ಮಡಿಕೇರಿ ಜ.5 : ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಅವರು ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಮತಗಟ್ಟೆ ಸಂಖ್ಯೆ 29, 30, 31 ಮತಗಟ್ಟೆಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಹಾಗೆಯೇ ಈ ಮತಗಟ್ಟೆಗಳ ಬಿಎಲ್ಒ ಅವರಿಂದ ಒಟ್ಟು ಮತದಾರರ ವಿವರ, ಹೊಸದಾಗಿ ಯುವ ಮತದಾರರ ಸೇರ್ಪಡೆ, ನಮೂನೆ 7 ರಂತೆ ತೆಗೆದಿರುವ ಮತದಾರರ ಸಂಖ್ಯೆ ಮತ್ತು ಯಾವ ಕಾರಣಕ್ಕೆ ತೆಗೆದಿರುವುದು ಹಾಗೂ ಸ್ಥಳಾಂತರ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ನರಗುಂದ, ಕಂದಾಯ ಪರಿವೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಬಿಎಲ್ಒಗಳು ಇತರರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ಜ.7ರಂದು ಏರ್ಪಡಿಸಿರುವ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಐಮಂಡ ಗೋಪಾಲ್ ಸೋಮಯ್ಯ ವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಎನ್. ಮಂಜುನಾಥ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಎನ್.ಎನ್. ದಿನೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪೊನ್ನಂಪೇಟೆ ತಹಸೀಲ್ದಾರ್ ಎನ್.ಎಸ್. ಪ್ರಶಾಂತ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ವಿರಾಜಪೇಟೆ ಲಿಟ್ಲ್ ಸ್ಕಾಲರ್ ಅಕಾಡೆಮಿ ಅಧ್ಯಕ್ಷೆ ಪೂಜಾ ರವೀಂದ್ರ, ವಿರಾಜಪೇಟೆ ಕೂರ್ಗ್ ಅವೆನ್ಯೂ ಸೂಪರ್ ಮಾರ್ಕೇಟ್ ಪಾಲುದಾರ ಹನೀಫ್, ವಿರಾಜಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷ…
ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಉದ್ಘಾಟನೆ, ಬೆಳ್ಳಿ ಮಹೋತ್ಸವ ಲಾಂಛನ ಅನಾವರಣ ಹಾಗೂ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಜ.7ರಂದು ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗೋಣಿಕೊಪ್ಪ ಕಾಲ್ಸ್ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ವಹಿಸಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಬೆಳ್ಳಿ ಮಹೋತ್ಸವ ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಲಾಂಛನ ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸುತ್ತಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾಲ್ಸ್ ವಿದ್ಯಾ ಸಂಸ್ಥೆ ಪ್ರಾಂಶುಪಾಲರಾದ…
ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ವಿಕಸನ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಗೋಣಿಕೊಪ್ಪ ಲಯನ್ಸ್ ಸಂಸ್ಥೆ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.7ರಂದು 2022-23ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ವಿಶೇಷ ತರಗತಿ ಏರ್ಪಡಿಸಲಾಗಿದೆ. ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಡಿಡಿಪಿಐ ಸಿ. ರಂಗಧಾಮಯ್ಯ ಉದ್ಘಾಟಿಸಲಿದ್ದಾರೆ. ಮೋಟಿವೇಷನ್ ಗುರು ತೀತಮಾಡ ಅರ್ಜುನ್ ದೇವಯ್ಯ ಸ್ಫೂರ್ತಿಯ ಮಾತುಗಳನ್ನಾಡಲಿದ್ದಾರೆ. ಗೋಣಿಕೊಪ್ಪ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಅಮ್ಮಂಡ ಚಿಣ್ಣಪ್ಪ, ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಬಿಇಒ ಶ್ರೀಶೈಲ ಬಿಳಗಿ, ಕೊಡಗು ವಿಕಸನ ಸಂಸ್ಥೆ ಸಂಸ್ಥಾಪಕ ಚೈಯ್ಯಂಡ ಸತ್ಯ ಗಣಪತಿ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು…
ಮಡಿಕೇರಿ ಜ.4 : ಸೋಮವಾರಪೇಟೆ ತಾಲೂಕಿನ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯ ಧರ್ಮದರ್ಶಿ ಮಂಡಳಿ ಆಶ್ರಯದಲ್ಲಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೆ ಹಾಗೂ 64ನೇ ಮಹಾರಥೋತ್ಸವ ಜ.13 ರಿಂದ ಜ.17 ರವರೆಗೆ ನಡೆಯಲಿದೆ. ಜ.13 ರಂದು ‘ಬೆಳ್ಳಿ ಬಂಗಾರ ದಿನ’ದಂದು ಜಾತ್ರೆ ಆರಂಭವಾಗಲಿದ್ದು, ಸಂಜೆ 6.30 ರಿಂದ 7.30 ರವರೆಗೆ ಜಾತ್ರಾ ಪ್ರಾರಂಭೋತ್ಸವ ಪೂಜೆ ಮತ್ತು ಪಾರ್ಥನೆ ನೆರವೇರಲಿದೆ. ಜ.14 ರಂದು ‘ಮಕರ ಸಂಕ್ರಮಣ ಕರುವಿನ ಹಬ್ಬ’ ಆಚರಿಸಲಿದ್ದು, ರಾತ್ರಿ 7 ಗಂಟೆಗೆ ಗರುಡ ಗಂಬದ ಅಗ್ರ ಪೀಠದಲ್ಲಿ ತುಪ್ಪದ ನಂದಾದೀಪ ಬೆಳಗಿಸುವುದು, ಅಂಕುರಾರ್ಪಣಾ ಪೂಜೆ, ಮಹಾ ಮಂಗಳಾರತಿ, ಪ್ರಾರ್ಥನೆ ನೆರವೇರಲಿದೆ. ಜ.15 ರಂದು ‘ಅರಸು ಬಲ ಸೇವೆ’ ಆಚರಿಸಲಿದ್ದು, ಪೂರ್ವಾಹ್ನ 11 ರಿಂದ 1 ರವರೆಗೆ ಉತ್ತರಾಯಣ, ಮಣ್ಯಕಾಲ ಪೂಜೆ ನಡೆಯಲಿದೆ. ರಾತ್ರಿ 7.30 ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಜರುಗಲಿದೆ. ಮಹಾರಥೋತ್ಸವ: ಜ.16 ರಂದು ಮಧ್ಯಾಹ್ನ 12.5 ಗಂಟೆಗೆ ಶುಭ ಮುಹೂರ್ತದಲ್ಲಿ ಶ್ರೀ ಕುಮಾರಲಿಂಗೇಶ್ವರ…
