ಮಡಿಕೇರಿ ಜ.28 : ಪೊನ್ನಂಪೇಟೆಯ ಹೈಸೊಡ್ಲೂರು ಗ್ರಾಮದಲ್ಲಿ ಪ್ಲಾಸ್ಟಿಕ್ ಗುಡಿಸಲು ನಿರ್ಮಿಸಿಕೊಂಡು ವಾಸವಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು. ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಶೀಲ್ದಾರರ ಕಚೇರಿಯವರೆಗೆ ಮೆರವಣಿಗೆ ಮೂಲಕ ಸಾಗಿದ ಸಂಘಟನೆಯ ಪ್ರಮುಖರು ಹಾಗೂ ವಸತಿ ರಹಿತರು ಬೇಡಿಕೆಯ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿದರು. ಸಂಘಟನೆಯ ಹಿರಿಯ ಮುಖಂಡರಾದ ಹೆಚ್.ಎಸ್.ಕೃಷ್ಣಪ್ಪ ಮಾತನಾಡಿ, ಸ್ವಾತಂತ್ರö್ಯ ಬಂದು 75 ವರ್ಷಗಳೇ ಕಳೆದರು ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಬಡಮಂದಿ ತೋಟದ ಲೈನ್ ಮನೆಗಳಲ್ಲಿ ಸಂಕಷ್ಟದ ಬದುಕು ಸಾಗಿಸುವ ಪರಿಸ್ಥಿತಿ ಮುಂದುವರೆದಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು. ಹೈಸೊಡ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 8 ಏಕರೆ ಸರ್ಕಾರಿ ಜಾಗ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಅಧೀನದಲ್ಲಿದೆ. ಒಂದು ಏಕರೆ ಜಾಗದಲ್ಲಿ ಸುಮಾರು 74 ಪರಿಶಿಷ್ಟ ಪಂಗಡದ ಕುಟುಂಬಗಳು ಕಳೆದ 5 ವರ್ಷಗಳಿಂದ ಪ್ಲಾಸ್ಟಿಕ್ ಗುಡಿಸಲುಗಳನ್ನು ಹಾಕಿಕೊಂಡು ವಾಸವಾಗಿದ್ದಾರೆ. ಇಲ್ಲಿನ ನಿವಾಸಿಗಳು ಕುಡಿಯುವ ನೀರು ಹಾಗೂ ಮೂಲಭೂತ…
ಲೇಖಕ: admin
ಮಡಿಕೇರಿ ಜ.28 : ಸೋಮವಾರಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅವಘಡಕ್ಕೀಡಾಗಿದೆ. ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿಯ ಹಂಪ್ ನಲ್ಲಿ ಬ್ಲೇಡ್ ತುಂಡಾಗಿ ಹಿಂಬದಿಯ ಚಕ್ರಗಳು ಹೌಸಿಂಗ್ ಸಹಿತ ಕಳಚಿಕೊಂಡ ಘಟನೆ ನಡೆಯಿತು. ಮೈಸೂರು-ಬಂಟ್ವಾಳ ಹೆದ್ದಾರಿ-275 ರಲ್ಲಿ ಕೆ.ಆರ್.ನಗರ ಡಿಪೋಗೆ ಸೇರಿದ ಬಸ್ ಸೋಮವಾರಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿತ್ತು. ವೇಗದಲ್ಲಿದ್ದ ಬಸ್ ಯಶೋಧರಪುರ ಗೇಟ್ ಬಳಿಯ ಹಂಪ್ ನಲ್ಲಿಯೂ ವೇಗ ಕಡಿಮೆ ಮಾಡದ ಕಾರಣ ಅವಘಡಕ್ಕೀಡಾಯಿತು ಎಂದು ಆರೋಪಿಸಲಾಗಿದೆ. ಬಸ್ ನ ಹಿಂಬದಿಯ ಬ್ಲೇಡ್ ತಂಡಾಗಿ ಹೌಸಿಂಗ್ ಸಹಿತಿ ಚಕ್ರಗಳು ಕಳಚಿ ಬಿದ್ದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ 39 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ ಹಿಂಬದಿಯಲ್ಲಿ ಯಾವುದೇ ವಾಹನಗಳಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಬಸ್ನ್ನು ಕ್ರೇನ್ ಬಳಸಿ ತೆರವುಗೊಳಿಸಲಾಯಿತು. ಸ್ಥಳಕ್ಕೆ ಕೆಎಸ್ಆರ್ಟಿಸಿ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶನಿವಾರಸಂತೆ ಜ.28 : ಮಾಲಂಬಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ವಾರ್ಷಿಕೋತ್ಸವ ಕಲರವ ನಡೆಯಿತು. ಶಾಲೆಯ ಎಸ್ಡಿಎಂಸಿ ಸಮಿತಿ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ, ಶಾಲೆಯ ಹಳೆ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ಕ್ರೀಡಾಕೂಟ ನಡೆಯಿತು. ವಾರ್ಷಿಕೋತ್ಸವ ಸಮಾರೋಪ ಸಮಾರಂಭವನ್ನು ಗ್ರಾಮದ ಹಿರಿಯ ಬಿ.