ಮಡಿಕೇರಿ ಜ.5 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು( ಕಸಾಪ ) ವತಿಯಿಂದ ಫೆ.3 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿರುವ ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯಲಿರುವ ಕವಿಗೋಷ್ಠಿಗೆ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕವಿಗಳಿಂದ ಮಾತ್ರ ಕವನಗಳನ್ನು ಆಹ್ವಾನಿಸಲಾಗಿದೆ. ಕವಿಗೋಷ್ಢಿಯಲ್ಲಿ ಯುವ ಉದಯೋನ್ಮುಖ ಹಾಗೂ ಹೊಸ ಪ್ರತಿಭೆ ಮತ್ತು ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕವಿಗೋಷ್ಠಿಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಸ್ವ ರಚಿತ ಕವಿತೆಗಳು 15 ರಿಂದ 20 ಸಾಲುಗಳ ಮಿತಿಯಲ್ಲಿದ್ದು, ಕವನ ವಾಚನಕ್ಕೆ ಮೂರು ನಿಮಿಷಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನದ ಮೂಲ ಪ್ರತಿಯನ್ನು ಜನವರಿ 12 ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳಿಸಬೇಕು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಳಾಸ : ಅಧ್ಯಕ್ಷರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಚಂದ್ರಶ್ರೀ ಕಾಂಪ್ಲೆಕ್ಸ್ , ಸೋಮೇಶ್ವರ ದೇವಸ್ಥಾನದ…
ಲೇಖಕ: admin
ನಾಪೋಕ್ಲು ಜ.5 : ಕಡಿಯತ್ತನಾಡು ಕೊಣಂಜಗೇರಿ ಗ್ರಾಮದ ಶ್ರೀ ಭದ್ರಕಾಳಿ, ಶ್ರೀ ಚಾಮುಂಡೇಶ್ವರಿ ಹಾಗೂ ಉಪದೇವತೆಗಳ ಪುನರ್ ಪ್ರತಿಷ್ಠಾಪನೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಒಂದು ವಾರಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ದೇವಾಲಯದಲ್ಲಿ ನಡೆಯಿತು. ಶ್ರೀ ಭದ್ರಕಾಳಿ ಚಾಮುಂಡೇಶ್ವರಿ ಹಾಗೂ ಉಪದೇವತೆಗಳ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಕೋತ್ಸವ ತಂತ್ರಿಗಳಾದ ವಿರಾಜಪೇಟೆಯ ಎ.ಜಿ.ಪಂಡರೀಶ (ಹರೀಶ್) ಅರಳಿತ್ತಾಯ ತಂತ್ರಿಗಳ ನೇತೃತ್ವದಲ್ಲಿ ಮುಖ್ಯ ಅರ್ಚಕ ಶ್ರೀನಿವಾಸ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಧ್ವಜಾರೋಹಣ, ವಾಸ್ತು ಹೋಮ, ರಕ್ಷೋಘ್ನ ಹೋಮ, ವಾಸ್ತು ಬಲಿ, ಗಣ ಹೋಮ, ಬಿಂಬಶುದ್ಧಿ, ಕಲಶ ಮೃತ್ಯುಂಜಯ ಹೋಮ, ಅಧಿವಾಸ ಹೋಮಗಳು, ನಾಗ ಪ್ರತಿಷ್ಠೆ, ಆಶ್ಲೇಷ ಹೋಮ, ಆಶ್ಲೇಷ ಬಲಿ, ಚಂಡಿಕಾ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಗಣಪತಿ ಹೋಮ, ಚಾಮುಂಡಿ ಪ್ರತಿಷ್ಠಾ ಹೋಮ, ಚಾಮುಂಡಿ ಬಿಂಬ ಪ್ರತಿಷ್ಠೆ, ಕಲಶ ಮಂಡಲ ರಚನೆ, ಕಲಶ ಪ್ರತಿಷ್ಠೆ ಹಾಗೂ ಶಿಖರ ಪೂಜೆ,…
