ಶನಿವಾರಸಂತೆ NEWS DESK ಜ.18 : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೈಕೋರ್ಟಿನ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ ಅಭಿಪ್ರಾಯ ಪಟ್ಟರು. ಅವರು ಶನಿವಾರಸಂತೆ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಅನಘ ಪೌಂಡೇಶನ್ ಮತ್ತು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸಿದ್ಧಗಂಗಾ ಶ್ರೀ ಗಳಾದ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣೆ ದಾಸೋಹ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ನಾನು ಮತ್ತು ಪರೀಕ್ಷೆೆ ಎಂಬ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು-ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಕೆಯ ಜೊತೆಯಲ್ಲಿ ಕಷ್ಟ ನೋವಿನ ಅರಿವು ಇರಬೇಕು ಕೀಳೆರಿಮೆಯನ್ನು ಬಿಟ್ಟು ಆತ್ಮ ವಿಶ್ವಾಸದ ಮತ್ತು ಆತ್ಮಸ್ಥರ್ಯದ ಮನೋಭಾವನೆಯನ್ನು ಬೆಳೆಸಿಕೊಂಡರೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು. ಇಂದಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಎಲ್ಲಾ ರೀತಿಯ ಅನುಕೂಲಗಳಿವೆ ಎಐ ಯಂತಹ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳಿವೆ ಆದರೆ ಇವುಗಳನ್ನು ಸರಿಯಾಗಿ ಸದ್ಬಳಕೆ…
ಲೇಖಕ: admin
ಮಡಿಕೇರಿ NEWS DESK ಜ18 : ಪೊಕ್ಕಲಿಚಂಡ ಪೂಣಚ್ಚ (ರಘು) (70) ಅವರು ಇಂದು ಮತ್ತೂರು ಗ್ರಾಮದ ಕಾರಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದ ಪೊಕ್ಕಲಿಚಂಡ ಕುಟುಂಬದ ರುದ್ರಭೂಮಿಯಲ್ಲಿ ಪೂರ್ವಹ್ನ 11 ಘಂಟೆಗೆ ನಡೆಯಲಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ NEWS DESK ಜ.18 : ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್ಐಆರ್) ಕ್ರಮದಿಂದ ಕೇವಲ ಮುಸಲ್ಮಾನರಿಗೆ ಮಾತ್ರ ತೊಂದರೆಯಾಗುವುದಿಲ್ಲ, ಬದಲಿಗೆ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ 100 ಕೋಟಿ ಭಾರತೀಯರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಎಸ್ಡಿಪಿಐ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಎನ್ಆರ್ಸಿ ವಿಚಾರ ಕೋರ್ಟ್ನಲ್ಲಿರುವ ಕಾರಣ ಚುನಾವಣಾ ಆಯೋಗದ ಮೂಲಕ ಹಿಂಬಾಗಲಿನಿಂದ ಎಸ್ಐಆರ್ ಪರೀಕ್ಷೆಯನ್ನು ಒಡ್ಡಲಾಗಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಈ ಹಿಂದೆ ಕಪ್ಪು ಹಣವನ್ನು ಹೊರ ತರಲು ಮತ್ತು ಭಯೋತ್ಪಾದನೆಯನ್ನು ತಡೆಯಲು ನೋಟ್ ಬ್ಯಾನ್ ಮಾಡುವುದಾಗಿ ಹೇಳಿ ನೋಟ್ ಬ್ಯಾನ್ ಮಾಡಲಾಯಿತು. ಆದರೆ ಕಪ್ಪು ಹಣ ಪತ್ತೆಯಾಗಲಿಲ್ಲ, ಭಯೋತ್ಪಾದನೆ ಕಡಿಮೆಯಾಗಲಿಲ್ಲ. ಇದೀಗ ನುಸುಳುಕೋರರನ್ನು ಪತ್ತೆ ಮಾಡಲು ಎಸ್ಐಆರ್ ತರಲಾಗಿದೆ ಎಂದು ಹೇಳುತ್ತಿದ್ದಾರೆ, ಇದೊಂದು ಮೂರ್ಖತನದ ನಿರ್ಧಾರವಾಗಿದೆ.…
ಮಡಿಕೇರಿ NEWS DESK ಜ.17 : ಸ್ನೇಹಜೀವಿ, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಹಿರಿಯ ನಿರ್ದೇಶಕ, ಸಮಾಜ ಸೇವಕ ಹಾಗೂ ಮಡಿಕೇರಿಯ ಏಲಕ್ಕಿ ವ್ಯಾಪಾರಿ ಬಾಬುಚಂದ್ರ ಉಳ್ಳಾಗಡ್ಡಿ (78) ಅವರು ಇಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅಪಾರ ಸ್ನೇಹಿತರನ್ನು ಹೊಂದಿದ್ದ ಸ್ನೇಹಜೀವಿ ಉಳ್ಳಾಗಡ್ಡಿ ಅವರು ಅತ್ಯಂತ ಚಟುವಟಿಕೆಯ ವರ್ತಕರಾಗಿದ್ದರು. ಇತ್ತೀಚೆಗೆ ತಮಗೆ ಸಿಕ್ಕ ಸ್ನೇಹಿತರ ಬಳಿ ಅವರು ಹೇಳುತ್ತಿದ್ದ ಒಂದೇ ಒಂದು ಮಾತು “ನನಗೂ ವಯಸ್ಸಾಯಿತು, ವ್ಯಾಪಾರಕ್ಕೂ ವಯಸ್ಸಾಯಿತು” ಎಂದು. ಅವರ ಅಗಲಿಕೆಯಿಂದ ವರ್ತಕ ವೃಂದ ಹಾಗೂ ಚೇಂಬರ್ ಆಫ್ ಕಾಮರ್ಸ್ ತೀವ್ರ ದು:ಖವನ್ನು ವ್ಯಕ್ತಪಡಿಸಿದೆ. ಕಾಕತಾಳೀಯ ಎಂಬಂತೆ ಬಾಬುಚಂದ್ರ ಉಳ್ಳಾಗಡ್ಡಿ ಅವರು ತಮ್ಮ ಸ್ಟೇಟಸ್ ನಲ್ಲಿ ಇಂದು ಬೆಳಿಗ್ಗೆ 6.14 ಕ್ಕೆ ಹಾಕಿಕೊಂಡ ಸಂದೇಶ ಕಾಕತಾಳೀಯವಾಗಿದೆ. *ಅವರು ಹಾಕಿಕೊಂಡ ಸಂದೇಶ ಇಲ್ಲಿದೆ*
ಸುಂಟಿಕೊಪ್ಪ NEWS DESK ಜ.17 : ಸುಂಟಿಕೊಪ್ಪ ಸಮೀಪದ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪುರ ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರದೃಷ್ಟವಶಾತ್ ನೀರಿನಲ್ಲಿ ಮುಳುಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಸ್ಥಳದಲ್ಲಿ ಹಾಜರಿದ್ದ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಮುಂದಿನ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಂಟಿಕೊಪ್ಪದ ಪಂಪ್ಹೌಸ್ ನಿವಾಸಿಗಳಾದ ಸುಂಟಿಕೊಪ್ಪ ಆಟೋಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್ ಅವರ ಪುತ್ರ ಮಹಮ್ಮದ್ ರಾಯಿಜ್ (16) ಹಾಗೂ ಸರದಾರ್ ಅವರ ಪುತ್ರ ಮಹಮ್ಮದ್ ನಿಹಾಲ್ (16) ಮೃತ ದುರ್ದೈವಿಗಳಾಗಿದ್ದಾರೆ.