ಎಂ.ಮಾದಪ್ಪ ಉದ್ಘಾಟಿಸಿ ಮಾತನಾಡಿ-ವಿದ್ಯಾರ್ಥಿಗಳಲ್ಲಿ ನಾನಾ ರೀತಿಯ ಪ್ರತಿಭೆಗಳು ಅಡಗಿದ್ದು ಇವುಗಳನ್ನು ಅನಾವಣಗೊಳಿಸಲು ವಾರ್ಷಿಕೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗುತ್ತದೆ ಎಂದರು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಉಪನ್ಯಾಸಕ ಎಂ.ಎಸ್.ಪ್ರಸನ್ನ-ಶಾಲೆ ಶಿಕ್ಷಣದ ದೇಗುಲವಾಗಿದ್ದು ಇಲ್ಲಿ ಜಾತಿ, ಧರ್ಮ, ಮೇಲು ಕೀಳುಗಳೆಂಬ ತಾರತಮ್ಯ ಇರುವುದಿಲ್ಲ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವ ದೇಗುಲವಾಗಿದೆ ಎಂದರು. ಇಂದು ಪ್ರತಿಷ್ಠೆಯ ಹೆಸರಿನಲ್ಲಿ ಪೋಷಕರು ಸರಕಾರಿ ಶಾಲೆಯ ಬಗ್ಗೆ ತಾತ್ಸಾರ ಮನೋಭಾವನೆ ಬೆಳೆಸಿಕೊಂಡಿದ್ದಾರೆ ಈ ಕಾರಣದಿಂದ ಸರಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆಯಾಗುತ್ತಿದೆ ಈ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಸರಕಾರಿ ಶಾಲೆಗಳನ್ನು ಉಳಿಸಿ ಬೆಳಸಲು ಚಿಂತನೆ ಹರಿಸುವಂತೆ ಮನವಿ ಮಾಡಿದರು.…
ಮಡಿಕೇರಿ ಜ.28 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ದೇಶ ಕಂಡ ಅಪ್ರತಿಮ, ಧೀಮಂತ ವ್ಯಕ್ತಿತ್ವದ ವೀರಸೇನಾನಿ. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಯುವ ಸಮೂಹ ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಎನ್ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ಜೆಫಿರಿನ್ ಗಿಲ್ಬರ್ಟ್ ಅರಾನ್ಹಾ ಕಿವಿಮಾತು ಹೇಳಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 124ನೇ ಜನ್ಮದಿನಾಚರಣೆಯ ಸಭಾ ಕಾರ್ಯಕ್ರಮ ಹಾಗೂ ಕಾರ್ಯಪ್ಪ ಅವರಿಗೆ ಸಂಬಂಧಿಸಿದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಪ್ಪ ಅವರ ದೇಶಪ್ರೇಮ, ವ್ಯಕ್ತಿತ್ವ, ಶಿಸ್ತು ಬದ್ಧ ಜೀವನ, ದೂರದೃಷ್ಟಿ, ಸಮಯ ಪ್ರಜ್ಞೆ, ಸ್ವಾರ್ಥರಹಿತ ಸೇವೆಯನ್ನು ಇಂದಿನ ಯುವ ಜನಾಂಗ ಅನುಸರಿಸಬೇಕು. ದೇಶ ಸೇವೆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ವಿದ್ಯಾರ್ಥಿಗಳು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಂತಹ ಸಾಧಕ ವ್ಯಕ್ತಿಗಳನ್ನು ಮಾದರಿಯಾಗಿಸಿಕೊಂಡು ತಮ್ಮ ಗುರಿಯತ್ತ ಸಾಗಿದರೆ ಯಶಸ್ಸು…
ಮಡಿಕೇರಿ ಜ.28 : ಜಿಲ್ಲೆಯಲ್ಲಿನ ಬುಡಕಟ್ಟು ಭಾಷೆಗಳನ್ನು ಉಳಿಸಿ, ಬೆಳೆಸುವಂತಾಗಲು ಮತ್ತೊಂದು ಅಕಾಡೆಮಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯಲ್ಲಿ ನಡೆದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಮೂಲ ಸಂಸ್ಕೃತಿ ಉಳಿಸುವಲ್ಲಿ ಬುಡಕಟ್ಟು ಸಮುದಾಯಗಳ ಭಾಷೆ ಅಭಿವೃದ್ಧಿಗೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಯರವ, ಕುಡಿಯ, ಕಾಡುಕುರುಬ, ಜೇನುಕುರುಬ, ಬೆಟ್ಟಕುರುಬ, ಸೋಲಿಗ ಹೀಗೆ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಭಾಷೆ ಮಾತನಾಡುತ್ತಿದ್ದು, ಇವುಗಳು ಕನ್ನಡದ ಉಪ ಭಾಷೆಗಳಾಗಿದ್ದು, ಇವುಗಳನ್ನು ಉಳಿಸಿ ಬೆಳೆಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಗಳು ಸ್ಥಾಪನೆಯಾಗಿದೆ. ಜೊತೆಗೆ ಬುಡಕಟ್ಟು ಸಮಾಜಗಳು ಮಾತನಾಡುವ ಭಾಷೆ ಉಳಿಸಿ, ಬೆಳೆಸುವಲ್ಲಿ ಅಕಾಡೆಮಿ ಸ್ಥಾಪನೆ ಸಮಯೋಚಿತವಾಗಿದೆ ಎಂದು ನುಡಿದರು. ಆಧುನಿಕತೆ…
ಸುಂಟಿಕೊಪ್ಪ,ಜ.28 : ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಪರಿಸರ ನೀರು ಆಹಾರದ ಮಹತ್ವದ ಕುರಿತು ಅರಿವು ಮೂಡಿಸಿದರು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಿಂದ ಹಸಿರು, ಹಳದಿ, ನೀಲಿ ಕೆಂಪು ಸಮವಸ್ತ್ರದಲ್ಲಿ ಹೊರಟ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಅರುಳ್ ಸೇಲ್ವಕುಮಾರ್, ಶಾಲಾ ಮುಖ್ಯೋಪಾದ್ಯಾಯ ಸೇಲ್ವರಾಜ್, ಉಪಯಾಜಕರಾದ ಚಾಲ್ಸ್ ಚಾಲನೆ ನೀಡಿದರು.
ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭ ಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ಶುಕ್ರವಾರ ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಜೋಡುಪಾಲ ಸಮೀಪ ಆಗಮಿಸುತ್ತಿದ್ದಂತೆ ಮರದ ದಿಮ್ಮಿಗಳಿಗೆ ಬೆಸೆಯಲಾಗಿದ್ದ ಹಗ್ಗ ತುಂಡರಿಸಲ್ಪಟ್ಟ ಪರಿಣಾಮ ದಿಮ್ಮಿಗಳು ರಸ್ತೆಗೆ ಉರುಳಿ ಬಿದ್ದಿವೆ. ಇದೇ ವೇಳೆ ಜೋಡುಪಾಲದಿಂದ ಮದೆನಾಡು ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನಕ್ಕೆ ಮರದ ದಿಮ್ಮಿಯೊಂದು ಅಪ್ಪಳಿಸಿದೆ. ದಿಮ್ಮಿ ಗಾಜು ಸೀಳಿ ಒಳಹೊಕ್ಕರೂ ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಿಕ್ಅಪ್ ವಾಹನ ಜಖಂಗೊಂಡಿದ್ದು, ಕೆಲ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪೋಕ್ಲು ಜ.28 : ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಎಸ್ಎಫ್) ನಾಪೋಕ್ಲು ಶಾಖೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಪಿ.ಐ.ಫಾರೂಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಪೋಕ್ಲು ಪಟ್ಟಣದಲ್ಲಿರುವ ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕಚೇರಿಯಲ್ಲಿ ಎಸ್ಎಸ್ಎಫ್ ನಾಪೋಕ್ಲು ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ಕಾರ್ಯದರ್ಶಿಯಾಗಿ ಟಿ.ಎಂ. ಹಾರಿಸ್, ಕೋಶಾಧಿಕಾರಿಯಾಗಿ ಎಂ. ಎಂ.ಶಾಹಿಲ್, ಸದಸ್ಯರಾಗಿ ಅನೀಸ್, ನಾಸಿರ್ ಮುಸ್ಲಿಯಾರ್,ಫಾಝಿಲ್, ಆಫ್ಸಲ್, ಶಾಮಿಲ್,ಆದಿಲ್ ಮುಸ್ಲಿಯಾರ್, ಫೈಸಲ್,ಫಾಝಿಲ್ ಸಿ.