ಮಡಿಕೇರಿ ಫೆ.10 : ಭಾರತ ಬಾಕ್ಸಿಂಗ್ ತಂಡದ ಮುಖ್ಯ ಕೋಚ್ ಆಗಿ ಕೊಡಗಿನವರಾದ ಚೇನಂಡ ಎ.ವಿಶು ಕುಟ್ಟಪ್ಪ ಅವರು ಮತ್ತೊಮ್ಮೆ ನೇಮಕಗೊಂಡಿದ್ದಾರೆ. ಪ್ರತಿಷ್ಠಿತವಾದ ದ್ರೋಣಾಚಾರ್ಯ ಪ್ರಶಸ್ತಿ ವಿಜೇತರೂ ಆಗಿರುವ ಕುಟ್ಟಪ್ಪ ಅವರು ಭಾರತೀಯ ಬಾಕ್ಸಿಂಗ್ ತಂಡದ ಈ ಮಹತ್ವದ ಜವಾಬ್ದಾರಿಗೆ ಎರಡನೇ ಬಾರಿಗೆ ನಿಯುಕ್ತಿಗೊಂಡಿದ್ದು, ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ (ಬಿಎಫ್ಐ) ಇದನ್ನು ಪ್ರಕಟಿಸಿದೆ. ಈ ಹಿಂದೆ ಕುಟ್ಟಪ್ಪ ಅವರು 2018 ರಿಂದ 2021ರ ವರೆಗೆ ರಾಷ್ಟ್ರೀಯ ಬಾಕ್ಸಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. 2021ರ ಟೋಕಿಯೋ ಒಲಂಪಿಕ್ಸ್ ನಂತರ ಇವರು ಈ ಸ್ಥಾನದಿಂದ ಹೊರಗಿಳಿದಿದ್ದರು. ಇದೀಗ ಹೈಪರ್ ಫಾರ್ಮೆನ್ಸ್ ಡೈರೆಕ್ಟರ್ ಬೆರ್ನಾಡ್ಡುನ್ ಸಲಹೆಯ ಆಧಾರದಲ್ಲಿ ಭಾರತೀಯ ಬಾಕ್ಸಿಂಗ್ ಒಕ್ಕೂಟ (ಬಿ.ಎಫ್.ಐ) ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಕುಟ್ಟಪ್ಪ ಅವರು ಮರಳಿ ಬಂದಿದ್ದಾರೆ. ಪ್ರಸ್ತುತ ಕೋಚ್ ಆಗಿದ್ದ ನರೇಂದರ್ ರಾಣಾ ಅವರಿಂದ ಕುಟ್ಟಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮುಂಬರುವ ವಿಶ್ವ ಚಾಂಪಿಯನ್ಶಿಪ್, ಏಷ್ಯನ್ ಗೇಮ್ಸ್ ಸೇರಿದಂತೆ 2024ರ ಪ್ಯಾರಿಸ್ ಒಲಂಪಿಕ್ಸ್ ತನಕವೂ ಕುಟ್ಟಪ್ಪ ಅವರು…
ಲೇಖಕ: admin
ಮಡಿಕೇರಿ ಫೆ.10 : ಹಿರಿಯ ರಾಜಕಾರಣಿ, ಕಾಂಗ್ರೆಸ್ ಮುಖಂಡ, ಕೊಡುಗೈ ದಾನಿ ಮಾಜಿ ಸಚಿವ ಟಿ.ಜಾನ್ (92) ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಮೂಲತಃ ಕೇರಳದವರಾದ ಟಿ.ಜಾನ್, ಕೊಡಗಿಗೆ ಬಂದು ಶ್ರಮಿಕ ಜೀವಿಯಾಗಿ ದುಡಿದರು, ಉದ್ಯಮಿಯಾಗಿ ಬೆಳೆದರು. ಶಿಕ್ಷಣ ಸಂಸ್ಥೆಗಳು ಮತ್ತು ರೆಸಾರ್ಟ್ ಗಳನ್ನು ಆರಂಭಿಸಿ ಯಶಸ್ಸು ಕಂಡರು. ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಮಾಡಿದ್ದರು. ಕಷ್ಟ ಹೇಳಿಕೊಂಡು ಯಾರೇ ಹೋದರೂ ಸಹಾಯಹಸ್ತ ಚಾಚುತ್ತಿದ್ದ ಟಿ.ಜಾನ್ ಅವರು ಕೊಡುಗೈ ದಾನಿಯೆಂದೇ ಖ್ಯಾತರಾಗಿದ್ದರು. ಶನಿವಾರ ಬೆಂಗಳೂರಿನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಟಿ.ಜಾನ್ ಅಗಲಿದ್ದಾರೆ. ::: ಸಂತಾಪ ::: ಟಿ.ಜಾನ್ ಅವರ ನಿಧನಕ್ಕೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಫೆ.9 : ಬಿಜೆಪಿ ಸರ್ಕಾರ ಜನರ ಬೇಡಿಕೆಗೆ ಭಾವನತ್ಮಕಾವಾಗಿ ಸ್ಪಂದಿಸುತ್ತಿದೆ, ರಾಜ್ಯ ಪ್ರಗತಿಯೆಡೆಗೆ ಸಾಗುತ್ತಿದೆ ಎಂದು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ ಬೋಪಯ್ಯ ತಿಳಿಸಿದ್ದಾರೆ. ಬಿ.ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಂಗಣ ಒಡಿಬೈಲು ಕಾಲೋನಿಯಲ್ಲಿ ಕಾವೇರಿ ನಿರಾವರಿ ನಿಗಮದ ರೂ.68 ಲಕ್ಷ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಸರ್ಕಾರ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೊಳಿಸಿ ಸಮರ್ಪಕವಾಗಿ ನಿರ್ವಹಿಸಿದೆ. ಎಂದು ಹೇಳಿದರು. ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಗೆ ಆಶೀರ್ವಾದ ಮಾಡಬೇಕು. ದೇಶ ಇಂದು ಪ್ರಗತಿಯಲ್ಲಿ ಪ್ರಪಂಚದಲ್ಲಿಯೇ 5ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಭಾರತ ನಿಲ್ಲಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಬೋಪಯ್ಯ ಕರೆ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಫೆ.9 : ಮಡಿಕೇರಿಯಿಂದ ಮೇಕೇರಿ ಮೂಲಕ ವಿರಾಜಪೇಟೆಗೆ ಹಾದು ಹೋಗುವ ಹೆದ್ದಾರಿ ಬದಿಯಲ್ಲಿ ಪ್ರತಿನಿತ್ಯ ಕಸದ ರಾಶಿ ಕಂಡು ಬರುತ್ತಿತ್ತು. ಇದರಿಂದ ಎಚ್ಚೆತ್ತುಕೊಂಡ ಮಡಿಕೇರಿ ನಗರಸಭೆ ಕಸ ವಿಲೇವಾರಿಗೊಳಿಸಿ, ಕಸ ಹಾಕಿದವರನ್ನು ಪತ್ತೆ ಹಚ್ಚಿ ದಂಡ ವಿಧಿಸಿದೆ. ಚೀಲ ಮತ್ತು ಬಾಕ್ಸ್ಗಳಲ್ಲಿ ತ್ಯಾಜ್ಯ ತುಂಬಿಕೊoಡು ವಾಹನಗಳಲ್ಲಿ ತಂದು ರಸ್ತೆಯ ಬದಿಯಲ್ಲೇ ಕಸ ಸುರಿಯಲಾಗುತ್ತಿತ್ತು. ಮೆಡಿಕಲ್ ತ್ಯಾಜ್ಯ, ಮಾಂಸದ ಅಂಗಡಿಯ ತ್ಯಾಜ್ಯ, ಹೊಟೇಲ್ನ ಹಳಸಿದ ಆಹಾರ, ಪ್ಲಾಸ್ಟಿಕ್, ತಿಂಡಿ ಪೊಟ್ಟಣಗಳು, ಹಳೇ ಬಟ್ಟೆಗಳು ಸೇರಿದಂತೆ ಹಲವು ಬಗೆಯ ತ್ಯಾಜ್ಯ ಇಲ್ಲಿ ಪ್ರತಿನಿತ್ಯ ಕಂಡು ಬರುತ್ತಿತ್ತು. ಗುರುವಾರ ಬೆಳಗ್ಗೆ 8 ಗಂಟೆಯಿAದಲೇ ನಗರಸಭೆಯ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ರಸ್ತೆ ಬದಿಯ ತ್ಯಾಜ್ಯವನ್ನು ಶುಚಿಗೊಳಿಸಿ ಟ್ರಾö್ಯಕ್ಟ್ಟರ್ ಮೂಲಕ ವಿಲೇವಾರಿಗೊಳಿಸಿದರು. ಕೆಲವು ಕಸ ಚೀಲಗಳಲ್ಲಿ ಇದ್ದ ಅಂಗಡಿ ಬಿಲ್, ವಿದ್ಯುತ್ ಬಿಲ್, ಆನ್ಲೈನ್ ಆರ್ಡರ್ಗಳ ರಶೀದಿ, ಕೆಲ ಹೋಂಸ್ಟೇಗಳಿಗೆ ಸೇರಿದ ವಿಸಿಟಿಂಗ್ ಕಾರ್ಡ್ಗಳು, ಬಿಲ್ ಬುಕ್ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನಾಧರಿಸಿ ಕಸ ಹಾಕುತ್ತಿದ್ದವರನ್ನು ಪತ್ತೆ…
ಮಡಿಕೇರಿ ಫೆ.9 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಫೆ.11 ಮತ್ತು 12 ರಂದು ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಲಿದೆ. ಫೆ.11 ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ ನಡೆಯಲಿದ್ದು, ಸಂಜೆ 6 ಗಂಟೆಗೆ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಹಾಗೂ 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ. ಫೆ.12 ರಂದು ಬೆಳಿಗ್ಗೆ 8 ಗಂಟೆಯಿಂದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನದಾನ ನೆರವೇರಲಿದ್ದು, ಸಂಜೆ 5.30 ರಿಂದ ರಂಗಪೂಜೆ, 7 ಗಂಟೆಯಿಂದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,…
