ಲೇಖಕ: admin

ಮಡಿಕೇರಿ ಫೆ.17 :  ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಪ್ರಯುಕ್ತ ಮಡಿಕೇರಿಯ ಪನಾಸಿಯ ಪಾಲಿ ಕ್ಲಿನಿಕ್‌ನಲ್ಲಿ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆರೋಗ್ಯ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪನಾಸಿಯ ಪಾಲಿ ಕ್ಲಿನಿಕ್, ಹಿರಿಯರಿಂಗ್, ಸ್ಪೀಚ್ ಅಂಡ್ ಇಂಪ್ಲಾಂಟ್ ಕ್ಲಿನಿಕ್ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಿವಿ, ಮೂಗು, ಗಂಟಲು, ದಂತ ಹಾಗೂ ಅಸ್ತಮಾ ಕಾಯಿಲೆ ಪರೀಕ್ಷೆಯೊಂದಿಗೆ ಸಾಮಾನ್ಯ ರೋಗಗಳ ತಪಾಸಣೆಯಲ್ಲಿ 60 ಜನ ಪಾಲ್ಗೊಂಡಿದ್ದರು. ಅಗತ್ಯ ಇರುವವರಿಗೆ ಸಿಪ್ಲಾ ಸಂಸ್ಥೆಯಿಂದ ಉಚಿತವಾಗಿ ಔಷಧಿ ನೀಡಲಾಯಿತು.  ಡಾ.ತಿರುಮಲರಾವ್, ಡಾ.ದಿವ್ಯಾ ಜ್ಯೋತಿ, ವಿಷಯ ಪರಿಣಿತ ಜೀತೇಂದ್ರಕುಮಾರ್ ನೇತೃತ್ವದಲ್ಲಿ ತಪಾಸಣೆ ಮಾಡಲಾಯಿತು.  ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕಾರ್ಯಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಬೆಳ್ಳಿ ಮಹೋತ್ಸವ ಆರೋಗ್ಯ ಸಮಿತಿ ಸಂಚಾಲಕ ಅಬ್ದುಲ್ಲಾ, ಕೊಡಗು ಪ್ರೆಸ್ ಕ್ಲಬ್…

Read More

ಸುಂಟಿಕೊಪ್ಪ,ಫೆ.17:  ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳ ನೃತ್ಯ ಸಂಗೀತ, ಹಾಡು ಸಾಮೂಹಿಕ ನೃತ್ಯಗಳು ನೆರೆದಿದ್ದವರ ಮನಸೂರೆಗೊಂಡಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು  ವಿಭಿನ್ನ ಬಗೆಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. ಸಮಾರಂಭಕ್ಕೆ ಗದ್ದೆಹಳ್ಳದ ಅಮಿಟಿ ಯೂತ್ ಕ್ಲಬ್  ಆರ್ಥಿಕ ನೆರವು  ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Read More