ಸುಂಟಿಕೊಪ್ಪ NEWS DESK ಜ.17 : ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಸುಂಟಿಕೊಪ್ಪ ಸಮೀಪದ ಗರಗಂದೂರು ಮಲಿಕಾರ್ಜುನ ಕಾಲೋನಿಯ ಮಾದಾಪುರ ಹೊಳೆಯಲ್ಲಿ ಶನಿವಾರ ನಡೆದಿದೆ. ಸುಂಟಿಕೊಪ್ಪದ ಪಂಪ್ಹೌಸ್ ನಿವಾಸಿಗಳಾದ ಸುಂಟಿಕೊಪ್ಪ ಆಟೋಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್ ಅವರ ಪುತ್ರ ಮಹಮ್ಮದ್ ರಾಯಿಜ್ (16) ಹಾಗೂ ಸರದಾರ್ ಅವರ ಪುತ್ರ ಮಹಮ್ಮದ್ ನಿಹಾಲ್ (16) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ಮಾದಾಪುರ ಚೆನ್ನಮ್ಮ ಜೂನಿಯರ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮನೆಗೆ ತೆರಳುವ ಸಂದರ್ಭ ಮಾದಾಪುರ ಹೊಳೆಯಲ್ಲಿ ಈಜಲು ನೀರಿಗಿಳಿದಿದ್ದ ವಿದ್ಯಾರ್ಥಿಗಳು ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಈಜು ತಜ್ಞರ ಸಹಾಯದಿಂದ ಮೃತದೇಹಗಳನ್ನು ಹೊಳೆಯಿಂದ ಹೊರತೆಗೆಯಲಾಗಿದೆ.
ಮಡಿಕೇರಿ ಜ.17 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ 1.12 ಲಕ್ಷ ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 647.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ರೆಸಾರ್ಟ್ನಲ್ಲಿ ಶನಿವಾರ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಜಿಎಸ್ಟಿ ಸಂಗ್ರಹಣೆಯಲ್ಲಿ ಸರಾಸರಿ ಹೆಚ್ಚಳವಾಗಿದೆ. ಐದು ಗ್ಯಾರಂಟಿ ಯೋಜನೆ ಜಾರಿಯಿಂದ ಶೇ.24 ರಷ್ಟು ಜಿಡಿಪಿ ದರ ಹೆಚ್ಚಳವಾಗಿದೆ. ನಿರುದ್ಯೋಗ ಪ್ರಮಾಣ ಶೇ.4.3 ರಷ್ಟು ಇದ್ದದ್ದು ಈಗ ಶೇ.2.5ಕ್ಕೆ ಇಳಿಕೆಯಾಗಿದೆ. ಮಹಿಳೆಯರು ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲಿ ಶೇ.25 ರಿಂದ 30 ಕ್ಕೆ ಏರಿಕೆಯಾಗಿರುವುದು ವಿಶೇಷವಾಗಿದೆ. ಜೊತೆಗೆ ರಾಷ್ಟ್ರದ ತಲಾ…
ಮಡಿಕೇರಿ ಜ.17 NEWS DESK : ಯಕ್ಷಗಾನ, ಡೊಳ್ಳುಕುಣಿತ, ಪೂಜಾಕುಣಿತ, ಜಾನಪದ ಗಾಯನ, ಭರತನಾಟ್ಯ, ಸುಗಮ ಸಂಗೀತ ಹೀಗೆ ಹಲವು ಕಲೆಗಳು ನಾಡನ್ನು ಪ್ರತಿಬಿಂಭಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವಂತಾಗಬೇಕು. ಜೊತೆಗೆ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಸಂಪಾಜೆ ಗ್ರಾ.