ಮಡಿಕೇರಿ ಫೆ.9 : ನಗರದ ಗಾಂಧಿ ಮೈದಾನದಲ್ಲಿ ಫೆ.15 ರವರೆಗೆ ಏರ್ಪಡಿಸಲಾಗಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ ಅವರು ಗುರುವಾರ ಚಾಲನೆ ನೀಡಿದರು. ಜವಳಿ ಅಭಿವೃದ್ಧಿ ಆಯುಕ್ತ್ತಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಹಕಾರದಲ್ಲಿ ಏರ್ಪಡಿಸಲಾಗಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ನಾಪಂಡ ರವಿಕಾಳಪ್ಪ ಅವರು ರಾಷ್ಟ್ರದಲ್ಲಿ ಹಿಂದಿನಿಂದಲೂ ಕೈಮಗ್ಗದಿಂದ ಉತ್ಪಾದಿಸಿದ ಬಟ್ಟೆಗಳನ್ನು ಧರಿಸುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಗುಡಿ ಮತ್ತು ಸಣ್ಣ ಕೈಗಾರಿಕೆಗೆ ಒತ್ತು ನೀಡಲಾಗಿದೆ ಎಂದರು. ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು, ಜಿಲ್ಲೆಯ ಜನತೆ ಇದರ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು…
ಮಡಿಕೇರಿ ಫೆ.9 : ಮಡಿಕೇರಿ- ಚೆಟ್ಟಳ್ಳಿ- ಕತ್ತಲೆಕಾಡು ಮುಖ್ಯ ರಸ್ತೆಯ ಅವ್ಯವಸ್ಥೆಯಿಂದ ಅಪಘಾತಗಳು ಸಂಭವಿಸುತ್ತಿದ್ದು, ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅತ್ಯಂತ ಕಡಿದಾದ ಈ ರಸ್ತೆ ಪ್ರತಿ ಮಳೆಗಾಲದಲ್ಲಿ ಕುಸಿಯುತ್ತಿದೆ, ಬರೆಗಳು ಜರಿಯುತ್ತಿದೆ. ರಸ್ತೆ ತುಂಬಾ ಹೊಂಡ ಗುಂಡಿಗಳಿವೆ. ಇದರ ನಡುವೆ ಕೇಬಲ್ ಅಳವಡಿಸಲು ಅವೈಜ್ಞಾನಿಕ ಮಾದರಿಯಲ್ಲಿ ಚರಂಡಿಗಳನ್ನು ತೋಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಬಲ್ ಅಳವಡಿಸಲು ತೋಡುವ ಅವೈಜ್ಞಾನಿಕ ಚರಂಡಿಗಳಿಂದಲೇ ಅಪಘಾತಗಳು ಸಂಭವಿಸುತ್ತಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಈಗಾಗಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಬುಧವಾರ ಲೋಕೇಶ್ ಎಂಬುವವರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಸಂಬಂಧಿಸಿದ ಕೇಬಲ್ ಸಂಸ್ಥೆ ಆತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ರಸ್ತೆ ಅವ್ಯವಸ್ಥೆ ಬಗ್ಗೆ ಮನವಿ ಸಲ್ಲಿಸಿ ದುರಸ್ತಿಗಾಗಿ ಒತ್ತಾಯಿಸಲಾಗಿದೆ. ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ. ಆದರೆ…
ಮಡಿಕೇರಿ ಫೆ.9 : ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಕೊಡಗಿನ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಿಲ್ಲೆಯ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಪೂಮಾಲೆ ಕೊಡವ ವಾರಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಹಿರಿಯ ಛಾಯಾಗ್ರಾಹಕ ಕೊಡಗು ಮೂಲದ ನಾಗೇಶ್ ಪಾಣತ್ತಲೆ ಅವರಿಗೆ ಪ್ರಶಸ್ತಿಗಳು ಸಂದಿವೆ. ರಾಜ್ಯಾದ್ಯಂತ 124 ಪತ್ರಕರ್ತರನ್ನು ಮಾಧ್ಯಮ ಅಕಾಡೆಮಿಯು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ತಿಳಿಸಿದ್ದಾರೆ.
