ಲೇಖಕ: admin

ಮೈಸೂರು, ಡಿ.31 NEWS DESK : ಅಕ್ರಮವಾಗಿ ದೇಶದೊಳಗೆ ನುಸುಳುವವರ ಸಂಖ್ಯೆ ಹೆಚ್ಚಾಗಿದೆ. ಅತ್ಯಂತ ಕಳವಳಕಾರಿ ವಿಷಯ ಎಂದರೆ ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಒತ್ತಾಯಿಸಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ಪತ್ರ ಬರೆದಿರುವ ಸಂಸದ ಯದುವೀರ್‌ ಒಡೆಯರ್‌ ಇಂಥ ವಿಷಯಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. :: ವೀಡಿಯೋ ವೈರಲ್‌ ::  ಇನ್‌ಸ್ಟಾಗ್ರಾಮ್‌ ವೀಡಿಯೋದಲ್ಲಿ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರು (ಆಟೋ ಚಾಲಕರು) ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ನಾವು ವಾಸಿಸುತ್ತಿದ್ದು, ಇಲ್ಲಿ ಯಾವುದೇ ಭಯ, ಆತಂಕವಿಲ್ಲ. ಅಕ್ರಮವಾಗಿ ಇಲ್ಲಿ ನೆಲಸಬಹುದು ಎಂದು ಹೇಳಿಕೊಂಡಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಎಂದು ಯದುವೀರ್‌ ತಿಳಿಸಿದ್ದಾರೆ. ಇದು ಒಂದು ವೇಳೆ ನಿಜವಾದರೆ, ಪೊಲೀಸ್‌ ಇಲಾಖೆಯ ವೈಫಲ್ಯ ಎಂಬುದು ಕಂಡುಬರುತ್ತದೆ.…

Read More

ಸೋಮವಾರಪೇಟೆ ಡಿ.31 NEWS DESK : ಪಟ್ಟಣದ ಆಂಜನೇಯ ದೇವಾಲಯ ಸಮೀಪದ ಹೌಸಿಂಗ್ ಬೋರ್ಡ್ ನಿವಾಸಿ ನಿವೃತ್ತ ಇಂಜಿನಿಯರ್ ಕೆ.ಎಸ್.ನಾಗರಾಜ್(90)ಇಂದು (ಡಿ.31) ಸಂಜೆ ನಿಧನರಾಗಿದ್ದಾರೆ.  ಮೃತರು ಪತ್ನಿ ಸುನಂದಾ ನಾಗರಾಜ್, ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂದು, ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಜ.1 ರಂದು ಸಂಜೆ 5 ಗಂಟೆಗೆ ಅವರ ಹುಟ್ಟೂರು ಶನಿವಾರಸಂತೆ ಸಮೀಪದ ಕಿತ್ತೂರು ಗ್ರಾಮದಲ್ಲಿ ನಡೆಯಲಿದೆ. ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಸೋಮವಾರಪೇಟೆ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅಂತಿಮ ದರ್ಶನ ಪಡೆಯಬಹುದಾಗಿದೆ.

Read More

ಮಡಿಕೇರಿ ಡಿ.31 NEWS DESK :  ಕೇರಳ ರಾಜ್ಯದ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಮತ್ತು ಗಣ್ಯರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿದರು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರೀ ಗುರುಗಳಿಗೆ ನಮಿಸಲಾಯಿತು. ಬಳಿಕ ಮಠದ ಯಾಯಾತ್ರಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನಡೆ ಬರೆದ ದರ್ಶನಿಕ ಶ್ರೀ ನಾರಾಯಣ ಗುರುಗಳ ಜೀವನ ಹಾಗೂ ಉಪದೇಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಕೇರಳ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು…

