಜಯಣ್ಣ ಕುಶಾಲನಗರ, ರೇಖಾ ಮಹೇಶ್ ವಿರಾಜಪೇಟೆ, ನೇತ್ರಾವತಿ ಪೊನ್ನಂಪೇಟೆ ಹಾಗೂ ಹೆಚ್.ಹೆಚ್.ಗೌರಮ್ಮ ಮಡಿಕೇರಿ ಆಯ್ಕೆಯಾಗಿದ್ದಾರೆ. ::: ಸದಸ್ಯತ್ವ ನೋಂದಣಿ ::: ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರು ತಿತಿಮತಿ, ಕಾರೇಕಾಡು, ದೇವಮ್ಮಚ್ಚಿ ಪೈಸಾರಿಗೆ ಭೇಟಿ ನೀಡಿ ಸಮಿತಿಯ ಪ್ರಾಥಮಿಕ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಿದರು.…

Read More

ಮಡಿಕೇರಿ ಜ.11 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 33ನೇ ಮಕರ ಸಂಕ್ರಾಂತಿ ಮಹೋತ್ಸವ ಜ.14 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಸುಧೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ ಪ್ರಯುಕ್ತ ದೇವಾಲಯದಲ್ಲಿ ನಡೆಯಲಿರುವ ವಿವಿಧ ಪೂಜಾ ಕೈಂಕರ್ಯಗಳ ಕುರಿತು ಮಾಹಿತಿ ನೀಡಿದರು. ಜ.13 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ ಇತ್ಯಾದಿ ಸೇವೆಗಳು ನಡೆಯಲಿದೆ. ಜ.14 ರಂದು ಪ್ರಾತಃಕಾಲ 6.30ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಗಂಟೆಗೆ ಶ್ರೀ ಮುತ್ತಪ್ಪ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ ಜರುಗಲಿದ್ದು, ಬೆಳಿಗ್ಗೆ 7.30 ರಿಂದ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ನಡೆಯಲಿದೆ. ಬೆಳಿಗ್ಗೆ 8.30 ಗಂಟೆಗೆ ಶ್ರಿ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30…

Read More

ಮಡಿಕೇರಿ ಜ.15 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನದಲ್ಲಿ “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯ ಅನಾವರಣ ಕಾರ್ಯಕ್ರಮ ಜ.15 ರಂದು ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಮ್ಮ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ನಡೆಯವ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹಾಗೂ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಪಾಲ್ಗೊಳ್ಳಲಿದ್ದಾರೆ ಎಂದರು. ಸುಮಾರು 9 ಅಡಿ ಎತ್ತರದ “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಕೆತ್ತಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕಾರ್ಕಳದ ಗುಣವಂತೇಶ್ವರ ಭಟ್ ಉಪನ್ಯಾಸ ನೀಡಲಿದ್ದಾರೆ. ಸಂಘದ ರೈತ ಸದಸ್ಯರ 3 ರಿಂದ 9 ವರ್ಷದೊಳಗಿನ ಮಕ್ಕಳು ವಾಯುಪುತ್ರ ಮೂರ್ತಿಗೆ ಅಭಿಷೇಕ ಮಾಡಲಿದ್ದಾರೆ. ಮೂರ್ತಿಯನ್ನು ಶ್ರೀಕೃಷ್ಣ ಶಿಲೆಯಿಂದ ಕೆತ್ತಲಾಗಿದೆ ಎಂದು ತಿಳಿಸಿದರು. ಶಿಥಿಲಾವಸ್ಥೆಗೊಂಡಿದ್ದ ಈರಳೆವಳಮುಡಿ ಶಾಖೆಯ…

