ಮಡಿಕೇರಿ ಫೆ.20 : ರಾಜ್ಯ ಸರ್ಕಾರ ತನ್ನ ಬಜೆಟ್ನಲ್ಲಿ ‘ನೇರ ವೇತನ ಪಾವತಿ’ಯನ್ನು ಜಾರಿಗೊಳಿಸದೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ವಂಚಿಸಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈರಪ್ಪ ಶೆಟ್ಟಿ ಆರೋಪಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.22 ರಂದು ‘ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಘೋಷ ವಾಕ್ಯದೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವ್ಯಾಪಿ ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ 13 ಸಾವಿರಕ್ಕೂ ಹೆಚ್ಚಿನ ಮಂದಿ ನೀರ ಗಂಟಿಗಳಾಗಿ, ಡಾಟಾ ಆಪರೇಟರ್, ಸ್ವಚ್ಛತಾ ನೌಕರರಾಗಿ, ವಾಹನ ಚಾಲಕರಾಗಿ, ಬೀದಿ ದೀಪ ನಿರ್ವಾಹಕರು, ಗಾರ್ಡನರ್ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೇವಾಭದ್ರತೆ ಇಲ್ಲದೆ ಸಂಕಷ್ಟದಲ್ಲಿರುವ ಇವರಿಗೆ ನೇರ ಪಾವತಿಯ ಮೂಲಕ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ಈ ಹಿಂದೆ ಪ್ರಮುಖ ಬೇಡಿಕೆಗಳ…
ಲೇಖಕ: admin
ಮಡಿಕೇರಿ ಫೆ.20 : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಫೆ.28ರಂದು ನಗರದ ಪೊಲೀಸ್ ‘ಮೈತ್ರಿ ಭವನ’ದಲ್ಲಿ ನಡೆಯಲಿದೆಯೆಂದು ಸಂಘದ ಉಪಾಧ್ಯಕ್ಷರಾದ ಬಿ.ಆರ್. ಲಿಂಗಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಹಾಸಭೆ ಅಂದು ಬೆಳಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಎ.ಕೆ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಬಿ.ಕೆ.ಶಿವರಾಮ್, ರಾಜ್ಯ ಕಾರ್ಯದರ್ಶಿ ಕುಮಾರ್ ಎಸ್. ಕರ್ನಿಂಗ್, ಮೈಸೂರು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮರಿಸ್ವಾಮಿ, ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಗೌರವಾಧ್ಯಕ್ಷರಾದ ಎಂ.ಎ.ಅಪ್ಪಯ್ಯ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿಯನ್ನಿತ್ತರು. ಸನ್ಮಾನ-ಪ್ರತಿಭಾ ಪುರಸ್ಕಾರ- ಮಹಾಸಭೆಯಲ್ಲಿ ಸಂಘದ ಹಿರಿಯ 10 ಮಂದಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಮತ್ತು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ…
