ಮಡಿಕೇರಿ ಜ.4 : ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತಶ್ರಯದಲ್ಲಿ ಜ.23 ರಂದು ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಾಥಾನ್ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಪಂದ್ಯಾವಳಿ ಆರಂಭವಾಗಲಿದ್ದು, ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗೆ ಭಾಗವಹಿಸುವ ಕ್ರೀಡಾ ಪಟುಗಳು ಜ.22ರ ಒಳಗಾಗಿ ನೋಂದಾಯಿಸಿಕೊಳ್ಳುವಂತೆ ನೇತಾಜಿ ಯುವ ಮಂಡಲದ ಪ್ರಮುಖರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9480251938, 8431168783, 8762066118, 6361059178 ಸಂಪರ್ಕಿಸಬಹುದಾಗಿದೆ.
ಲೇಖಕ: admin
ವಿರಾಜಪೇಟೆ ಜ.4 : ರಾಜ್ಯ ಸರಕಾರ ಇದೀಗ ಜಾರಿಗೆ ತಂದಿರುವ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡನೆಯಿಂದ ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಗಣನೀಯ ಪ್ರಮಾಣದಲ್ಲಿ ಕುಂಠಿತವಾಗಲಿದೆ. ಆದ್ದರಿಂದ ಆಡಳಿತರೂಢ ಪಕ್ಷದ ಜಿಲ್ಲೆಯ ಶಾಸಕರು ಕೂಡಲೇ ಮಧ್ಯ ಪ್ರವೇಶಿಸಿ ಸರಕಾರಕ್ಕೆ ನೈಜತೆಯನ್ನು ಮನವರಿಕೆ ಮಾಡಿಕೊಡಬೇಕು. ಅದರ ಮೂಲಕ ಇದನ್ನು ಜಾರಿಗೊಳಿಸುವ ಸಂದರ್ಭದಲ್ಲಿ ವಿಶೇಷ ಪ್ರಕರಣದಡಿ ವಿನಾಯಿತಿ ಪಡೆಯಬೇಕು ಎಂದು ಕೊಡಗು ಜಿ.ಪಂ. ಮಾಜಿ ಸದಸ್ಯರೂ ಆಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ. ಎನ್. ಪ್ರತ್ಯು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 29 ಜಿ.ಪಂ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಜಿ.ಪಂ ಕ್ಷೇತ್ರ 25ಕ್ಕೆ ಕುಸಿದಿದೆ. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಇದೊಂದು ಬಹುದೊಡ್ಡ ದುರಂತವಾಗಲಿದೆ. ಕೊಡಗಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯಗಳ…
ಮಡಿಕೇರಿ ಜ.4 : ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುವ ಮೂಲಭೂತ ಅಂಶವಾಗಿರುವ ಹಿನ್ನೆಲೆಯಲ್ಲಿ, ತನ್ನ ಅಧಿಕಾರದ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಾಲೇಜುಗಳ ಆರಂಭ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜು ಸೇರಿದಂತೆ ಚಿಕ್ಕ ಅಳುವಾರದಲ್ಲಿ ಕೊಡಗು ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಪ್ರಾಮಾಣಿಕವಾಗಿ ಶ್ರಮಿಸಿರುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಂಯುಕ್ತಾಶ್ರದಯಲ್ಲಿ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಮಡಿಕೇರಿ, ಗೋಣಿಕೊಪ್ಪಲು ಮತ್ತು ಸೋಮವಾರಪೇಟೆಗಳಲ್ಲಿ ಮಾತ್ರ ಪದವಿ ಕಾಲೇಜುಗಳಿದ್ದವಾದರೆ, ತಾನು ಅಧಿಕಾರದಲ್ಲಿ ಇದ್ದ ಸಂದರ್ಭ, ಡಿ.ಹೆಚ್. ಶಂಕರಮೂರ್ತಿ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ 162 ಪ್ರಥಮ ದರ್ಜೆ ಕಾಲೇಜುಗಳನ್ನು ರಾಜ್ಯದ ವಿವಿಧೆಡೆ ಆರಂಭಿಸಲಾಯಿತು. ಅದರ ಫಲ ಸ್ವರೂಪವಾಗಿ ನಾಪೋಕ್ಲು, ವಿರಾಜಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಪ್ರಥಮ ದರ್ಜೆ ಕಾಲೇಜುಗಳು ಆರಂಭವಾಗಿ ಗಾಮೀಣ…
