ಲೇಖಕ: admin

ಮಡಿಕೇರಿ ಫೆ.12 : ಮಡಿಕೇರಿಯ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಯಾವುದೇ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ.ಉಸ್ಮಾನ್, ಮುಂದಿನ 10 ದಿನಗಳೊಳಗೆ ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಧಿಕಾರಿಯೊಬ್ಬರು ವಿನಾಕಾರಣ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ, ಇದರಿಂದ ನಗರದಿಂದ ಸುಮಾರು 9 ಕಿ.ಮೀ ದೂರದಲ್ಲಿರುವ ಆರ್‌ಟಿಒ ಕಚೇರಿಗೆ ನಿತ್ಯ ಹೋಗಿ ಬರಲು ವಾಹನ ಚಾಲಕರು ಪರದಾಡುತ್ತಿದ್ದಾರೆ. ಖಾಸಗಿ ಸಂಸ್ಥೆಯೊoದರ ವಾಹನಗಳನ್ನು ಮಾತ್ರ ನೋಂದಣಿ ಮಾಡುತ್ತಿರುವ ಅಧಿಕಾರಿ ಇತರ ವಾಹನ ಮಾಲೀಕರ ಮತ್ತು ಚಾಲಕರ ವಾಹನಗಳನ್ನು ನೋಂದಣಿ ಮಾಡದೆ ಸತಾಯಿಸುತ್ತಿದ್ದಾರೆ. ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಅಧಿಕಾರಿ ಮುಕ್ತವಾಗಿ ಅರ್ಜಿದಾರರಿಗೆ ಸಿಗುತ್ತಿಲ್ಲ, ಚಾಲಕರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಕಚೇರಿ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ, ಇಲ್ಲಸಲ್ಲದ ನೆಪವೊಡ್ಡಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ನಿತ್ಯ ಮಾನಸಿಕ ಕಿರುಕುಳದಿಂದಾಗಿ ಚಾಲಕರು ಬೇಸತ್ತಿದ್ದಾರೆ,…

Read More

ಮಡಿಕೇರಿ ಫೆ.12 : ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ತಲೆಹೊರೆ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಹಾಗೂ ಪದಾಧಿಕಾರಿಗಳು ಹಮಾಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಹಮಾಲಿ ಕಾರ್ಮಿಕರು ವ್ಯಾಪಾರ ವಹಿವಾಟು ಮತ್ತು ಜೀವನಾವಶ್ಯಕ ವಸ್ತುಗಳ ಸಾಗಾಣಿಕೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಕನಿಷ್ಠ ಸೌಲಭ್ಯ ಮತ್ತು ಸಾಮಾಜಿಕ ಭದ್ರತೆಯಿಂದ ವಂಚಿತರಾದ ಶ್ರಮಜೀವಿಗಳ ಬೇಡಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಸಹಕಾರ ಇಲಾಖೆ ಮೂಲಕ ಮರು ಜಾರಿಯಾಗುತ್ತಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಸೌಲಭ್ಯವನ್ನು ಉಚಿತವಾಗಿ ಎಲ್ಲಾ ಹಮಾಲಿ ಕಾರ್ಮಿಕರಿಗೆ ನೀಡಬೇಕು, ಈ ಹಿಂದೆ ಪ್ರಾರಂಭಿಸಲಾದ “ಕಾಯಕ ನಿಧಿ” ಯೋಜನೆ ಬಡ ಹಮಾಲಿ ಕಾರ್ಮಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಸರಕಾರದಿಂದ ಮತ್ತು ಎಪಿಎಂಸಿಯಿoದ ಹಣಕಾಸು ಸಹಾಯ ಪಡೆದು ವೈದ್ಯಕೀಯ ಮರುಪಾತಿಸಿ ಯೋಜನೆ ಮುಂದುವರೆಸಬೇಕು, ೬೦ ವರ್ಷವಾದ ಹಮಾಲಿ ಕಾರ್ಮಿಕರಿಗೆ…

Read More

ಮಡಿಕೇರಿ ಫೆ.11 : ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ, ರಸ್ತೆ, ಜಲ್ ಜೀವನ್ ಮಿಷನ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಇಂದು ಶಾಸಕ ಕೆ.ಜಿ.ಬೋಪಯ್ಯ ಶಂಕು ಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು. ಗ್ರಾ.ಪಂ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

