ಲೇಖಕ: admin

ಮಡಿಕೇರಿ ಫೆ.13 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನಲ್ಲಿ ನಡೆಯುತ್ತಿರುವ 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಹಾಗೂ ಸಾಹಿತ್ಯ ಸಂಶೋಧನಾ ಕ್ಷೇತ್ರದ ತೀತಿರ ರೇಖಾ ವಸಂತ್ ಆಯ್ಕೆಯಾಗಿದ್ದಾರೆ. ಡಾ.ಎಂ.ಬಿ.ರೇಖಾ ಅವರು ಗೋಣಿಕೊಪ್ಪಲಿನ ಪ್ರತಿಷ್ಠಿತ ಕಾವೇರಿ ಕಾಲೇಜಿನಲ್ಲಿ 27 ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಈಗ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತಿದ್ದಾರೆ. ಕೊಡವ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ 12 ಸಾಹಿತ್ಯ ಪುಸ್ತಕಗಳನ್ನು 30ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ. ಅವುಗಳಲ್ಲಿ ಹಲವು ಕೃತಿಗಳು ಪ್ರಶಸ್ತಿಗಳನ್ನು ಪಡೆದಿವೆ. ನಗರದಲ್ಲಿ ನಡೆದ ಕಸಾಪ ಸಭೆಯಲ್ಲಿ ರೇಖಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 16 ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಮತ್ತು ಹದಿನಾರು ಕವಿಗಳ ಎರಡು ಕವಿಗೋಷ್ಠಿ ನಡೆಸಲು ಸಭೆ ನಿರ್ಧರಿಸಿತು. ಜಿಲ್ಲೆಯಲ್ಲಿ ಸಾಧನೆ…

Read More

ಮಡಿಕೇರಿ ಫೆ.13 : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿ ನಲ್ವತ್ತು ಏಕ್ರೆ ಜಂಕ್ಷನ್ ನಲ್ಲಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಕೊಡಗು ಡಿಸಿಆರ್ ಬಿ ಅಪರಾಧ ಸಿಬ್ಬಂದಿ ಹಾಗೂ ಸಿದ್ದಾಪುರ ಪೊಲೀಸರು ದಾಳಿ ನಡೆಸಿದರು. ನೆಲ್ಲಿಹುದಿಕೇರಿಯ ಕುಂಬಾರಗುಂಡಿ ನಿವಾಸಿ ಎ.ಅಸೀಬ್ (24) ನಲ್ವತ್ತು ಏಕ್ರೆಯ ಮೋಹನ್ ಎ.ಬಿ (27) ಹಾಗೂ ನಾಪೋಕ್ಲು ಎಮ್ಮೆಮಾಡು ಗ್ರಾಮದ ಮೊಹಮ್ಮದ್ ಆಸೀಪ್ (27) ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಗೊಳಪಡಿಸಿದ್ದಾರೆ. ಆರೋಪಿಗಳ ಬಳಿ ಇದ್ದ 1.197 ಕೆ.ಜಿ.ಗಾಂಜಾ, 6,270 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ಅಂದಾಜು 1.90 ಲಕ್ಷ ರೂ. ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರರಾಜ್ ಹಾಗೂ ಮಡಿಕೇರಿ…

Read More

ಮಡಿಕೇರಿ ಫೆ.13 : ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ಮಗುಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪದ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಕೆ.ಆರ್.ನಗರ ತಾಲ್ಲೂಕಿನ ಕೊರಟಿಕೆರೆ ಗ್ರಾಮದ ನಿವಾಸಿ ಪಂಕಜಮ್ಮ(55) ಮೃತ ಪಟ್ಟ ಮಹಿಳೆ. ಸಹೋದರಿಯರಾದ ಕೂಡಿಗೆಯ ಲೀಲಾವತಿ ಹಾಗೂ ವಿಜಯಲಕ್ಷ್ಮಿ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕುಶಾಲನಗರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಟೋ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

