ಮಡಿಕೇರಿ ಜ.7 : ಆರೋಗ್ಯ ಇಲಾಖೆಯ ನೌಕರನೊಬ್ಬ ಶಾಲಾ ವಿದ್ಯಾರ್ಥಿಗಳಿಗೆ ಮತಪ್ರಚಾರದ ಪುಸ್ತಕಗಳನ್ನು ಹಂಚಿ ಮತಾಂತರ ಯತ್ನ ಮಾಡುತ್ತಿದ್ದ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ನೀಡಿದ ದೂರಿನನ್ವಯ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆಯ ಪ್ರಮುಖ ಟಿ.ಎ.ಕುಮಾರ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನಿಶಾಂತ್ ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಈತನ ಬಳಿ ಕ್ರೈಸ್ತ ಮತಕ್ಕೆ ಸಂಬಂಧಿಸಿದ ಪುಸ್ತಕಗಳು ದೊರಕಿವೆ. ನಗರದ ಹೃದಯ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಂಚುತ್ತಿದ್ದ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.
ಲೇಖಕ: admin
ಮಡಿಕೇರಿ ಜ.7 : ಸರ್ಕಾರ ಕ್ರಷರ್ ಮತ್ತು ಕಲ್ಲುಕೋರೆ ಮಾಲೀಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆ ಶನಿವಾರದಿಂದ ಜಿಲ್ಲೆಯ ಎಲ್ಲಾ ಕ್ವಾರಿ ಮತ್ತು ಕ್ರಷರ್ಗಳು ಚಾಲನೆಯಲ್ಲಿರುತ್ತದೆ ಎಂದು ಕೊಡಗು ಜಿಲ್ಲಾ ಕ್ವಾರಿ ಅಂಡ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ವಿ.ಎಮ್.ವಿಜಯ್ ಹಾಗೂ ಕಾರ್ಯದರ್ಶಿ ಬಿ.ಕೆ. ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ವಾರಿ ಮತ್ತು ಕ್ರಷರ್ ಮಾಲೀಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೇಟ್ ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಅಸೋಸಿಯೇಷನ್ ವತಿಯಿಂದ ರಾಜ್ಯದಲ್ಲಿರುವ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳಲ್ಲಿ ಯಾವುದೇ ಪ್ರೊಡಕ್ಷನ್ ಮತ್ತು ಸೇಲ್ಸ್ ಮಾಡದಂತೆ ಬಂದ್ ಮಾಡಿ ಮುಷ್ಕರ ನಡೆಸಲಾಗಿದ್ದು, ಅದರಂತೆ ಕೊಡಗಿನ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳನ್ನು ಸುಮಾರು 17 ದಿನಗಳವರೆಗೆ ಬಂದ್ ಮಾಡಿ ಮುಷ್ಕರ ನಡೆಸಲಾಗಿತ್ತು. ಆದರೆ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿರುವ ಹಿನ್ನೆಲೆ ಇಂದಿನಿAದ ಜಿಲ್ಲೆಯ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳು ಚಾಲನೆಯಲ್ಲಿರಲಿದ್ದು, ಮುಷ್ಕರಕ್ಕೆ…
ಸೋಮವಾರಪೇಟೆ ಜ.7 : ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆಯ ನೂತನ ಸಾಲಿನ ಅಧ್ಯಕ್ಷರಾಗಿ ಪೂರ್ಣಿಮಾ ಗೋಪಾಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಶಾ ಯೊಗೇಂದ್ರ ಆಯ್ಕೆಯಾದರು. ಒಕ್ಕಲಿಗರ ಸಮುದಾಯ ಭವನದಲ್ಲಿ ಇತ್ತೀಚೆಗೆ ಅಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಉಪಾಧ್ಯಕ್ಷರಾಗಿ ಹರಿಣಿ ಕುಶಾಲಪ್ಪ, ಖಜಾಂಚಿಯಾಗಿ ತನ್ಮಯಿ ಪ್ರವೀಣ್, ಭಾತ್ಮೀದಾರರಾಗಿ ಚಂದ್ರಿಕಾ ಕುಮಾರ್ ಆಯ್ಕೆಯಾದರು.
ಸೋಮವಾರಪೇಟೆ ಜ.7 : ಮೀಸಲು ಅರಣ್ಯದ ಸರಹದ್ದಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ರೈಲ್ವೆ ಬ್ಯಾರಿಕೇಡ್ ಅವೈಜ್ಞಾನಿಕವಾಗಿದ್ದು, ಕಾಡಾನೆಗಳು ಬ್ಯಾರಿಕೇಡ್ನಲ್ಲಿ ನುಸುಳಿ ಬರುತ್ತಿವೆ ಎಂದು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಆರೋಪಿಸಿದರು. ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆ.ಡಿಪಿ.ಸಭೆಯಲ್ಲಿ ಅವರು ಅರೋಪ ಮಾಡಿದರು. ಎ.ಸಿ.ರೂಂ ನಲ್ಲಿ ಕುಳಿತ ಅಧಿಕಾರಿಗಳು ಯೋಜನೆ ರೂಪಿಸುತ್ತಾರೆ. ಅಂತಹವರ ಅಸಡ್ಡೆಯಿಂದ ಸರ್ಕಾರದ ಕೋಟ್ಯಾಂತರ ರೂ. ಹಣ ಪೋಲಾಗುತ್ತದೆ ಎಂದ ಅವರು ಎರಡು ಪಟ್ಟಿಯ ರೈಲ್ವೆ ಬ್ಯಾರಿಕೇಡ್ ನಿರ್ಮಿಸುತ್ತಿದ್ದಾರೆ. ಈಗ ಕಾಡಾನೆಗಳು ಪಟ್ಟಿಯೊಳಗೆ ನುಗ್ಗಿ ಕೃಷಿ ಭೂಮಿಗೆ ಲಗ್ಗೆಯಿಡುತ್ತಿವೆ. ಇನ್ನಾದರೂ ಮೂರು ಪಟ್ಟಿಗಳನ್ನು ಅಳವಡಿಸುವಂತೆ ಆಗ್ರಹಿಸಿದರು. ಸರ್ಕಾರದಿಂದ ಅನುಮೋದನೆಗೊಂಡ ಯೋಜನೆಯಾಗಿದ್ದು, ಈಗ ಬದಲಾಯಿಸಲು ಸಾಧ್ಯವಿಲ್ಲ. ಕಾಮಗಾರಿ ನಂತರ ಮತ್ತೊಂದು ಪಟ್ಟಿ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸಿಎಫ್ ಗೋಪಾಲ್ ಹೇಳಿದರು. ಶಾಸಕರು ಮಾತನಾಡಿ, ರಾಜ್ಯದಲ್ಲಿ ಅತಿ ಕಡಿಮೆ ವಿದ್ಯುತ್ ಬಳಸುವ ಬಳಕೆದಾರರೆಂದರೆ ಕಾಫಿ ಬೆಳೆಗಾರರು. ಅವರ 10 ಎಚ್.ಪಿ.…
ಗೋಣಿಕೊಪ್ಪ ಜ.7 : ಕೊಡಗು ಪ್ರೆಸ್ ಕ್ಲಬ್, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗೋಣಿಕೊಪ್ಪ ಕಾಲ್ಸ್ ಸಹಯೋಗದಲ್ಲಿ ಕಾಲ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳ್ಳಿ ಮಹೋತ್ಸವ ಲಾಂಛನ ಅನಾವರಣ, ಚಿತ್ರಕಲೆಯೊಂದಿಗೆ ಪ್ರಾರ್ಥನೆ, ಅತಿಥಿಗಳಿಂದ ಚಿತ್ರಕಲೆ ಚಿತ್ತಾರ ಪ್ರಸ್ತುತ ಪಡಿಸಲಾಯಿತು. ಜಿಲ್ಲೆಯ ವಿವಿಧ ಭಾಗಗಳಿಂದ 317 ಸ್ಪರ್ಧಿಗಳು ಭಾಗವಹಿಸಿ ಕಲೆಯ ಮೂಲಕ ಸಂದೇಶ ಸಾರಿದರು. ಪ್ರಕೃತಿ, ಕೊಡಗಿನ ಇತಿಹಾಸ, ಕಾವೇರಿ ಐತಿಹ್ಯ ಕಲೆಯ ಮೂಲಕ ಹೊರ ಹೊಮ್ಮಿತು. ಪುತ್ತಾಮನೆ ವಿದ್ಯಾ ಜಗದೀಶ್ ಪ್ರಕೃತಿ ಹಾಡಿಗೆ ಕಲಾವಿದ ಬಿ. ಆರ್. ಸತೀಶ್ ಚಿತ್ರ ಬಿಡಿಸಿ ಪ್ರಾರ್ಥನೆ ಕಾರ್ಯಕ್ರಮವನ್ನು ವಿಶೇಷವಾಗಿ ನಡೆಸಿಕೊಟ್ಟರು. ಉದ್ಘಾಟನೆ : ಅಂತಾರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಭಾವನೆಗಳನ್ನು ಅಲೆಯಾಗಿ ಬಡಿಯದಂತೆ ನಿಯಂತ್ರಿಸುವ ಸಾಮರ್ಥ್ಯ ಮುಖ್ಯ. ಜೀವನದಲ್ಲಿ ಶಿಸ್ತು ಹೆಚ್ಚು ಸಾಧಿಸಲು ಸಹಕಾರಿಯಾಗುತ್ತದೆ. ಗುರು ಗೌರವ ಕಾಪಾಡಿಕೊಳ್ಳಬೇಕು ಎಂದರು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ…
ಕುಶಾಲನಗರ, ಜ.7: ಜಲಮೂಲಗಳು ಕಲುಷಿತಗೊಳ್ಳದಂತೆ ಪ್ರತಿಯೊಬ್ಬರೂ ಜಾಗೃತಿ ವಹಿಸುವ ಮೂಲಕ ಸ್ವಚ್ಚ ಕಾವೇರಿ ಕನಸು ನನಸಾಗಲು ಸಾಧ್ಯ ಎಂದು ಶ್ರೀ ಮುತ್ತಪ್ಪ ದೇವಾಲಯ ಸೇವಾ ಟ್ರಸ್ಟ್ ಉಪಾಧ್ಯಕ್ಷ ಆರ್.ಚಂದ್ರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಶ್ರೀ ಮುತ್ತಪ್ಪ ದೇವಾಲಯ ಟ್ರಸ್ಟ್ ಸಹಯೋಗದೊಂದಿಗೆ ನಡೆದ 140ನೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅವೈಜ್ಞಾನಿಕ ಅಭಿವೃದ್ಧಿ ನಡುವೆ ನದಿ ನೀರು ತನ್ನ ಗುಣಮಟ್ಟ ಕಳೆದುಕೊಳ್ಳುತ್ತಿದ್ದು, ನೇರವಾಗಿ ಬಳಕೆ ಮಾಡಲು ಸಾಧ್ಯವಾಗದಿರುವುದುಆತಂಕಕಾರಿ ಬೆಳವಣಿಗೆಯಾಗಿದೆ ಎಂದ ಅವರು, ಆರತಿ ಬಳಗದ ಮೂಲಕ ಸ್ವಚ್ಚ ಕಾವೇರಿಗಾಗಿ ನಡೆಯುತ್ತಿರುವ ನಿರಂತರ ಕಾರ್ಯಕ್ರಮದ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಹೆಚ್.ಎನ್ ಮುರುಳಿಧರ್ ಅವರು, ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಸಂಘಟನೆಗಳು ಸ್ವಚ್ಚಕಾವೇರಿ ಹೋರಾಟಕ್ಕೆ ಕೈಜೋಡಿಸಬೇಕು ಎಂದರು. ತಮ್ಮ ಸಂಘಟನೆ ಮುಂದಿನ ದಿನಗಳಲ್ಲಿ ಬಳಗದ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಅರ್ಚಕರಾದ ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ಅರ್ಚನೆ ಅಷ್ಟೋತ್ತರ…
ಕುಶಾಲನಗರ, ಜ.7: ಬಿಜೆಪಿ ಪಕ್ಷದ ಬೂತ್ ವಿಜಯ ಅಭಿಯಾನ ಸೋಮವಾರಪೇಟೆ ಮಂಡಲ ಗುಡ್ಡೆಹೊಸೂರು ಶಕ್ತಿ ಕೇಂದ್ರದ ಅತ್ತೂರಿನ ಬೂತ್ಸಂಖ್ಯೆ 178 ರಲ್ಲಿ ನಡೆಯಿತು. ಬೂತ್ ಅಧ್ಯಕ್ಷ ಜಯಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿಯಾನವನ್ನು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ನಿರಂತರ ಶ್ರಮವಹಿಸಬೇಕು ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾಬಿನ್ ದೇವಯ್ಯ ಮಾತನಾಡಿ, ಬೂತ್ ವಿಜಯ ಅಭಿಯಾನದ ಉದ್ದೇಶದ ಬಗ್ಗೆ ಮಾಹಿತಿ ಒದಗಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಪ್ರಾಸ್ತಾವಿಕ ನುಡಿಗಳಾಡಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ.ಲೋಕೇಶ್, ಕಾರ್ಯದರ್ಶಿ ಪುಷ್ಪಾ ನಾಗೇಶ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ಕುಂದರ್, ಮಂಡಲ ಒಬಿಸಿ ಮೋರ್ಚಾ ಖಜಾಂಚಿ ಅಭಿಷೇಕ್ , ಶಕ್ತಿ…
ಮಡಿಕೇರಿ ಜ.7 : ತಮಿಳು ಯೂತ್ ಫೆಡರೇಶನ್ ಕೊಡಗು ಘಟಕದಿಂದ ತಮಿಳು ಸಮುದಾಯ ಬಾಂಧವರಿಗಾಗಿ ಫೆ.18 ಮತ್ತು 19ರಂದು ಜಿಲ್ಲಾ ಮಟ್ಟದ 6ನೇ ವರ್ಷದ ಕಾವೇರಿ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ. ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು, ಫೆ.18ರಂದು ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದೆ. ಫೆ.19ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಉಚಿತ ಆರೋಗ್ಯ ತಪಾಸಣೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ, ಯುವಕರಿಗೆ, ಯುವತಿಯರಿಗೆ, ಮಹಿಳೆಯರಿಗೆ ಹಾಗೂ ವೃದ್ಧರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಪುಟಾಣಿ ಮಕ್ಕಳ ಹಗ್ಗಜಗ್ಗಾಟ ಸ್ಪರ್ಧೆ ಜರುಗಲಿದ್ದು, ಮಧ್ಯಾಹ್ನದ ನಂತರ ಸಾಂಸ್ಕೃತಿಕ ಉದ್ಘಾಟನೆಗೊಳ್ಳಲಿದ್ದು, ಸಾಂಸ್ಕೃತಿಕ ನೃತ್ಯ ಸ್ಪರ್ಧೆ, ಗೀತಗಾಯನ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ಗಮನ ಸೆಳೆಯಲಿದೆ. ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದಿರುವ ಸಮುದಾಯ ಬಾಂಧವರನ್ನು ಸನ್ಮಾನಿಸಲಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ.70 ಕ್ಕಿಂತ…
