ಮಡಿಕೇರಿ ಜ.7 : ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗ ಬಾಂಧವರ ನಡುವೆ ಕೊಡಗು ಗೌಡ ಯುವ ವೇದಿಕೆ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಹಬ್ಬವನ್ನು ಈ ಬಾರಿಯೂ ಏಪ್ರಿಲ್ ಕೊನೆಯ ವಾರ ಹಾಗೂ ಮೇ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅಧ್ಯಕ್ಷತೆಯಲ್ಲಿ ವೇದಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಯುವ ವೇದಿಕೆ ವತಿಯಿಂದಲೇ `ಕುಟುಂಬ’ ಹೆಸರಿನಲ್ಲಿ ಪಂದ್ಯಾವಳಿ ಆಯೋಜನೆ ಮಾಡಿಕೊಂಡು ಬರಲಾಗುತ್ತಿದ್ದು, ಈ ಬಾರಿಯೂ ಕೂಡ `ಕುಟುಂಬ-2023′ ಹೆಸರಿನಲ್ಲಿ ಕ್ರಿಕೆಟ್ ಹಬ್ಬ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಕ್ರಿಕೆಟ್ ಪಂದ್ಯಾವಳಿಯೊಂದಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಕೂಡ ಆಯೋಜನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಕಟ್ಟೆಮನೆ ರೋಶನ್, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್, ಶಿಸ್ತು ಸಮಿತಿ ಅಧ್ಯಕ್ಷ…
ಲೇಖಕ: admin
ವಿರಾಜಪೇಟೆ ಜ.7 ಮಧ್ಯಾಹ್ನದ ಬಿಸಿಯೂಟ ಸಜ್ಜುಗೊಳಿಸುವ ಹಂತದಲ್ಲಿ ಕಾಲಿಗೆ ಬಿಸಿ ನೀರು ಬಿದ್ದು ಗಂಭೀರ ಸ್ವರೂಪದ ಸುಟ್ಟಗಾಯಗಳಾದ ಮಹಿಳೆಯೊಬ್ಬರು ಇಲಾಖೆಯ ಯಾವುದೇ ನೆರವು ಇಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಘಟನೆ ಪರಾಣೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಕೊಣಂಜಗೇರಿ ಗ್ರಾ.ಪಂ ವ್ಯಾಪ್ತಿಯ ಪಾರಾಣೆ ಗ್ರಾಮದ ನಿವಾಸಿ ಎ.ಕೆ. ಸೋಮಯ್ಯ ಅವರ ಪತ್ನಿ ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಸೇವೆಯಲ್ಲಿರುವ ಎ.ಎಸ್. ಶಾಂತಿ 9( 58) ಗಾಯಳಾಗಿ ತೊಂದರೆಗೆ ಸಿಲುಕಿರುವ ಮಹಿಳೆ . ಪತ್ರಿಕೆಯೊಂದಿಗೆ ತನ್ನ ಸಂಕಷ್ಟ ತೋಡಿಕೊಂಡಿರುವ ಅವರು, ಸುಮಾರು ಎರಡುವ ವರ್ಷಗಳಿಂದ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಅಡುಗೆ ಸಹಾಯಕಿಯಾಗಿ ದುಡಿಯುತ್ತಿದ್ದೇನೆ. ಜ.2 ರಂದು ಕುದಿಯುವ ಬಿಸಿ ನೀರಿನ ಪಾತ್ರೆಯನ್ನು ಇಳಿಸುವ ವೇಳೆಯಲ್ಲಿ ಆಕಸ್ಮಿಕವಾಗಿ ಕುದಿಯುವ ನೀರು ಎಡಕಾಲಿನ ಮೇಲೆ ಬಿದ್ದು ಗಂಭೀರ ಗಾಯಗಳಾಗಿದೆ. ನಾಪೋಕ್ಲು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆದಿದ್ದೇನೆ. ಮನೆಯಲ್ಲಿ ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.…
