ವಿರಾಜಪೇಟೆ ಜ.20 NEWS DESK : ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಹೇಳಿದರು. ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು, ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ ಸಂಸ್ಥೆಯು ಕೇವಲ ವಿದ್ಯಾರ್ಜನೆಗೆ ಮಾತ್ರವಲ್ಲದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಹಲವಾರು ಸಾಧನೆಗಳನ್ನು ಮಾಡಿ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ಪೋಷಕರು ವಿದ್ಯಾರ್ಥಿಗಳ ಶಿಕ್ಷಣದ ಕಡೆ ಹೆಚ್ಚು ಗಮನವನ್ನು ಹರಿಸಬೇಕು. ಹಾಗೆಯೇ ಅವರಿಗೆ ಸಂಸ್ಕಾರವನ್ನು ಕಲಿಸಿ ಎಂದು ಕರೆ ನೀಡಿದರು. ಸಂಸ್ಥೆಯು 25 ವರ್ಷ ಪೂರೈಸಲು ಆಡಳಿತ ಮಂಡಳಿಯ ಚಿತ್ರ ಭಾನು ಹಾಗೂ ಸುಮಚಿತ್ರ ಭಾನು ಅವರ ಪಾತ್ರ ಪ್ರಮುಖವಾಗಿದ್ದು, ಹಲವಾರು ಸವಾಲುಗಳನ್ನು ಎದುರಿಸಿ…
ಲೇಖಕ: admin
ನಾಪೋಕ್ಲು ಜ.20 NEWS DESK : ಬೇತು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಕೆರೆಯ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸ್ಥಳೀಯರ ಕೋರಿಕೆ ಮೇರೆಗೆ ದೇವಸ್ಥಾನದ ಕೆರೆಗೆ ಭೇಟಿ ನೀಡಿ, ಪುರಾತನವಾದ ಕೆರೆಯು ಶಿಥಿಲಾವಸ್ಥೆಗೆ ತಲುಪಿರುವುದನ್ನು ಪರಿಶೀಲಿಸಿದರು. ಭಕ್ತರ ಹಾಗೂ ಸಮಿತಿಯವರ ದುರಸ್ತಿ ಕೋರಿಕೆಯನ್ನು ಮನ್ನಿಸಿದ ಶಾಸಕರು, ಅಧಿಕಾರಿಗಳೊಂದಿಗೆ ಮಾತನಾಡಿ ಈ ಕೆರೆಯ ಪುನರ್ ನಿರ್ಮಾಣಕ್ಕೆ ತಗಲುವ ವೆಚ್ಚಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಮಾಹಿತಿ ಬಂದೊಡನೆ ಕೆರೆಯ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಿಳಿಸಿದರು. ಈ ಸಂದರ್ಭ ನಾಪೋಕ್ಲು ಪಂಚಾಯಿತಿ ಅಧ್ಯಕ್ಷರು ವನಜಾಕ್ಷಿ ರೇಣುಕೇಶ್, ಸದಸ್ಯರುಗಳಾದ ಕೆ.ಎ.ಇಸ್ಮಾಯಿಲ್, ಮಾಚೇಟಿರ ಕುಸು ಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ಹೇಮಾವತಿ, ಸಾಬಾ, ಪಾತಾಂಡ ಕಟ್ಟಿ, ಎಳ್ತಂಡ ಶಾಂತಿ, ದೇವಸ್ಥಾನದ ಅಧ್ಯಕ್ಷ ಕುಟ್ಟಜೆಟ್ಟಿರ ಶಾಮ್, ಪದಾಧಿಕಾರಿಗಳು ಗ್ರಾಮಸ್ಥರುಗಳಾದ ಕೊಂಡಿರ ಗಣೇಶ್, ಸುಬ್ರಮಣಿ…
ಮಡಿಕೇರಿ NEWS DESK ಜ.19 : ಇಂದು ದಿನಾಂಕ 19-01-2026 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು ಕೊಡಗು ಜಿಲ್ಲಾ ಖಾಝಿ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ್ ರವರು ತಿಳಿಸಿರುತ್ತಾರೆ. *ಮಂಗಳವಾರ ಶಅಬಾನ್: 1* ಇದೇ ಬರುವ ದಿನಾಂಕ 02-02-2026 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಬರಾಅತ್ ರಾತ್ರಿ ಆಗಿರುತ್ತದೆ.
ಮಡಿಕೇರಿ NEWS DESK ಜ.19 : ಗುಂಡು ಹೊಡೆದುಕೊಂಡು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡ್ಲುಕೊಪ್ಪ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಟಿ.ಕೆ.ಸುಬ್ಬಯ್ಯ(78) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ಟಿ.ಕೆ.ಸುಬ್ಬಯ್ಯ ಅವರು ಸೋಮವಾರ ಮುಂಜಾನೆ ಮನೆಯ ಬಳಿಯೇ ಒಂಟಿ ನಳಿಕೆ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಕೆಲವು ಸಮಯಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಬಂದೂಕನ್ನು ವಶಕ್ಕೆ ಪಡೆದಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಡಿಕೇರಿ ಜ.19 NEWS DESK : ಪೊನ್ನಂಪೇಟೆಯಲ್ಲಿ ನಾರಾಯಣಗುರುಗಳ ಹೆಸರಿನಲ್ಲಿ ಭವನ ನಿರ್ಮಿಸಲು ಜಾಗ ನಿಗದಿ ಮಾಡಿದ್ದು, ರೂ.1 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲರೂ ಎಲ್ಲಾ ಸಮಾಜಗಳ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು. ವಿವಿಧತೆಯಲ್ಲಿ ಏಕತೆ ಇರಬೇಕು. ಸಮಾಜದಲ್ಲಿ ಒಡಕು ತರುವುದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ. ಎಲ್ಲ ಸಮಾಜದ ಬೆಳವಣಿಗೆಗೆ ನಾವು ಅವಕಾಶ ಮಾಡಿಕೊಡಬೇಕು ಎಂದರು. ನಾನು ಶಾಸಕನಾಗಿ ಆಯ್ಕೆಯಾದ ನಂತರ ಬಿಲ್ಲವ ಸಮಾಜ ಸೇವಾ ಸಂಘದ ಮುಖಂಡರು ಭೇಟಿ ಮಾಡಿ ಜಾಗಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಆದರೆ, ಇದುವರೆಗೂ ಸ್ಪಂದನ ಸಿಕ್ಕಿಲ್ಲ ಎಂದು ಮನವಿ ನೀಡಿದ್ದರು. ಆನಂತರ ಈ ಕುರಿತು ಸರಕಾರದ ಗಮನ ಸೆಳೆದೆ. ಆದರೆ…
ಮಡಿಕೇರಿ ಜ.19 NEWS DESK : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೈಕೋರ್ಟಿನ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಅವರು ಹೇಳಿದರು. ಶನಿವಾರಸಂತೆ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಅನಘ ಪೌಂಡೇಶನ್ ಮತ್ತು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸಿದ್ಧಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣೆ ದಾಸೋಹ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ನಾನು ಮತ್ತು ಪರೀಕ್ಷೆ ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಕೆಯ ಜೊತೆಯಲ್ಲಿ ಕಷ್ಟ ನೋವಿನ ಅರಿವು ಇರಬೇಕು ಕೀಳೆರಿಮೆಯನ್ನು ಬಿಟ್ಟು ಆತ್ಮ ವಿಶ್ವಾಸದ ಮತ್ತು ಆತ್ಮಸ್ಥೈರ್ಯದ ಮನೋಭಾವನೆಯನ್ನು ಬೆಳೆಸಿಕೊಂಡರೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು. ಇಂದಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಎಲ್ಲಾ ರೀತಿಯ ಅನುಕೂಲಗಳಿವೆ ಎಐ ಯಂತಹ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳಿವೆ ಆದರೆ ಇವುಗಳನ್ನು ಸರಿಯಾಗಿ ಸದ್ಬಳಕೆ…
