ಮಡಿಕೇರಿ ಜ.19 NEWS DESK : 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್1 ದೊಡ್ಡಮಳ್ತೆ ಫೀಡರ್ನಲ್ಲಿ ಜ.20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಾಗಡಿಕಟ್ಟೆ, ದೊಡ್ಡಮಳ್ತೆ, ಚಿಕ್ಕತೋಳೂರು, ಕೂಗೆಕೋಡಿ, ಹನಕೋಡು, ಹೊನ್ನಮ್ಮನಕೆರೆ, ಹಾರಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಕುಶಾಲನಗರ ಜ.19 NEWS DESK : ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ.ಸರ್ದಾರ್ ಜೋಗಾಸಿಂಗ್ 93ನೇ ಜನ್ಮ ದಿನದ ಪ್ರಯುಕ್ತ ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಉನ್ನತ ಶಿಕ್ಷಣ ಮತ್ತು ಕೃಷಿ ದಾರ್ಶನಿಕ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ-2026 ಪ್ರಶಸ್ತಿ ನೀಡಿ ಗೌರವಿಸಿದೆ. ಬೀದರ್ನ ಗುರುನಾನಕ ದೇವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ಮತ್ತು ಕೃಷಿಯಲ್ಲಿನ ಸೇವೆ ಹಾಗೂ ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಪ್ರೊ. ಅಶೋಕ ಸಂಗಪ್ಪ ಆಲೂರ ಅವರು, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಗ್ರಾಮೀಣಾಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಸುಮಾರು ಎರಡೂವರೆ ದಶಕಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಪ್ರತಿಷ್ಠಿತ ಕೃಷಿ ಧಾರವಾಡದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನದಲ್ಲಿ ಬಿ.ಎಸ್ಸಿ (B.Sc) ಮತ್ತು ಎಂ.ಎಸ್ಸಿ (M.Sc) ಪದವಿಗಳನ್ನು ಪಡೆದುಕೊಂಡು, ತದನಂತರ…
ಮಡಿಕೇರಿ ಜ.19 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯ ತ್ಯಾಗರಾಜ ಕಾಲೋನಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವುದಾಗಿ ಶಾಸಕ ಡಾ.ಮಂತರ್ ಗೌಡ ಅವರು ಭರವಸೆ ನೀಡಿದ್ದಾರೆ. ನಗರಸಭಾ ಸದಸ್ಯ ಮಹಮ್ಮದ್ ಯಾಕುಬ್ ಎಂ.ಎಂ ಅವರ ನೇತೃತ್ವದಲ್ಲಿ ಸೋಮವಾರಪೇಟೆಯಲ್ಲಿ ಶಾಸಕರನ್ನು ಭೇಟಿಯಾದ ವಾರ್ಡ್ ಸಂಖ್ಯೆ 3ರ ತ್ಯಾಗರಾಜ ಕಾಲೋನಿ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಅಭಿವೃದ್ಧಿ ಕಾರ್ಯ ಮತ್ತು ಪಕ್ಷ ಸಂಘಟನೆಯ ಕುರಿತು ಚರ್ಚಿಸಿದರು. ಬೂತ್ ಅಧ್ಯಕ್ಷ ಹಸೇನ್, ಕಾರ್ಯದರ್ಶಿ ಸುಹೇಲ್, ಸದಸ್ಯರಾದ ಆಸೀಫ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಜ.19 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಲವ್ ಜಿಹಾದ್ ಮತ್ತು ಮತಾಂತರ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ವಿರುದ್ಧ ಕೊಡಗು ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಜ.27 ರಂದು ಸಿದ್ದಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಜನಾಕ್ರೋಶ ಸಭೆ ನಡೆಯಿಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ಸಿದ್ದಾಪುರದ ಶ್ರೀ ಅಯ್ಯಪ್ಪ ದೇವಾಲಯದ ಆವರಣದಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ಬಸ್ ನಿಲ್ದಾಣದಲ್ಲೆ ಜನಾಕ್ರೋಶ ಸಭೆ ನಡೆಯಲಿದೆ ಎಂದು ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳು ಲವ್ ಜಿಹಾದ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಈ ಸಂದರ್ಭ ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಹಿಂದೂ ಸುರಕ್ಷಾ ಸಮಿತಿಯ ಸಹ ಸಂಚಾಲಕ ಸಂತೋಷ್ ಕುಶಾಲನಗರ, ಪದಾಧಿಕಾರಿಗಳಾದ ಲಾಲಾ ಅಯ್ಯಣ್ಣ, ವೈ.ಪಿ. ಭೋಜೇಗೌಡ, ಪಿ.ಎ.ಕುಮಾರ್, ಪಿ.ಇ.ರಮೇಶ್ ಉಪಸ್ಥಿತರಿದ್ದರು.
