ಲೇಖಕ: admin

ಮಡಿಕೇರಿ ಫೆ.15 : ತಾಲ್ಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ನೇಮಕ ಮಾಡಲು ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. 2019-20ನೇ ಸಾಲಿನ ಭಾರತ ಸಂವಿಧಾನ ಅನುಚ್ಚೇಧ 275(1)ರಡಿ ಇಂಪ್ರೂವಿಂಗ್ ಹೆಲ್ತ್‍ಕೇರ್ ಆಕ್ಸೆಸ್ ಅಮಾಂಗ್ ಅಡ್ವೈಸಿ ಪಾಪ್ಯೂಲೇಷನ್ಸ್ (Improving healthcare access among Adivasi populations)    ಕಾರ್ಯಕ್ರಮದ ಅಂಗವಾದ ಟ್ರೈಬಲ್ ಹೆಲ್ತ್ ನ್ಯಾವಿಗೇಷನ್ ಮಾಡೆಲ್  (Tribal Health Navigation Model)   ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿಗೆ ಒಬ್ಬರಂತೆ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಒಬ್ಬ ಜಿಲ್ಲಾ ಮಟ್ಟದ ಆದಿವಾಸಿ ಆರೋಗ್ಯ ಸಂಯೋಜಕ ಹುದ್ದೆಗೆ ಕಂಪ್ಯೂಟರ್ ಜ್ಞಾನವುಳ್ಳ 21 ರಿಂದ 40 ವರ್ಷ ವಯೋಮಿತಿ ಒಳಗಿರುವ ಜೇನು ಕುರುಬ, ಕಾಡು ಕುರುಬ, ಸೋಲಿಗ, ಯರವ, ಕೊರಗ, ಪಣಿಯ, ಮುಂತಾದ ಅರಣ್ಯಾದಾರಿತ ಆದಿವಾಸಿ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.(ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ) ಈ ನೇಮಕವು 3 ವರ್ಷಗಳವರೆಗೆ ತಾತ್ಕಾಲಿಕವಾಗಿದ್ದು…

Read More

ಮಡಿಕೇರಿ ಫೆ.15 : ಕೊಡವ ಭಾಷಿಕ ಸಮುದಾಯಗಳ ಕೂಟದ ವತಿಯಿಂದ ಫೆ.19 ರಂದು 18 ಕೊಡವ ಭಾಷಿಕ ಜನಾಂಗಗಳ ಒತ್ತೋರ್ಮೆ ಕೂಟ ನಡೆಯಲಿದೆ ಎಂದು ಕೂಟದ ಗೌರವ ಕಾರ್ಯದರ್ಶಿ ಕೂಡಂಡ ಸಾಬ ಸುಬ್ರಮಣಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ. ಬೆಳಿಗ್ಗೆ 9.30ಕ್ಕೆ ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಜಾನಪದ ಕಲಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ವಸ್ತು ಪ್ರದರ್ಶನವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಜಾನಪದ ಸಾಂಸ್ಕøತಿಕ ಮತ್ತು ಕಲಾ ಪ್ರದರ್ಶನ ಕಾರ್ಯಕ್ರಮವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಭಾ ಕಾರ್ಯಕ್ರಮವನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ…

Read More

ಮಡಿಕೇರಿ ಫೆ.15 : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಫೆ.20 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.15 :  ಹಿಂದೂ ಕ್ರಿಕೆಟ್ ಕ್ಲಬ್ ವತಿಯಿಂದ ಮಾ.4 ಮತ್ತು 5 ರಂದು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 3ನೇ ವರ್ಷದ ‘ಹಿಂದೂ ಕ್ರಿಕೆಟ್ ಕಪ್-2023’ ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಲಬ್ ಸದಸ್ಯ ಎನ್.ವಿನಯ್ ಕುಮಾರ್, ವಿವಿಧ ಸಮಾಜಗಳು ತಮ್ಮ ಸಮೂಹಕ್ಕೆ ಸೀಮಿತವಾದ ಪಂದ್ಯಾವಳಿಗಳನ್ನು ಆಯೋಜಿಸಿಕೊಂಡು ಬರುತ್ತಿವೆ. ಆದರೆ, ಹಿಂದೂ ಕ್ರಿಕೆಟ್ ಕ್ಲಬ್ ವತಿಯಿಂದ ಹಿಂದೂ ಸಮಾಜದ ಎಲ್ಲರನ್ನೂ ಸಂಘಟಿಸುವ ಚಿಂತನೆಗಳಡಿ ಹಿಂದೂ ಕ್ರಿಕೆಟ್ ಕಪ್ ಆಯೋಜಿಸುತ್ತಿದೆ. ಪಂದ್ಯಾವಳಿಯಲ್ಲಿ ರಾಜ್ಯವ್ಯಾಪ್ತಿಯ 40 ರಿಂದ 45 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರು ತಮ್ಮ ಗುರುತಿನ ಐಡಿ ಕಾರ್ಡ್‍ನ್ನು ಹಾಜರು ಪಡಿಸುವುದು ಕಡ್ಡಾಯವಾಗಿದೆ. ಪಂದ್ಯಾವಳಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಆಸಕ್ತ ತಂಡಗಳು ಫೆ.28 ರ ಒಳಗೆ ಮೈದಾನ ಶುಲ್ಕ 3 ಸಾವಿರ ರೂ.ಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಹೇಳಿದರು. ಪಂದ್ಯಾವಳಿ ವಿಜೇತರಿಗೆ ನೀಡಲು ಅತ್ಯಂತ ವಿಶಿಷ್ಟವಾದ ಟ್ರೋಫಿಗಳನ್ನು ಸಿದ್ಧಪಡಿಸಲಾಗಿದೆ.…

