ಮಡಿಕೇರಿ ಫೆ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಭಾಗಿತ್ವದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವು ಫೆಬ್ರವರಿ, 11 ರಂದು ಸಂಜೆ 4 ಗಂಟೆಗೆ ನಗರದ ಮಡಿಕಟ್ಟೆ, ದಾಸವಾಳ ರಸ್ತೆಯಲ್ಲಿರುವ ಶ್ರೀ ವೀರಭದ್ರ ಮುನೇಶ್ವರ ದೇವಾಲಯ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಮಡಿಕೇರಿ ಫೆ.10 : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆತ್ತುಕಾಯ ವಿಎಸ್ಎಸ್ಎನ್ ಸಭಾಂಗಣದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 10 ಗಂಟೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಕುಶಾಲನಗರ ತಾಲ್ಲೂಕಿನ ನೇತಾಜಿ ಯುವ ಸಂಘದ ಸಭಾಂಗಣದಲ್ಲಿ ‘ಆಯುಷ್ ಸೇವಾ ಗ್ರಾಮ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಪಿಡಿಒ ರಾಜಶೇಖರ್, ಗ್ರಾ.ಪಂ.ಉಪಾಧ್ಯಕ್ಷರಾದ ಕವಿತಾ, ಸದಸ್ಯರಾದ ನೀತಾ ಹರೀಶ್, ಸುನಿಲ್, ಚನ್ನಬಸವಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮತ್ತು ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎಚ್.ಆರ್.ಸರಸ್ವತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಿಡಿಒ ರಾಜ್ಶೇಖರ್ ಮಾತನಾಡಿ ಆಯುಷ್ ವೈದ್ಯ ಪದ್ಧತಿಯಿಂದ ಅಡ್ಡಪರಿಣಾಮವಿಲ್ಲದ ಚಿಕಿತ್ಸೆ ಪಡೆಯುವುದು, ಆಯುಷ್ ಅರಿವು, ಮನೆಮದ್ದು, ಪ್ರಾತ್ಯಕ್ಷಿಕೆ ಹಾಗೂ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ಮಾತನಾಡಿ ಆಯುಷ್ ಸೇವಾ ಗ್ರಾಮದ ಬಗ್ಗೆ ಸಂಪೂರ್ಣ ವಿವರ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖೆಯಿಂದ ಔಷಧಿ ಗಿಡಗಳನ್ನು ಹಾಗೂ ಕ್ಯಾಲೇಂಡರ್ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕರು ಪಾಲ್ಗೊಂಡಿದ್ದರು.
ಮಡಿಕೇರಿ ಫೆ.10 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯ ವಿಭಾಗ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ 14 ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಗಣ್ಯರಿಂದ ಚಾಲನೆ ದೊರೆಯಿತು. ಈ ಬಾರಿ ಗ್ರಂಥಪಾಲಕರು ಮತ್ತು ವೈದ್ಯರಿಗೆ ಆರೋಗ್ಯ ವಿಜ್ಞಾನದ ಮಾಹಿತಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ.ಟಿ.ಡಿ.ಕೆಂಪರಾಜು ಅವರು ಮಾತನಾಡಿ ಭಾರತವನ್ನು ಜ್ಞಾನ ಸಮಾಜವಾಗಿ, ಗ್ರಂಥಾಲಯಗಳಾಗಿ ಪರಿವರ್ತಿಸುವುದು ದೃಷ್ಟಿಯಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ದಿನಗಳಲ್ಲಿ ಗ್ರಂಥಾಲಯಗಳು ತಮ್ಮ ಕಾರ್ಯಕ್ರಮ, ಕಾರ್ಯವಿಧಾನಗಳು, ಉಪಕರಣಗಳು ಮತ್ತು ತಂತ್ರಗಳನ್ನು ವಿವಿಧ ಗ್ರಂಥಾಲಯದ ಕೆಲಸಗಳು ಮತ್ತು ಸೇವೆಗಳಲ್ಲಿ ಮರು ವಿನ್ಯಾಸಗೊಳಿಸುವ ಅಗತ್ಯವಿದೆ ಎಂದರು. ಸ್ಮಾರ್ಟ್ ಟೆಕ್ನಾಲಜೀಸ್ನ ಹೊರಹೊಮ್ಮುವಿಕೆ, ಮಾಹಿತಿ ಸಂಪನ್ಮೂಲಗಳ ಹೊಸ ಸ್ವರೂಪ, ಡಿಜಿಟಲ್ ಸಂಪನ್ಮೂಲಗಳ ತೀವ್ರ ಬಳಕೆ ಮತ್ತು ನವೀನ ತಂತ್ರಜ್ಞಾನಗಳು ಮತ್ತು…
ವಿರಾಜಪೇಟೆ ಫೆ.9 : ಎರಡು ಶತಮಾನಕ್ಕು ಹೆಚ್ಚಿನ ಇತಿಹಾಸವನ್ನು ಹೊಂದಿರುವ ಪಟ್ಟಣ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ ಹಾಗೂ ಲೂರ್ದು ಮಾತೆಯ ಉತ್ಸವವು ಫೆ.11 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಉತ್ಸವಕ್ಕೆ ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಧರ್ಮಗುರುಗಳಾದ ಡಾ.ದಯಾನಂದ ಪ್ರಭು ಅವರ ನೇತೃತ್ವದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹಾಸನದ ಸಂತ ಅಂತೋಣಿ ಧರ್ಮಕೇಂದ್ರದ ಧರ್ಮಗುರು ಪ್ಯಾಟ್ರಿಕ್ ಜೊವಾನ್ನೆಸ್ ಅವರು ಉತ್ಸವದ ಅಂಗವಾಗಿ ನಡೆಯಲಿರುವ ಆಡಂಭರ ಗಾಯನ ಬಲಿಪೂಜೆಯನ್ನು ನೆರವೇರಿಸಿಕೊಡಲಿದ್ದಾರೆ. ಪ್ರಧಾನ ಪೂಜೆಯ ಬಳಿಕ ಸಾಹಿತಿ ಹಾಗೂ ಧರ್ಮಕೇಂದ್ರದ ಪ್ರಧಾನ ಧರ್ಮಗುರುಗಳಾದ ಡಾ.ದಯಾನಂದ ಪ್ರಭು ಅವರ ‘ಧ್ಯಾನ ಸಂಗಮ’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿದ್ಯುತ್ ದೀಪಾಲಂಕೃತ ತೇರಿನ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ರಾತ್ರಿ ಚರ್ಚ್ನಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ. ವಾರ್ಷಿಕ ಉತ್ಸವದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ಧರ್ಮಗುರು ಐಸಾಕ್ ರತ್ನಾಕರ್, ಧರ್ಮಗುರು ಯೇಸು ಪ್ರಸಾದ್ ಸೇರಿದಂತೆ ವಿವಿಧೆಡೆಯ ಧರ್ಮಗುರುಗಳು ಭಾಗವಹಿಸಲಿದ್ದಾರೆ.
