ಮಡಿಕೇರಿ ಜ.6 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡು ಅರ್ಹ ನಾಗರಿಕರನ್ನು ಮತ್ತು ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು 2022 ರ ನವೆಂಬರ್, 09 ರಿಂದ 2022 ರ ಡಿಸೆಂಬರ್, 08 ರವರೆಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಾಗಿದೆ. ಹಾಗೆಯೇ 2022 ರ ನವೆಂಬರ್, 12, ನವೆಂಬರ್, 20, ಡಿಸೆಂಬರ್, 03 ಮತ್ತು ಡಿಸೆಂಬರ್, 04 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2023 ರ ಜನವರಿ, 05 ರಂದು ಎಲ್ಲಾ ಮತಗಟ್ಟೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಅಧಿಕೃತ ವೆಬ್ಸೈಟ್ https://kodagu.nic.in ರಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 4,44,098 ಮತದಾರರು ಇದ್ದು, 208-ಮಡಿಕೇರಿ ವಿಧಾನಸಭಾ…
ಲೇಖಕ: admin
ನಾಪೋಕ್ಲು ಜ.6 : ಯವಕಪಾಡಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಯವಕಪಾಡಿ ಗ್ರಾಮಸ್ಥರು ಆಗ್ರಹಿಸಿದ್ದರು. ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯನ್ನು ಕಚೇರಿಯಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಬೇಡಿಕೆಯ ಈಡೇರಿಕೆಗಾಗಿ ಗ್ರಾಮಸ್ಥರ ಸಹಿ ಇರುವ ಮನವಿ ಪತ್ರವನ್ನು ಸಲ್ಲಿಸಿದರು. ಕಕ್ಕಬೆ ಕುಂಜಿಲ ಗ್ರಾ.ಪಂ ವ್ಯಾಪ್ತಿಯ ಯವಕಪಾಡಿ ಗ್ರಾಮವು ಬ್ರಹ್ಮಗಿರಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿದ್ದು, ಅರಣ್ಯ ಹಕ್ಕು, ಸಮುದಾಯ ಅರಣ್ಯ ಹಕ್ಕು ಪ್ರದೇಶಗಳನ್ನು ಹೊಂದಿರುತ್ತಾರೆ. ಅರಣ್ಯದಂಚಿನಲ್ಲಿ ವಾಸವಾಗಿರುವ ಗಿರಿಜನರು ಕಾಡಾನೆಗಳ ಉಪಟಳಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ತಡಿಯ೦ಡಮೊಳ್ ಬೆಟ್ಟ ಶ್ರೇಣಿಯು ಈ ವ್ಯಾಪ್ತಿಯಲ್ಲಿದ್ದು, ಪ್ರವಾಸಿಗರು ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಆದರೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಕೃಷಿ ಪಸಲು ನಾಶವಾಗುತ್ತಿದೆ. ಈಗಾಗಲೇ ಮೂವರು ಗ್ರಾಮಸ್ಥರು ಕಾಡಾನೆಗಳ ತುಳಿತಕ್ಕೆ ಬಲಿಯಾಗಿದ್ದು, ಕೃಷಿಕರು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ವಾಹನ ಚಾಲಕರು ಈ ವ್ಯಾಪ್ತಿಯಲ್ಲಿ ಭಯದಿಂದ ಸಂಚರಿಸುವಂತಾಗಿದೆ. ಹಾಡು ಹಗಲೇ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು ಜನರು ಪ್ರತಿದಿನ ಆತಂಕದಲ್ಲೇ ಜೀವನ ನಡೆಸುವಂತಾಗಿದೆ…
ಮಡಿಕೇರಿ ಜ.6 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಪಾಸಣಾ ತಜ್ಞ ವೈದ್ಯರು ಜ.9 ರಂದು ಮಡಿಕೇರಿ ಮತ್ತು ಕುಶಾಲನಗರದಲ್ಲಿ ಲಭ್ಯ ಇರಲಿದ್ದಾರೆ. ನಗರದ ನಾರಾಯಣ ಸೂಪರ್ ಸ್ಪೆಷಾಲಿಟಿ ಒಪಿಡಿ ಕೇಂದ್ರ (ರವಿ ಆರ್ಥೋಪೆಡಿಕ್ ಸೆಂಟರ್)ದಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಕುಶಾಲನಗರದ ಶ್ರೀ ಬಾಲಾಜಿ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಡಾ.ಆನಂದ್ ಲಿಂಗನ್ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8904258788, 9513408004, 9353595537, 9980924260 ಸಂಪರ್ಕಿಬಹುದಾಗಿದೆ.