ಮಡಿಕೇರಿ ಜ.19 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಶಿವಕೇರಿ ಭಾಗದಲ್ಲಿ ಶಾಸಕರ ರೂ.27 ಲಕ್ಷ ವೆಚ್ಚದ ಅನುದಾನದಲ್ಲಿ ಪೂರ್ಣಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಸೂರಜ್ ಹೊಸೂರು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ಸತೀಶ್, ಅತಿಫ್ ಮನ್ನ, ರಾಕೇಶ್ ಚುಮ್ಮಾ, ಸಚಿನ್, ಪೂರ್ಣಿಮಾ, ಸಂತೋಷ್, ವಿಠಲ, ಶ್ರೀನಿವಾಸ್, ಸಾಗರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜ.19 NEWS DESK : ಆಟೋ ಮಾಲೀಕ ಚಾಲಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಸಂಘದ ಸದಸ್ಯರಿಗೆ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಏ.5ರಿಂದ 7ರವರೆಗೆ ನಗರದಲ್ಲಿ ಆಯೋಜಿಸಲಾಗಿದ್ದು, ಏ.12ರಂದು ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಆಟೋಟ ಸ್ಪರ್ಧೆ ಮತ್ತು ಡ್ಯಾನ್ಸ್ ಮೇಳವನ್ನು ಆಯೋಜಿಸಲಾಗಿದೆಯೆಂದು ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್. ಮೇದಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಆಟೋ ಮಾಲೀಕ ಚಾಲಕರ ಸಂಘದೊಂದಿಗೆ ನೋಂದಾಯಿಸಿಕೊಂಡ 37 ಸ್ಥಾನೀಯ ಸಮಿತಿಗಳಿವೆ. ಈ ಸಮಿತಿಗಳಲ್ಲಿ ಸದಸ್ಯರಾಗಿರುವ ಆಟೋ ಚಾಲಕರಿಗಾಗಿ ಏ.5ರಿಂದ ಮೂರು ದಿನಗಳ ಕಾಲ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆಯೆಂದು ತಿಳಿಸಿದರು. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ 25 ರಿಂದ 30 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿಚ್ಛಿಸುವ ತಂಡಗಳಿಗೆ 5ಸಾವಿರ ರೂ. ಮೈದಾನ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ತಂಡಗಳು ಮಾ.25ರ ಒಳಗಾಗಿ ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು.…
ಮಡಿಕೇರಿ ಜ.19 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ 15ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಹಿಂದೆ ವಿದ್ಯಾನಗರದ ನಿವಾಸಿಗಳ ಬೇಡಿಕೆಗೆ ಸ್ಪಂದಿಸಿದ ಶಾಸಕರು, ತಮ್ಮ ಅನುದಾನದಲ್ಲಿ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲು ಸೂಚನೆ ನೀಡಿದ್ದರು. ಅದರಂತೆ ಈಗ ಕಾಮಗಾರಿ ಮುಕ್ತಾಯಗೊಂಡ ಬಳಿಕ ಸಾರ್ವಜನಿಕರ ಉಪಯೋಗಕ್ಕೆ ರಸ್ತೆಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬಗರ್ ಹುಕುಂ ತಾಲೂಕು ಅಧ್ಯಕ್ಷರು ಸಲಾಂ, ಪುರಸಭೆ ಮಾಜಿ ಉಪಾಧ್ಯಕ್ಷರು ಫಸಿಯಾ ತಬ್ಸುಂ, ವಿರಾಜಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಪುರಸಭೆ ಮಾಜಿ ಸದಸ್ಯರು ರಾಫಿ, ಅತಿಫ್ ಮನ್ನ, ಸ್ಥಾಯಿ ಸಮಿತಿಯ ಅಧ್ಯಕ್ಷರು ಜಲಿಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ರಫೀಕ್, ಪಕ್ಷದ ಮುಖಂಡರು ಮೊಯಿದು, ಜಾಫರ್,…
ಮಡಿಕೇರಿ ಜ.19 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಮಾಲಂಬಿ ಗ್ರಾಮದ ರಾಜ ಹಾಗೂ ಪಾರ್ವತಿ ದಂಪತಿಯ ಪುತ್ರಿ ಪೂಜಾ ಎಂ.ಆರ್ ಅವರು ಬಿಎಡ್ ಪದವಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಾಸನದ ರಾಜೀವ್ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಮಡಿಕೇರಿ ಜ.19 NEWS DESK : ವಿರಾಜಪೇಟೆ ತಾಲ್ಲೂಕು ಕಚೇರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು. ಇತ್ತೀಚಿಗೆ ಈಚೂರು ಭಾಗದಲ್ಲಿ ಸಾರ್ವಜನಿಕರ ದೂರು ಬಂದ ಮೇರೆಗೆ ಅಲ್ಲಿಯ ಡಾಂಬರ್ ತಯಾರಕ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆ ಸಂದರ್ಭದಲ್ಲಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಶಾಸಕರು, ಜನರ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದ್ದರು. ಆ ಪ್ರಯುಕ್ತ ಇಂದು ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಮೇ 31ರ ಒಳಗಾಗಿ ಈ ಘಟಕದ ಕಾರ್ಯ ಚಟುವಟಿಕೆಯನ್ನು ನಿಲ್ಲಿಸುವಂತೆ ಸೂಚಿಸಲಾಯಿತು. ಇದಕ್ಕೆ ಸ್ಥಳೀಯ ಮಾಲೀಕರುಗಳು ಹಾಗೂ ಸಾರ್ವಜನಿಕರು ಒಪ್ಪಿಗೆ ಸೂಚಿಸಿದ್ದು, ಸಾರ್ವಜನಿಕರ ಮನವಿಗೆ ಸ್ಪಂದಿಸಿ ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಶಾಸಕರ ನಡೆ ಬಗ್ಗೆ ಸಭೆಯಲ್ಲಿ ಪ್ರಶಂಸೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್,…
ಮಡಿಕೇರಿ ಜ.19 NEWS DESK : ಕೊಡಗಿನ ಗಡಿಭಾಗ ಸಂರಕ್ಷಿತ ಅರಣ್ಯ ಮಾಕುಟ್ಟ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಯರವ ಜನಾಂಗಕ್ಕೆ ಸೇರಿದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಧಾರ್ ಕಾರ್ಡ್ ವಿತರಿಸಿದರು. ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಯಾವುದೂ ಇವರಿಗೆ ಇರದ ಪರಿಣಾಮ ಸರ್ಕಾರ ನೀಡುವ ಯಾವುದೇ ಸೌಲಭ್ಯ ಇವರಿಗೆ ಲಭಿಸುತ್ತಿರಲಿಲ್ಲ. ಈ ವಿಚಾರ ಶಾಸಕ ಪೊನ್ನಣ್ಣ ನವರ ಗಮನಕ್ಕೆ ಬಂದಾಗ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮತ್ತು ಸೂಚನೆ ನೀಡಿ ಮೊದಲ ಹಂತದಲ್ಲಿ ಆಧಾರ್ ಕಾರ್ಡ್ ಮಾಡಿಸುವಲ್ಲಿ ಸಫಲರಾಗಿದ್ದು, ಮುಂದಿನ ತಿಂಗಳ ಒಳಗಾಗಿ ಪಡಿತರ ಚೀಟಿ ವಿತರಿಸಿ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನಾಗಿ ಅವರನ್ನು ನೋಂದಾಯಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಇಲ್ಲಿ ಹದಿನೇಳು ಕುಟುಂಬಗಳು ವಾಸವಾಗಿದ್ದು, ಕೂಡಲೇ ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿ ಅನುಪಾಲನಾ ವರದಿ…