ಸೋಮವಾರಪೇಟೆ ಫೆ.11 : ಗೌಡಳ್ಳಿಯಲ್ಲಿ 8ನೇ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಗೌಡಳ್ಳಿ ಬಿಜಿಎಸ್ ಶಾಲಾ ಮೈದಾನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಗೌಡಳ್ಳಿ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಭಾಗದ ಸಾವಿರಾರು ಮಂದಿ ಕನ್ನಡಾಭಿಮಾನಿಗಳು ಭಾಗವಹಿಸಿ ಕನ್ನಡ ಹಬ್ಬಕ್ಕೆ ಮೆರಗು ತಂದರು. ಗ್ರಾಮೀಣ ಭಾಗದ ರೈತಾಪಿ ವರ್ಗ ಸಮ್ಮೇಳನದ ಪೂರ್ಣ ಜವಾವ್ದಾರಿಯನ್ನು ವಹಿಸಿಕೊಂಡು ಮುನ್ನೆಡಿಸಿದರು. ಬೆಳಿಗ್ಗೆ 8 ಗಂಟೆಗೆ ಸೋಮವಾರಪೇಟೆ ತಹಸೀಲ್ದಾರ್ ಎಸ್.ಎನ್.ನರಗುಂದ ಬಿಜಿಎಸ್ ಶಾಲಾ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕ.ಸಾ.ಪ.ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ಕನ್ನಡ ಧ್ಜಜ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಕನ್ನಡ ಪರಿಷತ್ ಧ್ವಜಾರೋಹಣ ನೆರವೇರಿಸಿದರು. ಐತಿಹಾಸಿಕ ಹಿನ್ನೆಲೆಯುಳ್ಳ ದೊಡ್ಡಮಳ್ತೆಯ ಹೊನ್ನಮ್ಮನ ಕೆರೆ ದೇವಾಲಯದಿಂದ ಗ್ರಾಮೀಣ ಯುವಕರು ಕನ್ನಡ ಬಾವುಟದೊಂದಿಗೆ ಬೈಕ್ ಜಾಥ ನಡೆಸಿ ಗಮನ ಸೆಳೆದರು. ಬೀಟಿಕಟ್ಟೆ ಜಂಕ್ಷನ್ ಸಮಾವೇಶಗೊಂಡ ಕನ್ನಡಾಭಿಮಾನಿಗಳು ಮೆರವಣಿಕೆಯಲ್ಲಿ ಪಾಲ್ಗೊಂಡು ಮೆರಗು ತಂದರು. ಸಮ್ಮೇಳನಾಧ್ಯಕ್ಷರ ಶ.ಗ.ನಯನತಾರಾ, ಸ್ಥಳೀಯ ಶಾಸಕರು, ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಅವರುಗಳನ್ನು ತೆರದ ವಾಹನದಲ್ಲಿ…

Read More

ಮಡಿಕೇರಿ ಫೆ.11 : ಮಡಿಕೇರಿಯ ಕರ್ಣಂಗೇರಿ ಗ್ರಾಮದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಧರ್ಮದರ್ಶಿ ಗೋವಿಂದಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಯಿಂದ ಅಂದು ಬೆಳಿಗ್ಗೆ 9 ಗಂಟೆಯಿಂದ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆಯಾಗಲಿದೆ. ಸಂಜೆ 7 ಗಂಟೆಗೆ ಭಕ್ತಾಧಿಗಳಿಗೆ ದೀಪಾಲಂಕಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8 ಗಂಟೆಗೆ ತಾಯಿಯ ದರ್ಶನ ಇರುತ್ತದೆ. ಮಧ್ಯಾಹ್ನ ಹಾಗೂ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 9 ಗಂಟೆಗೆ ನೆಲ್ಚಿಬೊಳಿ ಕೊಡವ ಚಲನಚಿತ್ರ ಪ್ರದರ್ಶನ ಇರಲಿದೆ ಎಂದರು. ಆಡಳಿತ ಮಂಡಳಿ ಪ್ರಮುಖರಾದ ಮಣಿ ದೇವರಾಜ್ ಮಾತನಾಡಿ, ದೇವಾಲಯದಲ್ಲಿ ಸ್ಥಾಪಿಸಲಾಗಿರುವ 52 ಅಡಿ ಎತ್ತರದ ಶಿವನ…

Read More

ಮಡಿಕೇರಿ ಫೆ.11 : ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಹಾಗೂ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಶ್ರಯದಲ್ಲಿ ಫೆ.14 ರಂದು ಸಂಪಾಜೆಯ ಜೇಡ್ಲದಲ್ಲಿ ಗೋ ಪ್ರೇಮ ದಿನಾಚರಣೆ ನಡೆಯಲಿದೆ. ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಮಧ್ಯಾಹ್ನ 3 ಗಂಟೆಯಿಂದ ವಿದ್ಯಾರ್ಥಿಗಳು ದೇಶಿ ದನಗಳ ಆಲಿಂಗನದ ಮೂಲಕ ತಮ್ಮ ಆರೋಗ್ಯ ವೃದ್ಧಿ ಹಾಗೂ ಪಶುಗಳ ಬಗ್ಗೆ ಪ್ರೇಮ ಬೆಳೆಸಿಕೊಳ್ಳಲು ನಾಂದಿಹಾಡಲಿದ್ದಾರೆ. ಸಾರ್ವಜನಿಕರಿಗೆ ಬೆಳಿಗ್ಗಿನಿಂದಲೇ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ದೇಶಿ ದನಗಳ ಒಡನಾಟ ಪಡೆದುಕೊಳ್ಳುವಂತೆ ಡಾ.ರಾಜರಾಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Read More