ಸುಂಟಿಕೊಪ್ಪ,ಜ.6: ಮಡಿಕೇರಿ ನಗರದಲ್ಲಿ ಭಿಕ್ಷಾಟನೆ ಮಾಡುತ್ತಾ ಅಲೆಯುತ್ತಿದ್ದ ನಾಲ್ವರು ನಿರಾಶ್ರಿತರನ್ನು 7ನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ತೊಂಡೂರು ಗ್ರಾಮದ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದ ಅಧ್ಯಕ್ಷ ರಮೇಶ್ ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಈಸ್ಟ್ ಪಾಯಿಂಟ್ ವಿದ್ಯಾಸಂಸ್ಥೆಯ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಮಡಿಕೇರಿ ನಗರದಲ್ಲಿದ್ದ ಗೋಪಿ, ಕಿರಣ್, ದಲಾಯಿ ಹಾಗೂ ಸರಸಮ್ಮ ರಕ್ಷಿಸಲ್ಪಟ್ಟವರು. ಇವರು ಗುಣಮುಖರಾಗಿ ಚೇತರಿಸಿ ಕೊಂಡ ನಂತರ ತೊಂಡೂರು ಗ್ರಾಮದಲ್ಲಿರುವ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದಲ್ಲಿ ಆಶ್ರಯ ನೀಡುವುದಾಗಿ ರಮೇಶ್ ತಿಳಿಸಿದರು. ಈ ಸಂದರ್ಭ ಆಶ್ರಮದ ಜಯಂತಿ, ಶಿವು ಹಾಗೂ ಮಾಹಿತಿ ನೀಡಿದ ಪೊಲೀಸ್ ಇಲಾಖೆಯವರು ಹಾಜರಿದ್ದರು. ಸಾರ್ವಜನಿಕರು ಇವರ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಹಾವೇರಿ: ನಗರದ ಕನಕ-ಶರೀಫ-ಸರ್ವಜ್ಞ ವೇದಿಕೆ ಮುಂಭಾಗ ರಾಷ್ಟ್ರಧ್ವಜ, ನಾಡ ಧ್ವಜ ಹಾಗು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಧ್ವಜಾರೋಹಣ ಮಾಡುವ ಮೂಲಕ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ ಹೀರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು, ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.
ಮಡಿಕೇರಿ ಜ.6 : ಹಾಕತ್ತೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಗ್ಗೊಡ್ಲು ಗ್ರಾಮದಲ್ಲಿ ಬೂತ್ ವಿಜಯ್ ಅಭಿಯಾನ ನಡೆಯಿತು. ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕರ್ತರ ಮನೆಯ ಮುಂದೆ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಬೂತ್ ವಿಜಯ್ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶಕ್ತಿಕೇಂದ್ರದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಸೋಮವಾರಪೇಟೆ ಜ.6 : ಕಾಯಕಯೋಗಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.9ರಂದು ಪಟ್ಟಣದ ಆನೆಕೆರೆ ಸಮೀಪ ನಿರ್ಮಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಮಹೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9ಗಂಟೆಗೆ ಜೇಸಿ ವೇದಿಕೆಯಿಂದ ವಿವಿಧ ಕಲಾ ತಂಡಗಳೊಂದಿಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮೆರವಣಿಗೆ ನಡೆಯಲಿದೆ. 111 ಪೂರ್ಣಕುಂಭ ಕಳಸ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಲಿದ್ದಾರೆ. 10ಗಂಟೆಗೆ ತಂಗುದಾಣ ಉದ್ಘಾಟನೆ ಹಾಗೂ 11ಗಂಟೆಗೆ ಸಾಕ್ಷಿ ಕನ್ವೆನ್ಷನ್ ಹಾಲ್ನಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ತುಮಕೂರು, ಶ್ರೀ ಸಿದ್ದಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯಸಾನಿದ್ಯ ವಹಿಸಲಿದ್ದಾರೆ. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಬಸವಪಟ್ಟಣ ತೊಂಟದಾರ್ಯ…