ಸುಂಟಿಕೊಪ್ಪ, ಫೆ.17: ಸುಂಟಿಕೊಪ್ಪ ಗ್ರಾ.ಪಂ ನೂತನ ಕಚೇರಿಯಲ್ಲಿ ಗಣಪತಿ ಹೋಮ ನಡೆಯಿತು. ಗ್ರಾ.ಪಂ ಅಧ್ಯಕ್ಷೆ  ಶಿವಮ್ಮ  ಮಾತನಾಡಿ,  ನೂತನ ಕಟ್ಟಡಕ್ಕೆ 4 ವರ್ಷದ ಹಿಂದೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ  ನೆರವೇರಿಸಿದರು.   ಗ್ರಾ.ಪಂ ರೂ.37 ಲಕ್ಷ  ಹಾಗೂ ಜಿ.ಪಂ.ನಿಂದ 10 ಲಕ್ಷ ರೂ ವೆಚ್ಚದಲ್ಲಿ  ಸುಸಜ್ಜಿತ  ಕಟ್ಟಡವನ್ನು ಮಾರುಕಟ್ಟೆ ಸಮೀಪದಲ್ಲಿ ನಿರ್ಮಾಣವಾಗಿದೆ.  ಸದ್ಯದಲ್ಲೇ ಈ ಕಟ್ಟಡದ ಉದ್ಘಾಟನೆಯನ್ನು ನೇರವೇರಿಸಲಾಗುವುದೆಂದು ಅಧ್ಯಕ್ಷೆ ಶಿವಮ್ಮ ತಿಳಿಸಿದರು.  ನಂತರ ಮಾತನಾಡಿದ ಗ್ರಾ.ಪಂ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಸುಂಟಿಕೊಪ್ಪ ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಹೊಸ ಗ್ರಾ.ಪಂ  ಕಟ್ಟಡದಿಂದ ಭಾವೈಕ್ಯತೆ ಮೂಡಿ ಸರ್ವರಿಗೂ ಒಳಿತಾಗಲಿ ಎಂದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಿ.ಹೆಚ್.ವೇಣುಗೋಪಾಲ ಮಾತನಾಡಿ, ನೂತನ ಕಟ್ಟಡದಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ಎಲ್ಲಾ ಕೆಲಸಗಳು ಸುಲಲಿತವಾಗಿ ನಡೆಯಲಿ, ಸಿಬ್ಬಂದಿಗಳಿಗೆ ಒಳಿತಾಗಲಿ ಪಂಚಾಯಿತಿ ಮತ್ತಷ್ಟು ಅಭಿವೃದ್ಧಿಯಾಗಲೆಂದು  ಹಾರೈಸಿದರು. ಗ್ರಾ.ಪಂ ನೂತನ ಕಚೇರಿಯ ಪೀಠೋಪಕರಣಕ್ಕೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶಾಸಕರ ನಿಧಿಯಿಂದ ರೂ.5 ಲಕ್ಷ ಬಿಡುಗಡೆಗೊಳಿಸುವುದಾಗಿ  ಪಿಡಿಓ ಹೇಳಿದರು. ಈ…

Read More

ಮಡಿಕೇರಿ ಫೆ.17 : ಎಲ್ಲಾ ಕ್ಷೇತ್ರ ಮತ್ತು ಎಲ್ಲಾ ವರ್ಗದ ಜನರಿಗೂ ತೃಪ್ತಿಯಾಗಬಲ್ಲ ಅದ್ಭುತವಾದ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ತಿಳಿಸಿದ್ದಾರೆ. ಕೊಡಗಿನ ಶಾಸಕರುಗಳ ಮನವಿಗೆ ಸ್ಪಂದಿಸಿ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 100 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ನ್ನು ಘೋಷಿಸಿದ್ದಾರೆ. ಮಹಿಳೆಯರು, ವಿದ್ಯಾರ್ಥಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹಾಗೂ ಕಾರ್ಮಿಕ ವರ್ಗಕ್ಕೆ ಬರಪೂರ ಕೊಡುಗೆಗಳನ್ನು ನೀಡಿದ್ದಾರೆ. ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯಡಿ ವಾರ್ಷಿಕ 10ಸಾವಿರ ರೂ., ಶೂನ್ಯ ಬಡ್ಡಿ ದರದಲ್ಲಿ ರೂ.3 ಲಕ್ಷದಿಂದ 5 ಲಕ್ಷದ ವರೆಗೆ ರೈತರಿಗೆ ಸಾಲ, ಆಕಸ್ಮಿಕವಾಗಿ ಮೃತಪಡುವ ರೈತರಿಗೆ ಜೀವನ ಜ್ಯೋತಿ ವಿಮೆಯಡಿ ರೂ.2 ಲಕ್ಷ ನೆರವು, ಕೃಷಿ ಯಂತ್ರೋಕರಣಗಳಿಗೆ ಆರ್ಥಿಕ ನೆರವು, ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್, ಅಂಗನವಾಡಿ ಕಾರ್ಯಕರ್ತರಿಗೆ ರೂ.50 ಸಾವಿರ ಸಹಾಯಧನ, ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಸೇರಿದಂತೆ ಅನೇಕ…

