ಸುಂಟಿಕೊಪ್ಪ ಫೆ.21 : ಕಾಜೂರು ಹರಿಹರ ಯುವಕ ಸಂಘದ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಉತ್ಸವವನ್ನು ಕಾಫಿ ಬೆಳೆಗಾರರಾದ ಕಂಬೆಯಂಡ ಸೀತಾಲಕ್ಷ್ಮಿ ಅಪ್ಪಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿದರು. ಜಿ.ಪಂ ಮಾಜಿ ಅಧ್ಯಕ್ಷ ವಿ.ಎಂ.ವಿಜಯ ಮಾತನಾಡಿ, ಹರಿಹರ ಯುವಕ ಸಂಘದ ಕಟ್ಟಡಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಿ.ಕೆ.ಅವಿಲಾಷ್ ವಹಿಸಿದ್ದರು. ಗ್ರಾ.ಪಂ. ಸದಸ್ಯ ವಿನೋದ್, ಬೆಳೆಗಾರರಾದ ಕೆ.ಕೆ.ಅಯ್ಯಪ್ಪ, ಡಿ.ಡಿ.ಬೆಳ್ಯಪ್ಪ, ಎಸ್.ಎನ್.ಯೋಗೇಶ್, ಬಾರನ ಪ್ರಮೋದ್, ಸಂಘದ ಮಾಜಿ ಅಧ್ಯಕ್ಷ ಎಂ.ಕೆ.ತಮ್ಮಯ್ಯ, ಪ್ರಮುಖರಾದ ಗೋಪಾಲಕೃಷ್ಣ, ಬಿ.ಬಿ.ಭರತ್, ಎಂ.ಕೆ.ಶಿವರಾಂ, ಟಿ.ಆರ್.ವಿಜಯ, ಟಿ.ವಿ.ಶಶಿ, ಎಂ.ಕೆ.ಮೋಹನ ಹಾಗೂ ಪ್ರಮೋದ್ ಹಾಜರಿದ್ದರು. ಎಂ.ಕೆ.ಮೋಹನ್ ಕಾರ್ಯಕ್ರಮ ನಿರೂಪಿಸಿ, ಟಿ.ಆರ್.ವಿಜಯ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ಹಗ್ಗ ಜಗ್ಗಾಟ, ಕಣ್ಣುಕಟ್ಟಿ ಮಡಿಕೆ ಒಡೆಯುವುದು, ಹಿರಿಯ ನಾಗರಿಕರಿಗೆ ಬಾಂಬ್ ಇನ್ ದಿ ಸೀಟಿ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಿತು.
ಲೇಖಕ: admin
ಮಡಿಕೇರಿ ಫೆ.21 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಫೆ.25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಮಡಿಕೇರಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಮೈಸೂರು ಸುಯೋಗ್ ಆಸ್ಪತ್ರೆಯ ಹೃದಯ ತಜ್ಞರು, ಸ್ತ್ರೀರೋಗ ತಜ್ಞರು, ಫಿಜಿಷಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೊ ಪರೀಕ್ಷೆ, ಇಸಿಜಿ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆಗಳು ನಡೆಯಲಿವೆ. ಸಂಘದ ಸದಸ್ಯರು ಹಾಗೂ ಅವರ ಕುಟುಂಬದವರು ಮತ್ತು ಪತ್ರಕರ್ತರು ಶಿಬಿರದ ಸದುಪಯೋಗ ಪಟೆದುಕೊಳ್ಳುವಂತೆ ಕೊಡಗು ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿಗಳಾದ ಉಜ್ವಲ್ ರಂಜಿತ್ ತಿಳಿಸಿದ್ದಾರೆ.
