ಲೇಖಕ: admin

ಮಡಿಕೇರಿ ಜ.3 : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ…

Read More

ಮಡಿಕೇರಿ ಜ.3 : ಪ್ರಸಕ್ತ (2022-23) ಸಾಲಿನ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಸಂಸ್ಥೆಗಳಿಂದ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2022-23ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಜ.1, 2022 ರಿಂದ ಡಿಸೆಂಬರ್ 31, 2022ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು…

Read More

ಮಡಿಕೇರಿ ಜ.3 : ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ನೀಡುವ ಉದ್ದೇಶದಿಂದ, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು 2022 ರ ಡಿಸೆಂಬರ್, 31 ರವರೆಗೆ ಮಾನ್ಯತೆ ಇರುವ, ವಿಕಲಚೇತನರ ಪಾಸ್‍ಗಳನ್ನು 2023 ರ ಫೆಬ್ರವರಿ, 28 ರವರೆಗೆ ಮಾನ್ಯ ಮಾಡಲಾಗಿದೆ. 2022 ನೇ ಸಾಲಿನ ಪಾಸುಗಳ ನವೀಕರಣ ಮತ್ತು ನೂತನ ಪಾಸುಗಳನ್ನು 2022 ರ ಡಿಸೆಂಬರ್, 26 ರಿಂದ ವಿತರಿಸಲು ಅವಕಾಶ ಕಲ್ಪಿಸಿದ್ದು ಆನ್‍ಲೈನ್‍ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2023 ನೇ ಸಾಲಿನ ಪಾಸುಗಳ ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕ ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಅಥವಾ ಡಿ.ಡಿ.ರೂಪದಲ್ಲಿ ಪಾವತಿಸಿ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-295829ರಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.3  : ಜಿಲ್ಲಾ ಗೃಹರಕ್ಷಕದಳ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2022-23 ನೇ ಸಾಲಿಗೆ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ನಿವಾಸಿಯಾಗಿರುವ 20 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಹಾಗೂ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ, ಮಹಿಳಾ ಅಭ್ಯರ್ಥಿಗಳು ಜನವರಿ, 13 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ(ದೂ.ಸಂ.08272-228427) ಮತ್ತು ಕೊಡಗು ಜಿಲ್ಲೆಯಲ್ಲಿರುವ ಗೃಹರಕ್ಷಕದಳದ ಘಟಕ ಕಚೇರಿಯ ಘಟಕಾಧಿಕಾರಿಗಳನ್ನು ಸಂಪರ್ಕಿಸಬಹುದು. ಘಟಕಾಧಿಕಾರಿಗಳ ವಿವರ ಮಡಿಕೇರಿ ಘಟಕ ವೈ.ಎನ್.ಕವನ್‍ಕುಮಾರ್ 9448204356, ಭಾಗಮಂಡಲ ಎನ್.ಪಿ.ಲೋಕನಾಥ 9108209941, ವಿರಾಜಪೇಟೆ ಎಚ್.ಸಿ.ತಿಮ್ಮು 9663765849, ಕುಶಾಲನಗರ ಬಿ.ಕೆ.ಪುಟ್ಟರಾಜು 9242116174, ಸೋಮವಾರಪೇಟೆ ಎಚ್.ಕೆ.ತ್ಯಾಗರಾಜು 9481431221, ಶಾಂತಳ್ಳಿ ಎಸ್.ಆರ್.ದೇವರಾಜು 9482729233, ಶನಿವಾರಸಂತೆ ಈ.ಬಿ.ಲೋಕೇಶ 9902047075 ಇವರಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಘಟಕಾಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು…

Read More

ಮಡಿಕೇರಿ ಜ.3 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ವಿತರಿಸಿದರು. ನಗರದ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೆಯೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿದರು. ಬಳಿಕ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜ್ಞಾನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಉದ್ಯೋಗ ಪಡೆಯುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಸಮಯವನ್ನು ವ್ಯರ್ಥ ಮಾಡದೆ ಇರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು ಎಂದು ಪುಟ್ಟರಾಜು ಅವರು ಹೇಳಿದರು. ಕಳೆದ 2022 ರ…

Read More

ಮಡಿಕೇರಿ ಜ.3 : 2006ರ ಏಪ್ರಿಲ್ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’(ಒಪಿಎಸ್) ಜಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತೊಮ್ಮೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಿದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಬಹುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಸರ್ಕಾರಿ ನೌಕರರಿಗೆ ಇದ್ದ ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತಾಗಬೇಕು. ಸರ್ಕಾರಿ ನೌಕರರು ನೆಮ್ಮದಿಯಿಂದ ನಿವೃತ್ತಿ ಜೀವನ ನಡೆಸುವಂತಾಗಬೇಕು. ನಿವೃತ್ತಿ ಸಂದರ್ಭದಲ್ಲಿ ಆರೋಗ್ಯ ಅತೀ ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ…

