ಲೇಖಕ: admin

ನಾಪೋಕ್ಲು ಜ.4 : ಉತ್ತಮ ಪರಿಸರದಲ್ಲಿ ಸರಳತೆ ಹಾಗೂ ಮೌಲ್ಯಯುತ ಶಿಕ್ಷಣ ದೊರೆಯುವುದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಗುರಿ ಸಾಧಿಸಬಹುದು ಎಂದು ವಿರಾಜಪೇಟೆಯ ಡಾ. ರೇಖಾ ಚಿಣ್ಣಪ್ಪ ಹೇಳಿದರು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿಯನ್ನು ಇರಿಸಿಕೊಳ್ಳಬೇಕು. ಉತ್ತಮ ಗುಣ ನಡತೆಗಳನ್ನು ರೂಡಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದರು. ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯವಿದ್ದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯ. ಮೌಲ್ಯಾಧಾರಿತ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಗುರಿಯಾಗಿರಬೇಕು ಎಂದರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಬೊಪ್ಪಂಡ.ಎಂ.ಬೋಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಸ್ಥೆಯ ದ್ಯೇಯೋದ್ದೇಶ ಹಾಗೂ ಕಾರ್ಯ ಚಟುವಟಿಕೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಕಲಿಯಂಡ…

Read More

ಸೋಮವಾರಪೇಟೆ ಜ.4 : ಸೋಮವಾರಪೇಟೆಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಮೇರಿಕಾದಲ್ಲಿ ಕಿಡ್ನಿ ತಜ್ಞರಾಗಿರುವ ಶಾಸಕ ಅಪ್ಪಚ್ಚು ರಂಜನ್ ಅವರ ಪುತ್ರ ಎಂ.ಎ.ಕಾರ್ಯಪ್ಪ ಉಚಿತ ಆರೋಗ್ಯ ತಪಾಸಣೆ ನಡೆಸಿದರು. ಕಿಡ್ನಿಗೆ ಸಂಬಂಧಿಸಿದಂತೆ ರೋಗಿಗಳು ಸೋಮವಾರದಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

Read More

ಸೋಮವಾರಪೇಟೆ ಜ.4 : ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ 36ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾವಳಿಯು ಜ.7ರಂದು ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಪಟ್ಟಣದ ಸಾಕಮ್ಮನ ಬಂಗಲೆ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪಂದ್ಯಾವಳಿ ಪ್ರಾರಂಭವಾಗಲಿವೆ. ಮೈದಾನ ಶುಲ್ಕ 1200 ರೂ.ಗಳನ್ನು ನಿಗಧಿಪಡಿಸಲಾಗಿದೆ. ಮೊದಲ ಬಹುಮಾನ 10 ಸಾವಿರ ರೂ., ಎರಡನೇ ಬಹುಮಾನ 5ಸಾವಿರ, ತೃತೀಯ ಬಹುಮಾನ 3 ಸಾವಿರ ರೂ. ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಜ.7ರಂದು ಬೆಳಿಗ್ಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಮೈದಾನ ಶುಲ್ಕ 400ರೂ.ಗಳು, 20 ವರ್ಷದೊಳಗಿನ ಮಕ್ಕಳಿಗೂ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ರೂ.600 ಮೈದಾನ ಶುಲ್ಕವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9449791791 ಸಂಪರ್ಕಿಸಲು ಕೋರಿದ್ದಾರೆ.  

Read More

ಸೋಮವಾರಪೇಟೆ ಜ.4 : ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‍ಗೆ ಆಯ್ಕೆಯಾದ ಹಿನ್ನೆಲೆ ವಿದ್ಯಾರ್ಥಿನಿ ಹಾನಗಲ್ ಗ್ರಾಮದ ಸ್ನೇಹಾಳಿಗೆ ಸೋಮವಾರಪೇಟೆ ಜೇಸಿ ಸಂಸ್ಥೆಯಿಂದ ಸನ್ಮಾನಿಸಿ, ಪ್ರೋತ್ಸಾಹ ಧನ ನೀಡಲಾಯಿತು. ಜ.8 ರಂದು ಅಸ್ಸಾಂನ ಕಾಮರೂಪ್‍ನಲ್ಲಿ ನಡೆಯಲಿರುವ 57ನೇ ನ್ಯಾಷನಲ್ ಕ್ರಾಸ್ ಕಂಟ್ರಿ ಅಥ್ಲೆಟಿಕ್ಸ್ ಚಾಂಪಿಯನ್‍ಶಿಫ್‍ಗೆ ಆಯ್ಕೆಯಾಗಿದ್ದಾರೆ. ಜೇಸಿ ಅಧ್ಯಕ್ಷೆ ಎಂ.ಎ.ರುಬಿನಾ, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ಲಕ್ಷ್ಮೀ ಕುಮಾರ್, ಜೂನಿಯರ್ ಜೇಸಿ ಚೇರ್ ಪರ್ಸನ್ ರಿಶಾ ಪ್ರಮುಖರಾದ ಮಾಯಾ ಗಿರೀಶ್, ಕೆ.ಎ. ಪ್ರಕಾಶ್, ಪುರುಷೋತ್ತಮ್ , ನಾಗರಾಜು, ಪೃಥ್ವಿ ಗೌಡ, ಸ್ನೇಹ ಪೋಷಕರಾದ ಮಹೇಶ್ ಮಂಜುಳಾ ಮತ್ತು ಜೇಸಿ ಪದಾಧಿಕಾರಿಗಳು ಇದ್ದರು.

Read More

ಸೋಮವಾರಪೇಟೆ ಜ.4 : ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿಯಲ್ಲಿ ಶ್ರೀ ಗಣಪತಿ, ಭಗವತಿ ಹಾಗೂ ಧರ್ಮಶಾಸ್ತ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಥಮ ವರ್ಷದ ವಾರ್ಷಿಕ ಮಹಾಪೂಜೆ ಜ.7 ಮತ್ತು 8ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಪಿ.ಜಗನ್ನಾಥ್ ತಿಳಿಸಿದ್ದಾರೆ. ಜ.7 ರಂದು ಬೆಳಿಗ್ಗೆ 10 ಗಂಟೆಯಿಂದ ಗ್ರಾಮದಲ್ಲಿ ಚಂಡೆ ವಾದ್ಯದೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ, ಸಂಜೆ 6 ಗಂಟೆಯಿಂದ 1.30ರವರೆಗೆ ಮಹಾ ಭಗವತಿ ಸೇವೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಜ.8 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆಯವರೆಗೆ ವಿವಿಧ ಪೂಜೆಗಳು, ಸಂಜೆ 4 ಘಂಟೆಗೆ ಅಯ್ಯಪ್ಪ ಆನಂದ ನೃತ್ಯ ನಡೆಯಲಿದೆ. ಕೇರಳದ ತಂತ್ರಿ ವರ್ಯರಾದ ಬ್ರಹ್ಮಶ್ರೀ ಹರಿಕೃಷ್ಣನ್ ನಂಬೂದರಿ ಅವರು ಪೂಜೆಯ ನೇತೃತ್ವವನ್ನು ವಹಿಸಲಿದ್ದಾರೆ.