ಮಡಿಕೇರಿ ಜ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನೆಯ ವಿಶೇಷ ನೋಂದಣಿ ಅಭಿಯಾನವನ್ನು ಏರ್ಪಡಿಸುವ ಕುರಿತು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲಾ ಅಸಂಘಟಿತ ವರ್ಗದ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಕಾರ್ಮಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕ್ರಮವಹಿಸಿ ಜಿಲ್ಲೆಗೆ ನಿಗಧಿಪಡಿಸಿರುವ ಗುರಿಯನ್ನು ತಲುಪಲು ಶ್ರಮಿಸಬೇಕೆಂದು ಅವರು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಅವರು,…
ಮಡಿಕೇರಿ ಜ.19 NEWS DESK : ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಈಗಾಗಲೇ ತಾಲ್ಲೂಕುವಾರು ಆಯ್ಕೆ ಮಾಡಿರುವ ಪಟ್ಟಿಯನ್ನು ಪರಿಷ್ಕರಿಸಲು ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಕುರಿತು ವಿಷಯ ಪ್ರಸ್ತಾಪಿಸಿದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿ ಸದಸ್ಯರ ಗಮನಕ್ಕೆ ಬಾರದೆ ಪಟ್ಟಿಯನ್ನು ಕಳುಹಿಸಿಕೊಡಲಾಗಿದ್ದು, ಈ ಪಟ್ಟಿಯನ್ನು ಪರಿಷ್ಕರಿಸುವಂತಾಗಬೇಕು ಎಂದು ಸಭೆಯ ಗಮನಕ್ಕೆ ತಂದರು. ಈ ಕುರಿತು ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಪಟ್ಟಿಯಲ್ಲಿ ಲೋಪಗಳಿದ್ದಲ್ಲಿ ಪರಿಷ್ಕರಿಸುವಂತಾಗಬೇಕು. ಆದರೆ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರ ಗಮನಕ್ಕೆ ತಂದು ಪಟ್ಟಿಯನ್ನು ತಯಾರಿಸಬೇಕಿತ್ತು ಎಂದು ಅವರು ನುಡಿದರು. ಗ್ಯಾರಂಟಿ…
ಮಡಿಕೇರಿ ಜ.19 NEWS DESK : ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿಯಲ್ಲಿ ಶ್ರೀ ರಾಮ ಲಲ್ಲಾನ ಭವ್ಯ ಮಂದಿರ ನಿರ್ಮಾಣವಾಗಿ ಭಕ್ತ ಜನಕೋಟಿಗೆ ಲೋಕಾರ್ಪಣೆಯಾದ ಪುಣ್ಯ ದಿನದ ಪ್ರಯುಕ್ತ ಮಡಿಕೇರಿಯ ಶ್ರೀ ರಾಮ ಜನ್ಮ ಭೂಮಿ ಸೇವಾ ಸಮಿತಿಯಿಂದ ನಿರಂತರವಾಗಿ ಅನ್ನ ಪ್ರಸಾದ ವಿತರಣೆಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಶ್ರೀ ರಾಮ ಲಲ್ಲಾನ ಪ್ರತಿಷ್ಠಾಪನೆಯ ಜ.22 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಸಾರ್ವಜನಿಕರಿಗೆ 3ನೇ ವರ್ಷದ ಅನ್ನ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಈ ಪುಣ್ಯ ಕಾರ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಆಗಮಿಸುವಂತೆ ಶ್ರೀ ರಾಮ ಜನ್ಮ ಭೂಮಿ ಸೇವಾ ಸಮಿತಿ ಮನವಿ ಮಾಡಿದೆ.
ಮಡಿಕೇರಿ ಜ.19 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜ.20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜನವರಿ, 20 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮನರೇಗಾ ಕುರಿತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.






