ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*
- *ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*
- *ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*
- *ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*
- *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
- *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
- *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
- *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
- *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
- *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*