ನಾಪೋಕ್ಲು ಜ.7 : ಎಮ್ಮೆಮಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಗ್ರಾಮದಲ್ಲಿ 51 ಲಕ್ಷ ರೂಗಳಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಬಳಿಕ ಎಮ್ಮೆಮಾಡು ಪ್ರೌಢ ಶಾಲೆಗೆ 17 ಲಕ್ಷದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಭಾಂಗಣ ಮತ್ತು ಪಾಡಿಯಾಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 27 ಲಕ್ಷ ರೂಗಳಲ್ಲಿ ನಿರ್ಮಾಣ ಮಾಡಲಿರುವ ಶಾಲಾ ಕೊಠಡಿಗಳಿಗೆ ಗುದ್ದಲಿ ಪೂಜೆಯನ್ನು ನೆರೆವೇರಿಸಿದರು. ಬಳಿಕ ಮಾತನಾಡಿದ ಶಾಸಕ ಬೋಪಯ್ಯ ಜನರಿಂದ ಒಮ್ಮೆ ಚುನಾಯಿತರಾಗಿ ಆಯ್ಕೆಯಾದರೆ ಎಲ್ಲಾ ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗಿರುವುದು ನಮ್ಮ ಜವಾಬ್ದಾರಿ, ಅದನ್ನು ಅರಿತು ಎಲ್ಲಾ ಸಮಾಜದ ಜನರಿಗಾಗಿ ಕೆಲಸಗಳನ್ನು ನಾನು ಮಾಡಿದ್ದೇನೆ ಎಂದರು. ಎಮ್ಮೆಮಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಸ್ವಲ್ಪ ಕಾಮಗಾರಿ ಬಾಕಿ ಉಳಿದಿದ್ದು, ಮುಂದಿನ ತಿಂಗಳ ಉರೂಸ್ ಕಾರ್ಯಕ್ರಮದ ಮುಂಚಿತವಾಗಿ ಕಾಮಗಾರಿ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಅಭಿಯಂತರರಿಗೆ ಸೂಚಿಸಲಾಗಿದೆ ಎಂದರು. ಈ ಸಂದರ್ಭ…
ನಾಪೋಕ್ಲು ಜ.7 : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಲು ಕಾರ್ಯಕರ್ತರು ತಳಮಟ್ಟದಿಂದಲೇ ಶ್ರಮಿಸಿ ಪಕ್ಷದ ಸಾಧನೆಗಳನ್ನು ಪ್ರತಿಯೊಬ್ಬ ಮತದಾರನಿಗೂ ಮನವರಿಕೆ ಮಾಡಿಕೊಡಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಬಿಜೆಪಿ ಯ “ಬೂತ್ ವಿಜಯ ಅಭಿಯಾನದ ಅಂಗವಾಗಿ ನಾಪೋಕ್ಲು ಭಗವತಿ ದೇವಾಲಯದ ಸಮುದಾಯಭವನದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ಮೋದಿ ಅವರ ಉತ್ತಮ ಆಡಳಿತ ಹಾಗೂ ಪಕ್ಷದ ತತ್ವ ಸಿದ್ಧಾಂತಗಳ ಆಧಾರದಲ್ಲಿ ಮತಯಾಚನೆ ಮಾಡಿ ಸದಢ ಸರ್ಕಾರವನ್ನು ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದರು ಕಿವಿ ಮಾತು ಹೇಳಿದರು. ಈ ಸಂದರ್ಭ ಶಾಸಕರಾದ ಕೆ.ಜಿ.ಬೋಪಯ್ಯ, ಮಂಡೆಪಂಡ ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಮಂಡೆಪಂಡ ಸುಜಾಕುಶಾಲಪ್ಪ, ರಾಜ್ಯ ಸಮಿತಿ ಸದಸ್ಯ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ ಮಾತನಾಡಿ ಮುಂದಿನ ಚುನಾವಣೆಯಲ್ಲಿ ಗೆಲುವಿಗೆ ಬೇಕಾದ ಕಾರ್ಯತಂತ್ರದ ಬಗ್ಗೆ ಮಾರ್ಗದರ್ಶನ ಹಾಗೂ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ನಾಪೋಕ್ಲು ಬಿಜೆಪಿ ಶಕ್ತಿಕೇಂದ್ರದ…
