ಲೇಖಕ: admin

ಮಡಿಕೇರಿ ಫೆ.27 : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಮಾ.2 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Read More

ನಾಪೋಕ್ಲು ಫೆ.28 :  ಪ್ರತಿಯೊಬ್ಬರೂ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಗೆ ಪ್ರಾಮುಖ್ಯತೆ  ನೀಡಿದರೆ ಮಾತ್ರ ಶಾಂತಿಯಿಂದ ಉತ್ತಮ ಜೀವನ ಸಾಗಿಸಲು ಸಾಧ್ಯ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಹೇಳಿದರು. ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಎಮ್ಮೆಮಾಡು ಮಖಾಂ ಉರೂಸ್ ನ ಸರ್ವಧರ್ಮ ಸಮ್ಮೇಳನ ಉದ್ಘಾಟಿಸಿ  ಮಾತನಾಡಿದರು. ಎಮ್ಮೆಮಾಡುವಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಸೂಫಿ ಶಹೀದ್ ಅವರ ಜೀವನ ಚರಿತ್ರೆ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ 14ನೇ ಶತಮಾನದ ಜೀವನ ಚರಿತ್ರೆಯಾಗಿದೆ. ಇಸ್ಲಾಂ ಧರ್ಮವು ಶಾಂತಿಯ ಧರ್ಮವಾಗಿದ್ದು ಇಲ್ಲಿ ಯಾರಿಗೂ ಅಶಾಂತಿಯನ್ನು ಮೂಡಿಸಲು ಕಲಿಸಿಕೊಟ್ಟಿಲ್ಲ. ನಮ್ಮ ರಾಜ್ಯದ ವಿವಿಧ ಜಿಲ್ಲೆಗಳ ದರ್ಗಾ ಮತ್ತು ದೇವಾಲಯಗಳಲ್ಲಿ ಸಾಮರಸ್ಯದಿಂದ ಉತ್ಸವಗಳನ್ನು ಆಚರಿಸುತ್ತಾರೆ. ಇದು ಹಿಂದಿನ ಕಾಲದಿಂದಲೂ ರಾಜ್ಯದ ಕೆಲವು ಕಡೆಗಳಲ್ಲಿ ಎಲ್ಲಾ ಧರ್ಮದವರು ಒಗ್ಗೂಡಿ ಸಾಮರಸ್ಯದಿಂದ ಉತ್ಸವಗಳನ್ನು ಆಚರಿಸುವಂತಹ ಪದ್ಧತಿ, ಅದು ಕೆಲವು ಕಡೆಗಳಲ್ಲಿ ಈಗಲೂ ನಡೆಯುತ್ತಿದೆ. ಇದರಿಂದ ಕೆಲವು ಮಂದಿರಗಳಲ್ಲಿ ಮುಸ್ಲಿಮರ ಮೊಹರಂ, ಈದ್ ಆಚರಣೆ ನಡೆಯುತ್ತದೆ, ಅದೇ ರೀತಿ…

Read More

ಸೋಮವಾರಪೇಟೆ ಫೆ.27 : ಆಕಸ್ಮಿಕವಾಗಿ ಕಾಫಿ ತೋಟಕ್ಕೆ ಬೆಂಕಿ ಬಿದ್ದು ಹಾನಿಯಾಗಿರುವ ಘಟನೆ ಕಿರಗಂದೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬಡಗಿಮನೆ ಬಿ.ಎನ್.ಚಂದ್ರ, ಗಿರಿಜಮ್ಮ ಎಂಬವರ ಕಾಫಿ ತೋಟಕ್ಕೆ ಬೆಂಕಿ ಬಿದ್ದಿದೆ. ಗ್ರಾಮಸ್ಥರು ಬೆಂಕಿ ಆರಿಸಿದ್ದಾರೆ. ಫಸಲು ಕೊಡುತ್ತಿದ್ದ 200 ಕಾಫಿ ಗಿಡಗಳು, 30 ಮೆಣಸಿನ ಬಳ್ಳಿ, ಹತ್ತು ಸಿಲ್ವರ್ ಮರಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಅವಗಡಕ್ಕೆ ಕಾರಣ ತಿಳಿದುಬಂದಿಲ್ಲ. ತೋಟಗಾರಿಕಾ ಇಲಾಖೆ ಮತ್ತು ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Read More

ಸೋಮವಾರಪೇಟೆ ಫೆ.27 : ರಾಷ್ಟ್ರೀಯ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಪಟ್ಟಣ ಪಂಚಾಯಿತಿ ಮತಗಟ್ಟೆಯಲ್ಲಿ ಅಣಕು ಮತದಾನ ನಡೆಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚುನಾವಣಾಧಿಕಾರಿ ನಾಚಪ್ಪ ಅವರು ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾನ ಮಾಡುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸದಸ್ಯರಾದ ಎಸ್.ಮಹೇಶ್ ಇದ್ದರು.