ವಿರಾಜಪೇಟೆ ಜ.5 : ಆಂಧ್ರದಿಂದ ಕೇರಳದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಭಕ್ತರ ಟಿ.ಟಿ.ವಾಹನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಮಾಕುಟ್ಟದಲ್ಲಿ ನಡೆದಿದೆ. ವಿರಾಜಪೇಟೆ ರಾಜ್ಯ ಗಡಿಭಾಗವಾದ ಮಾಕುಟ್ಟ ಅರಣ್ಯ ಪ್ರದೇಶದ ತಿರುವಿನಲ್ಲಿ ಟಿ.ಟಿ.ವಾಹನ ನಿಯಂತ್ರಣ ಕಳೆದುಕೊಂಡು 20 ಅಡಿ ಪ್ರಪಾತಕ್ಕೆ ಸಾಗಿ ಬೃಹತ್ ಮರಕ್ಕೆ ಡಿಕ್ಕಿ ಸಂಭವಿಸಿದ್ದು, ವಾಹನದಲ್ಲಿ 13 ಅಯ್ಯಪ್ಪ ಭಕ್ತರು ಇದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಇರಿಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಮಡಿಕೇರಿ ಜ.6 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜನವರಿ, 06 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.4 : ಪ್ರಸಕ್ತ(2022-23) ಸಾಲಿನಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಜನವರಿ, 01 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2022 ರ ಜನವರಿ, 01 ರಿಂದ ಡಿಸೆಂಬರ್, 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು 2023 ರ ಜನವರಿ, 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮಡಿಕೇರಿ, ಕೊಡಗು ಜಿಲ್ಲೆ…
ಮಡಿಕೇರಿ ಜ.5 : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ದಿಕ್ಕರಿಸಿದ್ದಾರೆ. ಇದು ಕನ್ನಡಿಗರ ಸಮ್ಮೇಳನವಲ್ಲ, ಆಲ್ ಪಾರ್ಟಿ ಲೀಡರ್ಸ್ ಅಸೋಸಿಯೇಷನ್ ನ ರಾಜಕೀಯ ಸಮ್ಮೇಳನ ಎಂದು ಅವರು ಕಿಡಿ ಕಾರಿದ್ದಾರೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ.ಗಳ ಬೃಹತ್ ಮೊತ್ತದ ಅನುದಾನವನ್ನು ನೀಡಿದೆ. ಆದರೆ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ನಡೆಸಿಲ್ಲ, ಮಾರ್ಗಸೂಚಿಯನ್ನು ನೀಡಿಲ್ಲ. ಊಟ, ತಿಂಡಿ, ಬಾಜ, ಬಜಂತ್ರಿ, ಏಲಕ್ಕಿ ಮಾಲೆ ಇಷ್ಟೇ ಸಮ್ಮೇಳನವೇ ಎಂದು ಪ್ರಶ್ನಿಸಿದರು. ಸಮ್ಮೇಳನದಲ್ಲಿ ಸುಮಾರು 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ, ಆದರೆ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಜಾನಪದ ವಿದ್ವಾಂಸ ಡಾ.ಕರೀಂ ಖಾನ್, ಅಖಿಲ ಭಾರತ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಉನ್ನತ ಪ್ರಶಸ್ತಿಗಳನ್ನು ಪಡೆದವರನ್ನು ಕೂಡ ಸನ್ಮಾನಿತರ ಪಟ್ಟಿಯಲ್ಲಿ ಸೇರಿಸಿಲ್ಲ. ಹಿಂದಿನ ಸಮ್ಮೇಳನಗಳಲ್ಲಿ ದಲಿತ ಸಮಾವೇಶ ನಡೆಯುತ್ತಿತ್ತು, ಆದರೆ…