Read More

ವಿರಾಜಪೇಟೆ ಫೆ.16 : ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಸಂಸ್ಥೆಯಿಂದ ಕ್ಷಯ ರೋಗದ ಬಗ್ಗೆ ಸಾರ್ವಜನಿಕರಿಗೆ ಸಮಗ್ರ ಮಾಹಿತಿಯನ್ನು ಎಲ್‍ಇಡಿ ಪರದೆಯ ಮೂಲಕ ಪ್ರದರ್ಶಿಸಲಾಯಿತು. ಈ ಸಂದರ್ಭ ಸಾರ್ವಜನಿಕ ಆಸ್ಪತ್ರೆ ವಿರಾಜಪೇಟೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Read More

ನಾಪೋಕ್ಲು ಫೆ.17 : ಶೌರ್ಯ ವಿಪತ್ತು ಘಟಕದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ಘಟಕದ ಪದಾಧಿಕಾರಿಗಳು ದೇವಾಲಯದ ಆವರಣದಲ್ಲಿದ್ದ ಕಸ, ಕಡ್ಡಿಗಳನ್ನು ತೆಗೆದು ಶುಚಿಗೊಳಿಸಿದರು. ಸಾಮಾಜಿಕ ಕಳಕಳಿ ಹೊಂದಿ, ಹತ್ತು ಹಲವು ಜನಪರ ಸೇವಾ ಕಾರ್ಯಗಳನ್ನು ನಿರ್ವಹಿಸುತ್ತಿರುವ ಈ ಘಟಕವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಘಟಕದ ಉಮಾಲಕ್ಷ್ಮಿ ಅವರ ನೇತೃತ್ವದಲ್ಲಿ ಸಂಯೋಜಕಿ ಬಾಳೆಯಡ ದಿವ್ಯ, ಶಂಕರ, ದಿಲೀಶ್, ಶ್ಯಾಮಲಾ, ಚಂದ್ರಕಲಾ, ಗೀತಾ, ರವಿ, ರಾಹುಲ್ ಸೇವೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಫೆ.17 : ನಗರದ ಶ್ರೀ ಮುನೀಶ್ವರ ಯುವಕ ಸಂಘ ಮತ್ತು ಅಮೆಚೂರು ಕಬಡ್ಡಿ ಅಸೋಸಿಯೇಷನ್ ವತಿಯಿಂದ ಫೆ.18 ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ ಅಕಾಲಿಕವಾಗಿ ನಿಧನರಾದ ಸುದರ್ಶನ ಬಡಾವಣೆಯ ನಿವಾಸಿಗಳಾದ ಪಂದಿಯಂಡ ಆಶಾ, ರೋಶನ್ ಶೆಟ್ಟಿ ಹಾಗೂ ಶಶಾಂಕ್ ಗೌಡ ಅವರ ಸ್ಮರಣಾರ್ಥ ಎ.ಆರ್.ಎಸ್. ಮೆಮೋರಿಯಲ್ ಟ್ರೋಫಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ಮುನೀಶ್ವರ ದೇವಸ್ಥಾನದ ಕ್ರೀಡಾ ಮೈದಾನದಲ್ಲಿ ಸಂಜೆ 7 ಗಂಟೆಗೆ ಬಂಟರ ಸಂಘದ ಅಧ್ಯಕ್ಷ ಜಗದೀಶ್ ರೈ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ವಾರ್ಡ್‍ನ ನಗರಸಭಾ ಸದಸ್ಯರುಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಕ್ರೀಡಾ ಪ್ರೇಮಿಗಳಿಗಾಗಿ 2 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 9 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸಮಾಜ ಸೇವಕ ಡಾ.ಮಂತರ್ ಗೌಡ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್…

Read More

ಮಡಿಕೇರಿ ಫೆ.17 : ಯುಗಾದಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಮಾ.24 ರಿಂದ 26ರ ವರೆಗೆ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ ಎಂದು ಭಜರಂಗದಳದ ಸಂಚಾಲಕ ರಾಧಾಕೃಷ್ಣ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಾ.24 ರಂದು ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ಮಾ.26 ರಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನದ ತಂಡಕ್ಕೆ 25 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಹಗ್ಗಜಗ್ಗಾಟ ಪಂದ್ಯಾವಳಿಯ ವಿಜೇತರಿಗೆ ರೂ.15 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ರೂ.10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೆ ವೈಯಕ್ತಿಕ ಬಹುಮಾನ ವಿತರಿಸಲಾಗವುದೆಂದು ತಿಳಿಸಿದರು. ಆಸಕ್ತರು ರೂ.2ಸಾವಿರ ಪ್ರವೇಶ…