ಮಡಿಕೇರಿ ಜ.4 : ಸ್ವಚ್ಛ, ಪ್ರಾಮಾಣಿಕ, ಗೌರವ, ಘನತೆಯುಳ್ಳ ಸರ್ಕಾರಿ ಸೇವೆಗಳನ್ನು ಪಡೆಯುವುದು ಸ್ವಾಭಿಮಾನಿ ಕನ್ನಡಿಗರ ಹಕ್ಕು. ಅದನ್ನು ಸಾಕಾರಗೊಳಿಸಲೆಂದೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯಾದ್ಯಂತ “ಕರುನಾಡು ಕಟ್ಟೋಣ” ಅಭಿಯಾನವನ್ನು ಆರಂಭಿಸಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಜ್ಞಾನಸಿಂಧುಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಲಂಚ ಮತ್ತು ಭ್ರಷ್ಟಾಚಾರವನ್ನು ಸಂಪೂರ್ಣ ತೊಡೆದು ಹಾಕಿ, ಮದ್ಯ ನಿಷೇಧ, ಉತ್ತಮ ಸರ್ಕಾರಿ ಆಸ್ಪತ್ರೆ ನಿರ್ಮಿಸುವ ಮೂಲಕ ಪ್ರತಿಯೊಬ್ಬರೂ ಘನತೆಯಿಂದ ಬದುಕಬಹುದಾದ ವಾತಾವರಣ ಸೃಷ್ಟಿಸುವುದಾಗಿ ಭರವಸೆ ನೀಡಿದರು. ಕೊಡಗಿನಲ್ಲಿ ದಶಕಗಳಿಂದಲೂ ಜ್ವಲಂತ ಸಮಸ್ಯೆಗಳಿದ್ದು, ಇಲ್ಲಿವರೆಗೂ ಪರಿಹಾರ ಕಂಡಿಲ್ಲ. ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣದಿಂದ ಪ್ರಾಕೃತಿಕ ವಿಕೋಪ ಉಂಟಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯ ಜನತೆ ಕೆಆರ್ಎಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇ ಆದಲ್ಲಿ ಉತ್ತಮ ಬದಲಾವಣೆ ಕಾಣಲು ಸಾಧ್ಯ ಎಂದ ಅವರು, ಪಕ್ಷವು…
ಮಡಿಕೇರಿ ಜ.4 : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಹಾಗೂ ಎಸ್ಎಸ್ಎಫ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಜ.6 ರಂದು ಮೆಂಬರ್ ಶಿಪ್ ಡೇ ನಡೆಯಲಿದೆ ಎಂದು ಎಸ್ವೈಎಸ್ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಪಿ.ಮೊಯಿದ್ದಿನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಿತಿನ ಹಾದಿಯಲ್ಲಿ ನಿಮ್ಮದ್ದೊಂದು ಹೆಜ್ಜೆ ಇರಲಿ” ಎಂಬ ಶೀರ್ಷಿಕೆಯಡಿಯಲ್ಲಿ 47 ವರ್ಷ ಮೇಲ್ಪಟ್ಟವರಿಗೆ ಸದಸ್ಯತ್ವ ನೀಡಿ ಲಕ್ಷಾಂತರ ಕಾರ್ಯಕರ್ತರನ್ನು ಸೇರಿಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ ಎಂದರು. ಇದೇ ಸಂದರ್ಭ 32 ರಿಂದ 47 ವರ್ಷದೊಳಗಿರುವವರಿಗೆ “ಪರಂಪರೆಯ ಪ್ರತಿನಿಧಿಗಳಾಗೋಣ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ಎಸ್.ವೈಎಸ್ ಸದಸ್ಯತನ ನೀಡುತ್ತಿದ್ದು, ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಸಮಿತಿಯು ಸಕ್ರೀಯವಾಗಿ ತೊಡಗಿಸಿಕೊಂಡಿದೆ ಎಂದು ಮಾಹಿತಿ ನೀಡಿದರು. ಸಾಮಾಜಿಕ, ಧಾರ್ಮಿಕ ಹಾಗೂ ಸಾಂತ್ವನ (ಸಮಾಜ ಸೇವೆ)ಯಲ್ಲಿ ಕಾರ್ಯಾಚರಿಸುತ್ತಿರುವ ಈ ಸಂಘಟನೆಯನ್ನು ಜಿಲ್ಲೆಯಲ್ಲಿ ಇನ್ನಷ್ಟು ಬಲಪಡಿಸುವ ಗುರಿಹೊಂದಿದೆ. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ, ಕೋವಿಡ್ ಸಂದರ್ಭದಲ್ಲಿ ಜಾತಿ, ಧರ್ಮ ಭೇದವಿಲ್ಲದೆ ತೊಡಗಿಸಿಕೊಂಡು…
ಕುಶಾಲನಗರ ಜ.4 : ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದ ಸಮುದಾಯ ಭವನದಲ್ಲಿ ಇ-ಶ್ರಮ್ ಯೋಜನೆಯ ಅರಿವು ಕಾರ್ಯಕ್ರಮ ಹಾಗೂ ನೋಂದಣಿ ಅಭಿಯಾನ ನಡೆಯಿತು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಿ ಬಗಡಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರ ದತ್ತಾಂಶ ಅಲಭ್ಯತೆಯ ಕಾರಣ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಇ ಶ್ರಮ್ ಕಾರ್ಡನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಕಾರ್ಮಿಕರ ಇ ಶ್ರಮ್ ಕಾರ್ಡ್ ಗೆ ನೋಂದಾಯಿಸಿಕೊಂಡು, ಅದರ ಉಪಯೋಗವನ್ನು ಸದುಒಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಅಸಂಘಟಿಕ ವಲಯದ ಕಾರ್ಮಿಕರು ಕಡ್ಡಾಯವಾಗಿ ಇ ಶ್ರಮ್ ಕಾರ್ಡನ್ನು ಪಡೆದುಕೊಳ್ಳಬೇಕು. ಇ ಶ್ರಮ್ ಕಾರ್ಡ್ ಪಡೆದವರು, ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ…
ಮಡಿಕೇರಿ, ಜ.4 : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿ.ಪಂ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ…
ಮಡಿಕೇರಿ ಜ.4 : ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಜ.16 ರಿಂದ ಜ.18ರ ವರೆಗೆ ನಡೆಯಲಿರುವ ರಾಜ್ಯ ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಗೆ ಜ.8 ರಂದು ಕೊಡಗು ತಂಡದ ಆಡಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ಕುಶಾಲನಗರದ ಜ್ಞಾನಭಾರತಿ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಪುರುಷ ಆಟಗಾರರು 85 ಕೆ.ಜಿ.ಒಳಗಿರಬೇಕು, ಮಹಿಳಾ ಆಟಗಾರರು 75 ಕೆ.ಜಿ.ಒಳಗಿರಬೇಕು, ಪುರುಷರು ಹಾಗೂ ಮಹಿಳೆಯರು ಕ್ರೀಡಾ ಸಮವಸ್ತ್ರದೊಂದಿಗೆ ಹಾಜರಾಗಬೇಕೆಂದು ಕೊಡಗು ಜಿಲ್ಲಾ ಆಮೇಚೂರ್ ಕಬಡ್ಡಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಿ.ಎಸ್.ಮಧು : 9483825085, ಅವಿನಾಷ್ : 9036000141, ಮಣಿಕಂಠ : 9482863707 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.4 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಜ.6 ರಂದು ಮಾಸಿಕ ಸಾಮೂಹಿಕ ದುರ್ಗಾಪೂಜೆ ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ನಡೆಯಲಿರುವ ದುರ್ಗಾಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸೋಮವಾರಪೇಟೆ ಜ.4 : ತಾಲ್ಲೂಕಿನ ಮಾದಾಪುರ, ಬೇಳೂರು ಮತ್ತು ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿವೇಶನ ರಹಿತರಿಗೆ ವಿತರಿಸುವಂತೆ ಆಗ್ರಹಿಸಿ ಎಐಟಿಯುಸಿ ವತಿಯಿಂದ ತಹಸೀಲ್ದಾರ್ ಎಸ್.ಎನ್.ನರಗುಂದ ಅವರಿಗೆ ಮನವಿ ಸಲ್ಲಿಸಲಾಯಿತು. ಅನೇಕ ವರ್ಷಗಳಿಂದ ಕೃಷಿ ಕಾರ್ಮಿಕರು ಸ್ವಂತ ನಿವೇಶನ ಮತ್ತು ಮನೆ ಇಲ್ಲದೆ. ಲೈನ್ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಮನೆ ನಿಡುವಂತೆ ಸ್ಥಳೀಯ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರೂ, ಇಲ್ಲಿಯವರೆಗೆ ಕಾರ್ಯಗತವಾಗಿಲ್ಲ. ತಕ್ಷಣವೇ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ನೀಡುವಂತೆ ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ಸೋಮಪ್ಪ ಮನವಿ ಮಾಡಿದರು. ಗರಗಂದೂರು ಗ್ರಾಮದ ಸರ್ವೆ ನಂ.231/1ರಲ್ಲಿ 50.22 ಏಕರೆ ಜಾಗ ಮತ್ತು 22/1ರಲ್ಲಿ 1.83 ಏಕರೆ ಪೈಸಾರಿ ಜಾಗ ಇದ್ದು, ಈ ಜಾಗದಲ್ಲಿ ನಿವೇಶನ ರಹಿತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವಂತೆ ಹಲವಾರು ಭಾರಿ ಸಂಬಂಧಿಸಿದ ಇಲಾಖೆಯವರಿಗೆ…