ಮಡಿಕೇರಿ ಜ.4 : ಕೊಡಗು ಜಿಲ್ಲೆಯ ತೋಟ ಮತ್ತು ಗದ್ದೆಗಳನ್ನು ಗಮನಿಸಿದರೆ ಅರಣ್ಯದಲ್ಲಿರಬೇಕಾದ ಜೀವಿಗಳೆಲ್ಲವೂ ಇಲ್ಲೇ ಬಂದು ನೆಲೆ ನಿಂತಂತ್ತಿದೆ. ಕಾಡಾನೆ ಹಾಗೂ ಹುಲಿಯನ್ನು ಕಂಡಿದ್ದ ಬೆಳೆಗಾರ ಇದೀಗ ಎಲ್ಲಾ ಪ್ರಾಣಿಗಳನ್ನು ತಮ್ಮ ಜಮೀನಿನಲ್ಲಿ ಕಂಡು ಬೆರಗಾಗಿದ್ದಾನೆ. ಜಿಲ್ಲೆಯ ಕಾಫಿ ತೋಟ ಮತ್ತು ಭತ್ತದ ಗದ್ದೆಗಳು ಕಾಡಾನೆ ದಾಳಿಯಿಂದ ನಾಶವಾಗುತ್ತಿವೆ. ಕಾಡಾನೆಗಳು ತೋಟಗಳನ್ನೇ ತಮ್ಮ ವಾಸಸ್ಥಾನಗಳನ್ನಾಗಿ ಮಾಡಿಕೊಂಡಿದ್ದರೆ ಹುಲಿ ಆಗೊಮ್ಮೆ, ಈಗೊಮ್ಮೆ ಬಂದು ಹಸುಗಳನ್ನು ಭಕ್ಷಿಸಿ ಹೋಗುತ್ತಿವೆ. ಕಾಡಾನೆ ಉಪಟಳದಿಂದ ರೋಸಿ ಹೋಗಿದ್ದ ಬೆಳೆಗಾರರನ್ನು ಇದೀಗ ಕಾಡೆಮ್ಮೆ, ಕಾಡುಹಂದಿ, ಮುಳ್ಳಂದಿ, ಮಂಗ, ಬಾವಲಿ, ಅಳಿಲುಗಳೂ ಕಾಡಲಾರಂಭಿಸಿವೆ. ಕಾಡಾನೆಗಳು ಕಾಫಿ ಹಣ್ಣನ್ನು ತಿನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಿಂಡು ಹಿಂಡಾಗಿ ಬರುತ್ತಿರುವ ಮಂಗಗಳು ಪ್ರತಿಯೊಂದು ಗಿಡದ ಕಾಫಿ ಹಣ್ಣನ್ನು ತಿಂದು ತೇಗುತ್ತಿವೆ. ಇದರೊಂದಿಗೆ ಅಳಿಲು ಮತ್ತು ಬಾವಲಿಗಳು ಕೂಡ ಸೇರಿಕೊಂಡು ಸಹ ಭೋಜನ ಮಾಡುತ್ತಿವೆ. ಕಾಫಿ ಗಿಡಗಳ ಬುಡದಲ್ಲಿ ರಾಶಿ ರಾಶಿ ಕಾಫಿ ಬೇಳೆ ಕಂಡು ಬರುತ್ತಿದ್ದು, ವನ್ಯಜೀವಿಗಳ ಉಪಟಳದ ಬಗ್ಗೆ ಬೆಳೆಗಾರರು ಬೇಸರಗೊಂಡಿದ್ದಾರೆ.…
ಮಡಿಕೇರಿ ಜ.7 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನ ಜ.15 ರಂದು ಉದ್ಘಾಟನೆಗೊಳ್ಳಲಿದೆ. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯವ ಉದ್ಘಾಟನಾ ಸಮಾರಂಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ಜೀವ ವ್ಯೆವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಸಹಕಾರ ಸಂಘದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಶಿಥಿಲಾವಸ್ಥೆಗೊಂಡಿದ್ದ ಈರಳೆವಳಮುಡಿ ಶಾಖೆಯ ಹಳೆಯ ಕಟ್ಟಡವನ್ನು ಅಭಿವೃದ್ಧಿ ಪಡಿಸಲಾಗಿದ್ದು, ವಾಯುಪುತ್ರ ಭವನ ಎಂದು ಹೆಸರಿಡಲಾಗಿದೆ. ಇದಕ್ಕೆ ಪೂರಕವಾಗಿ ಕಟ್ಟಡದಲ್ಲಿ ಶ್ರೀಆಂಜನೇಯ ಸ್ವಾಮಿಯ ಪಂಚಮುಖದ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಾರ್ಕಳದ ಗುಣೇಶ್ವರ ಶಿಲ್ಪಿಗಳು ಪಂಚಮುಖಿ ಆಂಜನೇಯನ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ.