ಕುಶಾಲನಗರ ಫೆ.10: ಕುಶಾಲನಗರ ಸಮೀಪದ ಬೈಲುಕುಪ್ಪೆಯ ಟಿಬೇಟಿಯನ್ ನಿರಾಶ್ರಿತ ಶಿಬಿರದಲ್ಲಿ ಫೆ.23 ರಿಂದ ಒಂದು ವಾರಗಳಕಾಲ ಟಿಬೇಟಿಯನ್ ಉತ್ಸವ ನಡೆಯಲಿದೆ ಎಂದು ಟಿಬೇಟನ್ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ತಶಿ ವುಂಗ್ಡು ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಟಿಬೇಟಿಯನ್ ಸಂಸ್ಕೃತಿ ಮತ್ತು ಪರಂಪರೆಯ ವಾರದ ಆಚರಣೆಯು ವರ್ಣರಂಜಿತವಾಗಿರಲಿದೆ ಎಂದು ತಿಳಿಸಿದರು. ಉತ್ಸವವು ಸಾಂಪ್ರದಾಯಿಕ ಸಂಗೀತ ಮತ್ತು ನೃತ್ಯ, ಮರಳು ಮಂಡಲದ ಲೈವ್ ರಚನೆ, ಕಾರ್ಪೆಟ್ ನೇಯ್ಗೆ ಮತ್ತು ಟಿಬೇಟಿಯನ್ ಚಿತ್ರಕಲೆ, ಟಿಬೇಟಿಯನ್ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ರುಚಿಕರವಾದ ಟಿಬೆಟಿಯನ್ ಪಾಕ ಪದ್ಧತಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಉತ್ಸವದಲ್ಲಿ ಪ್ರದರ್ಶಿಸಲಾಗುವುದು ಹಾಗೂ ಟಿಬೆಟ್ ವೈದ್ಯಕೀಯ ಶಿಬಿರ ಮತ್ತು ಸಾಂಪ್ರದಾಯಿಕ ಟಿಬೇಟಿಯನ್ ಕ್ರೀಡೆಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶವಿದೆ. ಮನರಂಜನೆಯ ಜೊತೆಗೆ, ಉತ್ಸವವು ಟಿಬೇಟಿಯನ್ ಬೌದ್ಧಧರ್ಮ, ಟಿಬೇಟಿಯನ್ ಮೆಡಿಸಿನ್, ವಿಶಿಷ್ಟಚಿತ್ರಕಲೆ ಮತ್ತು ಟಿಬೆಟ್ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಸಂವಾದ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗುತ್ತದೆ ಎಂದರು. ಉತ್ಸವ ಸಂದರ್ಭ ಮ್ಯಾಜಿಕ್…
ಮಡಿಕೇರಿ ಫೆ.10 : ಹಿರಿಯ ರಾಜಕಾರಣಿ, ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಟಿ.ಜಾನ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಡಿ.10 : ನಿಟ್ಟೂರು ಗ್ರಾ.ಪಂ ವಾರ್ಡ್ ಸಂಖ್ಯೆ 1 ರ ಸದಸ್ಯ ಸಾಸು ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ತಟ್ಟಕೆರೆ ಹಾಡಿ ನಿವಾಸಿ ಜೆ.ಕೆ.ಅಯ್ಯಪ್ಪ ನಾಮಪತ್ರ ಸಲ್ಲಿಸಿದರು. ನಾಪಪತ್ರ ಸಲ್ಲಿಸುವಾಗ ಅಯ್ಯಪ್ಪ ಅವರೊಂದಿಗೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮತ್ತು ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖ ಅಳಮೇಂಗಡ ಸುರೇಶ, ಬಿಜೆಪಿ ಬೂತ್ ಅಧ್ಯಕ್ಷರುಗಳಾದ ಕಾಯಮಡ ರಾಜ, ಅಳಮೇಂಗಡ ಮೋಹನ್, ರಾಜ್ಯ ಬಿಜೆಪಿ ಕೃಷಿ ಮಹೋರ್ಚದ ನಿರ್ದೇಶಕಿ ಮಾಪಂಗಡ ಯಮುನಾ ಚಂಗಪ್ಪ, ಗ್ರಾ.ಪಂ ಮಾಜಿ ಅಧ್ಯಕ್ಷ ಚಕ್ಕೇರ ಅಯ್ಯಪ್ಪ, ಮಾಜಿ ಉಪಾಧ್ಯಕ್ಷೆ ಪಡಿಞರಂಡ ಕವಿತಾ ಪ್ರಭು, ಸದಸ್ಯರಾದ ಅಮ್ಮಣಿ, ತಟ್ಟಕೆರೆ ಹಾಡಿ ಪ್ರಮುಖರಾದ ದಾಸಪ್ಪ, ಪಕ್ಷದ ಪ್ರಮುಖರಾದ ಅಳಮೇಂಗಡ ಬೋಸ್ ಮಂದಣ್ಣ, ಸತೀಶ್ ತಟ್ಟಕೆರೆ ಮತ್ತು ಹಿಂದುಪರ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ್ ಮತ್ತು ಹಿತೈಷಿಗಳು ಹಾಜರಿದ್ದರು.