Read More

ಸೋಮವಾರಪೇಟೆ ಫೆ.27 : ಸೋಮವಾರಪೇಟೆ ತಾಲ್ಲೂಕಿನ ಯಡವಾರೆ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ಮಾಡುತ್ತಿದೆ ಎಂದು ಮಚ್ಚಂಡ ಅಶೋಕ್ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಅಶೋಕ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಕೂಯ್ಲು ಮಾಡುತ್ತಿರುವ ಸಂದರ್ಭದಲ್ಲಿಯೇ ಕಾಡಾನೆಗಳು ಕಾಣಿಸಿಕೊಂಡಿದ್ದು, ಭಯಭೀತರಾದ ಕಾರ್ಮಿಕರು ಧಿಕ್ಕಾಪಾಲಾಗಿ ಓಡಿ ಪ್ರಾಣ ಉಳಿಸಿಕೊಂಡ ಘಟನೆ ನಡೆದಿದೆ. ಶನಿವಾರ ಸಂಜೆ ಕಾಡಾನೆಗಳ ಹಿಂಡು ಕಾಫಿತೋಟಕ್ಕೆ ಲಗ್ಗೆ ಇಟ್ಟಿವೆ. ಇಲಾಖೆಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಆನೆ ಕಾರ್ಯಚರಣೆ ಪಡೆ ಸಿಬ್ಬಂದಿಗಳು ಪಟಾಕಿಯನ್ನು ಸಿಡಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಶ್ರಮಿಸಿದ್ದಾರೆ. ಈ ಸಂದರ್ಭ ಕಾಫಿ ತೋಟದ ಮಾಲೀಕರು, ತೋಟದಲ್ಲಿದ್ದ ಕಾಫಿಯನ್ನು ಸಾಗಿಸಲಾಗದೆ ಬೆಳಗ್ಗೆ ಬಂದು ನೋಡಿದಾಗ ಕಾಡಾನೆಗಳ ಹಿಂಡು ಸುಮಾರು 15 ಕಾಫಿ ಗಿಡ ಮುರಿದು, ಸುಮಾರು 50 ಚೀಲದಷ್ಟು ಕಾಫಿ ಮೂಟೆಗಳನ್ನು ಎಸೆದು ನಾಶಪಡಿಸಿವೆ. ಇದರಿಂದ ತೋಟದ ಮಾಲೀಕರಿಗೆ ಸುಮಾರು 70 ಸಾವಿರ ರೂಪಾಯಿಗಳ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಾದ…

Read More

ಸೋಮವಾರಪೇಟೆ ಫೆ.27 : ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವಾರ್ಷಿಕ ಮಹಾಸಭೆಯು  ಸ್ಥಳೀಯ ಕೊಡವ ಸಮಾಜದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಚ್.ಕೆ.ಗಂಗಾಧರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಹೊಸ ಸದಸ್ಯತ್ವ ಶುಲ್ಕ, ಸಂಘದ ಸದಸ್ಯರ ವೈದ್ಯಕೀಯ ವೆಚ್ಚ, ಮರಣ ನಿಧಿ ವಂತಿಗೆ ಕುರಿತು ಚರ್ಚೆ ನಡೆಯಿತು. ಸಂಘದ ಅಭಿವೃದ್ಧಿ ಕುರಿತು ಹಿರಿಯ ಸದಸ್ಯರುಗಳು ಸಲಹೆ ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಟಿ.ಎಂ.ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜನಾರ್ಧನ್, ಉಪ ಕಾರ್ಯದರ್ಶಿ ರಮೇಶ್,ಖಜಾಂಚಿ ಸುದೀಪ್ ಆಲ್ಬರ್ಟ್, ಸಹ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು ಇದ್ದರು.

Read More

ಮಡಿಕೇರಿ ಫೆ.27 : ಹೆಚ್.ಡಿ.ದೇವೇಗೌಡ ಅಭಿಮಾನಿಗಳ ಸಂಘದಿಂದ ಮಡಿಕೇರಿಯಲ್ಲಿ ಮಾ.18 ಮತ್ತು 19 ರಂದು ರಾಷ್ಟçಮಟ್ಟದ ಪುರುಷರು ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. ಸಂಘದ ಸಂಚಾಲಕ ಬಲ್ಲಚಂಡ ಗೌತಮ್, ಸಹ ಸಂಚಾಲಕರುಗಳಾದ ಎನ್.ಸಿ.ಸುನಿಲ್, ಇಸಾಕ್ ಖಾನ್, ಪುಷ್ಪಾವತಿ ರಮೇಶ್ ಹಾಗೂ ಮುಸ್ತಫ ಅವರುಗಳು ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ್ದಾರೆ. ಹೆಚ್.ಡಿ.ಡಿ. ಟ್ರೋಫಿ -2023 ಪಂದ್ಯಾವಳಿಯು ಎರಡು ದಿನಗಳ ಕಾಲ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಮಹಿಳಾ ತಂಡಗಳ ನಡುವೆ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿರುವುದು ವಿಶೇಷ. ಆಹ್ವಾನಿತ ಪುರುಷರ 8 ತಂಡಗಳು ಹಾಗೂ ಮಹಿಳೆಯರ 4 ತಂಡಗಳು ಪಾಲ್ಗೊಳ್ಳಲಿದ್ದು, ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ::: ಪೋಸ್ಟರ್ ಬಿಡುಗಡೆ ::: ಹೆಚ್.ಡಿ.ಡಿ. ಟ್ರೋಫಿ -2023 ಪಂದ್ಯಾವಳಿಯ ಪೋಸ್ಟರ್ ನ್ನು ಇತ್ತೀಚೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ…