ಮಡಿಕೇರಿ ಫೆ.21 : ಓಮ್ನಿ ವ್ಯಾನ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಪಾಲಿಬೆಟ್ಟ- ತಿತಿಮತಿ ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರ, ಹುಣಸೂರು ನಿವಾಸಿ ಕೆಂಪನಾಯಕ(35) ಎಂಬುವವರೇ ಮೃತ ದುರ್ದೈವಿ. ಎರಡು ವಾಹನಗಳು ಡಿಕ್ಕಿಯಾದ ರಭಸಕ್ಕೆ ಕೆಂಪನಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಫೆ.21 : ಕಿಕ್ ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಫೆ.13 ರಿಂದ 16 ರವರೆಗೆ ನಡೆದ ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಕೊಡಗಿನ ಎ.ಆಜ್ಞ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾಳೆ. ಕೂಡುಮಂಗಳೂರಿನ ಅಮಿತ್ ವಿಶ್ವನಾಥ್ ಹಾಗೂ ಎಂ.ವಿ.ದಿವ್ಯಾ ದಂಪತಿಯ ಪುತ್ರಿ ಆಜ್ಞ (7) ಅತ್ತೂರಿನ ಜ್ಞಾನಗಂಗಾ ಶಾಲೆಯ ವಿದ್ಯಾರ್ಥಿನಿ. 2021ರಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಮತ್ತು 2022 ರಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಳು. ಈಕೆ ಕೂರ್ಗ್ ಕಾಂಬ್ಯಾಟ್ ಕ್ಲಬ್ನಲ್ಲಿ ತರಬೇತಿ ಪಡೆದಿದ್ದು, 6ನೇ ವಯಸ್ಸಿನಿಂದಲೇ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾಳೆ. ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕವನ್ನು ಗೆಲ್ಲಬೇಕು ಮತ್ತು ಮಿಶ್ರ ಮಾರ್ಷಲ್ ಆಟ್ರ್ಸ್ನಲ್ಲಿ ವಿಶ್ವ ಚಾಂಪಿಯನ್ ಆಗಬೇಕು ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂಬ ಕನಸು ಹೊಂದಿದ್ದಾಳೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕೊಡಗಿನ ಮೊದಲ ಕಿರಿಯ ಬಾಲಕಿ ಎಂಬ…
ಮಡಿಕೇರಿ ಫೆ.21 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಜನಾಂಗ ಬಾಂಧವರ (ಅರಭಾಷಿಗ) ವಧು-ವರರ ಸಮಾವೇಶ ಮಾ.11 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ 9449476171, 9739495381 9449086589 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.
ಮಡಿಕೇರಿ ಫೆ.21 : ಕೊಡವಾಮೆರ ಕೊಂಡಾಟ ಸಂಘಟನೆ ನಡೆಸುವ ಕೊಡವ ಅಂತರ್ ಕುಟುಂಬಗಳ ನಡುವಿನ ಬಾಳೋಪಾಟ್ ರ ಬಂಬಂಗ ಪೈಪೋಟಿಯ ಎರಡನೇ ವರ್ಷದ ಸ್ಪರ್ಧೆಗೆ ಹೆಸರು ನೋಂದಾಯಿಸಲು ಸಂಘಟನೆಯು ಮನವಿ ಮಾಡಿದೆ. ಈಗಾಗಲೇ ಪ್ರಥಮ ವರ್ಷದ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿ ಎರಡನೆಯ ವರ್ಷದ ಸ್ಪರ್ಧೆಯ ತಯಾರಿಯಲ್ಲಿರುವ ಸಂಘಟನೆಯು, ಆಸಕ್ತ ಕುಟುಂಬಗಳು ಮಾ.10ರ ಒಳಗಾಗಿ ತಮ್ಮ ಕುಟುಂಬದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಏಪ್ರಿಲ್ 20ರ ಒಳಗಾಗಿ 20 ನಿಮಿಷಕ್ಕೆ ಮೀರದಂತೆ ಕಾವೇರಮ್ಮೆಯ ಪಾಟನ್ನು, ಒಂದೇ ಒಕ್ಕದ ನಾಲ್ವರು, ಒಂದೇ ಬಣ್ಣದ ಕುತ್ಯಾಚಾಲೆ ಮತ್ತು ದುಡಿಕೊಟ್ಟಿನೊಂದಿಗೆ ಹಾಡಿ, ವಿಡಿಯೋವನ್ನು ಸಂಚಾಲಕ ಕುಂಞಿರ ಗಿರೀಶ್ ಭೀಮಯ್ಯ -9483534481 ಸಂಖ್ಯೆಗೆ ಕಳುಹಿಸಬೇಕು. ವಿಜೇತ ಕುಟುಂಬಕ್ಕೆ ಪ್ರಥಮ 10,000 ನಗದು ಮತ್ತು ಟ್ರೋಫಿ, ದ್ವಿತೀಯ 8,000 ನಗದು ಮತ್ತು ಟ್ರೋಫಿ, ತೃತೀಯ 6,000 ನಗದು ಮತ್ತು ಟ್ರೋಫಿ ಹಾಗೂ ಇನ್ನಿತರ ವಿಶೇಷ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ ಬಹುಮಾನವನ್ನು, ಉದ್ಯಮಿ ಸರ್ಕಂಡ ದೊರೆಮಣಿ ಸೋಮಯ್ಯ, ದ್ವಿತೀಯ ಬಹುಮಾನವನ್ನು ಉದ್ಯಮಿ ಮಲ್ಲೇಂಗಡ…