ಮಡಿಕೇರಿ ಫೆ.10 : ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಉಪವಲಯ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಹಿನ್ನೆಲೆ ಮೇಕೇರಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಕಾರು ಸಹಿತ ಸುಮಾರು 3 ಲಕ್ಷ ರೂ.ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬoಧಿಸಿದoತೆ ಅರ್ವತ್ತೋಕ್ಲು ಗ್ರಾಮದ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಡಿಕೇರಿ ವಿಭಾಗದ ಡಿಸಿಎಫ್ ಎ.ಟಿ.ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಮೋಷಿನ್ ಬಾಷಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಆರ್ಎಫ್ಒ ಗಳಾದ ಬಾಬು ರಾಥೋಡ್, ಮಲ್ಲಯ್ಯ ಹಿರೇಮಠ, ಗಸ್ತು ಅರಣ್ಯ ಪಾಲಕರಾದ ಭವ್ಯ ಯತೀಶ್ ಅರಣ್ಯ ವೀಕ್ಷಕ ವಾಸುದೇವ, ವಾಹನ ಚಾಲಕರಾದ ಸಂಜು, ಮೋಹನ್, ಕುಶ ಮತ್ತಿತರ ಅರಣ್ಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಫೆ.10 : ಭಾರತ ಬಾಕ್ಸಿಂಗ್ ತಂಡದ ಮುಖ್ಯ ಕೋಚ್ ಆಗಿ ಕೊಡಗಿನವರಾದ ಚೇನಂಡ ಎ.ವಿಶು ಕುಟ್ಟಪ್ಪ ಅವರು ಮತ್ತೊಮ್ಮೆ ನೇಮಕಗೊಂಡಿದ್ದಾರೆ. ಪ್ರತಿಷ್ಠಿತವಾದ ದ್ರೋಣಾಚಾರ್ಯ ಪ್ರಶಸ್ತಿ ವಿಜೇತರೂ ಆಗಿರುವ ಕುಟ್ಟಪ್ಪ ಅವರು ಭಾರತೀಯ ಬಾಕ್ಸಿಂಗ್ ತಂಡದ ಈ ಮಹತ್ವದ ಜವಾಬ್ದಾರಿಗೆ ಎರಡನೇ ಬಾರಿಗೆ ನಿಯುಕ್ತಿಗೊಂಡಿದ್ದು, ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ (ಬಿಎಫ್ಐ) ಇದನ್ನು ಪ್ರಕಟಿಸಿದೆ. ಈ ಹಿಂದೆ ಕುಟ್ಟಪ್ಪ ಅವರು 2018 ರಿಂದ 2021ರ ವರೆಗೆ ರಾಷ್ಟ್ರೀಯ ಬಾಕ್ಸಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. 2021ರ ಟೋಕಿಯೋ ಒಲಂಪಿಕ್ಸ್ ನಂತರ ಇವರು ಈ ಸ್ಥಾನದಿಂದ ಹೊರಗಿಳಿದಿದ್ದರು. ಇದೀಗ ಹೈಪರ್ ಫಾರ್ಮೆನ್ಸ್ ಡೈರೆಕ್ಟರ್ ಬೆರ್ನಾಡ್ಡುನ್ ಸಲಹೆಯ ಆಧಾರದಲ್ಲಿ ಭಾರತೀಯ ಬಾಕ್ಸಿಂಗ್ ಒಕ್ಕೂಟ (ಬಿ.ಎಫ್.ಐ) ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಕುಟ್ಟಪ್ಪ ಅವರು ಮರಳಿ ಬಂದಿದ್ದಾರೆ. ಪ್ರಸ್ತುತ ಕೋಚ್ ಆಗಿದ್ದ ನರೇಂದರ್ ರಾಣಾ ಅವರಿಂದ ಕುಟ್ಟಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮುಂಬರುವ ವಿಶ್ವ ಚಾಂಪಿಯನ್ಶಿಪ್, ಏಷ್ಯನ್ ಗೇಮ್ಸ್ ಸೇರಿದಂತೆ 2024ರ ಪ್ಯಾರಿಸ್ ಒಲಂಪಿಕ್ಸ್ ತನಕವೂ ಕುಟ್ಟಪ್ಪ ಅವರು…