ಮಡಿಕೇರಿ ಫೆ.11 : ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ ಫೆ.12 ರಂದು “ಪರಮಾಣು ಯುದ್ಧದ ವಿನಾಶಕಾರಿ ಪರಿಣಾಮಗಳು ಮತ್ತು ಸಂಪೂರ್ಣ ನ್ಯಾಯಕ್ಕಾಗಿ ನಿರ್ಣಾಯಕ ಅಗತ್ಯ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಸಂಘಟನೆಯ ಮಡಿಕೇರಿಯ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಷರೀಫ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಾಳಿಬೀಡುವಿನ ಔರಿಕಾ ಕೂರ್ಗ್, ಲೆಮನ್ ಟ್ರೀ ಹೋಟೆಲ್ ಸಭಾಂಗಣದಲ್ಲಿ ಅಹ್ಮದೀಯ ಮುಸ್ಲಿಂ ಜಮಾತ್ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನಿವೃತ್ತ ಏರ್‍ಮಾರ್ಷಲ್ ಕೆ.ಸಿ.ನಂದ ಕಾರ್ಯಪ್ಪ, ಖ್ಯಾತ ವಕೀಲರು ಮತ್ತು ಲೇಖಕ ಬಾಲಸುಬ್ರಹ್ಮಣ್ಯ ಕಂಜರ್ಪಣೆ, ಅಹ್ಮದಿಯಾ ಮುಸ್ಲಿಂ ಜನಾತ್ ಮಿಷನರಿ ಜನಬ್ ಎಸ್.ಬಿ.ಹುಸಾಮ್ ಅಹ್ಮದ್, ಸಿಆರ್‍ಪಿಎಫ್ ನಿವೃತ್ತ ಇನ್ಸ್ಪೆಕ್ಟರ್ ಜನರಲ್ ಆಫ್ ಪೆÇಲೀಸ್ ಕೆ.ಅರ್ಕೇಶ್, ಬ್ರೈನೋಬ್ರೇನ್ ಮಡಿಕೇರಿ ಕೇಂದ್ರದ ಫ್ಯಾಕಲ್ಟಿ ಮತ್ತು ಫ್ರಾಂಚೈಸಿ ಎಂ. ಕವಿತಾ ಕರುಂಬಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಅಹ್ಮದೀಯ ಮುಸ್ಲಿಂ ಸಮುದಾಯವು ಇಸ್ಲಾಂನಲ್ಲಿನ…

Read More

ಮಡಿಕೇರಿ ಫೆ.11 :  ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ದೈಹಿಕ ಆರೋಗ್ಯ ಕಾಪಾಡಲು ಕ್ರೀಡಾಕೂಟಗಳು ಸಹಕಾರಿ ಎಂದು ಸಮಾಜ ಸೇವಕ ನಾಪಂಡ ಮುತ್ತಪ್ಪ  ಹೇಳಿದರು. ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳು ಮತ್ತು ಪತ್ರಕರ್ತರ ತಂಡಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ  ಮಾತನಾಡಿದರು. ಕೊಡಗಿನಲ್ಲಿ ಇತ್ತೀಚೆಗೆ ಆಟಗಾರರ ಹರಾಜು, ತಂಡಗಳ ಖರೀದಿ, ಅದಕ್ಕೊಂದಷ್ಟು ಪ್ರಾಯೋಜಕರು ಹೀಗೆ ಐಪಿಎಲ್ ಮಾದರಿಯ ಪಂದ್ಯಾವಳಿಯೇ ಹೆಚ್ಚಾಗಿ ನಡೆಯುತ್ತಿದೆ. ಇದರಲ್ಲಿ ಬಹುಮಾನದ ಮೊತ್ತ ಪಡೆಯುವುದಕ್ಕಾಗಿಯೇ ತಂಡಗಳು ಸೆಣೆಸುತ್ತವೆ. ಇಂತಹ ಪಂದ್ಯಾವಳಿಗಳು ವ್ಯಾಪಾರದ ಉದ್ದೇಶದಿಂದಲೇ ಕೂಡಿರುತ್ತವೆ. ಇಂತಹದರ ನಡುವೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಕರ ತಂಡಗಳನ್ನೊಳಗೊಂಡ ಸೌಹಾರ್ದ ಕ್ರಿಕೆಟ್ ಆಯೋಜಿಸಿರುವುದು ಅಪರೂಪದ ಮತ್ತು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು. ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಷ್ಟೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂದೆ ಇನ್ನೂ ಹೆಚ್ಚಿನ ಇಲಾಖೆಗಳನ್ನು ಸೇರಿಸಿಕೊಂಡು ಪಂದ್ಯಾವಳಿ…