ಮಡಿಕೇರಿ ಫೆ.21 : ಕರವೇ ಫ್ರಾನ್ಸಿಸ್ ಡಿಸೋಜ ಅವರಿಗೆ ಉತ್ತಮ ಸಮಾಜಸೇವೆಗಾಗಿ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮಂಜುಶ್ರೀ ಸಾಂಸ್ಕೃತಿಕ ಸೇವಾ ಟ್ರಸ್ಟ್ ನ 3ನೇ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಮಂಜು ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಂಜುಳಾ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಫೆ.21 : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದು 40 ಮಂದಿ ಗಾಯಗೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿಯ ಕಾವಾಡಿಯಲ್ಲಿ ನಡೆದಿದೆ. ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂ ನಿಂದ ಕೊಡಗಿನ ವಿರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಇಂದು ಮುಂಜಾನೆ 4.30 ಗಂಟೆಯ ಸುಮಾರಿನಲ್ಲಿ ಬಸ್ ಕಂದಕಕ್ಕೆ ಉರುಳಿದೆ. ಚಾಲಕ ಸೇರಿದಂತೆ 40 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ನ್ನು ಮೇಲೆತ್ತುವ ಕಾರ್ಯಾಚರಣೆ ಆರಂಭಗೊoಡಿದೆ.
ಮಡಿಕೇರಿ ಫೆ.21 : ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಕೊಡಗಿನವರಾದ ಡಾ.ತಂಬಂಡ ವಿಜಯ್ ಪೂಣಚ್ಚ ಅವರು ಇದೀಗ ವಿಶ್ವವಿದ್ಯಾನಿಲದ ಹಂಗಾಮಿ ಉಪಕುಲಪತಿಗಳಾಗಿ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಕುಲಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶದನ್ವಯ ವಿಶ್ವವಿದ್ಯಾನಿಲಯಗಳ ಸರಕಾರದ ಅಧೀನ ಕಾರ್ಯದರ್ಶಿ ಎನ್.ಶಿವಕುಮಾರ್ ಪ್ರಕರಣೆ ಹೊರಡಿಸಿದ್ದಾರೆ.
ವಿರಾಜಪೇಟೆ ಫೆ.21 : ಸರ್ಕಾರ ಕೊಡಗು ಜಿಲ್ಲೆಯ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಿದೆ. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಕೋವಿಡ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದೀಗ ಚೇತರಿಸಿಕೊಳ್ಳುತ್ತಿದೆ. ಪ್ರಮುಖ ಆರ್ಥಿಕ ವಹಿವಾಟುಗಳು ನಡೆಯುತ್ತಿದ್ದು ದೇಶ, ರಾಜ್ಯ ಮುಂಚೂಣಿಯತ್ತ ಸಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅಭಿಪ್ರಾಯಪಟ್ಟರು. ವಿಶೇಷ ಅನುದಾನದ ರೂ. 1 ಕೋಟಿ ಪ್ಯಾಕೇಜ್ನಡಿಯಲ್ಲಿ ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಕಾವಾಡಿಯಲ್ಲಿನ ಕುಟ್ಟಂಡ ಐನ್ ಮನೆ(ಬಲ್ತೇರಿ) ಗೆ ತೆರಳುವ ರಸ್ತೆಗೆ 23 ಲಕ್ಷ ವೆಚ್ಚದ ನೂತನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಲವೆ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳಿಯರು ಸಹಕಾರ ನೀಡಬೇಕು, ಪ್ರತಿಯೊಬ್ಬರಿಗು ಬದುಕಲು ಮನೆ ಅವಶ್ಯವಿದೆ, ಹಾಗೆ ವಿದ್ಯುತ್, ಕುಡಿಯುವ ನೀರು ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿ ಕೊಡುವುದಾಗಿ ತಿಳಿಸಿದರಲ್ಲದೆ 75 ವರ್ಷದಲ್ಲಿ 60 ವರ್ಷ ಕಾಂಗ್ರೇಸ್…