Read More

ಮಡಿಕೇರಿ ಫೆ.13 : ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಣಿಕೊಪ್ಪದ ಕೈಕೇರಿ ಬಳಿ ನಡೆದಿದೆ. ಕಾರು ಚಾಲಕ ಬಿಟ್ಟಂಗಾಲದ ನಿವಾಸಿ ನಂದೇಟಿರ ಸದನ್ ಚಂಗಪ್ಪ(49) ಸಾವನ್ನಪ್ಪಿರುವ ದುರ್ದೈವಿ. ಕಾರಿನಲ್ಲಿದ್ದ ಇತರ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಣಿಕೊಪ್ಪದಿಂದ ವಿರಾಜಪೇಟೆಗೆ ಬರುತ್ತಿದ್ದ ಕಾರು ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಫೆ.13 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ 64 ಸ್ನಾತಕ-ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣಕ್ಕೆ ಅವಕಾಶವನ್ನು ಒದಗಿಸಲಾಗಿದೆ. ಅಲ್ಲದೆ ಆಯಾ ಪ್ರಾದೇಶಿಕ ಕೇಂದ್ರಗಳಲ್ಲೆ ಶಿಕ್ಷಣಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಮಡಿಕೇರಿ ಸೇರಿದಂತೆ ರಾಜ್ಯದ 23 ಜಿಲ್ಲಾ ಕೇಂದ್ರ್ರಗಳಲ್ಲಿ ಪ್ರದೇಶಿಕ ಕೇಂದ್ರ್ರಗಳನ್ನು ತೆರೆಯಲಾಗಿದೆ. ಆ ಮೂಲಕ ಶಿಕ್ಷಣ ಪ್ರತಿಯೊಬ್ಬರಿಗೆ ತಲುಪಿಸಬೇಕೆನ್ನುವ ಚಿಂತನೆಗಳಡಿ ಮುಕ್ತ ವಿವಿ ಕಾರ್ಯತತ್ಪರವಾಗಿದೆ ಎಂದರು. ‘ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ’ ಎಂಬ ಘೋಷ ವಾಕ್ಯದೊಂದಿಗೆ ಸ್ಥಾಪನೆಯಾಗಿರುವ ಮುಕ್ತ ವಿವಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಮುಕ್ತ ವಿಶ್ವ ವಿದ್ಯಾನಿಲಯದ ವಾರ್ಷಿಕ, ಸೆಮಿಸ್ಟರ್ ಪರೀಕ್ಷೆಗಳು ಮಡಿಕೇರಿಯ ಪ್ರಾದೇಶಿಕ ಕೇಂದ್ರದಲ್ಲೇ ನಡೆಯುತ್ತವೆ. ಮುಕ್ತ ವಿವಿಯ ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯಗಳಿಗೆ…

Read More

ಮಡಿಕೇರಿ ಫೆ.13 : ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಅಪ್ರೇಂಟಿಸ್ ಮೇಳ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಸಂಸ್ಥೆಯ ಉಪನಿರ್ದೇಶಕ ಹಾಗೂ ಪ್ರಾಚಾರ್ಯ ಪಂಡಿತಾರಾಧ್ಯ ಮೇಳದ ಪ್ರಯೋಜನಗಳ ಬಗ್ಗೆ ಅಭ್ಯರ್ಥಿಗಳಿಗೆ ವಿವರಿಸಿ ಎಲ್ಲಾ ಅಭ್ಯರ್ಥಿಗಳು ಮೇಳದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಯೋಗೇಶ್ ಕುಮಾರ್ ಮಾತನಾಡಿ, ಅಭ್ಯರ್ಥಿಗಳಿಗೆ ಅಲ್ಪಾವಧಿ ತರಬೇತಿಗಳ ಬಗೆಗಿನ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಸರ್ಕಾರಿ ಕೈಗಾರಿಕಾ ಸಂಸ್ಥೆಯ ವಿದ್ಯಾರ್ಥಿಗಳು, ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಆಲೂರು ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಭಾಗಮಂಡಲ ಕೆವಿಜಿ ಐಟಿಐ ವಿದ್ಯಾರ್ಥಿಗಳು ಪಾಲ್ಗೊಂಡು ಮೇಳದ ಪ್ರಯೋಜನವನ್ನು ಪಡೆದುಕೊಂಡರು. ಮೇಳದಲ್ಲಿ ಸುಮಾರು 120ಕ್ಕೂ ಅಧಿಕ ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡು ವಿವಿಧ ಕೈಗಾರಿಕೆಗಳ ಸಂಪನ್ಮೂಲ ವ್ಯಕ್ತಿಗಳು ನಡೆಸುವ ಸಂದರ್ಶನದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ತರಬೇತಿ ಅಧಿಕಾರಿ ಸೂರ್ಯನಾರಾಯಣ, ಎಲ್ಲಾ ಸಂಸ್ಥೆಗಳ ಉಪನ್ಯಾಸಕರುಗಳು ಮತ್ತು ಟಾಟಾ…