Read More

ಮಡಿಕೇರಿ ಫೆ.15 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ನರೇಶ್ಚಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಪತ್ರಿಕಾ ಭವನದಲ್ಲಿ ನಡೆದ ಸಂತಾಪ ಸಭೆಯಲ್ಲಿ ನರೇಶ್ಚಂದ್ರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಸಭೆಯಲ್ಲಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್, ಸಲಹೆಗಾರ ಬಿ.ಜಿ.ಅನಂತಶಯನ, ಪತ್ರಿಕಾಭವನ ಟ್ರಸ್ಟಿ ಶ್ರೀಧರ್ ಹೂವಲ್ಲಿ ನುಡಿನಮನ ಸಲ್ಲಿಸಿದರು. ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಸಹಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ, ಸಹ ಖಜಾಂಚಿ ಸಯ್ಯದ್ ಇರ್ಫಾನ್, ನಿರ್ದೇಶಕರಾದ ಹೆಚ್.ಎಸ್.ಲಕ್ಷ್ಮೀಶ್, ಸದಸ್ಯರಾದ ಪ್ರವೀಣ್, ಪಿ.ಎಂ.ರವಿ, ಸಲಹೆಗಾರ ಅನಿಲ್ ಹೆಚ್.ಟಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿಘ್ನೇಶ್ ಭೂತನಕಾಡು, ಪತ್ರಿಕಾ ಭವನ ವ್ಯವಸ್ಥಾಪಕಿ ಯಮುನಾ, ಸಿಬ್ಬಂದಿ ಸವಿತಾ, ಅಲ್ಲಾರಂಡ ರಂಗಚಾವಡಿಯ ಸಂಚಾಲಕ ವಿಠಲ್ ನಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.15 : ಕರಿಕೆ ಗ್ರಾ.ಪಂ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕೊಡಗು ಜಿಲ್ಲಾ ಪಂಚಾಯಿತಿಯಿಂದ ಹೆಚ್ಚಿನ ಅನುದಾನ ಮಂಜೂರು ಮಾಡಿ ಶೀಘ್ರ ಕಾಮಗಾರಿ ಆರಂಭಿಸಬೇಕೆಂದು ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಒತ್ತಾಯಿಸಿದ್ದಾರೆ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕರಿಕೆ ಗ್ರಾಮದಲ್ಲಿ ಶೇ.70 ರಷ್ಟು ಮಂದಿ ಹಿಂದುಳಿದ ವರ್ಗಕ್ಕೆ ಸೇರಿದವರು ವಾಸವಾಗಿದ್ದಾರೆ. ಇಲ್ಲಿನ ವಿವಿಧ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದ್ದರಿಂದ ಜಿ.ಪಂ ಮೂಲಕ ಹೆಚ್ಚಿನ ಅನುದಾನ ನೀಡಬೇಕೆಂದು ಗಮನ ಸೆಳೆದರು. ಆನೆಪಾರೆ ಎಸ್.ಸಿ.ಕಾಲೋನಿ ರಸ್ತೆ, ಬೀಟಿಯಾಡಿ ಎಸ್.ಸಿ.ಕಾಲೋನಿ ರಸ್ತೆ, ತೋಟಂ ಆನೆಪಾರೆ ರಸ್ತೆ, ಚೆಂಬೇರಿ ಆನೆಪಾರೆ ರಸ್ತೆ, ಕೊಚ್ಚಿ ಎಸ್.ಸಿ.ಕಾಲೋನಿ ರಸ್ತೆ, ಕುಂಡಡ್ಕ ಎಸ್.ಸಿ.ಕಾಲೋನಿ ರಸ್ತೆ, ಮಾರಾಟಿಮೂಲೆ ಎಸ್.ಸಿ.ಕಾಲೋನಿ ರಸ್ತೆ, ಮಡೆಕಾನ ಎಸ್.ಸಿ.ಕಾಲೋನಿ ರಸ್ತೆ, ಕುಡಿಯಂಕಲ್ಲು ಎಸ್.ಟಿ.ಕಾಲೋನಿ ರಸ್ತೆ, ಕೊಳಂಗರೆ ಎಸ್.ಟಿ.ಕಾಲೋನಿ ರಸ್ತೆ, ಪೊಂಗಾನ ಎಸ್.ಟಿ.ಕಾಲೋನಿ ರಸ್ತೆ, ಕುಂಡತ್ತಿಕಾನ ಎಸ್.ಟಿ.ಕಾಲೋನಿ ರಸ್ತೆ, ಹಳೆಮನೆ ಕುಂಡತ್ತಿಕಾನ ರಸ್ತೆ, ಪಚ್ಚೆಪಿಲಾವು ಎಸ್.ಟಿ.ಕಾಲೋನಿ ರಸ್ತೆ, ಆಲತ್ತಿಕಡವು ಎಸ್.ಸಿ.ಕಾಲೋನಿ ರಸ್ತೆ,…