Read More

ಮಡಿಕೇರಿ ಡಿ.31 NEWS DESK : ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿನ ಶಾಲೆಗಳಲ್ಲಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರನ್ನು ವಿರಾಜಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ  ಸನ್ಮಾನಿಸಲಾಯಿತು.  ಬಿಟ್ಟಂಗಾಲ ಕೊಡಗು ಹೆಗ್ಗಡೆ ವಿದ್ಯಾಭಿವೃದ್ಧಿ ಸಂಘ ಮತ್ತು ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಗಾಯತ್ರಿ, ಕೇಚಂಡ ಪ್ರಸನ್ನ, ಮದ್ದಂಡ ಮೋಣ್ಣಪ್ಪ, ಕುಪ್ಪಣಮಾಡ ಮಾದಪ್ಪ, ಕಾಡೇಮಾಡ ಸುಬ್ಬಯ್ಯ, ಮಚ್ಚಂಡ ಬೋಪಣ್ಣ, ಅಪ್ಪಂಡೆರಂಡ ದೇವಕ್ಕಿ, ಕೊಂಗೆಪ್ಪಂಡ ಕುಟ್ಟಪ್ಪ, ಪ್ರೇಮಕುಮಾರಿ, ಶಿವಣ್ಣ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯದರ್ಶಿ ಪಡಿಞರಂಡ ಪ್ರಭು ಕುಮಾರ್ ಸನ್ಮಾನಿತ ಶಿಕ್ಷಕರ ಸಾಧನೆಯನ್ನು ವಿವರಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ವರ್ಷಂಪ್ರತಿ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ನಿರಂತರವಾಗಿ ಉತ್ತಮ ಸಾಧನೆಯನ್ನು ತೊರುತ್ತಾ ಬರುವುದರೊಂದಿಗೆ ಕೊಡಗಿನಲ್ಲಿ ಶಾಲಾ ಹಂತದ ವ್ಯಾಸಾಂಗ ಮುಗಿಸಿದವರು ಹಾಕಿಯಲ್ಲಿ ಒಲಿಂಪಿಕ್ಸ್ ನಲ್ಲೂ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರುವುದರ ಹಿಂದೆ ಶಾಲಾ ಹಂತದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದದ್ದಾಗಿದೆಯೆಂದು ಅಭಿಪ್ರಾಯ…

Read More

ಮಡಿಕೇರಿ ಡಿ.31 NEWS DESK : ನಗರದ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಜ.8 ರಂದು ಮಡಿಕೇರಿಯಲ್ಲಿ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ದೈವಜ್ಞ ಬ್ರಾಹ್ಮಣ ಕಟ್ಟಡ ಸಮಿತಿ ಅಧ್ಯಕ್ಷ ಬಿ.ಹೆಚ್.ಉಲ್ಲಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಫಲಾನ್ಯಾನ, ಗುರುಗಣಪತಿ ಪೂಜೆ, ಸ್ವಸ್ತಿ ಪೂಣ್ಯಾವಾಚನ, ಸತ್ಯನಾರಾಯಣ ವೃತ ಕಥಾ ಪ್ರಾರಂಭ ನಡೆಯಲಿದೆ ಎಂದು ತಿಳಿಸಿದರು. ಮಧ್ಯಾಹ್ನ ಅನ್ನದಾನ ನಡೆಯಲಿದ್ದು, ಸಂಜೆ 4.30 ಗಂಟೆಗೆ ಶ್ರೀಗಳ ಪುರಪ್ರವೇಶವಾಗಲಿದೆ. ನಂತರ ಪೂರ್ಣ ಕುಂಭ ಮೆರವಣಿಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ನಡೆಯಲಿದೆ. ಬಳಿಕ ಸಮಾಜದ ವತಿಯಿಂದ ಶ್ರೀಗಳಿಗೆ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಲಿದೆ.…

Read More

ಬೆಂಗಳೂರು ಡಿ.31 NEWS DESK : 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ – ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.  ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.  ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರನ್ನು ಸಜ್ಜುಗೊಳಿಸಲಾಗುತ್ತಿದೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಪೊಲೀಸರು ನೀಡುವ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಿ, ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸಿ ಎಂದು ಎಂದು ತಿಳಿಸಿದರು.

Read More

ಮಡಿಕೇರಿ ಡಿ.31 NEWS DESK : ಕುಶಾಲನಗರದ ಹೋಟೆಲ್ ಉದ್ಯಮಿ ಅತಿಥಿ ಭಾಸ್ಕರ್ ಅವರು ಅನಾರೋಗ್ಯದಿಂದ ಇಂದು (ಡಿ.31) ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪಾರ್ಥಿವ ಶರೀರ ಮಧ್ಯಾಹ್ನ 3 ಗಂಟೆ ವೇಳೆಗೆ ಕುಶಾಲನಗರ ತಲುಪಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಮಡಿಕೇರಿಯಲ್ಲಿ ಹಲವು ವರ್ಷಗಳ ಕಾಲ ಅತಿಥಿ ಹೋಟೆಲ್ ನಡೆಸುತ್ತಿದ್ದ ಭಾಸ್ಕರ್ ಅವರು ನಂತರ ಕುಶಾಲನಗರದ ಪ್ರವೇಶದಲ್ಲಿ ಅತಿಥಿ ರೆಸ್ಟೋರೆಂಟ್ ಆರಂಭ ಮಾಡಿದ್ದರು. ಕ್ರಿಯಾಶೀಲ ಪ್ರವಾಸೋದ್ಯಮಿ ಆಗಿದ್ದ ಭಾಸ್ಕರ್ ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್ ನಲ್ಲಿ ಸಕ್ರಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಭಾಸ್ಕರ್ ನಿಧನಕ್ಕೆ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕಾರ್ಯಪ್ಪ, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Read More

ನಾಪೋಕ್ಲು ಡಿ.31 NEWS DESK :  ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ಗೆಲುವು ಸಾಧಿಸುವುದರ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.  ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಕೋಲಾರ ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕೋಲಾರದಲ್ಲಿ ಜರುಗಿದ 44 ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ಗೆಲುವು ಸಾಧಿಸುವುದರ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾದವರಲ್ಲಿ ನಾಂಗಾಲ, ಬಿಟ್ಟಂಗಾಲಾ, ಚೇಮಿರ ಸೀತಮ್ಮ, ಪ್ರೇಮ ತಟ್ಟೆ ಎಸೆತ ಪ್ರಥಮ, ಗುಂಡು ಎಸೆತ ಪ್ರಥಮ, ಜಾವೆಲಿನ್ ಎಸೆತ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ  ಮನು ಜಾವಲಿನ್ ಎಸೆತದಲ್ಲಿ ಪ್ರಥಮ, ಭಾರದ ಗುಂಡು ಎಸೆತದಲ್ಲಿ ಹಾಗೂ ಹ್ಯಾಮರ್ ಥ್ರೊ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಟಿ ಶೆಟ್ಟಿಗೇರಿಯ ಪೆಮಂಡ ಸಂಭೀತ ಕುಶಾಲಪ್ಪ ಜಾವಲಿನ್ ಮತ್ತು ಡಿಸ್ಕಸ್ ಥ್ರೋ ಎಸೆತದಲ್ಲಿ ತೃತೀಯ…

Read More

ನಾಪೋಕ್ಲು ಡಿ.31 NEWS DESK  : ಬೇತು ಗ್ರಾಮದ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಸ್ಪರ್ಧೆಯಲ್ಲಿ 7ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧಿಸಿದ್ದು. ಒಟ್ಟು 29 ಗುಂಪುಗಳು ಭಾಗವಹಿಸಿದ್ದು, ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ನಾಲ್ಕು ಗುಂಪುಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು. ಸ್ಪರ್ಧೆಯಲ್ಲಿ ಐದು ಸುತ್ತುಗಳಿದ್ದು, ಶಮಂತ್ ಹಾಗೂ ಮೊಹಮ್ಮದ್ ಪ್ರಥಮ ಸ್ಥಾನ, ನಿಶಾಂತ್ ಹಾಗೂ ಅನಸ್ ದ್ವಿತೀಯ ಸ್ಥಾನ ಪಡೆದರು. ವಿಜೇತರಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ, ಸಂಸ್ಥೆಯ ಸಂಚಾಲಕಿ ವಿದ್ಯಾ ಸುರೇಶ್ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಹಾಜರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ದುಂದುಬಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಬಿ.ಸಿ ಸ್ವಾಗತಿಸಿದರು. ರಸಪ್ರಶ್ನೆ ಆಯೋಜಕರಾಗಿ ಶಿಕ್ಷಕಕಿಯರಾದ ಸ್ಪೂರ್ತಿ, ಶಿಲ್ಪ ಕಾರ್ಯನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಡಿ.31 NEWS DESK : ಆಂಧ್ರಪ್ರದೇಶದ ಕಡತದಲ್ಲಿ ನಡೆದ ಮೂರನೆಯ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಗ್ರೀಷ್ಮ ಪೊನ್ನಪ್ಪ ಪಿ. ಹಾಗೂ ಚರಿಷ್ಮಾ ಕಾವೇರಮ್ಮ ಸಿ. ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪೈನಲ್ ನಲ್ಲಿ ಆಂಧ್ರಪ್ರದೇಶದ ವಿರುದ್ದ 2-0 ಗೋಲುಗಳಿಂದ ಜಯಭೇರಿ ಬಾರಿಸುವ ಮೂಲಕ ಕರ್ನಾಟಕಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

Read More