ಮಡಿಕೇರಿ ಫೆ.20 : ವಿಜಯ ಕರ್ನಾಟಕ ಮೈಸೂರು ಬ್ಯುರೋ ಸ್ಥಾನಿಕ ಸಂಪಾದಕ ಐತಿಚೆಂಡ ರಮೇಶ್ ಉತ್ತಪ್ಪ ಅವರ ಸಹೋದರ , ಮಾಜಿ ಯೋಧ ಐತಿಚಂಡ ತಿಮ್ಮಯ್ಯ (55) ಸೋಮವಾರ ನಿಧನರಾದರು. ಶ್ರೀಲಂಕಾದಲ್ಲಿ ಇಂಡಿಯನ್ ಪೀಸ್ ಕೀಪಿಂಗ್ ಫೋರ್ಸ್ನಲ್ಲಿ LTTE ವಿರುದ್ಧ ಹಾಗೂ ಅಮೃತಸರ ಆಪರೇಷನ್ ಬ್ಲೂಸ್ಟಾರ್ ನಲ್ಲಿ ತಿಮ್ಮಯ್ಯ ಭಾಗವಹಿಸಿದ್ದರು. ಸಿಯಾಚಿನ್ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದರು. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸ್ವಗ್ರಾಮ ಕರಡದಲ್ಲಿ ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
ಮಡಿಕೇರಿ,ಫೆ.20 ; ಮಾದಾಪುರ ಬಳಿಯ ಜಂಬೂರು ಬಾಣೆಯ ಆಶ್ರಯ ಕಾಲೋನಿಯ ಶ್ರೀ ಭಗತ್ ಸಿಂಗ್ ಯುವಕ ಸಂಘದ ೪ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಶ್ರಯ ಕಾಲೋನಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಈ ಪೈಕಿ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಗಳಿಸಿದೆ. ದ್ವಿತೀಯ ಸ್ಥಾನವನ್ನು ಮಡಿಕೇರಿಯ ನಾಟ್ಯಕಲಾ ತಂಡ ಹಾಗೂ ಸೋಮವಾರಪೇಟೆಯ ಅಡ್ವೆಂಚರ್ ಡಾನ್ಸ್ ಕಂಪೆನಿ ತಂಡಗಳು ಹಂಚಿಕೊಂಡವು. ಇದರೊಂದಿಗೆ 15 ವರ್ಷ ಮೇಲ್ಪಟ್ಟ ಸೋಲೋ ನೃತ್ಯ ವಿಭಾಗದಲ್ಲಿ ಕಿಂಗ್ಸ್ ಆಫ್ ಕೂರ್ಗ್ ವರ್ಷಿಣಿ ಶೆಟ್ಟಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾಳೆ. ಕಿಂಗ್ಸ್ ನೃತ್ಯ ತರಬೆತುದಾರರಾದ ಮಹೇಶ್ ಹಾಗೂ ಕಿರಣ್ ಅವರುಗಳ ಮಾರ್ಗದರ್ಶನದಲ್ಲಿ ಕಲಾವಿದರು ರಾಮಾಯಣದ ಸಿತಾಪಾಹರಣ, ರಾವಣ ಸಂಹಾರ ಹಾಗೂ ಶ್ರೀರಾಮನ ಪಟ್ಟಾಭಿಷೇಕ ನೃತ್ಯ ರೂಪಕವನ್ನು ಪ್ರಸ್ತುತಪಡಿಸಿದರು.
ಕರಿಕೆ ಫೆ.20 : ಕೊಡಗು ಜಿಲ್ಲೆಯ ಗಡಿ ಗ್ರಾಮ ಕರಿಕೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಗ್ರಾಮಸ್ಥರು ಬಸ್ ಸೌಲಭ್ಯ, ಮೂಲಭೂತ ಸೌಲಭ್ಯ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಗಮನ ಸೆಳೆದರು. ಗ್ರಾ.ಪಂ ಅಧ್ಯಕ್ಷರು, ಕಂದಾಯ ಇಲಾಖೆಯ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಆರೊಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದು, ಸಮಸ್ಯೆಗಳ ಕುರಿತು ಚರ್ಚಿಸಿದರು.
ವಿರಾಜಪೇಟೆ ಫೆ.20 : ಜೆಡಿಎಸ್ ಪಕ್ಷ ಅಧಿಕಾರದ ಅವಧಿಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಬಡ ಕಾರ್ಮಿಕ ಕುಟುಂಬಗಳಿಗೆ ಹಾಗೂ ರೈತರಿಗೆ ನೀಡಿದ ಕನಸಿನ ಯೋಜನೆಯ ಕೊಡುಗೆಯನ್ನು ರಾಜ್ಯದ ಜನರ ಮನೆ ಮನೆಗೆ ಕರಪತ್ರ ಹಂಚುವ ಕಾರ್ಯಕ್ಕೆ ಜೆಡಿಎಸ್ ಪಕ್ಷದ ಜಿಲ್ಲಾ ಉಸ್ತುವಾರಿ ರಾಜ್ಯ ಮಾದ್ಯಮ ವಕ್ತಾರ ನರಸಿಂಹ ಮೂರ್ತಿ ವಿರಾಜಪೇಟೆಯಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕುಮಾರಸ್ವಾಮಿ ಎರಡು ಬಾರಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ರಾಜ್ಯದ ಜನತೆಗೆ ನೀಡಿದ ಕೊಡುಗೆ ಗ್ರಾಮ ವಾಸ್ತವ್ಯ, ಜನತಾ ದರ್ಶನ, ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರತಿಯೊಬ್ಬ ಸಂತ್ರಸ್ತರಿಗೆ 10 ಲಕ್ಷ ವೆಚ್ಚದ ಸುಸಜ್ಜಿತ ವಸತಿ ಸೌಕರ್ಯ ಕಲ್ಪಿಸಲಾಗಿದ್ದು, ಮಕ್ಕಳ ಉತ್ತಮ ಶಿಕ್ಷಣ ಪಡೆಯಲು ಅವಕಾಶ ಹಾಗೂ ಉಚಿತ ಸೈಕಲ್ ವಿತರಣೆ ಮತ್ತು ಭಾಗ್ಯಲಕ್ಷ್ಮಿ ಯೋಜನೆ, ಬಡವರ ಬಂಧು ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು. ಕುಮಾರ ಸ್ವಾಮಿ ಅವರ ಪಂಚರತ್ನ ಯೋಜನೆ ಮನೆ ಮನೆಗೆ ತಲುಪಿಸುವಂತ…
ಮಡಿಕೇರಿ ಫೆ.20 : ನಗರದ ಬ್ರಹ್ಮಕುಮಾರಿ ಲೈಟ್ಹೌಸ್ನಲ್ಲಿ ಮಹಾಶಿವರಾತ್ರಿಯ ಅಂಗವಾಗಿ ವಿಶೇಷ ದ್ಯಾನ ಕಾರ್ಯಕ್ರಮ ನಡೆಯಿತು. ಲಾಮಕ್ಯಾಬ್ರ ದಿಂದ ಗುರೂಜಿ ಆಗಮಿಸಿ ವಿಶೇಷ ದ್ಯಾನದ ಮೂಲಕ ಹಾಗೂ ತಮ್ಮ ಭಕ್ತ ಸಮೂಹಕ್ಕೆ ಪರಮಾತ್ಮ ಶಿವನ ವಿಶೇಷ ಗುಣ ಗಾಯನ ಮಾಡಿದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಮ್ಮ ಪತ್ನಿ, ಮಗುವಿನೊಂದಿಗೆ ಆಗಮಿಸಿ ಜ್ಯೋತಿರ್ಲಿಂಗ ದರ್ಶನ ಪಡೆದರು. ನಂತರ ಮಾತನಾಡಿದ ಅವರು, ಸಮಾಜದ ಶಾಂತಿ ಸ್ಥಾಪನೆಯಲ್ಲಿ ಬ್ರಹ್ಮಕುಮಾರಿಯರ ಸೇವೆ ಶ್ಲಾಘನೀಯ ಎಂದರು. ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿಜೀ ಅವರು ಓಂ ಧ್ವನಿಯ ಮುಖಾಂತರ ನೆರೆದಿದ್ದ ಎಲ್ಲರಿಗೂ ಪರಮಾತ್ಮ ಶಿವನ ಅನುಭೂತಿ ಮಾಡಿಸಿದರು. ವಿಶೇಷ ಸಾಮೂಹಿಕ ಯೋಗದಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಸಾದ್ ವಿತರಿಸಲಾಯಿತು.
ನಾಪೋಕ್ಲು ಫೆ.20 : ಸ್ಥಳೀಯ ಗ್ರಾ.ಪಂ ವಾರ್ಷಿಕ ಹರಾಜು ಪ್ರಕ್ರಿಯೆಯಲ್ಲಿ ಹಲವು ವರ್ಷಗಳಿಂದ ಒಳಒಪ್ಪಂದ ಮಾಡಿಕೊಂಡು ಬೇನಾಮಿ ಹೆಸರಿನಲ್ಲಿ ಪಂಚಾಯಿತಿಯ ಕೆಲವು ಸದಸ್ಯರುಗಳು ಮೀನು ಮತ್ತು ಮಾಂಸ ಮಾರಾಟದ ಲೈಸೆನ್ಸ್ ಪಡೆದು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಗ್ರಾ.ಪಂ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಈ ಸಂದರ್ಭ ಮಾತನಾಡಿದ ಆರ್ಟಿಐ ಕಾರ್ಯಕರ್ತ ಕೆ.ಎ.ಹಾರಿಸ್ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 4 ವರ್ಷಗಳಿಂದ ಹಸಿಮೀನು ಮಾರಾಟ ಹಕ್ಕು ಎರಡು ಎಂದು ನಿಗದಿಪಡಿಸಿದ್ದು, ಈ ಹಕ್ಕನ್ನು ಇಬ್ಬರು ಗ್ರಾ.ಪಂ ಸದಸ್ಯರು ಒಳ ಒಪ್ಪಂದ ಮಾಡಿಕೊಂಡು ಬೇನಾಮಿ ಹೆಸರಿನಲ್ಲಿ ಪಟ್ಟಣದಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಕೋಳಿ, ಕುರಿ ಮಾಂಸ ವ್ಯಾಪಾರ ಕೂಡ ಪಟ್ಟಣದಲ್ಲೇ ಅಂಗಡಿಗಳನ್ನು ತೆರೆದು ಮಾರಾಟ ಮಾಡುತ್ತಿದ್ದು, ಇದರಿಂದ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಇದರ ದುರ್ವಾಸನೆಯಿಂದ ಪಟ್ಟಣದಲ್ಲಿ ನಡೆದಾಡಲು ತೊಂದರೆ ಉಂಟಾಗುತ್ತಿದೆ ಎಂದರು. ಕುರಿ ಕೋಳಿ,ಮಾಂಸ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಎಲ್ಲಾ ರೀತಿಯ…
