ಲೇಖಕ: admin

ವಿರಾಜಪೇಟೆ ಜ.7 : ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ತಮ್ಮ ಬದಕನ್ನು ನಾಶ ಮಾಡಿಕೊಳದೇ ನಿಮ್ಮಲ್ಲಿರುವ ಪ್ರತಿಭೆಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಮಾಳೇಟಿರ ಕಾವೇರಪ್ಪ ಹೇಳಿದರು. ಇತ್ತಿಚೆಗೆ ನಡೆದ ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿ ದೆಸೆಯಲ್ಲಿ ಅನೇಕ ಆಕರ್ಷಣೆಗಳು ಬರುತ್ತದೆ, ಅವುಗಳಿಗೆ ಬಲಿಯಾಗಬಾರದು. ತಂದೆತಾಯಿಯ ಆಶೋತ್ತರ ಏನು, ಅವರು ತಮ್ಮ ವಿದ್ಯಗೆ ಹೇಗೆ ಶ್ರಮ ವಹಿಸುತ್ತಿದ್ದಾರೆ ಎಂಬುವುದನ್ನು ಅರಿತು ಅವರ ಆಶಯದಂತೆ ಮುನ್ನಡೆಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ಮಾತನಾಡಿ, ಇಂದಿನವರೆಗಿನ ಪಠ್ಯೇತರ ಚಟುವಟಿಕೆಗಳಿಗೆ ಈಗ ವಿರಾಮ ಕಾಲ, ಇನ್ನು ಪಠ್ಯ ಚಟುವಟಿಕೆಯ ಕಾಲ ಸನ್ನಿಹಿತವಾಗಿದೆ. ಅಂದರೆ ಇನ್ನು ಪರೀಕ್ಷೆಗಳ ಕಾಲ ಆದರಿಂದ ಕಾಲ ವ್ಯರ್ಥ ಮಾಡದೆ ಪರೀಕ್ಷೆಗಳಿಗೆ ಸಿದ್ದರಾಗಿ ಹಾಗೂ ಸಂಸ್ಥೆಗೆ ಉತ್ತಮ ಫಲಿತಾಂಶ ಬರುವಂತೆ ಶ್ರಮ ವಹಿಸಿ. ಉಪನ್ಯಾಸಕರು…

Read More

ಮಡಿಕೇರಿ ಜ.7 : ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಕೋರಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದರು. ನವೋದಯ ವಿದ್ಯಾಲಯವು ಸರ್ಕಾರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದೆ. ಆದ್ದರಿಂದ ಈ ಪರೀಕ್ಷೆ ಬರೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಈ ಅವಕಾಶವನ್ನು 5ನೇ ತರಗತಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಆಯಾಯ ಜಿಲ್ಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕಿನ…

Read More

ಮಡಿಕೇರಿ ಜ.7 : ವಿಧಾನಸಭಾ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಪ್ರದೇಶ ಗ್ರಾಮಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು. ಈಗಾಗಲೇ ವಿಧಾನಸಭಾ ಚುನಾವಣೆ ಸಿದ್ಧ್ದತೆಗಳು ನಡೆದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ತೆರಳಿ ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ರ್ಯಾಂಪ್‍ಹಾಗೂ ವಿದ್ಯುತ್ ವ್ಯವಸ್ಥೆ ಇತರೆ ಸೌಕರ್ಯಗಳು ಇದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳು ಕಂಡುಬರುತ್ತದೆಯೇ ಎಂಬ ಬಗ್ಗೆ ವರದಿ ನೀಡಬೇಕು.…

Read More

ಮಡಿಕೇರಿ ಜ.7 : ಪ್ರಸಕ್ತ (2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ, 20 ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ http://shp.karnataka.gov.in ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ ರೂ.1.00 ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ :9844531040, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 9481772143 ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದು.…

