ಮಡಿಕೇರಿ ಫೆ.17 : ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮಗಳಿಗೆ ತೆರಳುವ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ನಂದಿಮೊಟ್ಟೆ ಜಂಕ್ಷನ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಹೆಬ್ಬೆಟ್ಟಗೇರಿ ಗ್ರಾಮಸ್ಥರಾದ ರಮೇಶ್, ನಂದಿಮೊಟ್ಟೆ ಜಂಕ್ಷನ್ನಿಂದ ಹೆಬ್ಬೆಟ್ಟಗೇರಿ ಹಾಗೂ ದೇವಸ್ತೂರು ಗ್ರಾಮಗಳಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ಗ್ರಾಮಗಳಲ್ಲಿ ಶಾಲೆ ಮುಚ್ಚಲ್ಪಟ್ಟಿರುವುದರಿಂದ ಹಾಗೂ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕೂಡ ಇಲ್ಲದಿರುವುದರಿಂದ ಬಹುತೇಕ ಮಂದಿ ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಆದರೆ, ರಸ್ತೆ ಹದಗಟ್ಟಿರುವುದರಿಂದ ಆಟೋ ಹಾಗೂ ಖಾಸಗಿ ವಾಹನಗಳು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕುತ್ತಿದ್ದಾರೆ. ಬರುವ ವಾಹನಗಳಿಗೆ ದುಬಾರಿ ಬಾಡಿಗೆ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತುರ್ತು ಪರಿಸ್ಥಿತಿಯಲ್ಲಿ ಆಂಬ್ಯುಲೆನ್ಸ್ ಕೂಡ ಈ ರಸ್ತೆಯಲ್ಲಿ ಸಂಚರಿಸಲಾಗದಷ್ಟು ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಇದೇ ರಸ್ತೆಯ ಮೂಲಕ ಪ್ರವಾಸಿ ತಾಣ ಮಾಂದಲ್ಪಟ್ಟಿಗೆ…
ಲೇಖಕ: admin
ಮಡಿಕೇರಿ ಫೆ.17 : ರಾಷ್ಟ್ರಮಟ್ಟದಲ್ಲಿ ನೂರು ವರ್ಷ ಪೈರೈಸಿದ ಐದು ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಕರ್ನಾಟಕದ ಮೂರು ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕೊಡಗಿನ ಭಾಗಮಂಡಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಶಸ್ತಿಗೆ ಭಾಜನವಾಗಿದೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳ ಸಭೆಯಲ್ಲಿ ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಹರೀಶ್ ಪೂವಯ್ಯ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್ ಅವರು ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಜೆ.ಎಸ್.ನಂಜುಡಪ್ಪ ಅವರಿಗೆ ಹಸ್ತಾಂತರಿಸಿದರು.
ಮಡಿಕೇರಿ ಫೆ.17 : ಕೊಡಗು ಸಿರಿಗನ್ನಡ ವೇದಿಕೆ ಹಾಗೂ ಜಿಲ್ಲಾ ಮತ್ತು ಮಡಿಕೇರಿ ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ಶಿವರಾತ್ರಿಯ ಪ್ರಯುಕ್ತ ಕೊಡಗಿನ ಕವಿಗಳಿಗೆ ನಡೆದ ಕವನ ಸ್ಪರ್ಧೆಯ ವಿಜೇತರ ಪಟ್ಟಿಪ್ರಕಟವಾಗಿದೆ. ಸ್ಪರ್ಧೆಯಲ್ಲಿ ಮೂರ್ನಾಡು ಕೋಡಂಬೂರು ಗ್ರಾಮದ ಕೆ.ಜಿ.ರಮ್ಯಾ ಪ್ರಥಮ, ಸೋಮವಾರಪೇಟೆಯ ಎಲಿಜಬೆತ್ ಲೋಬೊ ದ್ವಿತೀಯ, ಮಡಿಕೇರಿಯ ಬಿ.ಜಿ.ಅನಂತ ಶಯನ ತೃತೀಯ ಸ್ಥಾನ ಪಡೆದುಕೊಂಡಿದ್ದು ನಾಲ್ಕನೇ ಸ್ಥಾನವನ್ನು ಮಡಿಕೇರಿಯ ಕೆ.ಶೋಭಾ ರಕ್ಷಿತ್, ಹುದಿಕೇರಿಯ ಚಕ್ಕೇರ ತ್ಯಾಗರಾಜ ಅಪ್ಪಯ್ಯ, ಬೋಯಿಕೇರಿ ಗ್ರಾಮದ ಪಿ.ಎಸ್. ವೈಲೇಶ್ ಪಡೆದುಕೊಂಡಿದ್ದಾರೆ. ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಮುಂದೆ ತಾಲೂಕಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ( ದಿನಾಂಕ ಮತ್ತು ಸ್ಥಳ ನಂತರ ತಿಳಿಸಲಾಗುವುದು ) ಕವನ ವಚನ ಮಾಡಲು ಅವಕಾಶ ಕಲ್ಪಿಸಲಾಗುವುದು, ಹಾಗೂ ಕಳುಹಿಸಿದ ಎಲ್ಲಾ ಕವನವನ್ನು ಪುಸ್ತಕ ರೂಪದಲ್ಲಿ ಪ್ರಕಟವಾಗುವುದು, ಎಲ್ಲಾ ಭಾಗವಹಿಸಿದ ಸ್ಪರ್ಧಿಗಳಿಗೆ ಮೆಚ್ಚುಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ಪತ್ರಿಕಾ…
ಮಡಿಕೇರಿ ಫೆ.17 : 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ಜನರು ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 2023-24ನೇ ಸಾಲಿನ ಆಯವ್ಯಯದಲ್ಲಿ. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿಶೇಷ ಪ್ಯಾಕೇಜ್ ಮಂಜೂರು ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.
