ಸೋಮವಾರಪೇಟೆ ಜ.3 : ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಾರ್ಥ ನಗರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಘಟಕದ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಸಮಿತಿಯ ಸುಜಿತ್, ಬಿ.ಬಿ. ಆನಂದ್, ಬ್ಲಾಕ್ ಅಧ್ಯಕ್ಷ ಎಚ್.ಬಿ. ರಾಜಪ್ಪ, ಸೋಮವಾರಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ನಾಗರಾಜು, ಬಿ.ಕೆ. ದೇವರಾಜು ಮತ್ತಿತರರು ಇದ್ದರು. ಇದೇ ಸಂದರ್ಭ ಬೆಟ್ಟದಳ್ಳಿ ವಲಯದ ಪರಿಶಿಷ್ಟ ಜಾತಿ ಘಟಕವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬಿ.ಆರ್. ಯೋಗೇಂದ್ರ, ಉಪಾಧ್ಯಕ್ಷರಾಗಿ ಬಿ.ಆರ್. ಧರ್ಮಪ್ಪ, ಬಿ.ಬಿ. ಜಯೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಸಿ. ಆದರ್ಶ್, ಖಜಾಂಚಿಯಾಗಿ ಬಿ.ಈ. ದಿಲೀಪ, ಸಮಿತಿ ಸದಸ್ಯರಾಗಿ ಬಿ.ಎ. ಅಭಿಷೇಕ್, ಬಿ.ಅರ್. ಧರ್ಮೇಂದ್ರ, ಬಿ.ಪಿ. ರಾಜು, ಬಿ.ಎಸ್. ಸುದೀಶಾ, ಬಿ.ಯು. ಲವಕುಶ, ಬಿ.ಎಸ್. ಭರತ್, ಬಿ.ಬಿ. ರಾಜ. ಬಿ.ಸಿ. ಚಂದ್ರ ಹಾಗೂ ಬಿ.ಈ. ಜಯಪ್ಪ ಆಯ್ಕೆಯಾದರು.
ಲೇಖಕ: admin
ಸೋಮವಾರಪೇಟೆ ಜ.3 : ಕುರುಹಿನಶೆಟ್ಟಿ ಸಮಾಜದ ಶ್ರೀ ರಾಮಮಂದಿರದಲ್ಲಿ ಸೋಮವಾರ 6ನೇ ವರ್ಷದ ವೈಕುಂಠ ಏಕಾದಶಿ ನಡೆಯಿತು. ಬೆಳಿಗ್ಗೆ 7 ರಿಂದ 10ರ ವರೆಗೆ ಮತ್ತು ಸಂಜೆ 5 ರಿಂದ 8-30ರ ವರೆಗೆ ಸ್ವರ್ಗದ ಬಾಗಿಲ ಪ್ರವೇಶ ಮತ್ತು ದೇವರ ದರ್ಶನ ನಡೆಯಿತು. ಸಂಜೆ 5ಕ್ಕೆ ಸೀತಾ ಬಳಗದಿಂದ ವಿಷ್ಣು ಸಹಸ್ರನಾಮ, ಪಠನ, ನಂತರ ಆರ್ಟ್ ಆಫ್ ಲಿವಿಂಗ್ನ ಸೂರ್ಯಪಾದಾಜೀ ಮತ್ತು ತಂಡದವರಿಂದ ದಿವ್ಯಸತ್ಸಂಗ ನಡೆಯಿತು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಸಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ.ಎನ್. ಮಂಜುನಾಥ್, ಸೀತಾ ಬಳಗದ ಅಧ್ಯಕ್ಷೆ ಲೀಲಾ ನಿರ್ವಾಣಿ, ರಾಮ ಯುವಕ ಸಂಘದ ಅಧ್ಯಕ್ಷ ಬಿ.ಜಿ. ರವಿ, ಪ್ರಮುಖರಾದ ಸತಿನ್ ಸಿದ್ದಪ್ಪ, ಬಿ.ಎಂ. ಶ್ರೀಧರ್ ಮತ್ತಿತರರು ಇದ್ದರು.