Read More

ಸುಂಟಿಕೊಪ್ಪ ಜ.4 : ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 2023-24ನೇ ಸಾಲಿನ ಅಧ್ಯಕ್ಷರಾಗಿ 2ನೇ ಬಾರಿಗೆ ಅಂಬೆಕಲ್ ಚಂದ್ರಶೇಖರ್ ಅವರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು. ಉಪಾಧ್ಯಕ್ಷರಾಗಿ ಎ.ಆರ್.ಗೋಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಶಂಕರನಾರಾಯಣ, ಖಜಾಂಜಿಯಾಗಿ ಕೆ.ಎಸ್.ವಿನೋದ್, ಸಹಕಾರ್ಯದರ್ಶಿಯಾಗಿ ಬಿ.ಎ.ವಸಂತ, ಕ್ರೀಡಾ ಕಾರ್ಯದರ್ಶಿಯಾಗಿ ಕೆ.ಜೆ.ಜಗದೀಶ್, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಪಿ.ಎಂ.ರವಿ, ಸಿ.ಬಿ.ಪ್ರವೀಣ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ 12 ಮಂದಿ ಸದಸ್ಯರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಜ.4 :  ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 10ನೇ ವರ್ಷದ ‘ಚಂಡಿಕಾ ಹೋಮ’ ಕಾವೇರಿ ಕ್ಷೇತ್ರ ಭಾಗಮಂಡಲದ ಟ್ರಸ್ಟ್ ನ ಜಾಗದಲ್ಲಿ ಜ.15 ರಂದು ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ನ ಅಧ್ಯಕ್ಷರಾದ ಎಂ.ಬಿ.ದೇವಯ್ಯ, ಅಂದು ಸುಬ್ರಹ್ಮಣ್ಯ ಬೆಳ್ಳೂಕರಾಯ ಅವರ ನೇತೃತ್ವದಲ್ಲಿ ಬೆಳಗ್ಗೆ 7 ಗಂಟೆಗೆ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರ ಪಠಣ ಹಾಗೂ ಚಂಡಿಕಾ ಹೋಮ ನಡೆಯಲಿದೆಯೆಂದು ಮಾಹಿತಿ ನೀಡಿದರು. ಜಿಲ್ಲೆಯ ಕೊಡವ ಮತ್ತು ಅಮ್ಮಕೊಡವ ಜನಾಂಗ ಬಾಂಧವರು ಒಂದಾಗಿ ಸೇರಿ ಟ್ರಸ್ಟ್ ನ ಸಹಯೋಗದಲ್ಲಿ ಚಂಡಿಕಾ ಹೋಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಪುರಾಣಗಳಲ್ಲಿ ಪ್ರಸ್ತಾಪವಾಗಿರುವಂತೆ ಅಗಸ್ತ್ಯ ಮುನಿಗಳು ಮತ್ತು ಕಾವೇರಿಯ ನಡುವೆ ಕಲಹವೇರ್ಪಟ್ಟಾಗ ಕಾವೇರಿಯ ಪರವಾಗಿ ನಿಂತ ಕೊಡವರಿಗೆ ಮತ್ತು ಅಮ್ಮ ಕೊಡವರಿಗೆ ಅಗಸ್ತ್ಯ ಮುನಿಗಳು ಶಾಪ ನೀಡಿದ್ದರು. ಈ ಬಗ್ಗೆ ಅಷ್ಟಮಂಗಲ ಪ್ರಶ್ನೆಯಲ್ಲಿ ಬಂದ ಪರಿಹಾರ ಕ್ರಮಗಳಂತೆ ಕಾವೇರಿಯ…

Read More

ಸುಂಟಿಕೊಪ್ಪ ಜ.4 : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕೊಡಗು ಜಿಲ್ಲಾ ಪ್ರಾಚಾರ್ಯರುಗಳ ಸಂಘದ ವತಿಯಿಂದ 2021-22 ಸಾಲಿನಲ್ಲಿ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ‌ ನೀಡಲಾಗುವ ಲ್ಯಾಪ್‌ಟಾಪ್ ಅನ್ನು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಿ.ಜೆ.ಸೌಮ್ಯ  ಪಡೆದುಕೊಂಡರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಈಕೆ ವಾಣಿಜ್ಯ ವಿಷಯದಲ್ಲಿ 556 ಅಂಕ ಪಡೆದು ಪರಿಶಿಷ್ಟ ಜಾತಿ ವಿಭಾಗದಲ್ಲಿ ಕೊಡಗಿನ‌ ಪ್ರ‌ಥಮ ಸ್ಥಾನವನ್ನು ಪಡೆದಿದ್ದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ‌.ಕಾರ್ಯಪ್ಪ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ‌  ಲ್ಯಾಪ್‌ಟಾಪ್ ವಿತರಿಸಲಾಯಿತು. ಈಕೆ ಸುಂಟಿಕೊಪ್ಪ ಒಂದನೇ ವಿಭಾಗದ ಜ್ಞಾನೇಶ್ ಮತ್ತು ಪ್ರೇಮ ದಂಪತಿಗಳ ಪುತ್ರಿ.