ಮಡಿಕೇರಿ ಜ.7 : ಮೈಸೂರಿನ ಜೆಕೆ ಗ್ರೌಂಡ್ ಮೈದಾನದ ಆಡಿಟೋರಿಯಂ ನಲ್ಲಿ ನಡೆದ ಕರ್ನಾಟಕ ಸ್ಪೋರ್ಟ್ಸ್ ಡಾನ್ಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ನಗರದ ವಿಂಗ್ಸ್ ಆಫ್ ಫ್ಯಾಶನ್ ನೃತ್ಯ ತಂಡದ ವಿದ್ಯಾರ್ಥಿ ಹಾಗೂ ಮುಳಿಯ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಪೂಜಾ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ಫೆಬ್ರವರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜ.6 : ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು “ಸೂರ್ಯ ನಮಸ್ಕಾರ ಚಾಲೆಂಜ್” ಸ್ಪರ್ಧೆ ನಡೆಯಲಿದೆ. ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸ್ಪರ್ಧೆಯನ್ನು ಗೋಣಿಕೊಪ್ಪಲುವಿನ ಉದ್ಯಮಿ ಜಿ.ಲಕ್ಷ್ಮೀ ರೆಡ್ಡಿ ಉದ್ಘಾಟಿಸಲಿದ್ದಾರೆ. ಅಪರಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಸೌಮ್ಯ ಬಾಲು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್, ಅಂತರಾಷ್ಟ್ರೀಯ ಯೋಗ ಪಟು ಅಮೃತ್ ರಾಕೇಶ್, ಹಾತೂರು ಗ್ರಾ.ಪಂ ಅಧ್ಯಕ್ಷ ಗುಮ್ಮಟ್ಟೀರ ದರ್ಶನ್ ನಂಜಪ್ಪ, ನ್ಯಾಷನಲ್ ಅಕಾಡೆಮಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶಾಂತಿ ಅಚ್ಚಪ್ಪ, ಪೊನ್ನಂಪೇಟೆ ನಾಗರೀಕ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ ಪಾಲ್ಗೊಳ್ಳಲಿದ್ದಾರೆ. ಆಹ್ವಾನಿತರಾಗಿ ಶ್ರೀ ಧರ್ಮಸ್ಥಳ ಸೇವಾ ಸಂಘದ ಪ್ರಮುಖರಾದ ನರಸಿಂಹ, ರಾಷ್ಟ್ರೀಯ ಸ್ವಯಂ ಸೇವಕ…
ಮಡಿಕೇರಿ ಜ.6 : ಕೊಡವ ಜನಾಂಗವನ್ನು ರಾಷ್ಟ್ರದ ಇತರ ನಾಗರಿಕರಿಗೆ ಸಮಾನವಾಗಿ ಪರಿಗಣಿಸುವ ಮೂಲಕ ಕೊಡವ ತಾಯ್ನಾಡು ಮತ್ತು ಕೊಡವರ ಭಾವನೆಗಳನ್ನು ಗೌರವಿಸಬೇಕು. ಇದಕ್ಕಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯನ್ನು ರೂಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಕಾರ್ಯವಿಧಾನಕ್ಕೆ ತ್ವರಿತವಾಗಿ ಚಾಲನೆ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಸಂಘಟನೆಯ ಪ್ರಮುಖರು “ಕೊಡವ ಲ್ಯಾಂಡ್” ಪರ ಘೋಷಣೆಗಳನ್ನು ಕೂಗಿದರು. ಸರ್ಕಾರಗಳು ಅತಿ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗವನ್ನು ಸಮಾನ ನಾಗರಿಕರಂತೆ ಪರಿಗಣಿಸಬೇಕು ಮತ್ತು ತಾಯ್ನಾಡನ್ನು ಇತರ ಭಾಷಾವಾರು ರಾಜ್ಯಗಳಂತೆ ಗೌರವಯುತವಾಗಿ ಕಾಣಬೇಕು. ಆದರೆ ದುಃಖಕರ ವಿಚಾರವೆಂದರೆ ಸರ್ಕಾರಗಳು ಕೊಡವ ಪ್ರದೇಶವನ್ನು ತಮ್ಮ ಸಂಪನ್ಮೂಲ ಉತ್ಪಾದಿಸುವ ಆಕ್ರಮಿತ ಕಾಲೋನಿ ಎಂದು ಪರಿಗಣಿಸುತ್ತಿವೆ ಎಂದು ನಾಚಪ್ಪ ಬೇಸರ ವ್ಯಕ್ತಪಡಿಸಿದರು. ಸಾಂವಿಧಾನಿಕ ಸಂಸದೀಯ ಸಹಭಾಗಿತ್ವದ ಪ್ರಜಾಪ್ರಭುತ್ವದಲ್ಲಿ ಸಿಎನ್ಸಿ ಸಂಘಟನೆ ಹಾಗೂ ಕೊಡವರು ಯಾವುದೇ ಜಾಗ ಅಥವಾ…