Read More

ಮಡಿಕೇರಿ ಫೆ.27 : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಳ್ಳಬೇಕು ಎನ್ನುವ ನಿಯಮ ಜಾರಿಯಲ್ಲಿದೆ. ಇದರ ಪಾಲನೆಯೊಂದಿಗೆ 5 ವರ್ಷಗಳ ಅವಧಿ ಪೂರ್ಣಗೊಳ್ಳುವ ಸಂದರ್ಭವೂ ಎಲ್ಲಾ ಜನಪ್ರತಿನಿಧಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಿಕೊಳ್ಳಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ನ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಯಾಂಗವನ್ನು ಹಿಡಿತದಲ್ಲಿಟ್ಟು ಪಾರದರ್ಶಕ ಆಡಳಿತ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಶಾಸಕಾಂಗ ಇಂದು ಹಾದಿ ತಪ್ಪುತ್ತಿದೆ. ರಾಜಕೀಯ ಕ್ಷೇತ್ರ ಕಲುಷಿತವಾಗುತ್ತಿದೆ, ಇದರಿಂದ ಜನ ಬೇಸತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು 10 ರಿಂದ 100 ಕೋಟಿ ರೂ.ಗಳವರೆಗೆ ಖರ್ಚು ಮಾಡಲು ಸಿದ್ಧರಿದ್ದಾರೆ. ನ್ಯಾಯಯುತವಾಗಿ ಬೆವರು ಸುರಿಸಿ ದುಡಿದ ಹಣವನ್ನು ಈ ರೀತಿ ಖರ್ಚು ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆ ಮತದಾರರನ್ನು ಕಾಡುತ್ತಿದೆ. ಆದ್ದರಿಂದ ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಲು ಚುನಾವಣೆಗೆ ಸ್ಪರ್ಧಿಸುವಾಗ ನೀಡಿದ ಆಸ್ತಿಯ ಮೌಲ್ಯಕ್ಕೂ…

Read More

ಮಡಿಕೇರಿ ಫೆ.27 : ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನವು ಮಾರ್ಚ್, 4 ಮತ್ತು 5 ರಂದು ಗೋಣಿಕೊಪ್ಪದಲ್ಲಿ ಜರುಗಲಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಶಾಸಕ  ಕೆ.ಜಿ.ಬೋಪಯ್ಯ  ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕರು ಕನ್ನಡ ನಾಡು-ನುಡಿ, ಭಾಷೆ ಅಭಿವೃದ್ಧಿಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ಶಾಸಕರು ತಿಳಿಸಿದರು. ಕನ್ನಡ ಭಾಷೆ, ನಾಡು-ನುಡಿ ಎಲ್ಲೆಡೆ ಪಸರಿಸುವಲ್ಲಿ ಶ್ರಮಿಸಬೇಕು. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರು ಮನವಿ ಮಾಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಕನ್ನಡ ನಾಡು ನುಡಿಗೆ ಜಿಲ್ಲಾಡಳಿತ ಸದಾ ಸಹಕಾರ ನೀಡುತ್ತದೆ. ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಗಳಿಗೆ ಮತ್ತಷ್ಟು ಹೆಚ್ಚಿನ ಸಹಕಾರ ಜಿಲ್ಲಾಡಳಿತ ವತಿಯಿಂದ ನೀಡಲಾಗುವುದು ಎಂದರು. ಪೊನ್ನಂಪೇಟೆ ತಾಲ್ಲೂಕಿನ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ…

Read More

ಮಡಿಕೇರಿ ಫೆ.27 : ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್ ಅರಿವು ಕುರಿತು ಪ್ರಾತ್ಯಕ್ಷಿಕೆಯು ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ನಗರದ ಉಪ ವಿಭಾಗಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆದವರು ಪ್ರಾತ್ಯಕ್ಷಿಕೆಯ ಅವಕಾಶವನ್ನು ಬಳಸಿಕೊಳ್ಳಬೇಕು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಈ ಅಣಕು ಮತದಾನ ನಡೆಯಲಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಅಣಕು ಪ್ರದರ್ಶನವು ಜಿಲ್ಲಾಧಿಕಾರಿ ಕಚೇರಿ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದರು. ಹಾಗೆಯೇ ಮತಗಟ್ಟೆ ವ್ಯಾಪ್ತಿಯಲ್ಲಿ ನಿಗದಿತ ಅವಧಿಯಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು. 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು. ರಾಜಕೀಯ…

Read More