ಮಡಿಕೇರಿ ಫೆ.16 : ಅಂತಾರ್ಜಾಲದ ತೊಡಕು ಇರುವ ಕೊಡಗಿನಲ್ಲಿ ರೇಡಿಯೋ ಪರಿಣಾಮಕಾರಿಯಾಗಿ ಸುದ್ದಿಯನ್ನು ಮುಟ್ಟಿಸುತ್ತಿದ್ದು, ಸರ್ಕಾರಿ ಇಲಾಖೆಗಳನ್ನೂ ಸೇರಿಕೊಂಡು ಖಾಸಗಿ ಸಂಸ್ಥೆಗಳಿಗೂ ಪ್ರಯೋಜನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ ಶೇಕ್ ನುಡಿದರು. ಮಡಿಕೇರಿ ಆಕಾಶವಾಣಿ ಕೇಂದ್ರವು ಹಮ್ಮಿಕೊಂಡ ರೇಡಿಯೋ ಕಿಸಾನ್ ದಿನದ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ ಕೃಷಿಕರಿಗೆ ಉಪಯುಕ್ತವಾದ ವಿಚಾರಗಳು ಪ್ರಸಾರವಾಗುತ್ತಿದೆ. ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಯನ್ನು ತಿಳಿಸಲು ಅನುಕೂಲವಾಗಿದೆ. ಇತರೇ ಜಿಲ್ಲೆಗಳಿಗಿಂತ ಕೊಡಗಿನ ಪರಿಸರ ಭಿನ್ನವಾಗಿದೆ. ಇಲ್ಲಿಯೂ ಸಾಧಕ ರೈತರು ಇದ್ದಾರೆ. ಕೃಷಿ ಇಲಾಖೆಯು ಹಾಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನವನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರದ ಕೃಷಿ ಸಮ್ಮಾನ್ ಯೋಜನೆಗೆ ರೈತರು ನೋಂದಾಯಿಸಿಕೊಂಡು ಪ್ರಯೋಜನ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿ.ಪಂ ಉಪ ಕಾರ್ಯದರ್ಶಿ ಜಿ. ಧನರಾಜ್ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಅಡಿ ನೂರಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಇದೆ. ರೈತರ ಹತ್ತಾರು ಕೆಲಸಗಳಿಗೆ ಈ ಮೂಲಕ ಸಹಾಯವಾಗಲಿದೆ ಎಂದರು. ಆಕಾಶವಾಣಿಯ ಕಾರ್ಯಕ್ರಮ…
ಮಡಿಕೇರಿ ಫೆ.16 : 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಇದೇ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ದಿನಾಂಕ 18.02.2023ರ ಒಳಗಾಗಿ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಕವನವನ್ನು ವಾಟ್ಸಪ್ ಮೂಲಕ ಈ ಸಂಖ್ಯೆಗಳಿಗೆ 9945794414, 7619270529 ಕಳುಹಿಸಬಹುದೆಂದು ಸಮ್ಮೇಳನ ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೇರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ, ಫೆ.16 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.8 ರಂದು ಕುಶಾಲನಗರದಲ್ಲಿ ಮಹಿಳಾ ಪತ್ರಕರ್ತರು, ಪತ್ರಕರ್ತರ ಕುಟುಂಬ ಸದಸ್ಯರು ಮತ್ತು ಸಾರ್ವಜನಿಕ ಮಹಿಳೆಯರನ್ನೊಳಗೊಂಡಂತೆ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನ ಆಚರಿಸಲು ನಿರ್ಧರಿಸಲಾಯಿತು. ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಅವರನ್ನು ಕಾರ್ಯಕ್ರಮದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮದ ರೂಪುರೇಷೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಊಟೋಪಚಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದವರು ಮಹತ್ವಪೂರ್ಣ ಸಲಹೆಗಳನ್ನು ನೀಡಿದರು. ಕಾರ್ಯಕ್ರಮ ಸಂಚಾಲಕರಾದ ವನಿತಾ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಆಧ್ಯಕ್ಷ ಎಂ.ಎನ್. ಚಂದ್ರಮೋಹನ್, ಖಜಾಂಚಿ ಕುಡೆಕಲ್ ಗಣೇಶ್, ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ…