ಶನಿವಾರಸಂತೆ ಫೆ.9 : ಸಂಸ್ಕೃತಿಯ ಮಿಲನವಾಗಿದ್ದ ಗ್ರಾಮೀಣ ಸೊಗಡಿನ ಜಾತ್ರೋತ್ಸವಗಳು ಪ್ರಸ್ತುತ ದಿನಗಳಲ್ಲಿ ಮೋಜು ಮಸ್ತಿ ಮಾಡುವ ಸ್ಥಳವಾಗುತ್ತಿರುವುದು ಕಳವಳಕಾರಿಯ ವಿಷಯವಾಗಿದೆ ಎಂದು ಹಾಸನ ಆದಿ ಚುಂಚನಗಿರಿ ಶಾಖಾ ಮಠದೀಶ ಶ್ರೀ ಸಂಭುನಾಥಸ್ವಾಮೀಜಿ ವಿಷಾದಿಸಿದರು. ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಜಯದೇವ ಜಾತ್ರಾ ಕಲಾ ವೇದಿಕೆಯಲ್ಲಿ 79ನೇ ಗುಡುಗಳಲೆ ಶ್ರೀ ಜಯದೇವ ಜಾನುವಾರುಗಳ ಜಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ಜಾತ್ರೋತ್ಸವಗಳಂತಹ ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದು, ಗ್ರಾಮೀಣ ಭಾಗದ ರೈತಾಪಿ ಜನರು ವರ್ಷಪೂರ್ತಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ವರ್ಷಕೊಮ್ಮೆ ರೈತರು ಜಾತ್ರೆಗಳನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಾರೆ. ಇದು ಜನರು, ರೈತರು ಸೇರಿವ ಸಾಂಸ್ಕೃತಿಕ ವ್ಯವಸ್ಥೆಯಾಗಿತ್ತು. ಆದರೆ ಇಂದು ಜಾತ್ರೋತ್ಸವಗಳನ್ನು ಮೋಜುವಿನ ವ್ಯವಸ್ಥೆಯನ್ನಾಗಿ ಮಾರ್ಪಡಿಸಿರುವುದು ವಿಷಾದನೀಯ ಎಂದರು. ಜಾತ್ರೆಗಳಲ್ಲಿ ಎಲ್ಲಾ ಜಾತಿ ಜನಾಂಗದವರು ಒಟ್ಟಾಗಿ ಸೇರುವ, ವೈವಿಧ್ಯತೆ, ರಥೋತ್ಸವ, ಸಂಸ್ಕೃತಿಯನ್ನು ಸಮ್ಮೀಲನಗೊಳಿಸುವ ಕೇಂದ್ರವಾಗಿದೆ. ಆದರೆ ಇಂದು ನಶಿಸುತ್ತಿರುವ ಜಾತ್ರೋತ್ಸವಗಳನ್ನು ಉಳಿಸಲು ಇಂದಿನ ಪೀಳಿಗೆ ಪ್ರಯತ್ನಿಸಿದರೆ ಮಾತ್ರ ಜಾತ್ರೆಯಂತಹ ಸಂಸ್ಕೃತಿ ಉಳಿಯಲು…
ಮಡಿಕೇರಿ ಫೆ.9 : ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಹೊಳೆಕೆರೆ ಭಾಗದ ಹೊಳೆಗೆ ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ 3.65 ಕೋಟಿ ರೂ. ಮಂಜೂರಾಗಿದೆ ಎಂದು ಗ್ರಾ.ಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಳೆಯ ಸೇತುವೆ ಕುಸಿದು ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಕೆಲವರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆದರೆ ನೂತನ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ತಯಾರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಶಾಸಕ ಕೆ.ಜಿ.ಬೋಪಯ್ಯ ಅವರು ಸೇತುವೆ ಮತ್ತು ತಡೆಗೋಡೆ ಕಾಮಗಾರಿಯ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿಗೆ ತಲುಪಿಸಿದ್ದು, ಅನುಮೋದನೆ ದೊರೆತು ಹಣ ಮಂಜೂರಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಗ್ರಾ.ಪಂ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದು, ಹಳೆಯ ಸೇತುವೆ ಕುಸಿದಿರುವ ಬಗ್ಗೆ ನಮಗೂ ಬೇಸರವಿದೆ. ಹೊಳೆಯಿಂದ ನಿಯಮ ಬಾಹಿರವಾಗಿ ಮರಳು ತೆಗೆದಿರುವುದೇ ಸೇತುವೆ ಕುಸಿಯಲು ಕಾರಣ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ, ಯಾರೂ ಸೇತುವೆ ವಿಚಾರದಲ್ಲಿ ಗೊಂದಲ ಸೃಷ್ಟಿಸಬಾರದು, ಅಲ್ಲದೆ ಇಲ್ಲಿರುವುದು ಪೈಸಾರಿ ಜಾಗ…