Read More

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನವು ಸುಮಾರು 550 ವರ್ಷಗಳ ಇತಿಹಾಸವುಳ್ಳದ್ದಾಗಿದೆ.  ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಈ ದೇವಳವು ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇದೆ. ಜಿಲ್ಲಾ ಕೇಂದ್ರದಿಂದ ೩೮ ಕಿಲೋಮೀಟರ್ ಆಗ್ನೇಯದಲ್ಲಿದೆ. ತಿರುಪತಿಯ ತಿರುಮಲ ದೇವಸ್ಥಾನದ ಪಶ್ಚಿಮ ದಿಕ್ಕಿನಲ್ಲಿ ಇರುವುದರಿಂದ ಕಾರ್ಕಳದ ವೆಂಕಟರಮಣ ದೇವಸ್ಥಾನವನ್ನು ಪಡುತಿರುಪತಿ ಎಂದೂ ಕರೆಯಲಾಗುತ್ತದೆ. :: ಐತಿಹ್ಯ ಹಾಗೂ ಇತಿಹಾಸ :: ಗೌಡ ಸಾರಸ್ವತ ಬ್ರಾಹ್ಮಣ ಸಮಯದಾಯ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಉತ್ತರದಿಂದ ಗೋವಾ ಪ್ರದೇಶಕ್ಕೆ ವಲಸೆ ಬಂದು ಕೃಷಿ ಹಾಗೂ ವ್ಯಾಪಾರದಂತಹ ಜೀವನೋಪಾಯ ವೃತ್ತಿಗಳಲ್ಲಿ ನೆಲೆಗೊಂಡಿತು. ಹೀಗೆ ವಲಸೆ ಬಂದವರಲ್ಲಿ ಕೆಲವು ಕುಟುಂಬಗಳು ಉದ್ಯೋಗ ಅರಸಿ ಗೋವಾದಿಂದ ದಕ್ಷಿಣಕ್ಕೆ ಸಾಗಿದರು. ಈ ರೀತಿ ವಲಸೆ ಬಂದವರಲ್ಲಿ ಕಾರ್ಕಳದಲ್ಲಿ ನೆಲೆಗೊಂಡ ಸೋಹಿರೇ ಪ್ರಭು ಅವರ ಕುಟುಂಬವೂ ಒಂದು. ಕಾರ್ಕಳದಲ್ಲಿ ಅವರು ಯಾವ ವೃತ್ತಿ ಮಾಡಿಕೊಂಡಿದ್ದರು ಎಂಬ ಮಾಹಿತಿ ತಿಳಿಯದಿದ್ದರೂ, ಅವರ ಮುಂದಿನ ಪೀಳಿಗೆಯವರು ನಿರ್ವಹಿಸುತ್ತಿದ್ದ ಆಯುರ್ವೇದ ವೈದ್ಯಕೀಯದ ವೃತ್ತಿಯನ್ನು ಗಮನಿಸಿ ಸೋಹಿರೇ ಪ್ರಭುಗಳೂ ಕೂಡ…

Read More

ಆಯುರ್ವೇದ ಮತ್ತು ಮನೆ ಮದ್ದಿನಲ್ಲಿ ಪುದೀನ ಎಲೆಯನ್ನು ವಿಶೇಷವಾಗಿ ಬಳಸಲಾಗುವುದು. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ಪುದೀನದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಂಥಾಲ್ ಮತ್ತು ಫೈಟೊನ್ಯೂಟ್ರಿಯಂಟ್‍ಗಳಿವೆ. ಇವು ಕಿಣ್ವಗಳಿಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತವೆ. ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ. ಅವು ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ಆಮ್ಲೀಯತೆ ಮತ್ತು ವಾಯುವನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುವುದು. ನಿಯಮಿತವಾಗಿ ಪುದೀನ ರಸ ಅಥವಾ ಪುದೀನ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಎದೆಯ ದಟ್ಟಣೆ ಕಡಿಮೆಯಾಗುತ್ತದೆ. ಪುದೀನದಲ್ಲಿ ಇರುವ ಮೆಂಥಾಲ್ ಡಿಕೊಂಗಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಸಹಾಯ ಗುವಂತೆ ಮಾಡುವುದು. ಪುದೀನವನ್ನು ಮಿತವಾಗಿ ಬಳಸಿದಾಗ ಸಮಸ್ಯೆಯನ್ನು ಆರೋಗ್ಯಕರ ರೀತಿಯಲ್ಲಿ ನಿಯಂತ್ರಣದಲ್ಲಿ ಇಡಬಹುದು . ಪುದೀನದಲ್ಲಿ ಇರುವ ಮೆಂಥಾಲ್ ಅಂಶವು ಸ್ನಾಯುಗಳನ್ನು ಸಡಿಲಗೊಳಿಸಿ, ನೋವುಗಳನ್ನು ಕಡಿಮೆ…

Read More

ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ  ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಾಗೆಯೇ ಇರುವುದಾಗಿ ಸರಾರಿ ಹೇಳಿರುವುದಾಗಿ ವರದಿಯಾಗಿದೆ.

Read More

ಮಡಿಕೇರಿ ಜ.7 : ಚೆಟ್ಟಿಮಾನಿ ಬ್ಲೂ ಸ್ಟಾರ್ ಕ್ರಿಕೆಟರ್ಸ್  ವತಿಯಿಂದ ನಡೆದ ಚೆಟ್ಟಿಮಾನಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ  ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.