Read More

ಮಡಿಕೇರಿ ಜ.11 : ಕೊಡಗು ಆಮ್ ಆದ್ಮಿ ಪಕ್ಷದ ಸಭೆಯು ಜ.14 ರಂದು ಸೋಮವಾರಪೇಟೆಯಲ್ಲಿ ನಡೆಯಲಿದೆ ಎಂದು ಕೊಡಗು ಗ್ರಾಮ ಸಂಪರ್ಕ ಅಭಿಯಾನದ ಅಧ್ಯಕ್ಷ ಎಂ.ಕೆ.ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 10.30ಕ್ಕೆ ಸೋಮವಾರಪೇಟೆಯ ಐಬಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷಕ್ಕೆ ನೂತನ ಕಾರ್ಯಕರ್ತರು ಸೇರ್ಪಡೆಯಾಗಲಿದ್ದಾರೆ. ಪಕ್ಷಕ್ಕೆ ಸೇರಲು ಇಚ್ಛೆ ಇರುವ ಸಾರ್ವಜನಿಕರು ಆಗಮಿಸುವಂತೆ ತಿಳಿಸಿದರು. ವಿಧಾನ ಸಭಾ ಚುನಾವಣೆ ಸಮೀಪ ಇರುವುದರಿಂದ ಪಕ್ಷದ ಮುಖಂಡರು, ಹಿತೈಷಿಗಳು, ಬೆಂಬಲಿಗರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸುವಂತೆ ಅಯ್ಯಪ್ಪ ಮನವಿ ಮಾಡಿದರು.

Read More

ಮಡಿಕೇರಿ ಜ.10 : ಮೈಸೂರಿನ ನಾರಾಯಣ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಜ.13 ರಂದು ಮಡಿಕೇರಿ, ವಿರಾಪೇಟೆಯಲ್ಲಿ ಹಾಗೂ ಕುಶಾಲನಗರದಲ್ಲಿ ಲ್ಯಾಪರೋಸ್ಕೋಪಿಕ್ ಮತ್ತು ಜೀರ್ಣಾಂಗ ಕ್ಯಾನ್ಸರ್ ತಪಾಸಣೆ ಶಿಬಿರ ನಡೆಯಲಿದೆ. ಕುಶಾಲನಗರದ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆವರೆಗೆ, ಮಡಿಕೇರಿಯ ರವಿ ಆರ್ಥೋಪೆಡಿಕ್ ಸೆಂಟರ್‍ನಲ್ಲಿ 11.30 ರಿಂದ ಮಧ್ಯಾಹ್ನ 12.30ರ ವರೆಗೆ, ವಿರಾಜಪೇಟೆಯ ಮಗ್ಗುಲ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸೆಂಟರ್‍ನಲ್ಲಿ ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 2.30ರ ವರೆಗೆ ಲ್ಯಾಪರೋಸ್ಕೋಪಿಕ್ ಮತ್ತು ಗ್ಯಾಸ್ಟ್ರೋ ಆಂಕೋ ಶಸ್ತ್ರಚಿಕಿತ್ಸಕ ಡಾ.ಎಚ್.ಎಂ.ಲೋಕೇಶ್ ತಪಾಸಣೆ ನಡೆಸಲಿದ್ದಾರೆ. ಶಿಬಿರದಲ್ಲಿ ಲ್ಯಾಪರೋಸ್ಕೋಪಿಕ್ ಸರ್ಜರಿ, ಪಿತ್ತಕೋಶದ ಕಲ್ಲುಗಳು, ಹರ್ನಿಯಾ, ಅಪೆಂಡಿಸೈಟಿಸ್, ಜೀರ್ಣಾಂಗ ಕ್ಯಾನ್ಸರ್, ಗ್ಯಾಸ್ಟ್ರೈಟಿಸ್, ಹೊಟ್ಟೆ, ಕರುಳು, ಲಿವರ್ ಮತ್ತು ಪ್ಯಾಂಕ್ರಿಯಾಸ್ ಕಾಯಿಲೆಗಳು, ಬೊಜ್ಜುತನಕ್ಕೆ ಚಿಕಿತ್ಸೆ ನೀಡಲಾಗುವುದು. ನೋಂದಣಿಗಾಗಿ 8884458890, 9513408004, 8277468176 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜ.11 : ಚೆಟ್ಟಳ್ಳಿಯ ಬಟ್ಟೀರ ಕುಟುಂಬಸ್ಥರ ವತಿಯಿಂದ ಪ್ರಥಮ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಜ.29ರಂದು ನಡೆಯಲಿದೆ ಎಂದು ಕುಟುಂಬದ ಹಿರಿಯರಾದ ಬಟ್ಟೀರ.ಎಸ್.ಕಾಳಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಬೆಳಗ್ಗೆ 9.30 ಗಂಟೆಗೆ ಕೋವಿ ಪೂಜೆಯೊಂದಿಗೆ ಸ್ಪರ್ಧೆಗೆ ಚಾಲನೆ ದೊರೆಯಲಿದೆ ಎಂದರು. .22 ರೈಫಲ್(50 ಮೀ), 12 ಬೋರ್(30 ಮೀ) ಹಾಗೂ ಏರ್ ರೈಫಲ್(15 ಮೀ) ವಿಭಾಗದಲ್ಲಿ ಮುಕ್ತ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರತಿಯೊಬ್ಬರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ಆಕರ್ಷಕ ಟ್ರೋಫಿ ಮತ್ತು ನಗದು ನೀಡಿ ಗೌರವಿಸಲಾಗುವುದು. .22 ರೈಫಲ್, 12 ಬೋರ್ ಸ್ಪರ್ಧೆಯ ನೋಂದಣಿಗೆ ತಲಾ 200 ರೂ., ಹಾಗೂ ಏರ್ ರೈಫಲ್ 100 ರೂ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9480438001, 6361743747 ಸಂಖ್ಯೆಯನ್ನು ಸಂಪರ್ಕಿಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಟ್ಟೀರ ಕುಟುಂಬಸ್ಥರಾದ…