ಚೆಯ್ಯಂಡಾಣೆ ಫೆ.20 : ಕರ್ನಾಟಕ ಬ್ಯಾಂಕ್ ಶಾಖೆಯು 99 ವರ್ಷ ಪೂರ್ಣ ಗೊಳಿಸಿ 100ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು. ಇದರ ಅಂಗವಾಗಿ ಬ್ಯಾಂಕ್ ನಲ್ಲಿ ಕಾರ್ಯಕ್ರಮ ಶತಮಾನೋತ್ಸವದ ಸಂಭ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಖೆಯ ವ್ಯವಸ್ಥಾಪಕ ಉಮೇಶ್, ಕರ್ನಾಟಕ ಬ್ಯಾಂಕ್ ನ ಶತಮಾನೋತ್ಸವದ ಕುರಿತು ಗ್ರಾಹಕರಿಗೆ ಮಾಹಿತಿ ನೀಡಿದರು. ಸ್ಥಳೀಯ ಗ್ರಾಹಕರಾದ ಎನ್.ಸಿ.ಗಣಪತಿ ಮಾತನಾಡಿ, ಕರ್ನಾಟಕ ಬ್ಯಾಂಕ್ ನ ಕಾರ್ಯವೈಖರಿಯ ಕುರಿತು ಶ್ಲಾಘಿಸಿದರು. ಶತಮಾನೋತ್ಸವ ಸಂಭ್ರಮಾಚರಣೆಗೆ ಶುಭ ಹಾರೈಸಿದರು. ಈ ಸಂದರ್ಭ ಪ್ರಾರ್ಥನೆಯನ್ನು ಮೀನಾಕ್ಷಿ ನಡೆಸಿದರು. ಬ್ಯಾಂಕ್ ಸಿಬ್ಬಂದಿಗಳು ಗ್ರಾಹಕರರು ಹಾಜರಿದ್ದರು. ವರದಿ : ಅಶ್ರಫ್
ನಾಪೋಕ್ಲು ಫೆ.20 : ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಜನಾಂಗದವರನ್ನು ಒಗ್ಗೂಗೂಡಿಸಿ ಕ್ರೀಡೆಗಳನ್ನು ಆಯೋಜಿಸುವುದರಿಂದ ಸಾಮರಸ್ಯದೊಂದಿಗೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಹೇಳಿದರು. ಸ್ಥಳೀಯ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಳೇ ತಾಲ್ಲೂಕುವಿನ ಅಲ್ ಅಮೀನ್ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಲಾದ 4ನೇ ವರ್ಷದ ಹಳೇ ತಾಲ್ಲೂಕು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಯಲ್ಲಿ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನುವ ಬೇಧ ಭಾವ ಕಾಣಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ವಿವಿಧ ಸಂಸ್ಥೆಗಳು ಹಲವಾರು ರೀತಿಯ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದೆ. ಅದಕ್ಕೆ ನಾವೆಲ್ಲರೂ ಎಲ್ಲಾ ರೀತಿಯಲ್ಲಿ ಸಹಕಾರ ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಕ್ರೀಡಾಪಟುಗಳು ಭವಿಷ್ಯದಲ್ಲಿ ಮುಂದೆ ಬರಲು ಸಾಧ್ಯ ಎಂದರು. ಕ್ರೀಡೆಗೆ ಪ್ರಸಿದ್ಧವಾದ ಕೊಡಗು ಜಿಲ್ಲೆಯಿಂದ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ,ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ಆದರೂ ನಮ್ಮ ಜಿಲ್ಲೆಯಲ್ಲಿ ಉತ್ತಮ ಕ್ರೀಡಾಂಗಣ, ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಮೈದಾನಗಳ…






