ಮಡಿಕೇರಿ ಜ.9 : ಮ್ಯಾನ್ಸ್ ಕಾಂಪೌಂಡ್ ಕ್ಲಬ್ (ಎಂಸಿಸಿ) ವತಿಯಿಂದ ಮ್ಯಾನ್ಸ್ ಕಾಂಪೌಂಡ್ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಗವತಿ (ಎ) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಭಗವತಿ (ಬಿ) ತಂಡ ರನ್ನರ್ಸ್ ಸ್ಥಾನ ಪಡೆದುಕೊಂಡಿತು. ಪೆನಾಲ್ಟಿ ಶೂಟೌಟ್ನಲ್ಲಿ ಭಗವತಿ (ಎ) ತಂಡ, ಭಗವತಿ (ಬಿ) ತಂಡದ ವಿರುದ್ಧ 3-2 ಗೋಲುಗಳ ಅಂತರದಿಂದ ಅಂತಿಮ ಪಂದ್ಯದಲ್ಲಿ ಜಯಸಾಧಿಸಿತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಗವತಿ (ಬಿ) ತಂಡ ಸುಪ್ರಿಂ ವಿರುದ್ಧ 4-7 ಗೋಲುಗಳ ಗೆಲುವು ಸಾಧಿಸಿತು. ಸೆಮಿಫೈನಲ್ನಲ್ಲಿ ಭಗವತಿ (ಎ) ಅಂಬೇಡ್ಕರ್ ಎಫ್ಸಿ ವಿರುದ್ಧ 4-1 ಗೋಲುಗಳಿಂದ ಜಯಗಳಿಸಿತು. ಭಗವತಿ (ಬಿ) ತಂಡ ಎಂಸಿಸಿ ವಿರುದ್ಧ 4-1 ಗೋಲುಗಳ ಜಯ ದಾಖಲಿಸಿತು. ಸೌಹಾರ್ದ ಪಂದ್ಯದಲ್ಲಿ ಪ್ರೆಸ್ ತಂಡ ಪೊಲೀಸ್ ತಂಡದ ವಿರುದ್ಧ 2-0 ಗೋಲುಗಳ ಗೆಲುವು ಸಾಧಿಸಿತು. ಎಂಸಿಸಿ ಲೆಜೆಂಡ್ಸ್ ಹಾಗೂ ಪ್ರೆಸ್ ತಂಡದ ನಡುವಿನ ಪಂದ್ಯದಲ್ಲಿ 2-2 ಸಮಗೋಲುಗಳಾದ್ದರಿಂದ ಪೆನಾಲ್ಟಿ ಶೂಟೌಟ್ನಲ್ಲಿ ಎಂಸಿಸಿ ಲೆಜೆಂಡ್ಸ್ ಪ್ರೆಸ್ ತಂಡದ…
ಲೇಖಕ: admin
ನಾಪೋಕ್ಲು ಜ.9 : ಶ್ರದ್ಧಾ ಕೇಂದ್ರಗಳು ಸುಸ್ಥಿತಿಯಲ್ಲಿದ್ದರೆ ನಾಡಿನಲ್ಲಿ ಸುಖ, ಶಾಂತಿ, ನೆಮ್ಮದಿ ಪ್ರಾಪ್ತಿಯಾಗಲು ಸಾಧ್ಯ ಎಂದು ಶ್ರೀ ಭಗವತಿ ದೇವಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಿವೃತ್ತ ಮುಖ್ಯ ಶಿಕ್ಷಕ ಕುಲ್ಲೇಟ್ಟಿರ ಗುರುವಪ್ಪ ಹೇಳಿದರು. ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಭಗವತಿ ದೇವಸ್ಥಾನ ಅಭಿವೃದ್ಧಿ ಸಮಿತಿಯ (ಫಂಡಿನ) ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರು. ದೇವಾಲಯಗಳ ಅಭಿವೃದ್ಧಿಗೆ ಪ್ರತಿಯೊಬ್ಬ ಭಕ್ತರು ತಮ್ಮ ಕೈಲಾದ ಸಹಕಾರವನ್ನು ನೀಡುವುದರ ಮೂಲಕ ದೇವರನ್ನು ಸ್ಮರಿಸುವಂತಾಗಬೇಕೆಂದರು. ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಕೆಲವೊಂದು ನಿರ್ಧಾರಗಳಿಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಯಿತು. ಈ ಸಂದರ್ಭ ಶ್ರೀ ಅಯ್ಯಪ್ಪ ದೇವಾಲಯದ ವಾರ್ಷಿಕ ಪೂಜೆ ಹಾಗೂ ಭ್ರಹ್ಮರಾಕ್ಷಸ ಗೆ ಹಾಲು ಪಾಯಸ ವಿಶೇಷ ಪೂಜಾ ವಿಧಿ ವಿಧಾನಗಳ ಸೇವೆ ನಡೆಯಿತು. ಮಹಾಸಭೆಯಲ್ಲಿ ಉಪಾಧ್ಯಕ್ಷ ಬೊಪ್ಪಂಡ ಕುಶಾಲಪ್ಪ, ತಕ್ಕರಾದ ನಾಟೋಳಂಡ ಸಚಿನ್, ತಿರೋಡಿರ ಲಕ್ಷ್ಮಣ, ಕೇಲೇಟ್ಟಿರ ಮುತ್ತಪ್ಪ, ಕುಲ್ಲೇಟ್ಟಿರ ಶಂಕರಿ ಹಾಗೂ ಸಮಿತಿ ಸದಸ್ಯರು, ಊರಿನ…