Read More

ಮಡಿಕೇರಿ ಫೆ.13 : ಹೊದ್ದೂರು ಗ್ರಾಮದ ಐತಿಹಾಸಿಕ ಶ್ರೀ ಶಾಸ್ತ-ಈಶ್ವರ ದೇವರ 2ನೇ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ಫೆ.17 ಮತ್ತು 18 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎರಡು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಪೂಜಾ ಕೈಕಂಕರ್ಯಗಳ ಕುರಿತು ಮಾಹಿತಿ ನೀಡಿದರು. ಫೆ.17 ರಂದು ಬೆಳಿಗ್ಗೆ 9 ಗಂಟೆಗೆ ಗಣಹೋಮ, ಸಹಸ್ರ ನಾಮ ಅರ್ಚನೆ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೈವ ಸನ್ನಿಧಿ ಅಭಿಷೇಕ ಪೂಜೆ, ಮಂಗಳಾರತಿ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ದೇವರ ವಿವಿಧ ನೃತ್ಯ ಬಲಿ, ಸಂಪ್ರೋಕ್ಷಣೆ ಅನ್ನದಾನ ನಡೆಯಲಿದ್ದು, ನಂತರ ವಿಷ್ಣು ಮೂರ್ತಿ ದೈವದ ತೋಯತ ತೆರೆ ನಡೆಯಲಿದೆ. ಫೆ.18 ರಂದು ಪ್ರಾತಃಕಾಲ 7 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ಜರುಗಲಿದ್ದು, ನಾಡಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ…

Read More

ಮಡಿಕೇರಿ ಫೆ.13 : ಪೊನ್ನಂಪೇಟೆ ವ್ಯಾಪ್ತಿಯ ಬಾಡಗ ಗ್ರಾಮದಲ್ಲಿ ಕಳೆದ 18 ಗಂಟೆಗಳಲ್ಲಿ ಒಂದೇ ಕುಟುಂಬದ ಎರಡು ಮಾನವ ಜೀವಗಳು ಹುಲಿದಾಳಿಗೆ ಬಲಿಯಾಗಿವೆ. ದಕ್ಷಿಣ ಕೊಡಗಿನಲ್ಲಿ ಆತಂಕ ಮನೆ ಮಾಡಿದ್ದು, ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ಸಂಜೆ ಮಧು ಹಾಗೂ ವೀಣಾ ದಂಪತಿಯ ಪುತ್ರ ಚೇತನ್ (18) ಎಂಬ ಯುವಕನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಮಾಸುವ ಮುನ್ನವೇ ಲೈನ್ ಮನೆಯ ನಿವಾಸಿ ಪಲ್ಲೇರಿಯ ರಾಜು(75) ಎಂಬುವವರನ್ನು ಹುಲಿ ಇಂದು ಬಲಿ ಪಡೆದಿದೆ. ಅಲ್ಲದೆ ಚೇತನ್ ನ್ನು ಹುಡುಕಿಕೊಂಡು ಹೋದ ಆತನ ತಂದೆ ಮಧು ಮೇಲೆಯೂ ಹುಲಿದಾಳಿ ಮಾಡಿ ಗಾಯಗೊಳಿಸಿದೆ. ಸೋಮವಾರ ಬೆಳಗ್ಗೆ 7 ಗಂಟೆಯ ಸುಮಾರಿನಲ್ಲ್ಲಿ ರಾಜು ಅವರು ತಮ್ಮ ಲೈನ್ ಮನೆಯಿಂದ ಅನತಿ ದೂರ ಸಾಗುತ್ತಿದ್ದ ಸಂದರ್ಭ ತೋಟದಲ್ಲಿದ್ದ ಹುಲಿ ದಿಢೀರ್ ದಾಳಿ ಮಾಡಿದೆ. ತಲೆಯ ಭಾಗಕ್ಕೆ ಹುಲಿ ಕಚ್ಚಿದ್ದು, ರಾಜು ಹಾಗೂ ಮನೆ…