Read More

ನಾಪೋಕ್ಲು ನ.17 : ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯ ಹೇಳಿದರು. ನಗರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಾಲಕ ಬಾಲಕಿಯರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಎರಡು ದಿನಗಳ ವಿವಿಧ ಕ್ರೀಡಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶಿಬಿರದಿಂದ ದೊರಕುವ ಮಾಹಿತಿಯನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅಥ್ಲೆಟಿಕ್ಸ್ ಹಿರಿಯ ತರಬೇತುದಾರ ಅಂತೋನಿ ಡಿಸೋಜಾ ಮಾತನಾಡಿ, ಕ್ರೀಡಾ ಶಿಬಿರದ ಉದ್ದೇಶ ಕ್ರೀಡೆಯ ಮಹತ್ವ ಹಾಗೂ ಸಾಧಕ ಕ್ರೀಡಾಪಟುಗಳ ಬಗ್ಗೆ ಮಾಹಿತಿ ನೀಡಿದರು. ಹಾಕಿ ತರಬೇತುದಾರರಾದ ಕೆ.ಕೆ.ಬಿಂದಿಯಾ, ಅಥ್ಲೆಟಿಕ್ಸ್ ತರಬೇತುದಾರ ಮಹಾಬಲ, ಸಿಬ್ಬಂದಿ ವರ್ಗ ಮೇಲ್ವಿಚಾರಕರು ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ್ದ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು. ಶಿಬಿರದಲ್ಲಿ ಪಾಲ್ಗೊಂಡಿದ್ದ 75 ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಫೆ.17 : ಹೋರಾಟದ ಸಂದರ್ಭ ಬಿಸಿಯೂಟದ ನೌಕರರನ್ನು ಬೆಂಗಳೂರಿನಲ್ಲಿ ತಡೆದು ಬಂಧಿಸಿದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿ.ಐ.ಟಿ.ಯು ನೇತೃತ್ವದಲ್ಲಿ ಕೊಡಗು ಜಿಲ್ಲಾ ಬಿಸಿಯೂಟ ನೌಕರರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಯ ಈಡೇರಿಕೆಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಮೀಳಾ ಮಾತನಾಡಿ, ಇಂದಿನ ಸರ್ಕಾರ ಹೆಣ್ಣು ಮಕ್ಕಳನ್ನು ಬೀದಿಗೆ ತಳ್ಳಿದೆ. ಬೆಳಗ್ಗೆ 9 ಗಂಟೆಗೆ ಶಾಲೆಗೆ ತೆರಳಿದರೆ, ಸಂಜೆ 4 ಗಂಟೆಗೆ ಮನೆಗೆ ಹಿಂದಿರುಗುತ್ತೇವೆ. ಆದರೆ, ಸರ್ಕಾರ ನಮಗೆ ರೂ.3,600 ರಿಂದ 3,700 ಮಾತ್ರ ಗೌರವ ಧನ ನೀಡುತ್ತದೆ. ಈ ವೇತನದಲ್ಲಿ ಜೀವನ ಹೇಗೆ ಸಾಗಿಸಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ತಿಂಗಳ ವೇತನ ಕೂಡ ಸರಿಯಾದ ಸಮಯಕ್ಕೆ ಲಭ್ಯವಾಗುತ್ತಿಲ್ಲ. ಸರ್ಕಾರ ನಮ್ಮನ್ನು ಕಡಿಗಣಿಸಿದೆ ಎಂದು ದೂರಿದರು. ಸರ್ಕಾರ ನಮ್ಮ ಕೆಲಸದ ಸಮಯ ವಿಸ್ತರಣೆ ಮಾಡಿದರೂ ಸಮಸ್ಯೆಯಿಲ್ಲ. ಆದರೆ,…

Read More