ಮಡಿಕೇರಿ ಜ.9 : ಕೊಡಗು ಜಿಲ್ಲೆಯಲ್ಲಿರುವ ದೈವ ಆರಾಧಕರು ಹಾಗೂ ದೈವ ನರ್ತಕರ ಸಭೆ ಜ.13 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಳುನಾಡಿನ ದೈವಾರಾಧನೆಯ ಬಹಳಷ್ಟು ದೈವ ಕ್ಷೇತ್ರಗಳಿವೆ. ದೈವ ಆರಾಧಕರು ಹಾಗೂ ದೈವ ನರ್ತಕರು ಕೂಡ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದೈವ ಮತ್ತು ದೈವಾರಾಧನೆಯನ್ನು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅವಮಾನಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲದೆ ಜಿಲ್ಲೆಯಲ್ಲಿರುವ ತುಳುನಾಡಿನ ದೈವ ಕ್ಷೇತ್ರಗಳ ಇತಿಹಾಸವನ್ನು ದಾಖಲೀಕರಣ ಮಾಡಿ ಪುಸ್ತಕದ ರೂಪದಲ್ಲಿ ಹೊರ ತರುವುದು, ದೈವಕೋಲ ಮತ್ತು ನೇಮೋತ್ಸವವನ್ನು ಕ್ರಮಬದ್ಧವಾಗಿ ನಡೆಸುವುದು, ದೈವಾರಾಧಕರು ಹಾಗೂ ದೈವ ನರ್ತಕರಿಗೆ ಸರಕಾರ ಘೋಷಿಸಿರುವ ಮಾಸಾಶನದ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡುವುದು, ದೈವಕ್ಷೇತ್ರಗಳ ಅಭಿವೃದ್ಧಿ ಕುರಿತು ಸರಕಾರಕ್ಕೆ ಮಾಹಿತಿ ಮತ್ತು ಮನವಿ ನೀಡುವುದು,…
ಮಡಿಕೇರಿ ಜ.9 : ಮಡಿಕೇರಿ ನಗರದ ಕೊಹಿನೂರು ರಸ್ತೆಯ ಬದಿಯಲ್ಲಿ ಬಾಡಿಗೆ ಲಾರಿಗಳನ್ನು ನಿಲ್ಲಿಸುತ್ತಿರುವುದರಿಂದ ಸಮೀಪದ ವ್ಯಾಪಾರಿಗಳಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಲಾರಿಗಳ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಸೂಚಿಸಬೇಕೆಂದು ಒತ್ತಾಯಿಸಿ ಸ್ಥಳೀಯ ವರ್ತಕರು ಹಾಗೂ ಹೊಟೇಲ್ ಉದ್ಯಮಿಗಳು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಜನನಿಬಿಡ ಪ್ರದೇಶವಾಗಿರುವ ಕೊಹಿನೂರು ರಸ್ತೆಯಲ್ಲಿ ಲಾರಿಗಳನ್ನು ನಿಲುಗಡೆಗೊಳಿಸುತ್ತಿರುವುದರಿಂದ ಇಲ್ಲಿನ ವಾಣಿಜ್ಯ ಮಳಿಗೆ, ಅಂಗಡಿ, ಹೊಟೇಲ್ ವ್ಯಾಪಾರಕ್ಕೆ ಅಡಚಣೆಯಾಗುತ್ತಿದೆ. ಪ್ರವಾಸಿಗರು ವಾಹನ ನಿಲುಗಡೆಗೆ ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ ಇಲ್ಲಿ ಸಾರ್ವಜನಿಕ ಶೌಚಾಲಯವೂ ಇದ್ದು, ಇದನ್ನು ಬಳಸಲು ಸಾರ್ವಜನಿಕರಿಗೆ ಅಡಚಣೆಯಾಗುತ್ತಿದೆ. ನಗರಸಭೆಯಿಂದ ಬಾಡಿಗೆ ವಾಹನಗಳ ನಿಲುಗಡೆಗೆ ನೂತನ ಖಾಸಗಿ ಬಸ್ ನಿಲ್ದಾಣದ ಸಮೀಪ ಸ್ಥಳ ಸೂಚಿಸಿ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಬಾಡಿಗೆ ಲಾರಿಗಳನ್ನು ಇಲ್ಲಿ ನಿಲುಗಡೆಗೊಳಿಸಲು ಸೂಚನೆ ನೀಡಬೇಕೆಂದು ವರ್ತಕರು ಮನವಿಯಲ್ಲಿ ತಿಳಿಸಿದ್ದಾರೆ. ಲಾರಿ ಮಾಲೀಕರು ಮತ್ತು ಚಾಲಕರ ಸಂಘ ಕೂಡ ಸಾರ್ವಜನಿಕರು ಹಾಗೂ ವರ್ತಕರ ಮನವಿಗೆ ಸ್ಪಂದಿಸಿ ನಿಲ್ದಾಣವನ್ನು ಸ್ಥಳಾಂತರಗೊಳಿಸಿ ಸಹಕರಿಸಬೇಕೆಂದು ವರ್ತಕರು ಕೋರಿಕೊಂಡಿದ್ದಾರೆ.…
ಸುಂಟಿಕೊಪ್ಪ,ಜ.8: ಮಾದಾಪುರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಟೇಟ್ ಆಫ್ ಇಂಡಿಯಾ ವತಿಯಿಂದ ಸಿ.ಎಸ್.ಆರ್. ಯೋಜನೆಯಡಿ ನೀಡಲಾದ ರೂ.4,45,000 ಲಕ್ಷದ ಸ್ಮಾರ್ಟ್ ಕ್ಲಾಸ್ ವಿಜ್ಞಾನ ಪ್ರಯೋಗಾಲಯವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಸರಕಾರಿ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ವಿಜ್ಞಾನ ಪ್ರಯೋಗಾಲಯ ಸಹಕಾರಿಯಾಗಲಿದ್ದು, ಅವರ ಭವಿಷ್ಯ ರೂಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಡುಗೆ ಅನನ್ಯವಾದದ್ದು. ವಿದ್ಯಾರ್ಥಿಗಳು ಇದನ್ನು ಸದುಪಯೋಗಿಸಿಕೊಂಡು ಉತ್ತಮ ಫಲಿತಾಂಶ, ಉನ್ನತ ಶಿಕ್ಷಣ ಪಡೆದು ಅರ್ಹ ಹುದ್ದೆ ಗಿಟ್ಟಿಸಿಕೊಂಡು ಪೋಷಕರಿಗೆ, ಸಮಾಜಕ್ಕೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು. ಎಸ್ಬಿಐ ಅವರು ನೀಡಿದ ದೇಣಿಗೆಯಲ್ಲಿ ಶಾಲೆಗೆ ಸುಣ್ಣ ಬಣ್ಣ ಬಳಿಯಲು ಬಳಸಲಾಗಿದೆ ಎಂದು ಮುಖ್ಯ ಶಿಕ್ಷಕಿ ಶೋಭಾ ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜೋಬಿ ಜೋಸ್, ಸದಸ್ಯರಾದ ಆರ್.ಎಂ.ವರಿಗಿಲಿ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲೆಯ ನೌಕಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ,…
ಮಡಿಕೇರಿ ಜ.9 : ಮಾನವ ಕಲ್ಯಾಣಕ್ಕಾಗಿ ಅನೇಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ, ‘ಲಜ್ಞಾ ಇಮಾಇಲ್ಲಾ’ ಎಂಬ ಹೆಸರಿನಿಂದ ಕರೆಯಲ್ಪಡುವ ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಮಹಿಳಾ ಘಟಕ 100 ವರ್ಷ ಪೂರ್ಣಗೊಂಡು ಶತಾಮನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ ಮಕ್ಕಳಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. “ಲಜ್ನಾ ಇಮಾಇಲ್ಲಾ’ ಅಧ್ಯಕ್ಷೆ ರೂಮಾನ್ ರಿಜ್ವಾನ್ ನೇತೃತ್ವದಲ್ಲಿ ಕಾಟಕೇರಿಯ ಹರ್ಮಂದಿರ್ ಗುರುಕುಲ ಮಾದರಿ ಶಾಲೆಯ ವಿದ್ಯಾರ್ಥಿಗಳಿಗೆ ಮಡಿಕೇರಿಯ ಸರಕಾರಿ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ಶಿಬಿರ ನಡೆಯಿತು. 5 ವರ್ಷದಿಂದ 10 ವರ್ಷದೊಳಗಿನ 77 ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಯಿತು. ತೊಂದರೆ ಇದ್ದ ಮಕ್ಕಳಿಗೆ ಬೇಕಾದ ಔಷಧಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್, ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪುರುಶೋತ್ತಮ್, ಡಾ.ಅಪರ್ಣ ದತ್, ಡಾ.ಸುನಿತ, ಡಾ.ಆಶ್ಚರ್ಯ ಆರ್.ಪಾಟಿಲ್, ಡಾ.ಆಶ್ಚರ್ಯ ರಾಮಾನುಜನ್, ಡಾ.ಗಿರೀಶ್ ಬಿ.ಎಸ್, ಡಾ.ಅಫ್ರೀನ್, ಡಾ.ಮೆಲ್ವಿನ್, ಡಾ.ರವಿಚಂದ್ರನ್, ಡಾ.ನಳಿನಿ, ಶುಶ್ರೂಶಕ ಅಧಿಕಾರಿಗಳಾದ, ಡಿ.ಹೆಚ್. ಹರಿಣಾಕ್ಷಿ , ಎ.ನಳಿನಿ ಭಾಯಿ, ಎನ್.ಬಿ.ಭಾಗ್ಯಲಕ್ಷ್ಮಿ ಹಾಗೂ ಲ್ಯಾಬ್…
ಸುಂಟಿಕೊಪ್ಪ,ಜ.9 : ಕಾಜೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಜ್ಯೋತಿ ಪ್ರಯುಕ್ತ ಏ.14 ರಂದು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಜ.14 ರಂದು ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ ಮತ್ತು ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 6 ಗಂಟೆಯಿಂದ ದೇವಾಲಯದಲ್ಲಿ ದೀಪ ಬೆಳಗಿಸಿ ನಂತರ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತಾಧಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸುಂಟಿಕೊಪ್ಪ,ಜ.9 : ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಮಾಹಿತಿ ಹಾಗೂ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಬಿ.ಎಸ್.ಶಿಲಾ ರೈ ಮಾತನಾಡಿ, ಗರ್ಭಿಣಿಯರು ಟಿ.ಡಿ.ಚುಚ್ಚುಮದ್ದು ತೆಗೆದುಕೊಳ್ಳಬೇಕು. 0.ಯಿಂದ 1 ವರ್ಷ ಮಗುವಿಗೆ ಬಿಸಿಜಿ ಯಿಂದ ಎಂ.ಆರ್. 2 ಮದ್ದು ಗಳನ್ನು ನೀಡಬೇಕು. ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಒಂದು ಅಂತರವಿರಬೇಕು ಎಂದು ಹೇಳಿದರು. ಆರೋಗ್ಯ ಕಾರ್ಯಕರ್ತೆ, ಕಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆ ಕೆ.ಸಿ.ಲತಾ, ಆಶಾ, ಕಾರ್ಯರ್ತೆ ಜ್ಯೋತಿ ಭಾಸ್ಕರ ದಿನದ ಮಹತ್ವದ ಕುರಿತು ಮಾತನಾಡಿದರು. ಕೊಡಗರಹಳ್ಳಿ ಗ್ರಾ.ಪಂ.ಸದಸ್ಯ ಚೆನ್ನಬಸವಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರೋಗ್ಯವಂತ ಮಕ್ಕಳನ್ನು ಗುರುತಿಸಿ ಬಹುಮಾನವನ್ನು ವಿತರಿಸಿದರು. ಸಮುದಾಯ ಆರೋಗ್ಯ ಅಧಿಕಾರಿ ಟೆಸ್ನಿ ಥೋಮಸ್, ಆಶಾ ಕಾರ್ಯಕರ್ತರಾದ ಕವಿತಾ, ಗೀತ, ಅಂಗನವಾಡಿ ಸಹಾಯಕಿ ಸಂಧ್ಯಾ, ಕೊಡಗರಹಳ್ಳಿ ಸರಕಾರಿ ಮಾದರಿ ಪ್ರಾಥಮಿ ಶಾಲೆಯ ಮುಖ್ಯೋಪಾದ್ಯಾಯನಿ ಭಾಗೀರಥಿ, ಉಪ್ಪುತೋಡು ಅಂಗನವಾಡಿ ಕಾರ್ಯಕರ್ತೆ ಮಹದೇವಮ್ಮ ಸ್ವಾಗತಿಸಿ, ಕೊಡಗರಹಳ್ಳಿ ಅಂಗನವಾಡಿ ಕಾರ್ಯಕರ್ತೆ ಎಸ್.ಎನ್.ಸಾವಿತ್ರಿ ನಿರೂಪಿಸಿ, ವಂದಿಸಿದರು.