Read More

ಮಡಿಕೇರಿ ಜ.7 :  ಮಡಿಕೇರಿ ಮ್ಯಾನ್ಸ್ ಕಾಂಪೌಂಡ್ ಕ್ಲಬ್ ವತಿಯಿಂದ ಮ್ಯಾನ್ಸ್ ಕಾಂಪೌಂಡ್ (ಜಿಲ್ಲಾ ಕ್ರೀಡಾಂಗಣ) ನಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಮುಕ್ತ 5+2 ಆಟಗಾರರ ಕಾಲ್ಚೆಂಡು ಪಂದ್ಯಾವಳಿಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿಶ್ಮಯಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಫುಟ್ಬಾಲ್ ಕ್ರೀಡೆಯನ್ನು ಪ್ರೋತ್ಸಾಹಿಸಿಕೊಂಡು ಬರುತ್ತಿರುವ ಎಂ.ಸಿ.ಸಿ. ಕ್ಲಬ್‍ನ ಕೆಲವು ವರ್ಷಗಳ ನಂತರ ಪಂದ್ಯಾವಳಿಯನ್ನು ಪ್ರಾರಂಭಿಸಿರುವುದು ಶಾಘನೀಯ. ಮುಂದಿನ ದಿನಗಳಲ್ಲಿ ಇಲಾಖಾ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದಾಗಿ ಭರವಸೆ ನೀಡಿ, ಪಂದ್ಯಾವಳಿ ಯಶಸ್ಸಿಗೆ ಶುಭ ಹಾರೈಸಿದರು. ಇದೇ ಸಂದರ್ಭ ಎಂ.ಸಿ.ಸಿ. ಕ್ಲಬ್‍ನ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಕ್ಲಬ್‍ನ ಸದಸ್ಯರುಗಳಿಗೆ ಸಮವಸ್ತ್ರವನ್ನು ಅತಿಥಿಗಳು ವಿತರಣೆ ಮಾಡಿದರು. ಕ್ಲಬ್‍ನ ಅಧ್ಯಕ್ಷ ಕ್ರಿಸ್ಟೋಫರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಎಂ.ಸಿ.ಸಿ. ಕ್ಲಬ್‍ನ ಹಿರಿಯ ಆಟಗಾರರುಗಳಾದ ಎನ್.ಕೆ.ರವೀಂದ್ರ, ಕುಟ್ಟಯ್ಯ ವಾಸು, ಸುಜಿತ್ ಚಿಣ್ಣಪ್ಪ, ಕ್ಲಬ್‍ನ ಕಾರ್ಯದರ್ಶಿ ಉಮೇಶ್‍ಕುಮಾರ್, ಖಜಾಂಚಿ ಪೀಟರ್, ಪದಾಧಿಕಾರಿ ಸಚಿನ್ ವಾಸುದೇವ್ ಹಾಜರಿದ್ದರು. ರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರೆ,…

Read More

ಕೊಡ್ಲಿಪೇಟೆ ಜ.7 : ಎಸ್‍ಕೆಎಸ್‍ಎಸ್‍ಎಫ್  ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಜ.8 ರಂದು  ಮಜ್ಲಿಸುನ್ನೂರ್ 9ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ  ನಡೆಯಲಿದೆ. ಸಂಜೆ 7 ಗಂಟೆಗೆ  ಶಂಸುಲ್ ಉಲಮಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು  ಮಸ್ಜಿದುನ್ನೂರ್ ಹ್ಯಾಂಡ್-ಪೋಸ್ಟ್ ಖತೀಬ ಹಾರಿಸ್ ಬಾಖವಿ ಉದ್ಘಾಟಿಸಲಿದ್ದು, ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್  ಪ್ರಾರ್ಥನೆಯ ನೇತೃತ್ವ ವಹಿಸಲಿದ್ದಾರೆ. ಎಸ್‍ಕೆಎಸ್‍ಎಸ್‍ಎಫ್  ಹಾಗೂ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿಯ ನಾಯಕರುಗಳು, ರಾಜಕೀಯ – ಸಾಮಾಜಿಕ ನೇತಾರರು, ಸ್ಥಳೀಯ ಮಸೀದಿಯ ಧರ್ಮ ಗುರುಗಳು ಮತ್ತು ಆಡಳಿತ ಸಮಿತಿಯ ಪದಾಧಿಕಾರಿಗಳು, ಊರಿನ ಪ್ರಮುಖರು ಹಾಗೂ ದೀನಿ ಸ್ನೇಹಿಗಳು ಭಾಗವಹಿಸಲಿದ್ದಾರೆ ಎಂದು ಎಸ್‍ಕೆಎಸ್‍ಎಸ್‍ಎಫ್  ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷ ಬಾಸಿತ್ ಹಾಜಿ ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Read More