Read More

ನಾಪೋಕ್ಲು ಜ.4 : ಹದಿ ಹರೆಯದವರು ಯಾವುದೇ ಆಕರ್ಷಣೆಗಳಿಗೆ ಬಲಿಯಾಗದೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಏಡ್ಸ್ ನಿಯಂತ್ರಣ ಘಟಕದ ಸೂಪರಿಡೆಂಟ್ ಸುನೀತಾ ಹೇಳಿದರು. ಮೂರ್ನಾಡಿನ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹೆಚ್ಐವಿ ಹರಡುವಿಕೆ ಹಾಗೂ ಏಡ್ಸ್ ಜಾಗೃತಿ ಕುರಿತು ಮಾತನಾಡಿದ ಅವರು ಏಡ್ಸ್ ನಿಯಂತ್ರಣ ಕ್ರಮಗಳ ಬಗ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ರಾಷ್ಟೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ದಮಯಂತಿ, ಉಪನ್ಯಾಸಕರಾದ ಕಲಾವತಿ, ಉಷಾ, ರಶ್ಮಿ ಉಪಸ್ಥಿತರಿದ್ದರು. ವರದಿ -ದುಗ್ಗಳ ಸದಾನಂದ  

Read More

ಸೋಮವಾರಪೇಟೆ ಜ.3 : ಕರ್ನಾಟಕ ಸ್ಟೇಟ್ ಡ್ರೈವರ್ಸ್ ಆರ್ಗನೈಸೇಷನ್(ಕೆಟಿಡಿಒ) ಸಂಘದ ವತಿಯಿಂದ ಜ.26ರಂದು ಅದ್ಧೂರಿ ಗಣರಾಜ್ಯೋತ್ಸವ ಮತ್ತು ರಾಜ್ಯ ಮಟ್ಟದ ಮುಕ್ತ ನೃತ್ಯ ಸ್ಪರ್ಧೆ ನಡೆಸಲಾಗುವುದು ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ವಿ. ರವಿ ತಿಳಿಸಿದರು. ಅಂದು ಬೆಳಿಗ್ಗೆ ಜಿಲ್ಲಾ ಸಮಿತಿಯ ಸಮಾವೇಶ ನಡೆಸಲಾಗುವುದು. ನಂತರ ಖಾಸಗಿ ಬಸ್ ನಿಲ್ದಾಣದಲ್ಲಿನ ಬೃಹತ್ ವೇದಿಕೆಯಲ್ಲಿ ಮಧ್ಯಾಹ್ನ 2ಕ್ಕೆ ಪುರುಷೋತ್ತಮ್ ಮತ್ತು ತಂಡದದವರಿAದ ದೇಶ ಭಕ್ತಿ ಗೀತೆ ಕಾರ್ಯಕ್ರಮ ನಡೆಸಲಾಗುವುದು. ನಂತರ 12 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಹಾಗೂ 12 ವರ್ಷ ವಯೋಮಾನದ ನಂತರದವರಿಗೆ ರಾಜ್ಯಮಟ್ಟದ ಮುಕ್ತ ನೃತ್ಯ ಸ್ಪರ್ಧಾ ಕಾರ್ಯಕ್ರಮ ನಡೆಯುವುದು ಎಂದರು. ನೃತ್ಯ ಸ್ಪರ್ಧೆಯ ವಿಜೇತರಿಗೆ ಮೊದಲ ಬಹುಮಾನ ರೂ. 25ಸಾವಿರ, ದ್ವಿತೀಯ ಬಹುಮಾನ ರೂ. 15 ಹಾಗೂ ತೃತೀಯ ಬಹುಮಾನ ರೂ. 10ನ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ತಂಡಗಳಿಗೂ ಸಮಾಧಾನಕರ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು. ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ನಡೆಸಲಾಗುವುದು.…

Read More