ಸೋಮವಾರಪೇಟೆ,ಜ.6 : ಪುಷ್ಪಗಿರಿ ವನ್ಯಜೀವಿ ವಿಭಾಗದಿಂದ ನೂತನವಾಗಿ ಗಡಿ ಗುರುತು ಮಾಡಿರುವುದು ಸಮರ್ಪಕವಾಗಿಲ್ಲ ಎಂದು ಕೊತ್ನಳ್ಳಿ ಗ್ರಾಮಸ್ಥರು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಂದಾಯ, ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ಸಭೆ ಕೊತ್ನಳ್ಳಿ ಗ್ರಾಮದಲ್ಲಿ ನಡೆಯಿತು. ನೂತನವಾಗಿ ಗಡಿ ಕಲ್ಲುಗಳನ್ನು ನಿಲ್ಲಿಸಿರುವ ಜಾಗವು ಜನವಸತಿ ಹಾಗೂ ಕೃಷಿ ಪ್ರದೇಶಕ್ಕೆ ಹತ್ತಿರವಿದ್ದು, ಮುಂದಿನ ದಿನಗಳಲ್ಲಿ ಗ್ರಾಮಸ್ಥರಿಗೆ ಸಮಸ್ಯೆಯಾಗಲಿದೆ. ಈ ಹಿನ್ನೆಲೆ ಹಿಂದೆ ಇದ್ದ ಗಡಿಯನ್ನೇ ಮುಂದುವರೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ನಂತರ ಅಧಿಕಾರಿಗಳು ಮತ್ತು ಗ್ರಾಮಸ್ಥರು ಅರಣ್ಯ ಪ್ರದೇಶಕ್ಕೆ ತೆರಳಿ ಗಡಿ ಗುರುತು ಮಾಡಿರುವ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭ ಹೊಸದಾಗಿ ಅಳವಡಿಸಿರುವ ಗಡಿಗೆ ಜಿಪಿಎಸ್ ಪಾಯಿಂಟ್ ಬಂದಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ 8 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದ್ದುದು ಇದೀಗ 11 ಸಾವಿರಕ್ಕೆ ಏರಿಕೆಯಾಗಿದೆ. ಇಡೀ ಗ್ರಾಮಗಳನ್ನು ಅರಣ್ಯಕ್ಕೆ ಸೇರ್ಪಡೆಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ತಹಶಿಲ್ದಾರ್ ಎಸ್.ಎನ್. ನರಗುಂದ್, ಎಡಿಎಲ್ಆರ್ ವಿರೂಪಾಕ್ಷ, ಪುಷ್ಪಗಿರಿ ವನ್ಯ ಜೀವಿ ವಿಭಾಗದ…
ಸುಂಟಿಕೊಪ್ಪ,ಜ.6: ಮಡಿಕೇರಿ ನಗರದಲ್ಲಿ ಭಿಕ್ಷಾಟನೆ ಮಾಡುತ್ತಾ ಅಲೆಯುತ್ತಿದ್ದ ನಾಲ್ವರು ನಿರಾಶ್ರಿತರನ್ನು 7ನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ತೊಂಡೂರು ಗ್ರಾಮದ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದ ಅಧ್ಯಕ್ಷ ರಮೇಶ್ ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಈಸ್ಟ್ ಪಾಯಿಂಟ್ ವಿದ್ಯಾಸಂಸ್ಥೆಯ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಮಡಿಕೇರಿ ನಗರದಲ್ಲಿದ್ದ ಗೋಪಿ, ಕಿರಣ್, ದಲಾಯಿ ಹಾಗೂ ಸರಸಮ್ಮ ರಕ್ಷಿಸಲ್ಪಟ್ಟವರು. ಇವರು ಗುಣಮುಖರಾಗಿ ಚೇತರಿಸಿ ಕೊಂಡ ನಂತರ ತೊಂಡೂರು ಗ್ರಾಮದಲ್ಲಿರುವ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದಲ್ಲಿ ಆಶ್ರಯ ನೀಡುವುದಾಗಿ ರಮೇಶ್ ತಿಳಿಸಿದರು. ಈ ಸಂದರ್ಭ ಆಶ್ರಮದ ಜಯಂತಿ ಶಿವು ಹಾಗೂ ಮಾಹಿತಿ ನೀಡಿದ ಪೊಲೀಸ್ ಇಲಾಖೆಯವರು ಹಾಜರಿದ್ದರು. ಸಾರ್ವಜನಿಕರು ಇವರ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಜ.6 : ಜಿಲ್ಲಾ ಬಿಜೆಪಿ ಹಾಗೂ ಮಡಿಕೇರಿ ನಗರ ಬಿಜೆಪಿ ವತಿಯಿಂದ ನಗರದ ರಾಜರಾಜೇಶ್ವರಿ ನಗರ ಉಕ್ಕಡ ಭಾಗದಲ್ಲಿ ಬೂತ್ ಅಭಿಯಾನ ನಡೆಯಿತು. ಈ ಸಂದರ್ಭ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯ ಎಸ್.ಸಿ.ಸತೀಶ್, ಪ್ರಮುಖರಾದ ಅರುಣ್ ಕುಮಾರ್ ಮತ್ತಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.