ಮಡಿಕೇರಿ ಜ.6 : ರಾಜ್ಯದಲ್ಲಿ ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಉತ್ತಮವಾಗಿದ್ದು, ಬೇಡಿಕೆಯೂ ಸಹ ಹೆಚ್ಚಿದೆ. ಈ ಹಿನ್ನೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ 6 ನೇ ತರಗತಿಗೆ 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಂಬೇಡ್ಕರ್, ಮೊರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ನಾರಾಯಣ ಗುರು ಹೀಗೆ ಒಟ್ಟು 830 ವಸತಿ ಶಾಲೆಗಳಿದ್ದು, 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಮತ್ತು…
ಮಡಿಕೇರಿ ಜ.6 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿರುವ ಪ್ರಕರಣ ದಾಖಲಾಗಿದೆ. ಸ್ಥಳೀಯ ವ್ಯಾಪಾರಿ ನಾರಾಯಣ ಎಂಬುವವರ ಮನೆಗೆ ನುಗ್ಗಿದ ಕಳ್ಳರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 13 ಸಾವಿರ ರೂ. ನಗದನ್ನು ದೋಚಿದ್ದಾರೆ ಎಂದು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಕುಶಾಲನಗರ ಡಿವೈಎಸ್ಪಿ ಆರ್.ವಿಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚುಗಾರರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಜ.6 : ನವ ಕಾನೂನು ಪದವೀಧರರಿಗೆ 2022-23 ನೇ ಸಾಲಿನ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 16 ರಿಂದ ಸಲ್ಲಿಸಬಹುದಾಗಿದೆ. ಸ್ವಯಂ ದೃಢೀಕರಿಸಿ ಫೆಬ್ರವರಿ, 15 ರೊಳಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ, 2 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ (ಕಾರ್ಯ ನಿರ್ವಹಣೆ ವಿರಾಜಪೇಟೆ), ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ, ಪೊನ್ನಂಪೇಟೆ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ, ಕುಶಾಲನಗರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯು 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಷರತ್ತಿನಡಿಯಲ್ಲಿ 2021 ರ ಜೂನ್, 01 ರಿಂದ 2022 ರ ಮೇ, 31 ರವರೆಗಿನ ಅವಧಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಿದವರಿಗೆ ಮಾತ್ರ ಅನ್ವಯವಾಗುವುದು. ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ…