ಮಡಿಕೇರಿ ಜ.4 : ಇದೇ ಜ.28 ರಂದು ಮಡಿಕೇರಿ ತಾಲ್ಲೂಕಿನ 11 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಟ್ಟಗೇರಿಯ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ನುಡಿಜಾತ್ರೆಗೆ ಎಲ್ಲರೂ ಕೈಜೋಡಿಸುವಂತೆ ಶಾಸಕರು ಹಾಗೂ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಕೋರಿದ್ದಾರೆ. ಬೆಟ್ಟಗೇರಿಯ ಉದಯ ಪ್ರೌಢಶಾಲೆ ಸಭಾಂಗಣದಲ್ಲಿ ಬುಧವಾರ ನಡೆದ ಮಡಿಕೇರಿ ತಾಲ್ಲೂಕು 11 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಸಮ್ಮೇಳನ ಯಶಸ್ಸಿಗೆ ಸಹಕರಿಸುವಂತೆ ಶಾಸಕರು ಮನವಿ ಮಾಡಿದರು. ‘ಅಂತ್ಯತ ಕಡಿಮೆ ಖರ್ಚಿನಲ್ಲಿ ಅಕ್ಷರ ಜಾತ್ರೆಯನ್ನು ಯಶಸ್ಸುಗೊಳಿಸಲು ಎಲ್ಲರೂ ಶ್ರಮಿಸಬೇಕು. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹೀಗೆ ಎಲ್ಲರೂ ನಾಡು ನುಡಿಗೆ ಕೈಜೋಡಿಸುವಂತೆ ಶಾಸಕರು ಕೋರಿದರು.’ ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿರಿಸಿ ಕುಟುಂಬದಂತೆ ಎಲ್ಲರೂ ಕಾರ್ಯಕ್ರಮ ಯಶಸ್ಸಿಗೆ ಮುಂದಾಗಬೇಕು.…
ಮಡಿಕೇರಿ ಡಿ.30 : ಅಮೇರಿಕಾದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಹೆಸರಾಂತ ಕಿಡ್ನಿ ತಜ್ಞ ವೈದ್ಯರಾದ ಡಾ.ಎಂ.ಎ.ಕಾರ್ಯಪ್ಪ ಅವರು ಬುಧವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಿಡ್ನಿಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ಮಾಡಿದರು. ನೂರಾರು ರೋಗಿಗಳು ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದರು. ಕಿಡ್ನಿಗೆ ಸಂಬಂಧಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಆರೋಗ್ಯಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಕಾರ್ಯಪ್ಪ ಅವರು ದೇಶದಲ್ಲಿ ಇರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು. ದೇಶದಲ್ಲಿ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದಂತೆ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದರು. ಕಳೆದ ಮೂರು ವರ್ಷದಲ್ಲಿ ಕೋವಿಡ್ ಕಾರಣದಿಂದಾಗಿ ಕೊಡಗು ಜಿಲ್ಲೆಗೆ ಬರಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಪ್ರತಿವರ್ಷ ಕೊಡಗು ಜಿಲ್ಲೆಗೆ ಆಗಮಿಸಿ ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದು ಡಾ.ಕಾರ್ಯಪ್ಪ ಅವರು ಹೇಳಿದರು. ಶಾಸಕ ಎಂ.ಪಿ.ಅಪ್ಪಚ್ಚು…