ಎಚ್, ತಷ್ರೀಫ್ ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ಹಿಂದಿನ ಅಧ್ಯಕ್ಷ ಅಬ್ದುಲ್ ರಹ್ಮಾನ್ ಹಾಗೂ ಆಡಳಿತ ಮಂಡಳಿಯವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಕೆಸಿಎಫ್ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್ ವೈ ಎಸ್ ಕಾರ್ಯದರ್ಶಿ ರಹೀಮ್ ಮಾಸ್ಟರ್, ಎಸ್ಎಸ್ಎಫ್ ಮಡಿಕೇರಿ ಡಿವಿಜನ್ ಸಂಚಾಲಕ ಸಾದಿಕ್ ನಿಜಾಮಿ, ಸೆಕ್ಟರ್ ಸಮಿತಿ ಸದಸ್ಯರಾದ ನೌಶಾದ್, ಇಸ್ಮಾಯಿಲ್, ತ್ವಯಿಬ್ ರಜಾಕ್ ಹಾಗೂ ಎಸ್ಎಸ್ ಎಫ್,ಎಸ್ ವೈ ಎಸ್ ಕಾರ್ಯಕರ್ತರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಜ.28 : ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ಕಂಜಿತಂಡ ಕೆ.ಮಂದಣ್ಣ ಧ್ವಜಾರೋಹಣ ನೆರವೇರಿಸಿ, ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಿದ ದಾನಿಗಳನ್ನು ಸ್ಮರಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಳ್ಳಿಮಾಡ ಕಾವೇರಪ್ಪ ಶಾಲೆಯ ಮುಖ್ಯ ದ್ವಾರದಲ್ಲಿ ಗೇಟು ಹಾಗೂ ಕಮಾನು ನಿರ್ಮಿಸಿ ಕೊಡುವುದಾಗಿ ಹೇಳಿದರು. ನಾಮೇರ ನವೀನ್ ಮಾತನಾಡಿ, ಶಾಲೆಯ ಅಭಿವೃದ್ಧಿಗಾಗಿ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆ ನೀಡಿದರು. ವಿದ್ಯಾಸಂಸ್ಥೆಯ ಖಜಾಂಚಿ ಉಮೇಶ್ ಕೇಚಮಯ್ಯ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ದಾನಿಗಳ ಸಹಕಾರವನ್ನು ಕೋರಿದರು. ಕ್ರೀಡೋತ್ಸವದ ಪ್ರಯುಕ್ತ ವಿವಿಧ ಕ್ರೀಡಾ ಚುಟವಟಿಕೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾಂಸ್ಥೆಯ ಉಪಾಧ್ಯಕ್ಷ ಕೊಲ್ಲೀರ ಯು.ಬೋಪಣ್ಣ ಕ್ರೀಡೆಯ ಪ್ರಥಮ ಬಹುಮಾನದ ಮೊತ್ತವನ್ನು ಉದಾರವಾಗಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು. ಮುಖ್ಯ ಶಿಕ್ಷಕಿ ಕೆ.ಎ.ದ್ವೀಪ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕರಾದ ಎ.ಎ.ಮುತ್ತಪ್ಪ ಕಾರ್ಯಕ್ರಮ ನಿರೂಪಿಸಿದರು. ಚಂದನ್ ವಂದಿಸಿದರು.
ಮಡಿಕೇರಿ ಜ.28 : ಸೋಮವಾರಪೇಟೆ ಮಂಡಲ ಯುವ ಮೋರ್ಚಾ ವತಿಯಿಂದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಕುಶಾಲನಗರದ ಪಟ್ಟಣ ವ್ಯಾಪ್ತಿಯಲ್ಲಿ ಯುವ ಮತದಾರರ ಸಂಪರ್ಕ, ಸದಸ್ಯತ್ವ ನೋಂದಣಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ನೀಡಿ, ಸ್ಟಿಕ್ಕರ್ ಅಳವಡಿಸಲಾಯಿತು. ಈ ಸಂದರ್ಭ ಮಂಡಲ ಯುವ ಮೋರ್ಚ ಅಧ್ಯಕ್ಷ ಚಂದ್ರಶೇಖರ್ ಹೇರೂರು , ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ,ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹಾಗೂ ಜಿಲ್ಲಾ ಪ್ರಭಾರಿಗಳಾದ ಜೈ ಶಂಕರ್ ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ್ , ಮೋಹಿತ್ ತಿಮ್ಮಯ್ಯ , ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವನೀತ್ ಪೂನೇಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಯುವ ಮೋರ್ಚ ಮಂಡಲ ಕಾರ್ಯದರ್ಶಿ ಮಣಿಕಂಠ ಹಾರಂಗಿ ಇದ್ದರು.