ಪಂ ಅಧ್ಯಕ್ಷರಾದ ರಮಾದೇವಿ ಕಳಗಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಪಾಜೆ ಗ್ರಾಮ ಪಂಚಾಯಿತಿ ಹಾಗೂ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಮಿತಿ ಇವರ ಸಹಯೋಗದೊಂದಿಗೆ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ‘ಸಾಂಸ್ಕøತಿಕ ಸೌರಭ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಂಸ್ಕøತಿಕ ಹಾಗೂ ಜಾನಪದ ಕಲೆಗಳು ನಾಡಿನ ಅಸ್ಮಿತೆಯನ್ನು ಪ್ರತಿಬಿಂಭಿಸುತ್ತಿದ್ದು, ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಲ್ಲಿ ಯುವಜನರು ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಯಕ್ಷಗಾನ, ಜಾನಪದ ಸೋಭಾನೆ ಸೇರಿದಂತೆ ಜಾನಪದ ಕಲೆಗಳು ಹಿಂದಿನ ಐತಿಹಾಸಿಕವಾಗಿ ಮಹತ್ವದ ಪರಂಪರೆಯನ್ನು ಹೊಂದಿದ್ದು, ಗ್ರಾಮೀಣ ಪ್ರದೇಶದ ಸೊಗಡನ್ನು ತಿಳಿಸುತ್ತವೆ. ಆ ನಿಟ್ಟಿನಲ್ಲಿ…
ಮಡಿಕೇರಿ ಜ.17 NEWS DESK : ದೈವ ನಿಂದನೆ, ಅವಮಾನ, ಅಪಹಾಸ್ಯ, ಕಾರ್ಯಕ್ರಮಗಳಲ್ಲಿ ದೈವ ನರ್ತನಗಳ ಬಳಕೆಯನ್ನು ತೀವ್ರವಾಗಿ ವಿರೋಧಿಸಲಾಗುವುದು ಮತ್ತು ಇದರ ವಿರುದ್ಧ ಸರಕಾರದ ಮಟ್ಟದಲ್ಲಿ ಕ್ರಮಕ್ಕಾಗಿ ಒತ್ತಾಯಿಸಲಾಗುವುದು ಎಂದು ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಮಹಾಸಭೆ ನಿರ್ಣಯ ಕೈಗೊಂಡಿದೆ. ಮಡಿಕೇರಿಯ ಬಾಲಭವನದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಪಾಲ್ಗೊಂಡ ದೈವ ಆರಾಧಕರು ಹಾಗೂ ದೈವ ನರ್ತಕರು ಇತ್ತೀಚಿನ ದಿನಗಳಲ್ಲಿ ತಮ್ಮ ಭಾವನೆಗೆ ದಕ್ಕೆಯಾಗುತ್ತಿರುವುದನ್ನು ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಜಿಲ್ಲಾಧ್ಯಕ್ಷ ಸದಾಶಿವ ರೈ ಅವರು ದೈವಾರಾಧನೆಯ ಆಚಾರ, ವಿಚಾರವನ್ನು ಕ್ರಮಬದ್ಧವಾಗಿ ಮಾಡುವಂತಾಗಬೇಕು. ಮುಂದಿನ ದಿನಗಳಲ್ಲಿ ಶಾಲಾ, ಕಾಲೇಜು ಹಾಗೂ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ದೈವ ನರ್ತನ ಬಳಕೆಯಾಗದಂತೆ ಮತ್ತು ದೈವವನ್ನು ಅನುಕರಣೆ ಮಾಡದಂತೆ ನೋಡಿಕೊಳ್ಳಬೇಕು. ಎಂದರು. ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ದೈವ ನರ್ತನದ ಕಾರ್ಯಕ್ರಮಗಳೇ ನಡೆಯುತ್ತಿದ್ದು, ದೈವಕ್ಕೆ ಅಪಹಾಸ್ಯ ಮಾಡಿದಂತಾಗುತ್ತಿದೆ. ಅಲ್ಲದೆ…
ಮಡಿಕೇರಿ ಜ.17 NEWS DESK : ಸುಂಟಿಕೊಪ್ಪದ ಮಂಜಿಕೆರೆ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ 7ನೇ ವರ್ಷದ ಗಗ್ಗರ ಸೇವೆ (ಕೋಲ) ಜ.18 ರಂದು ನಡೆಯಲಿದೆ. ಅಂದು ಸಂಜೆ 6 ಗಂಟೆಯ ನಂತರ ಕೋಲ ನಡೆಯಲಿದ್ದು, ಅನ್ನದಾನ ಸೇವೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೊರಗಜ್ಜ ದೈವದ ಕರಿಗಂಧ ಪ್ರಸಾದವನ್ನು ಸ್ವೀಕರಿಸುವಂತೆ ದೈವಸ್ಥಾನದ ದೈವ ಆರಾಧಕ ಎಂ.ಎ.ಮಹೇಶ್ ಮನವಿ ಮಾಡಿದ್ದಾರೆ. ಸೇವೆಗೆ ಸಹಕಾರ ನೀಡುವವರು ಮತ್ತು ಹೆಚ್ಚಿನ ಮಾಹಿತಿಗೆ ಎಂ.ಎ.ಮಹೇಶ್ 8762304217 ನ್ನು ಸಂಪರ್ಕಿಸಬಹುದಾಗಿದೆ.






