ಲೇಖಕ: admin

ಮಡಿಕೇರಿ ಜ.3  : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವತೋಮುಖ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಶ್ರೇಯಾಂಕ ನೀಡುವ ಸಲುವಾಗಿ  ಜ.4 ಮತ್ತು 5 ರಂದು  ನ್ಯಾಕ್ ಸಂಸ್ಥೆಯು ಕಾಲೇಜಿನ ಭೇಟಿ ನೀಡುತ್ತಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಕೆ.ಸಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜ.4 ರಂದು  ಮಧ್ಯಾಹ್ನ 12 ಗಂಟೆಗೆ ಪತ್ರಿಕಾಭವನ ಸಭಾಂಗಣದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ ವತಿಯಿಂದ 8ನೇ ವಾರ್ಷಿಕ ಗ್ರಾಮೀಣ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಎಂ.ಎಸ್.ಕಾಂತಿ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಪರಮೇಶ್ವರ ಪರಿಶಿಷ್ಟ ಪಂಗಡದ ಜನಾಂಗ ಬಾಂಧವರನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಗ್ರಾಮೀಣ ಕೂಟವನ್ನು ಆಯೋಜಿಸಲಾಗಿದೆ. ಇದು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು. ಯುವಕರು ಯುವತಿಯರು ಸಂಘಟನಾತ್ಮಕವಾಗಿ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಸರ್ಕಾರ ಪರಿಶಿಷ್ಟ ಪಂಗಡದವರಿಗೆ ಹಲವು ಯೋಜನೆಗಳನ್ನು ಜಾರಿಗೆ…

Read More

ಮಡಿಕೇರಿ, ಜ.3 :  ವಿದ್ಯಾರ್ಥಿಗಳು ವಿಜ್ಞಾನಿಗಳ ಅನ್ವೇಷಣೆ ಹಾಗೂ ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಅಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಕರೆ ನೀಡಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ  ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭಾಶಯ ತಿಳಿಸಿದರು. ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ…

Read More

ಮಡಿಕೇರಿ ಜ.3 : ಕೊಡಗು ಜಿಲ್ಲೆಯ ಹೆಚ್ಚುವರಿ ಎಸ್.ಪಿ.ಆಗಿ ಕೆ.ಎಸ್.ಸುಂದರರಾಜ್ ನೇಮಕಗೊಂಡಿದ್ದಾರೆ. ಚಾಮರಾಜ ನಗರದ ಎ.ಎಸ್.ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸುಂದರರಾಜ್ ಅವರು ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಆಗಿ, ಡಿವೈಎಸ್‍ಪಿ ಆಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಪತಿ ಪದಕ ಪಡೆದ ಅಧಿಕಾರಿಯಾಗಿರುವ ಇವರನ್ನು ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

Read More

ವಿರಾಜಪೇಟೆ ಜ.3 :  : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ಡಾಂಬರಿಕರಣ, ಚರಂಡಿ, ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ರೂ, 3.5 ಕೋಟಿ ಅನುದಾನದಲ್ಲಿ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ನಗರದ ಜನತೆಗೆ ಕುಡಿಯುವ ನೀರು ಹೆಚ್ಚಿನ ಪೂರೈಕೆಗಾಗಿ ರೂ,65 ಕೋಟಿ ಅನುದಾನ ಮಂಜುರಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರೂ, 25 ಲಕ್ಷ ಅನುದಾನದಲ್ಲಿ ವಿರಾಜಪೇಟೆಯ ಸುಂಕದಕಟ್ಟೆ ಕೊಳಚೆ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ  ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿ ಈಗಾಗಲೇ ನಗರದ ಎಲ್ಲಾ ಮನೆ ಮನೆಗಳಿಗು ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದ್ದರು ಮುಂದೆಯು ಕುಡಿಯುವ ನೀರಿನ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ 65 ಕೋಟಿ ರೂ, ಅನುದಾನ ಮಂಜೂರು ಮಾಡಲಾಗಿದ್ದು ಮುಂದಿನ ದಿನದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದ ಶಾಸಕ ಬೋಪಯ್ಯ ಅವರು ಸರಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಗಳು ಕಳಪೆಯಾಗದಂತೆ ಸ್ಥಳಿಯರು ಗಮನ ಹರಿಸಬೇಕು ಹಾಗೂ ಗುತ್ತಿಗೆದಾರರು…

Read More

ಮಡಿಕೇರಿ ಜ.2 : ಅಗ್ನಿ ಆಕಸ್ಮಿಕದಿಂದ ರಬ್ಬರ್ ಹಾಳೆಗಳು ಬೆಂಕಿಗಾಹುತಿಯಾದ ಘಟನೆ ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಕೃಷಿಕ ಸೂರಜ್ ಹೊಸೂರು ಎಂಬುವವರ ಮನೆಯಲ್ಲಿ ರಬ್ಬರ್ ಹಾಳೆಗಳ ದಾಸ್ತಾನು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಸಂಭಿಸಿದೆ. ಒಂದೂವರೆ ಲಕ್ಷ ರೂ. ಗೂ ಅಧಿಕ ಮೌಲ್ಯದ ರಬ್ಬರ್ ಹಾಳೆಗಳು ಸುಟ್ಟು ಕರಕಲಾಗಿದ್ದು, ಯಂತ್ರಗಳಿಗೂ ಹಾನಿಯಾಗಿದೆ. ಪೊಲೀಸರು ಹಾಗೂ ಸಂಬAಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ ಜ.2 : ರಾಜಕೀಯ ಪಕ್ಷಗಳು ಜನ ಹಾಗೂ ಸಮಾಜವನ್ನು ಮರೆತರೆ ನಾಶವಾಗುತ್ತವೆ, ದೇಶದಲ್ಲಿ ಈಗಾಗಲೇ ಕೆಲವು ರಾಜಕೀಯ ಪಕ್ಷಗಳು ಹೀಗೆ ಆಗಿವೆ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ಬಿಜೆಪಿ ಹಾಗೂ ಮಡಿಕೇರಿ ನಗರ ಬಿಜೆಪಿ ವತಿಯಿಂದ ನಗರದ ವಿದ್ಯಾನಗರದ ಬೂತ್ ನಲ್ಲಿ ಸೋಮವಾರ ನಡೆದ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದ ಸಾಧನೆ ಮತ್ತು ಯೋಜನೆಯನ್ನು ಜನರಿಗೆ ತಿಳಿಸುವುದೇ ಬೂತ್ ನ ಮುಖ್ಯ ಕೆಲಸ. ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಬೂತ್ ಗಳನ್ನು ಶಕ್ತಿಶಾಲಿಯಾಗಿ ಮಾಡಬೇಕೆಂದು ಕರೆ ನೀಡಿದರು. ಬಿಜೆಪಿ ಪಕ್ಷ ಹೊರಟಿರುವುದು ದೇಶ ಕಟ್ಟಲು. ಪ್ರಪಂಚದ ಗುರುವಾಗವ ನಿಟ್ಟಿನಲ್ಲಿ ಅಧಿಕಾರ ಹಿಡಿಯಲು ನಮ್ಮ ಪಣ. ಗೆಲ್ಲಲು ಮಾತ್ರ ನಾವು ಕಾರ್ಯಕ್ರಮ ಮಾಡುತ್ತಿಲ್ಲ. ಬಿಜೆಪಿ ಸರ್ಕಾರದ ಎಲ್ಲಾ ಕಾರ್ಯಕ್ರಮವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕೆಂದರು. ವಾಜಪೇಯಿ ಸರ್ಕಾರದಲ್ಲಿ ಸರ್ವ ಶಿಕ್ಷಣ ಅಭಿಯಾನ ಮಾಡಿದ್ದೇವೆ. ಪ್ರಧಾನಿ ಮೋದಿ…

Read More

ಮಡಿಕೇರಿ ಜ.2 : ನಾವು ನಮ್ಮ ಗ್ರಾಮದ ಸ್ವಚ್ಛತೆ ಕಾಪಾಡುವುದರ ಜೊತೆಗೆ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಕೊಡಗಿನ ಪರಿಸರ ಮತ್ತು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಗಿರೀಶ್ ಮಲ್ಲಪ್ಪ ಕರೆ ನೀಡಿದ್ದಾರೆ. ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಪ್ರಮುಖ ಪ್ರವಾಸಿತಾಣ ಅಬ್ಬಿಪಾಲ್ಸ್ ನಲ್ಲಿ ವೇದಿಕೆ ವತಿಯಿಂದ ಕುವೆಂಪು ಜನ್ಮ ದಿನದ ಅಂಗವಾಗಿ ನಡೆದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿತಾಣವಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರವಾಸಿತಾಣಗಳನ್ನು ಹೊಂದಿರುವ ಪ್ರತಿ ಗ್ರಾ.ಪಂ ಗಳು ಪ್ರವಾಸಿಗರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಮತ್ತು ಜಾಗೃತಿ ಫಲಕಗಳನ್ನು ಅಳವಡಿಸಬೇಕು ಎಂದರು. ವೇದಿಕೆಯ ಕಾರ್ಯದರ್ಶಿ ನವೀನ್ ಅಜ್ಜಳಿ ಮಾತನಾಡಿ ಗ್ರಾಮ ಗ್ರಾಮಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು, ಎಲ್ಲಾ ಪ್ರದೇಶಗಳು ಕಸವಿಲ್ಲದೆ ಸುಂದರವಾಗಿ ಕಂಡಾಗ ಪ್ರವಾಸಿಗರು ಕೂಡ ಕಸ ಹಾಕದೆ ಸ್ವಚ್ಛತೆ ಕಾಪಾಡುತ್ತಾರೆ. ರಸ್ತೆಯ ಇಕ್ಕೆಲಗಳು…

Read More