Read More

ಮಡಿಕೇರಿ ಫೆ.15 : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವ ಫೆ.18 ರಂದು ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಂದು ಬೆಳಿಗ್ಗೆ 7 ಗಂಟೆಗೆ ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಮಹಾಗಣಪತಿ ಹೋಮ, 9 ಗಂಟೆಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ 6 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾಮ ಪೂಜೆ ಮತ್ತು ಸಂಜೆ 7 ಗಂಟೆಗೆ ರಂಗಪೂಜೆ ಜರುಗಲಿದೆ. ಜಾಗರಣೆ ಪ್ರಯುಕ್ತ ರಾತ್ರಿ 8 ಗಂಟೆಗೆ ಮಹಾಮೃತ್ಯುಂಜಯ ಹೋಮ ನಡೆಯಲಿದೆ. 10 ಗಂಟೆಗೆ ಸಭಾ ಕಾರ್ಯಕ್ರಮದ ನಂತರ ಮರುದಿನ ಬೆಳಿಗ್ಗೆ 5…

Read More

ನಾಪೋಕ್ಲು ಫೆ.15 : ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ  ಉತ್ಸವ ಮಾ.7ರಂದು  ನಡೆಯಲಿದೆ. ಅಂದು ಬೆಳಿಗ್ಗೆ ಜೋಡತ್ತು ಪೋರಾಟ ಹಾಗೂ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಲಿದ್ದು,  ಅಪರಾಹ್ನ ದೇವರ ಉತ್ಸವ ಮೂರ್ತಿಯನ್ನು ಮಲ್ಮ ಬೆಟ್ಟಕ್ಕೆ ಕೊಂಡೊಯ್ದು ದೇವ ಕಟ್ಟು ಸಡಿಲಿಸಿ, ಸಂಜೆ ನೃತ್ಯ ಬಲಿ ಮೂಲಕ  ಉತ್ಸವ ಸಂಪನ್ನಗೊಳ್ಳಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವತಕ್ಕರಾದ ಪರದಂಡ ಕುಟುಂಬಸ್ಥರು ಕೋರಿದ್ದಾರೆ. ಸತ್ಯನಾರಾಯಣ ಪೂಜೆ ಹೊರತುಪಡಿಸಿ ಎಲ್ಲಾ ರೀತಿಯ ಪೂಜೆಗಳನ್ನು, ತುಲಾಭಾರ ಸೇವೆಗಳನ್ನು ಈ ಸಂದರ್ಭದಲ್ಲಿ ನಡೆಸಲಾಗುವುದು. ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಂತೆ ಫೆ.21ರ ಮಂಗಳವಾರ ಮಲ್ಮ ಬೆಟ್ಟದಲ್ಲಿ ದೇವಕಟ್ಟು ವಿಧಿಸಲಾಗುವುದು. ಆ ಬಳಿಕ ಮಾ.7ರಂದು ಉತ್ಸವ ಸಂಪನ್ನ ವಾಗುವವರೆಗೆ ಭಕ್ತರು ಪ್ರಾಣಿ ಹಿಂಸೆ, ಮದುವೆ ಮುಂತಾದ ಸಮಾರಂಭಗಳನ್ನು ನಡೆಸದಂತೆ ದೇವತಕ್ಕರು ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಫೆ.15 : ಕೊಡಗಿನ ಆದಿ ಗ್ರಂಥ ಪಟ್ಟೋಳೆ ಪಳಮೆಯನ್ನು ಆಧರಿಸಿದ ಪೌರಾಣಿಕ ಕೊಡವ ಚಲನಚಿತ್ರ ಕಲ್ಲಕೆರೆ ಮಾದೇವಿ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಶಾಲಾ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಚಲನಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಪಿ ಅಂಡ್ ಜಿ ಕ್ರಿಯೇಷನ್ ಚಲನಚಿತ್ರ ನಿರ್ದೇಶಕ ಬಾಳೆಯಡ ಪ್ರತೀಶ್ ಪೂವಯ್ಯ ತಿಳಿಸಿದ್ದಾರೆ. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲಕೆರೆ ಮಾದೇವಿ ಚಲನಚಿತ್ರ ಕೊಡಗಿನ ಪ್ರಥಮ ಪೌರಾಣಿಕ ಕಥೆಯಾಗಿ ಮೂಡಿ ಬಂದಿದ್ದು, ಮೂರ್ನಾಡು, ನೆಲಜಿ ಮತ್ತಿತರ ಭಾಗಗಳಲ್ಲಿ ಪ್ರದರ್ಶನಕ್ಕೆ ಬೇಡಿಕೆ ಬಂದಿದೆ ಎಂದರು. ಪಿ ಅಂಡ್ ಜಿ ಕ್ರಿಯೇಷನ್ ಚಲನಚಿತ್ರ ನಿರ್ದೇಶಕರಾದ ಆಚೆಯಡ ಗಗನ್ ಗಣಪತಿ ಮಾತನಾಡಿ, ಚಿತ್ರತಂಡ ಆಸಕ್ತಿಯಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ತಂಡದ ಎಲ್ಲಾ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿ ವಿಶೇಷ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಾರ್ವಜನಿಕರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ನಟ ಚೇನಂಡ ಗಿರೀಶ್ ಉತ್ತಮ ಪೌರಾಣಿಕ ಕೊಡವ ಚಲನಚಿತ್ರವೊಂದು ಬಿಡುಗಡೆಗೊಂಡಿದೆ.…

Read More

ಮಡಿಕೇರಿ ಫೆ.15 : ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಇದೇ ಮಾ.1 ರಿಂದ 11 ರವರೆಗೆ ನಡೆಯಲಿದೆ. ಮಾ.1 ರಾತ್ರಿ 8 ಗಂಟೆಗೆ ಕೊಡಿಮರ ನಿಲ್ಲಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಲಾಗುವುದು. 2ರಂದು ಬೆಳಗ್ಗೆ 11 ಗಂಟೆಯಿoದ ನಿತ್ಯ ಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ, 3ರಂದು ಪ್ರಾತ:ಕಾಲ 5 ಗಂಟೆಗೆ ಉತ್ಸವ ಮೂರ್ತಿ ದರ್ಶನ, 11 ಯಿಂದ ನಿತ್ಯ ಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ, 4 ರಂದು ಪ್ರಾತ:ಕಾಲ 5 ಗಂಟೆಗೆ ಉತ್ಸವಮೂರ್ತಿ ದರ್ಶನ, ಬೆಳಗ್ಗೆ 10 ಗಂಟೆಗೆ ಭಂಡಾರ ಬರುವುದು, 11 ಗಂಟೆಯಿoದ ನಿತ್ಯ ಪೂಜೆ ಸಂಜೆ 7 ಗಂಟೆಗೆ ತೂಚಂಬಲಿ, ಮಾ.5 ರಂದು ಪ್ರಾತಃಕಾಲ 5 ಗಂಟೆಗೆ ಇರುಬಳಕು, 11 ಗಂಟೆಯಿoದ ನಿತ್ಯಪೂಜೆ ಮತ್ತು ತುಲಾಭಾರ ಸೇವೆ ಮತ್ತು ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.6 ರಂದು ಪ್ರಾತ:ಕಾಲ 5 ಗಂಟೆಗೆ ಇರುಬಳಕು, ಬೆಳಗ್ಗೆ 11 ಗಂಟೆಯಿoದ ನಿತ್ಯ…

Read More