ಮಡಿಕೇರಿ ಜ.9 : ಹೃದಯಾಘಾತದಿಂದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕುಶಾಲನಗರದ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮಂಜಾಚಾರಿ ಎಂಬುವವರ ಪುತ್ರ ಕೊಪ್ಪದ ಭಾರತಮಾತಾ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕೀರ್ತನ್ (12) ಮೃತ ದುರ್ದೈವಿ. ಈತನ ತಂದೆ ಇದೇ ಶಾಲೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶನಿವಾರ ರಾತ್ರಿ ನಿದ್ರಿಸುತ್ತಿದ್ದ ಕೀರ್ತನ್ ಎರಡು ಬಾರಿ ಕಿರುಚಿಕೊಂಡಿದ್ದು, ಪೋಷಕರು ಕುಶಾಲನಗರ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದಿಗ್ಭ್ರಮೆ ಮೂಡಿದೆ.
ಮಡಿಕೇರಿ ಜ.9 : ಮೂರ್ನಾಡು ಸಮೀಪದ ಮುತ್ತಾರ್ಮುಡಿ ಗ್ರಾಮದಲ್ಲಿರುವ ಸಂರಕ್ಷಿತ ಭದ್ರಕಾಳಿ ದೇವರ ಕಾಡಿಗೆ ಅಕ್ರಮ ಪ್ರವೇಶ ಮಾಡಿ 2 ಹೆಣ್ಣು ಕಾಡು ಕುರಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಕಾಫಿ ಕೆಲಸಕ್ಕಾಗಿ ಮುತ್ತಾರ್ಮುಡಿಗೆ ಬಂದಿರುವ ತಮಿಳುನಾಡಿನ ಸೇಲಂ ಜಿಲ್ಲೆ ಅತ್ತೂರು ನಿವಾಸಿಗಳಾದ ಜಯರಾಮ್, ಮಥಾಯಂ, ಅಶೋಕ್ ಹಾಗೂ ಮುತ್ತಾರ್ಮುಡಿ ಗ್ರಾಮದ ನಿವಾಸಿ ತಮ್ಮಯ್ಯ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ರಾತ್ರಿ ಮಡಿಕೇರಿ ವಲಯಕ್ಕೆ ಸೇರಿದ ಮುತ್ತಾರ್ಮುಡಿ ಗ್ರಾಮದ ಭದ್ರಕಾಳಿ ದೇವರ ಕಾಡಿಗೆ ತಂಡವೊಂದು ಬೇಟೆಗೆ ತೆರಳಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಡಿಕೇರಿ ವಿಭಾಗದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮೂವರು ಬೇಟೆಗಾರರನ್ನು ಬಂಧಿಸಿದರು. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ ಸಂದರ್ಭ ಅಲ್ಲಿನ ನಿವಾಸಿ ತಮ್ಮಯ್ಯ ಎಂಬುವವರ ಬಂದೂಕು ಬಳಸಿ 2 ಹೆಣ್ಣು ಕಾಡುಕುರಿಗಳನ್ನು ಬೇಟೆಯಾಡಿರುವುದಾಗಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ…