Read More

ಮಡಿಕೇರಿ ಜ.11 :  ಸೋಮವಾರಪೇಟೆಯ ಎಸ್ ಜೆ ಎಂ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳ ಚಟುವಟಿಕೆ ಗಮನಿಸಿ 150 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಶಾಲಾ ವತಿಯಿಂದ ಅಧ್ಯಕ್ಷ  ಸಿ ಕೆ. ರೋಹಿತ್  ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕೆ.ಎನ್. ತೇಜಸ್ವಿ, ಖಜಾಂಜಿ ಜಿ.ಟಿ.ಯೋಗೇಂದ್ರ, ಮಾಜಿ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ದಾನಿಗಳಾದ ಪವನ್ ಮುತ್ತಪ್ಪ, ಕೆ.ಎಂ.ಜಗದೀಶ್, ಎ.ಎಸ್ .ಮಹೇಶ್, ಎಸ್. ಬಿ.ಲೀಲಾರಾo, ವಸಂತ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಜ.11 : ಬೈತೂರಪ್ಪ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಉತ್ಸವ ಸಂದರ್ಭದಲ್ಲಿ ಕೇರಳದಿಂದ ಕಾಲ್ನಡಿಗೆಯಲ್ಲಿ ಆಗಮಿಸುವ “ಕೋರತಚ್ಛ” ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯಕ್ಕೆ ಆಗಮಿಸಿ ಹಬ್ಬದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನವರು ಕೋರತಚ್ಛ ತಂಡವನ್ನು ಆತ್ಮೀಯತೆಯಿಂದ ಬರಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಕೇರಳದ ಉಳಿಕಲ್ಲ್ ತಾಲ್ಲೂಕಿನ ಬಯತೂರ್ ಎಂಬ ಜಾಗದಲ್ಲಿ ವರ್ಷಂಪ್ರತಿ ಹಬ್ಬ ನಡೆಯಲಿದ್ದು, ಕೊಡಗಿನಲ್ಲಿ ಮೈಮೇಲೆ ಬರುವ ಬಹುತೇಕ ದೇವಾನುದೇವತೆಗಳು ಈ ಹಬ್ಬದಲ್ಲಿ ಭಾಗಿಯಾಗಿ ದರ್ಶನ ಪಡೆಯುತ್ತಾರೆ. ಇದರ ದೊಡ್ಡ ಹಬ್ಬ ಜ.24 ಹಾಗೂ 25ರಂದು ನಡೆಯುತ್ತದೆ. 25ರಂದು ಕೊಡಗಿನ ದೇವರುಗಳ ದರ್ಶನ ಕಾಣಸಿಗುತ್ತದೆ.

Read More