ವಿರಾಜಪೇಟೆ ಜ.3 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನವರಿ 21 ರಂದು ನಡೆಯಲಿರುವ ವಿರಾಜಪೇಟೆ ತಾಲ್ಲೋಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕೊಡಗಿನ ಪಕ್ಷಿತಜ್ಞ, ಪರಿಸರ ಬರಹಗಾರ ಡಾ.ಎಸ್.ವಿ ನರಸಿಂಹನ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ತಾಲ್ಲೋಕಿನ ಆರ್ಜಿ ಮತ್ತು ಬೇಟೋಳಿ ಗ್ರಾಮದಲ್ಲಿ ಈ ಬಾರಿಯ ತಾಲ್ಲೋಕು ಸಮ್ಮೇಳನ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಡಾ.ಎಸ್.ವಿ.ನರಸಿಂಹನ್ ವಹಿಸಲಿದ್ದಾರೆ. ಇಂದು ವಿರಾಜಪೇಟೆ ತಾಲ್ಲೋಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿರಾಜಪೇಟೆಯ ಪುರಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ವಿರಾಜಪೇಟೆ ತಾಲ್ಲೋಕು ಕ.ಸಾ.ಪ ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆಯಲ್ಲಿ, ಜಿಲ್ಲಾಧ್ಯಕ್ಷರಾದ ಕೇಶವ ಕಾಮತ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತಾಲ್ಲೋಕು ಕಸಾಪ ನಿಕಟ ಪೂರ್ವ ಅಧ್ಯಕ್ಷ ಮದೋಶ್ ಪೂವಯ್ಯ ಹಾಗೂ ಸಭೆಯ ಸರ್ವಾನುಮತದ ಒಪ್ಪಿಗೆಯ ಮೂಲಕ ಸಮ್ಮೇಳನ ಅಧ್ಯಕ್ಷರ ಆಯ್ಕೆಯನ್ನು ಮಾಡಲಾಯಿತು. ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಎಸ್.ವಿ.ನರಸಿಂಹನ್ ಮೂಲತಃ ವಿರಾಜಪೇಟೆಯವರೇ ಆಗಿದ್ದು, ಡಾ.ದೇಶಿಕಾಚಾರ್ ಹಾಗೂ ಜಾನಕಮ್ಮ ದಂಪತಿಗಳ ಸುಪುತ್ರ. ವೃತ್ತಿಯಿಂದ ವೈದ್ಯರಾಗಿರುವ ಇವರು ಪ್ರವೃತ್ತಿಯಿಂದ ಪಕ್ಷಿತಜ್ಞ, ಪರಿಸರ ಬರಹಗಾರ,…
ಕುಶಾಲನಗರ, ಜ.3 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿದಿನ ಕುಶಾಲನಗರದ ಬಸ್ ನಿಲ್ದಾಣದಿಂದ ಅಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯವನ್ನು ಮಂಗಳವಾರದಿಂದ ಕಲ್ಪಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಕುಶಾಲನಗರದಿಂದ ಬಸ್ ಹೊರಟು 9.45 ಕ್ಕೆ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರಕ್ಕೆ ತಲುಪಲಿದೆ. ಸಂಜೆ 5 ಗಂಟೆಗೆ ಕೇಂದ್ರದಿಂದ ಕುಶಾಲನಗರಕ್ಕೆ ತಲುಪಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೇಂದ್ರದ ಪ್ರಭಾರ ನಿರ್ದೇಶಕರಾದ ಡಾ. ಕೆ. ಕೆ. ಧರ್ಮಪ್ಪ ತಿಳಿಸಿದ್ದು,ಕ್ಷೇತ್ರ ಶಾಸಕರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಕುಶಾಲನಗರ ಡಿ.3 : ಸೋಮವಾರ ರಾತ್ರಿ ಲಿಂಗೈಕ್ಯರಾದ ಬಿಜಾಪುರದ ಜ್ಞಾನ ಯೋಗಾಶ್ರಮದ ಸಂತ ಸಿದ್ದೇಶ್ವರ ಸ್ವಾಮೀಜಿಗಳ ಸಂತಾಪ ಸಭೆ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಸಿದ್ದೇಶ್ವರ ಶ್ರೀಗಳು ಸದಾ ಶ್ವೇತ ವಸ್ತ್ರಧಾರಿಗಳಾಗಿ ಸರಳವಾಗಿ ಬದುಕು ನಡೆಸಿದವರು. ನಿತ್ಯವೂ ಪ್ರವಚನಗಳ ಮೂಲಕ ಸಹಸ್ರಾರು ಭಕ್ತರ ಬದುಕನ್ನು ಕಟ್ಟಿದ ಶ್ರೀಗಳು ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ನಡೆದಾಡುವ ದೇವರಾದರು ಎಂದು