Read More

ವಿರಾಜಪೇಟೆ ಫೆ.11 : ಕೋಟೆಕೊಪ್ಪ ಗ್ರಾಮದ ವಿ.ವೈ.ಸಿ. ಫುಟ್ಬಾಲ್ ಕ್ಲಬ್ ವತಿಯಿಂದ ದೇವಣಗೇರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ 3ನೇ ವರ್ಷದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಗ್ರೀನ್ ಕೂರ್ಗ್ ಎ.ತಂಡ ಗ್ರೀನ್ ಕೂರ್ಗ್ ಬಿ. ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. 3 ದಿನಗಳ ಕಾಲ ನಡೆದ ಹೊನಲು ಬೆಳಕಿನ ಪಂದ್ಯಾವಳಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ ಜಾತಿ, ಧರ್ಮ ಲೆಕ್ಕಿಸದೆ ಪ್ರೀತಿ ಸಹಕಾರವನ್ನು ಬಳಸಿಕೊಂಡು ಬಲಿಷ್ಠ ದೇಶವನ್ನು ಕಟ್ಟುವ ಶಕ್ತಿ ಕ್ರೀಡೆಗಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಲು ಸಾಧ್ಯ. ನಮ್ಮ ಕೊಡಗಿನಲ್ಲಿ ಕ್ರೀಡೆಯಲ್ಲಿ ಸಾಧನೆ ತೋರಿದ ಹಲವಾರು ಮಂದಿ ಇದ್ದಾರೆ. ಇದೀಗ ಕೊಡಗು ಜಿಲ್ಲೆಯಾದ್ಯಂತ ಆಯಾಯ ಜನಾಂಗದವರು ವಿವಿಧ ಕ್ರೀಡೆಗಳನ್ನು ಆಯೋಜಿಸಿಕೊಂಡು ಬರುತ್ತಿರುವುದರಿಂದ ಜನಾಂಗದ ಏಳಿಗೆ ಸಾಧ್ಯವಾಗುತ್ತದೆ. ಮುಂದಿನ ಪೀಳಿಗೆಗೆ ಇದು ಮಾದರಿಯಾಗಿದೆ ಎಂದು ಹೇಳಿದರು. ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಮಾತನಾಡಿ, ಕ್ರೀಡೆಯು ಮಾನವ…

Read More

ಮಡಿಕೇರಿ ಫೆ.11 : ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “3ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಮಡಿಕೇರಿಯಲ್ಲಿ ಶಾಂತಿಯುತ ಜಾಗೃತಿ ಅಭಿಯಾನ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಶ್ವದ ಶಾಂತಿ ಮತ್ತು ಭದ್ರತೆಗೆ ಆದ್ಯತೆ ನೀಡುವ ಅಂಶಗಳ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಅರಿವು ಮೂಡಿಸಲಾಯಿತು. ಈ ಸಂದರ್ಭ ಸಂಘಟನೆಯ ಮಡಿಕೇರಿ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಷರೀಫ್ ಮಾತನಾಡಿ, ಅಹ್ಮದಿಯಾ ಮುಸ್ಲಿಂ ಜಮಾಅತಿನ ಜಾಗತಿಕ ನೇತಾರ ಹಝ್‍ರತ್ ಮಿರ್ಝಾ ಮಸ್‍ರೂರ್ ಅಹ್ಮದ್ ಸಾಹಿಬ್ ಅವರ ನಿರ್ದೇಶನದ ಮೇರೆಗೆ ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “3ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಭಾರತದ ವಿವಿಧೆಡೆ ಶಾಂತಿಯುತ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಮಡಿಕೇರಿ ನಗರದಲ್ಲೂ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಫೆ.12 ರಂದು ಶಾಂತಿ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನಿವೃತ್ತ ಏರ್ ಮಾರ್ಷಲ್ ಕೆ.ಸಿ.ನಂದ ಕಾರ್ಯಪ್ಪ, ಖ್ಯಾತ ವಕೀಲರು ಮತ್ತು…

Read More