Read More

ಮಡಿಕೇರಿ ಜ.3 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ಜ.4 ರಂದು ಕೊಡಗಿನಲ್ಲಿ ಲಭ್ಯ ಇರಲಿದ್ದಾರೆ. ಗ್ಯಾಸ್ಟ್ರೋಎಂಟೆರಾಲಜಿ ಮತ್ತು ಹೆಪಟಾಲಜಿ ತಜ್ಞ ಡಾ. ದೇವರಾಜ ಆರ್. ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4ರ ವರೆಗೆ ವಿರಾಜಪೇಟೆಯ ಕೂರ್ಗ್ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಮಧ್ಯಾಹ್ನ 12.30 ರಿಂದ ಮಧ್ಯಾಹ್ನ 2ರ ವರೆಗೆ ನಾರಾಯಣ ಮೆಡಿಕಲ್ ಸೆಂಟರ್ (ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್) ನಲ್ಲಿ ದೊರೆಯಲಿದ್ದಾರೆ. ಕರುಳಿನ ಕಾಯಿಲೆಗಳು, ಕಾಮಲೆ, ವಾಂತಿಯಲ್ಲಿ ರಕ್ತ, ಗುದನಾಳದ ರಕ್ತಸ್ರಾವ, ಎದೆಯುರಿ, ಡೆಸ್ಫೇಜಿಯಾ, ಜೀರ್ಣಾಂಗದ ಸಮಸ್ಯೆಗಳು, ಪಿತ್ತಕೋಶ ಮತ್ತು ಪ್ಯಾಂಕ್ರಿಯಾಟಿಕ್ ಅಸ್ವಸ್ಥತೆಗಳ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8884458890, 9513408004, 8197623892 ಸಂಪರ್ಕಿಸಬಹುದಾಗಿದೆ. ಪ್ರಸೂತಿ ಮತ್ತು ಸ್ತ್ರೀ ರೋಗ : ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಕುಶಾಲನಗರದ ನಾರಾಯಣ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ತಪಾಸಣೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ 4 ಗಂಟೆ…

Read More

ಮಡಿಕೇರಿ ಜ.3 :   ವಿದ್ಯಾರ್ಥಿಗಳು ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು ಉತ್ತಮ ಭವಿಷ್ಯಕ್ಕೆ ಗ್ರಾಮದಲ್ಲಿರುವ ಅಂಗನವಾಡಿಗಳನ್ನು ವಿದ್ಯಾರ್ಥಿಗಳಿಗೆ ಪೂರಕವಾಗುವ ಗ್ರಂಥಾಲಯವನ್ನಾಗಿ ಮಾರ್ಪಾಡು ಮಾಡಬೇಕು ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಮಾ ಮಹಾದೇವನ್ ಅಭಿಪ್ರಾಯಪಟ್ಟರು. ಹೊದ್ದೂರು ಗ್ರಾ.ಪಂ ಮತ್ತು ಪಂಚಾಯಿತಿ ವ್ಯಾಪ್ತಿಯ ಕಬಡಕೇರಿ ಮತ್ತು  ಕಾನ್ಸಿರಾಂಜೀ ನಗರ ಪಾಲೆಮಾಡಿನ ಸಾವಿತ್ರಿ ಬಾಯಿ ಫುಲೆ ಗ್ರಂಥಾಲಯಕ್ಕೆ ಭೇಟಿ ನೀಡಿದ  ಉಮಾ ಮಹಾದೇವನ್  ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಪ್ರಸಂಶಿಸಿದರು. ಬಳಿಕ ಮಾತನಾಡಿದ ಅವರು ಗ್ರಂಥಾಲಯಗಳಲ್ಲಿ ದೇಶದ ಗಣ್ಯ ವ್ಯಕ್ತಿಗಳು, ಗ್ರಾಮೀಣ ಮಟ್ಟದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು  ಮತ್ತು ಗ್ರಾಮೀಣ ಮಟ್ಟದ ಸಾಧಕರ  ಭಾವಚಿತ್ರಗಳನ್ನು ಅಳವಡಿಸಬೇಕು. ಇದರಿಂದ ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯುತ್ತಾರೆ. ದೇಶದ ಅಭಿವೃದ್ಧಿ ಎಂದರೆ ಇಂದಿನ ವಿದ್ಯಾರ್ಥಿಗಳನ್ನು ಭವಿಷ್ಯ ಭಾರತಕ್ಕೆ ಉತ್ತಮ ಪ್ರಜೆಗಳನ್ನಾಗಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗುವಂತೆ ಮಕ್ಕಳಿಗೆ ಉತ್ತಮ ಬೋಧಕರನ್ನು ಒದಗಿಸಬೇಕು ಮತ್ತು ಕೌಶಲ್ಯ…