ಬಣ್ಣಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಭಕ್ತರ ಪಾಲಿನ ನಿಜದೈವ ಸಿದ್ದೇಶ್ವರ ಶ್ರೀಗಳು ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ, ಮಹಾವೀರ ಮೊದಲಾದ ಶ್ರೇಷ್ಟ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದ ಶ್ರೀಗಳು ಪ್ರತಿದಿನ ಆಶ್ರಮದ ಆವರಣದಲ್ಲಿ ಮುಂಜಾನೆ ಸಮಯ ನೀಡುತ್ತಿದ್ದ ಪ್ರವಚನಕ್ಕೆ ಭಕ್ತರ ದಂಡೇ ಕಾದಿರುತ್ತಿತ್ತು . ಹಾಗಾಗಿ ಶ್ರೀಗಳ ಅಗಲಿಕೆಯಿಂದ ಭಕ್ತ ಕುಲ ಬಡವಾಗಿದೆ ಎಂದರು. ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ವಿಜೇತ್, ಹೆಬ್ಬಾಲೆ ಹೋಬಳಿ ಕಸಾಪ ಅಧ್ಯಕ್ಷ ಮಣಜೂರು…
ಕುಶಾಲನಗರ ಜ.3 : ಕುಶಾಲನಗರ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಕನ್ನಡ ಹಬ್ಬವಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕೆಂದು ಪ್ರಥಮ ಸಾಹಿತ್ಯ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾದ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ವುರಂಜನ್ ಕರೆನೀಡಿದ್ದಾರೆ. ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಸಮ್ಮೇಳನದ ಅಂಗವಾಗಿ ಊರಿನ ಕಟ್ಟಡಗಳು, ಬೀದಿಗಳನ್ನು ಅಲಂಕರಿಸುವ ಮೂಲಕ ಸಮ್ಮೇಳನವನ್ನು ವ್ಯವಸ್ಥಿತವಾಗಿ, ಯಶಸ್ವಿಯಾಗಿ ನಡೆಸುವ ಸಂಬಂಧ ಸಾರ್ವಜನಿಕರು ಹಾಗು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸಾಹಿತ್ಯ, ಕಲೆ, ಸಂಸ್ಕøತಿ ಬೆಳಗಲು ವಿದ್ಯಾರ್ಥಿಗಳ ಪಾತ್ರ ಹಾಗೂ ಸಮ್ಮೇಳನದ ಮೆರವಣಿಗೆಯ ರೂಪುರೇμÉಗಳ ಕುರಿತು ಸಲಹೆ ನೀಡಿದರು.ಸಮ್ಮೇಳನಕ್ಕೆ ಅಗತ್ಯವಿರುವ ಆರ್ಥಿಕ ಕ್ರೋಢಿಕರಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕುಶಾಲನಗರದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಜಾತಿ, ಮತ ಭೇದಗಳನ್ನು ಲೆಕ್ಕಿಸದೆ ಸರ್ವರೂ ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ನಿಕಟಪೂರ್ವಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವಕಾಮತ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ…
ಕುಶಾಲನಗರ ಜ.3 : ರಾಜ್ಯದಲ್ಲಿ ಒಕ್ಕಲಿಗರಿಗೆ ಸೂಕ್ತ ಸ್ಥಾನಮಾನ ಸಿಗಲು ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರೇ ಕಾರಣ ಎಂದು ಆದಿಚುಂಚನಗಿರಿ ಮಠದ ಹಾಸನ ಮತ್ತು ಕೊಡಗು ಜಿಲ್ಲೆಯ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಮತ್ತು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡ, ರಾಷ್ಟ್ರ ಕವಿ ಕುವೆಂಪು ಹಾಗೂ ಸಮುದಾಯದ ಮಾರ್ಗದರ್ಶಕರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಒಕ್ಕಲಿಗ ಜನಾಂಗದ ಹೆಮ್ಮೆಯ ವ್ಯಕ್ತಿಗಳಾಗಿದ್ದು, ಈ ಮೂವರಿಗೂ ಒಕ್ಕಲಿಗರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ದೂರದೃಷ್ಟಿ ಇತ್ತು. ಕೆಂಪೇಗೌಡ ಬೆಂಗಳೂರನ್ನು ಕಟ್ಟಿದರೆ, ಕುವೆಂಪು ವಿಶ್ವಮಾನವ ಸಂದೇಶ ಸಾರಿದರು. ಸಮುದಾಯದ ಏಳಿಗೆಗೆ ವೇದಿಕೆಯ ಅಗತ್ಯತೆಯೊಂದಿಗೆ ಸಂಘಟನಾ ಶಕ್ತಿ ಮೂಲಕ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಒಕ್ಕಲಿಗರು ಉನ್ನತ ಸ್ಥಿತಿಗೆ ತಲುಪಬೇಕು ಎನ್ನುವುದು ಶ್ರೀ…