Read More

ಮಡಿಕೇರಿ ಫೆ.13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ ಕ್ಕೆ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ದೊರೆಯಿತು. ಮೂರು ದಿನಗಳ ಕಾಲ ನಡೆಯುವ ಕಲಿಕಾ ಹಬ್ಬಕ್ಕೆ ಮೂರ್ನಾಡು ಗ್ರಾ.ಪಂ.ಅಧ್ಯಕ್ಷರಾದ ಸುಜಾತ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಲಿಕಾ ಹಬ್ಬದಿಂದ ಮಕ್ಕಳ ಜ್ಞಾನಾರ್ಜನೆಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದರು. ವಿದ್ಯಾರ್ಥಿಗಳು ಸದಾ ಚಲನಶೀಲತೆ, ಕ್ರೀಯಾಶೀಲತೆಯಿಂದ ಇರಬೇಕು. ಆ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರೀಯಾಶೀಲತೆ ಬೆಳೆಸಿಕೊಳ್ಳಲು ಕಲಿಕಾ ಹಬ್ಬ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾತನಾಡಿ ಸರ್ಕಾರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬವನ್ನು ಏರ್ಪಡಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಕಲಿಕಾ ಹಬ್ಬ ಉತ್ತಮ…

Read More

ಮಡಿಕೇರಿ ಫೆ.13 : ನಗರದ ವಿಂಗ್ಸ್ ಆಫ್ ಪ್ಯಾಷನ್ ಡ್ಯಾನ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಸಾಂಸ್ಕೃತಿಕ ಸ್ಪರ್ಧೆ ಅಭೂತಪೂರ್ವ ಯಶಸ್ಸನ್ನು ಕಂಡಿತು. ನಗರದ ಬಾಲಭವನದಲ್ಲಿ ಅಪರಾಹ್ನ 2 ಗಂಟೆಯಿಂದ ಆರಂಭವಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಏಳು ಗಂಟೆಯವರೆಗೂ ಸಾಂಗವಾಗಿ ನಡೆಯಿತು. ವಿಂಗ್ಸ್ ಆಫ್ ಫ್ಯಾಷನ್ ಸಂಸ್ಥೆಯ ನಿರ್ದೇಶಕರು ಹಾಗೂ ನೃತ್ಯ ತರಬೇತುದಾರರಾದ ಪ್ರೀತಾ ಕೃಷ್ಣ ಜಿಲ್ಲೆಯ ಮಕ್ಕಳು ಹಾಗೂ ಮಹಿಳೆಯರ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಿದರು. ಪುಟ್ಟ ಕಂದಮ್ಮಗಳಿಂದ ಆರಂಭಿಸಿ ಬೇರೆ ಬೇರೆ ವಯೋಮಾನದ ಮಕ್ಕಳಿಗೆ, ವಿವಿಧ ವಿಭಾಗಗಳಲ್ಲಿ, ಫ್ಯಾಷನ್ ಶೋ, ಜಾನಪದ ನೃತ್ಯ (ವೈಯಕ್ತಿಕ ಹಾಗೂ ಸಮೂಹ) ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ವಕೀಲರಾದ ಮೀನಾ ಕುಮಾರಿ, ಖ್ಯಾತ ವೈದ್ಯೆ ರೇಣುಕಾ ಸುಧಾಕರ್ ಮತ್ತು ಉಪನ್ಯಾಸಕಿ ಕೆ.ಜಯಲಕ್ಷ್ಮಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸಾಧನೆ ಮಾಡಿದ ವಿಂಗ್ಸ್ ಆಫ್ ಫ್ಯಾಷನ್ ನ ವಿದ್ಯಾರ್ಥಿನಿ, ದೃತಿ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಪರ್ಧೆಗಳ ತೀರ್ಪುಗಾರರಾಗಿ ಚಿತ್ರಾ ಆರ್ಯನ್, ಶಾರದಾ, ಯಶಸ್ವಿನಿ ಹಾಗೂ ಅದಿಥಿ…

Read More