ಮಡಿಕೇರಿ ಜ.5 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಜ.6 ರಂದು ಕುಶಾಲನಗರದಲ್ಲಿ ಹೃದ್ರೋಗ ತಪಾಸಣಾ ಶಿಬಿರ ನಡೆಯಲಿದೆ. ನಾರಾಯಣ ಸೂಪರ್ಸ್ಪೆಷಾಲಿಟಿ ಒಪಿಡಿ ಸೆಂಟರ್ನಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ರವಿಶಂಕರ್ ಎದೆನೋವು, ಎದೆಯ ಬಿಗಿತ, ಎದೆಯ ಒತ್ತಡ ಮತ್ತು ಎದೆಯ ಅಸ್ವಸ್ಥತೆ, ಉಸಿರಾಟದ ತೊಂದರೆ, ವೇಗವಾದ ಹೃದಯ ಬಡಿತಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 9513408004, 8904258788, 08276273221 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.5 : ರೋಟರಿ ಮಡಿಕೇರಿ ವುಡ್ಸ್ ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ಆರಂಭಿಕ ವರ್ಷವೇ ಸಾಧನೆಯ ಹೆಗ್ಗುರುತುಗಳನ್ನು ಸೃಷ್ಟಿಸಿದೆ ಎಂದು ರೋಟರಿ ವುಡ್ಸ್ನ 3181 ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಮೂರನೇ ರೋಟರಿ ಸಂಸ್ಥೆಯಾಗಿ 2022ರ ಮೇ 15 ರಂದು ಉದಯಿಸಿದ ರೋಟರಿ ಮಡಿಕೇರಿ ವುಡ್ಸ್ 35 ಸದಸ್ಯರ ತಂಡಗಳನ್ನೊಳಗೊಂಡು ಸಾಕಷ್ಟು ಜನೋಪಯೋಗಿ ಕಾರ್ಯ ಯೋಜನೆಗಳ ಮೂಲಕ ಜನಸ್ನೇಹಿಯಾಗಿದೆ. ಮುಂದಿನ ವರ್ಷಗಳಲ್ಲಿಯೂ ಮತ್ತಷ್ಟು ಸಾಮಾಜಿಕ ಕಳಕಳಿಯ ಯೋಜನೆಗಳಲ್ಲಿ ಸಕ್ರಿಯವಾಗಲಿದೆ ಎಂದರು. ರೋಟರಿ ವುಡ್ಸ್ ಸಂಸ್ಥೆ ಶುದ್ಧ ಕುಡಿಯುವ ನೀರು, ಜನರಿಗೆ ಸೂರು, ಶಿಕ್ಷಣ, ಪರಿಸರದ ಬಗ್ಗೆ ವಿಶೇಷ ಕಾಳಜಿ ವಹಿಸಿದೆ. ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜೆನಿಫರ್ ಜಾನ್ ಅವರ ಆಶಯದಂತೆ ಶಿಕ್ಷಣ ಮತ್ತು ಪರಿಸರಕ್ಕೆ ಪೂರಕವಾದ ವನಸಿರಿ, ವಿದ್ಯಾಸಿರಿ, ಆರೋಗ್ಯ ಸಿರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ಲಬ್ ಸರ್ವಿಸ್, ಜನರನ್ನು ಬಲಪಡಿಸುವ ನಿಟ್ಟಿನಲ್ಲಿ ಕಮ್ಯೂನಿಟಿ ಸರ್ವಿಸ್, ಯುವಕರನ್ನು ಬಲಪಡಿಸುವ…
ಮಡಿಕೇರಿ ಜ.5 : ಜಿ.ಪಂ ಕ್ಷೇತ್ರಗಳನ್ನು ಪುನರ್ ವಿಂಗಡಿಸುವ ಮೂಲಕ ಕೊಡಗು ಜಿಲ್ಲೆಗೆ ಅನ್ಯಾಯ ಮಾಡಲಾಗಿದೆ. 29 ಕ್ಷೇತ್ರಗಳನ್ನು 25 ಕ್ಷೇತ್ರಗಳಿಗೆ ಸೀಮಿತಗೊಳಿಸಿರುವುದರಿಂದ ಅನುದಾನದ ಕೊರತೆಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಈಗ ಇರುವ 29 ಕ್ಷೇತ್ರಗಳನ್ನು ಉಳಿಸಬೇಕು ಅಥವಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಕ್ಷೇತ್ರಗಳ ಪುನರ್ ವಿಂಗಡಣೆ ವಿರುದ್ಧ ಜ.16 ರಂದು ಜಿಲ್ಲಾ ಕಾಂಗ್ರೆಸ್ ಆಕ್ಷೇಪಣೆ ಸಲ್ಲಿಸಲಿದೆ ಎಂದು ತಿಳಿಸಿದ ಅವರು, ಈ ವಿಚಾರದಲ್ಲಿ ಜಿಲ್ಲೆಯ ಶಾಸಕರುಗಳು ಹಾಗೂ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕೆಂದು ತಿಳಿಸಿದರು. ಜಿ.ಪಂ ಕ್ಷೇತ್ರಗಳನ್ನು 25 ಕ್ಕೆ ಇಳಿಕೆ ಮಾಡಿರುವುದು ಮತ್ತು ಗಡಿ ಗುರುತು ವಿಚಿತ್ರ ರೀತಿಯಲ್ಲಿದೆ. 60- 70 ಕಿ.ಮೀ ಕ್ರಮಿಸಬೇಕಾದ ಬಿರುನಾಣಿ- ಬಿಟ್ಟಂಗಾಲಕ್ಕೆ ಸಂಪರ್ಕವೇ ಇಲ್ಲದಿದ್ದರೂ ಜಿ.ಪಂ ಕ್ಷೇತ್ರವನ್ನು ಸೃಷ್ಟಿಸಲಾಗಿದೆ. ಈ ರೀತಿಯ ಅರ್ಥಹೀನ ಕ್ರಮಗಳಿಂದ ಮುಂದೆ ಬರುವ ಜಿ.ಪಂ ಸದಸ್ಯರ ಕಾರ್ಯನಿರ್ವಹಣೆಗೂ ಕಷ್ಟವಾಗಲಿದೆ. ಕ್ಷೇತ್ರ ಕಡಿಮೆಯಾದಂತೆ…
ಕುಶಾಲನಗರ, ಜ.5 : ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸತತ ಪ್ರಯತ್ನದಿಂದ ಗೆಲುವು ಸಾಧ್ಯ ಎಂದು ನಿವೃತ್ತ ಕ್ರೀಡಾ ತರಬೇತುದಾರರಾದ ಅಂತೋಣಿ ಡಿಸೋಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಮತ್ತು ಎಂಜಿಎಂ ಪದವಿ ಕಾಲೇಜು ಆಶ್ರಯದಲ್ಲಿ ನಡೆದ ಕ್ರೀಡಾ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರಾಥಮಿಕ ಶಿಕ್ಷಣದ ಅವಧಿಯಿಂದಲೇ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಉದ್ಯೋಗಕ್ಕೆ ಕೂಡ ಅವಕಾಶ ಇದೆ ಎಂದ ಅವರು, ಕ್ರೀಡಾ ಪ್ರಾಧಿಕಾರದ ಮೂಲಕ ದೊರೆಯುವ ಸೌಲಭ್ಯದ ಬಗ್ಗೆ ಮಾಹಿತಿ ಒದಗಿಸಿದರು. ಕ್ರೀಡೆಯಿಂದ ರಾಷ್ಟ್ರದ ಕೀರ್ತಿಯನ್ನು ಉತ್ತುಂಗಕ್ಕೆ ತರಬಹುದು. ವಾರ್ಷಿಕ ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಅವರು ಮಾತನಾಡಿ, ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡುವಂತಾಗಬೇಕು ಎಂದರು. 3 ದಿನಗಳ ಕಾಲ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕ್ರೀಡಾಕೂಟ ಹಿನ್ನೆಲೆಯಲ್ಲಿ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ…
ಮಡಿಕೇರಿ ಜ.5 : ರಾಜಸ್ಥಾನದ ಮೌಂಟ್ ಅಬುವಿನಲ್ಲಿರುವ ಬ್ರಹ್ಮಕುಮಾರಿಸ್ ಪ್ರಧಾನ ಕಾರ್ಯಾಲಯಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆದ್ಯಾತ್ಮದ ವಿಶೇಷ ದ್ಯಾನದಲ್ಲಿ ತಮ್ಮ ಬದುಕಿನ ಸುಂದರ ಕ್ಷಣವನ್ನು ಸ್ಮøತಿ ಮಾಡಿಕೊಂಡರು. ನಂತರ ಜ್ಯೋತಿ ಬೆಳೆಗಿಸಿ ವಿಶ್ವಕ್ಕೆ ಆದ್ಯಾತ್ಮದ ಕೊಡುಗೆಯನ್ನು ನೀಡಿರುವ ಬ್ರಹ್ಮಕುಮಾರಿಸ್ ನ ಸೇವೆ ಮಹತ್ತರ. ವಿಶ್ವದಾದ್ಯಂತ ಹರಡಿರುವ ಈ ಶಾಖೆಯನ್ನು ಮಹಿಳೆಯರೇ ನಡೆಸುತ್ತಿರುವುದು ಶ್ಲಾಘನೀಯ. ವಿಶ್ವದ ಅತೀ ದೊಡ್ಡ ಸಂಸ್ಥೆಯಾಗಿ ಎಲ್ಲರಲ್ಲೂ ಸಕರಾತ್ಮಕವನ್ನು ತುಂಬುತ್ತಿದೆ ಎಂದು ಮನವರಿಕೆ ಮಾಡಿದರು. ಈ ಸಂದರ್ಭ ರಾಜಸ್ಥಾನದ ಸಚಿವರು, ಬ್ರಹ್ಮಕುಮಾರಿ ಮುಖ್ಯ ಸಹೋದರ, ಸಹೋದರಿಯರು ಪಾಲ್ಗೊಂಡು ಈಶ್ವರಿಯ ಸನ್ಮಾನ ನೀಡಿ ಗೌರವಿಸಿದರು. ಮುಂಜಾನೆ ದ್ಯಾನದ ಕೊಠಡಿಯಲ್ಲಿ ದ್ಯಾನ ಮಾಡಿ ಎಲ್ಲರೊಂದಿಗೆ ಬೆರೆತು ಬೆಳಗಿನ ಆದ್ಯಾತ್ಮದ ತರಗತಿಯಲ್ಲಿ ಭಾಗವಹಿಸಿ, ಗಿಡನೆಟ್ಟು ಎಲ್ಲರಿಗೂ ಶುಭಕೋರಿದರು.