ಮಡಿಕೇರಿ ಜ.3 : ಕನ್ನಡ ಚಿತ್ರರಂಗದಲ್ಲಿ ಕೊಡಗಿನ ಹತ್ತಾರು ಪ್ರತಿಭೆಗಳು ಮಿಂಚಿದ್ದಾರೆ. ಈಗಲೂ ಮಿಂಚುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮೂಲತಃ ಇಬ್ಬನಿವಲವಾಡಿ ಗ್ರಾಮದ ಮಾಲೆರ ಪ್ರಮೋದ್ ಬೋಪಣ್ಣ ಹೊಸ ಎಂಟ್ರಿಯಾಗಿದ್ದಾರೆ. ಇವರು ನಾಯಕ ನಟನಾಗಿ ಬಣ್ಣ ಹಚ್ಚಿರುವ ಮರೆಯದೆ ಕ್ಷಮಿಸು ಕನ್ನಡ ಚಲನಚಿತ್ರ ಇದೇ ಜ.6ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಆರ್.ವಿ.ಎಸ್ ಪ್ರೊಡಕ್ಷನ್ ಬ್ಯಾನರ್ ನಡಿ , ವಿ. ಶಿವರಾಂ ನಿರ್ಮಾಣದ, ಕೆ. ರಾಘವ್ ನಿರ್ದೇಶನದ ಮರೆಯದೆ ಕ್ಷಮಿಸು ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಸದ್ಯ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರತಂಡ ಇದೀಗ ಪ್ರಾಮಿಸಿಂಗ್ ಟ್ರೇಲರ್ ಬಿಡುಗಡೆ ಮಾಡಿ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ರಿಷಿಕೇಶ್ ಛಾಯಾಗ್ರಹಣ , ಆರೋನ್ ಕಾರ್ತಿಕ್ ವೆಂಕಟೇಶ್, ಕ್ರಿಸ್ಟೋಫರ್ ಸಂಗೀತ, ಧನುಷ್ ಸಂಕಲನ ಈ ಚಿತ್ರಕ್ಕಿದೆ. ಉದಯ ಟಿವಿಯಲ್ಲಿ ವಾರ್ತಾ ವಾಚಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಮೋದ್, ಬಳಿಕ ಹಲವು ಧಾರವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಮರೆಯದೆ ಕ್ಷಮಿಸು ಚಿತ್ರದ ಮೂಲಕ ನಾಯಕನಟನಾಗಿ ಬಡ್ತಿ ಪಡೆದಿದ್ದಾರೆ.…
ವಿರಾಜಪೇಟೆ ಜ.3 : ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಕಾಳೇಘಾಟ್ ಕಳಿಯಾಟ್ ಮಹೋತ್ಸವವು ಜ.11 ರಿಂದ 13ರ ವರೆಗೆ ಜರುಗಲಿದೆ ಎಂದು ಆಡಳಿತ ಮಂಡಳಿಯು ತಿಳಿಸಿದೆ. ಜ.11 ರಂದು ಬೆಳಿಗ್ಗೆ ಗಣಹೋಮ , ಉಷಾಪೂಜೆ , ಉಚ್ಚಪೂಜೆ , ದೀಪಾರಾಧನೆ , ಅತ್ತಾಳಪೂಜೆ ಹಾಗೂ ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.12 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.13 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ. ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಡಿಕೇರಿ ಜ.3 : ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ 11 ನೇ ಸಮ್ಮೇಳನದ ಸ್ವಾಗತ ಸಮಿತಿ ಸಭೆಯು ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಉಪಸ್ಥಿತಿಯಲ್ಲಿ ಜನವರಿ, 4 ರಂದು ಮಧ್ಯಾಹ್ನ 3.30 ಗಂಟೆಗೆ ಬೆಟ್ಟಗೇರಿಯ ಉದಯ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರು ಮತ್ತು ತಾಲ್ಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ ತಿಳಿಸಿದ್ದಾರೆ.