Read More

ಮಡಿಕೇರಿ, ಜ.3: ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ  ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ  ಗಮನ ಸೆಳೆಯಿತು. “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿ ಗಮನ ಸೆಳೆದರು. ಸಮಾವೇಶದ ಕೇಂದ್ರ ವಿಷಯದಡಿ ನಿಮ್ಮ ಪರಿಸರ ವ್ಯವಸ್ಥೆಯನ್ನು ಅರಿಯಿರಿ, ಆರೋಗ್ಯ, ಪೋಷಣೆ ಮತ್ತು ಯೋಗಕ್ಷೇಮವನ್ನು ಬೆಳೆಸುವುದು, ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭ್ಯಾಸಗಳು, ಸ್ವಾವಲಂಬನೆಗಾಗಿ ಪರಿಸರ ವ್ಯವಸ್ಥೆ ಆಧಾರಿತ ವಿಧಾನಗಳು ಹಾಗೂ ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ತಾಂತ್ರಿಕ ನಾವೀನ್ಯತೆ’ ಎಂಬ ಉಪ…

Read More

ಮಡಿಕೇರಿ ಜ.3 : ನಗರದ ತ್ಯಾಗರಾಜ ಕಾಲೋನಿಯಲ್ಲಿರುವ ‘ತಣಲ್’ ಆಶ್ರಮದ ಪ್ರಯತ್ನದ ಫಲವಾಗಿ ಮಹಿಳೆಯೊಬ್ಬರು 9 ವರ್ಷಗಳ ನಂತರ ತನ್ನ ಪತಿಯ ಜೊತೆಯಾಗಿದ್ದಾರೆ. ಮಾನಸಿಕ ಸಮಸ್ಯೆಯಿಂದಾಗಿ ಕುಟುಂಬದವರಿಂದ ದೂರವಾಗಿದ್ದ ಹರಿಯಾಣ ಮೂಲದ ದರ್ಶನ ಕಳೆದ ನಾಲ್ಕು ವರ್ಷಗಳಿಂದ ‘ತಣಲ್’ ಆಶ್ರಮದಲ್ಲಿ ಆಶ್ರಯ ಪಡೆದು ಮಾನಸಿಕವಾಗಿ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಕಳೆದ 32 ವರ್ಷಗಳ ಹಿಂದೆ ದೆಹಲಿ ಮೂಲಕ ಲೆಹರ್ ಸಿಂಗ್ ಎಂಬವರೊಂದಿಗೆ ವಿವಾಹವಾಗಿದ್ದ ದರ್ಶನ. ಸಮಸ್ಯೆಗಳ ನಡುವೆ ದೆಹಲಿಯಲ್ಲಿ ತನ್ನ ಐವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. 9 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದರ್ಶನ ಅವರನ್ನು ಕುಟುಂಬದವರು ಎಷ್ಟೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ಪೊಲೀಸ್ ಠಾಣೆಗೆ ದೂರು ನೀಡದರೂ ಯಾವುದೇ ಸುಳಿವು ದೊರೆತ್ತಿರಲಿಲ್ಲ. 2018ರ ಜುಲೈನಲ್ಲಿ ಕುಶಾಲನಗರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ದರ್ಶನ ಅವರನ್ನು ಕಂಡ ಪೊಲೀಸರು ತಣಲ್ ಅಶ್ರಮವನ್ನು ಸಂಪರ್ಕಿಸಿ ಆಶ್ರಯ ನೀಡುವಂತೆ ಮನವಿ ಮಾಡಿದ್ದರು. ಸಾಮಾಜಿಕ ಸಂಸ್ಥೆಯಾಗಿರುವ ತಣಲ್ ಆಕೆಯನ್ನು ಕರೆದುಕೊಂಡು ಬಂದು ಪೋಷಣೆಗೆ ಮುಂದಾಯಿತು. ಇದೀಗ ದರ್ಶನ ಆರೋಗ್ಯದಲ್ಲಿ ಶೇ.80…

Read More