ಮಡಿಕೇರಿ ಜ.4 : ನೀರು ಕುಡಿಯಲೆಂದು ಬಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದ ಹೋರಿ ಕರುವನ್ನು ಶಕ್ತಿ ಮತ್ತು ಯುಕ್ತಿ ಬಳಸಿ ಬಾಲಕನೊಬ್ಬ ರಕ್ಷಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದೆ. ಕಿಬ್ಬೆಟ್ಟ ಗ್ರಾಮದ 9 ನೇ ತರಗತಿ ವಿದ್ಯಾರ್ಥಿ ಕೆ.ಎಂ.ರೋಹನ್ ಎಂದಿನAತೆ ಬುಧವಾರ ಬೆಳಗ್ಗೆ ಸೋಮವಾರಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಗೆ ತೆರಳುತ್ತಿದ್ದಾಗ ಕೆರೆಯಲ್ಲಿ ಹೋರಿ ಕರು ಮುಳುಗಿರುವ ದೃಶ್ಯ ಕಂಡು ಬಂದಿದೆ. ಏನು ಮಾಡಬೇಕೆಂದು ತಿಳಿಯದೆ ಪಕ್ಕದಲ್ಲೇ ಇದ್ದ ಮನೆಗೆ ಮರಳಿದ ಬಾಲಕ ತಂದೆಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಇಬ್ಬರು ಸ್ಥಳಕ್ಕೆ ಬಂದು ನೋಡಿದಾಗ ಹೋರಿ ಕರು ಜೀವ ಉಳಿಸಿಕೊಳ್ಳಲು ಹೋರಾಡುತ್ತಿರುವುದು ಕಂಡು ಬಂದಿದೆ. ಪರಿಸ್ಥಿತಿಯ ಗಂಭೀರತೆ ಅರಿತು ಎಚ್ಚೆತ್ತುಕೊಂಡ ರೋಹನ್ ಕೊಕ್ಕೆ ಕೋಲೊಂದನ್ನು ಹಿಡಿದು ಕೆರೆಯಲ್ಲಿದ್ದ ಕರುವಿನ ಮೂಗುದಾರಕ್ಕೆ ಸಿಕ್ಕಿಸಿದ್ದಾನೆ. ನಂತರ ಸುಮಾರು 25 ಮೀಟರ್ ದೂರಕ್ಕೆ ಕರುವನ್ನು ಎಳೆದು ತಂದಿದ್ದಾನೆ. ಕೆರೆಗೆ ಮೆಟ್ಟಿಲು ಅಥವಾ ಬೇರೆ ಯಾವುದೇ ಮಾರ್ಗವಿಲ್ಲದ…
ವಿರಾಜಪೇಟೆ ಜ.4 : ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಪರಿಶೀಲಿಸಿ ಶ್ರೇಯಾಂಕವನ್ನು ನೀಡುವ ಸಲುವಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗೆ ನ್ಯಾಕ್ ಸಂಸ್ಥೆಯ ಪದಾಧಿಕಾರಿಗಳು ಭೇಟಿ ನೀಡಿದರು. ಎರಡು ದಿನಗಳ ಭೇಟಿಯ ಅಂಗವಾಗಿ ಮೂವರು ತಜ್ಞರನ್ನು ಒಳಗೊಂಡ ತಂಡವು ಆಗಮಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ.ಅವರು ಕಾಲೇಜಿನ ಸಮಗ್ರ ವಿವರಗಳನ್ನು ಒಳಗೊಂಡ ಪಿಪಿಟಿ ಯನ್ನು ಮಂಡನೆ ಮಾಡಿದರು. ಕಾಲೇಜಿನ ಐಕ್ಯೂಎಸಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ತಮ್ಮ ವಿಭಾಗದ ಕಳೆದ ಐದು ವರ್ಷದ ಚಟುವಟಿಕೆಗಳಿಗೆ ಸಂಬಂದಿಸಿದ ವಿಚಾರಗಳನ್ನು ಮಂಡಿಸಿದರು. ನಂತರ ಕಾಲೇಜಿನಲ್ಲಿ ಇರುವ ಸೌಲಭ್ಯಗಳು ಮತ್ತು ಕಟ್ಟಡದ ಪರಿಶೀಲನೆ ನಡೆಸಿದ ತಂಡವು ಎಲ್ಲಾ ವಿಭಾಗಗಳಿಗೆ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ಮಾಡಿದರು. ನಂತರ ವಿದ್ಯಾರ್ಥಿ, ಹಳೆ ವಿದ್ಯಾರ್ಥಿ, ಅಧ್ಯಾಪಕರು ಮತ್ತು ಆಡಳಿತ ಸಿಬ್ಬಂದಿ ವರ್ಗದವರ ಜೊತೆ ಸಂವಾದ ನಡೆಸಿದರು. ಇದೇ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ವಿರಾಜಪೇಟೆಯ ಶಾಸಕ ಕೆ.ಜಿ.ಬೋಪಯ್ಯ ಆಗಮಿಸಿ ನ್ಯಾಕ್…