ನಾಪೋಕ್ಲು ಫೆ.16 : ಕುಂಜಿಲ ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಮರಂದೊಡ ಗ್ರಾಮದ ನಿವಾಸಿ ಬಾರಿಕೆ ಆರ್. ಮಾದಪ್ಪ(71) ಅವರು ತಿರುಪತಿ ದರ್ಶನದ ಸಮಯದಲ್ಲಿ ಕುಟುಂಬದವರಿಂದ ಫೆ.12ರ ಮುಂಜಾನೆ ಆಕಸ್ಮಿಕವಾಗಿ ಬೇರ್ಪಟ್ಟು ನಾಪತ್ತೆಯಗಿರುತ್ತಾರೆ. ಈ ಸಂದರ್ಭ ಬಿಳಿ ಚೆಕ್ಸ್ ಶರ್ಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಕೊಡಗಿನಿಂದ ತಿರುಪತಿಗೆ ಹೋಗುವವರು/ಹೋಗಿರುವವರು ಇವರ ಸುಳಿವು ಸಿಕ್ಕಿದ ತಕ್ಷಣ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ದೂರವಾಣಿ: 9008584767, 8105491545, 9731295363 (ವರದಿ : ದುಗ್ಗಳ ಸದಾನಂದ)
ಸುಂಟಿಕೊಪ್ಪ,ಫೆ.16: ದೂರದೃಷ್ಟಿ ಮತ್ತು ಪ್ರಾಮಾಣಿಕತೆಯಿಂದ ನಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜೀವನದಲ್ಲಿ ಯಶಸ್ಸು ಕಾಣಬೇಕೆಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಹೇಳಿದರು. ಕೊಡಗು ಜಿ.ಪಂ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸರಕಾರಿ ಶಾಲೆ ಶಿಕ್ಷಣದ ಗುಣಮಟ್ಟ, ಮಕ್ಕಳಲ್ಲಿ ಲೋಕ ಜ್ಞಾನ, ಸಂಸ್ಕೃತಿ, ಸಂಸ್ಕಾರ ಕಲಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪ್ರತಿಯೊಬ್ಬರೂ ತಮ್ಮ ಕೆಲಸಗಳಲ್ಲಿ ಒಳ್ಳೆಯ ಉದ್ದೇಶ ಹೊಂದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ವಿಶ್ಲೇಷಿದ ಅವರು ಜೀವನದಲ್ಲಿ ವಿವೇಚನೆ, ಪ್ರಾಮಾಣಿಕ ಪ್ರಯತ್ನಗಳು ಮುಖ್ಯ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಶಾಲೆಗೆ 23 ವರ್ಷಗಳ ಇತಿಹಾಸವಿದ್ದು, ಶಾಲೆಯ ಆವರಣ ಮತ್ತು ಬೆಳೆದು ಬಂದ ವಿವರವಾದ ಮಾಹಿತಿಯನ್ನು ನೀಡಿದರು. ಶಾಲೆಗೆ ಅತೀ ಅವಶ್ಯಕವಾಗಿರುವ ಮೂಲ ಸೌಲಭ್ಯಗಳ ಬಗ್ಗೆ ಬೇಡಿಕೆಯನ್ನು ಸಲ್ಲಿಸಿದರು.…
ಮಡಿಕೇರಿ ಫೆ.16 : ಶನಿವಾರಸಂತೆ 66 ಕೆವಿ ವಿದ್ಯುತ್ ವಿತರಣಾ ಕೇಂದ್ರಲ್ಲಿ ಶಕ್ತಿ ಪರಿವರ್ತಕದ ಕಾಮಗಾರಿ ಮತ್ತು ನಿರ್ವಹ ಣೆ ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ರವರು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಆಲೂರು, ಗೋಪಲಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಮಣಜೂರು, ಬೀಟಿಕಟ್ಟೆ, ಅಂಕನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.






