ಬೆಂಗಳೂರು ಡಿ.29 NEWS DESK : ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌವ ಭಾಷೆ,ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಯಾರೇ ಆಂಗ್ಲ ಭಾಷೆಯಲ್ಲಿ ಮಾತನಾಡಿದರೂ ನಾನು ಕನ್ನಡದಲ್ಲಿಯೇ ಮಾತನಾಡಿಸುವುದು ಹಾಗೂ ಕನ್ನಡದಲ್ಲಿಯೇ ಸಹಿ ಮಾಡುವುದು ಮತ್ತು ಟಿಪ್ಪಣಿ ಬರೆಯುವುದು ಎಂದರು. ಹೊರರಾಜ್ಯಗಳಿಗೆ ಬರೆಯುವಾಗ ಮಾತ್ರ ಆಂಗ್ಲ ಭಾಷೆ ಬಳಸಿದರೂ ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದರು.ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. 1956 ನಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರ ಮುಖ್ಯಮಂತ್ರಿ ಆಗಿದ್ದಾಗ…
ಲೇಖಕ: admin
ಮಡಿಕೇರಿ ಡಿ.29 NEWS DESK : ಕನ್ನಡ ಭವನದ ವತಿಯಿಂದ ಕೊಡಮಾಡುವ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿಗೆ ಬರಹಗಾರ, ಪತ್ರಕರ್ತ ಚಂದನ್ ನಂದರಬೆಟ್ಟು ಭಾಜನರಾಗಿದ್ದಾರೆ. ಡಾ.ವಾಮನ್ ರಾವ್ ಬೇಕಲ್-ಸಂದ್ಯಾ ರಾಣಿ ನೇತೃತ್ವದ ಕಾಸರಗೋಡುವಿನ ಕನ್ನಡ ಭವನ ರಜತ ಸಂಭ್ರಮ ಅಂಗವಾಗಿ ಜ.18 ರಂದು ಕಾಸರಗೋಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಡಿ.29 NEWS DESK : ಕ್ರೀಡೆಯು ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಸಂತ ಅನ್ನಮ್ಮ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ, ಐಪಿಎಲ್ ಟಿ-10 ಕ್ರಿಕೆಟ್ ಪಂದ್ಯಾವಳಿಯಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಕ್ರೀಡೆಯಲ್ಲಿ ಎಲ್ಲರೂ ತಮ್ಮನ್ನು ತೊಡಗಿಸಿಕೊಂಡು ಉತ್ತಮ ರೀತಿಯ ಫಲಿತಾಂಶ ಬರುವಲ್ಲಿ ಸರ್ವರ ಪ್ರಯತ್ನ ಮುಖ್ಯವಾದದ್ದು. ಕ್ರೀಡೆಯು ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಹಕಾರಿಯಾಗಲಿದೆ. ಸೋಲು ಗೆಲುವನ್ನು ಎಲ್ಲರೂ ಸಮಾನವಾಗಿ ಸ್ವೀಕರಿಸಿ ಉತ್ತಮ ಆಟಗಾರರಾಗಿ ಎಂದು ಹಾರೈಸಿದರು. ವೇದಿಕೆಯಲ್ಲಿ ತಾಲೂಕು ಅಲ್ಪಸಂಖ್ಯಾತರ ಸದಸ್ಯರು ಕೊಳುಮಂಡ ರಫೀಕ್, ಸದಸ್ಯರು, ಪದಾಧಿಕಾರಿಗಳು, ಮಾಜಿ ಪುರಸಭೆ ಸದಸ್ಯರು ರಾಫಿ, ಮತೀನ್, ಅತಿಫ್ ಮನ್ನ, ಸ್ಥಾಯಿ ಸಮಿತಿ ಅಧ್ಯಕ್ಷರು ಜಲಿಲ್, ಪಕ್ಷದ ಮುಖಂಡರು ನಾಸಿರ್, ಸುಭಾಸ್ ನಾಣಯ್ಯ, ಯುವ ಕಾಂಗ್ರೆಸ್ ಉಪಾಧ್ಯಕ್ಷರು ಅಂಕಿತ್ ಪೊನ್ನಪ್ಪ, ಮೆಲ್ ರೋಯ್ ಲೋಬೊ, ಜಗದೀಶ್, ಬೀನಾ ಜಗದೀಶ್ ಹಾಗೂ ಕಾರ್ಯಕ್ರಮ ಆಯೋಜಕರು …
ಸುಂಟಿಕೊಪ್ಪ ಡಿ.29 NEWS DESK : ಶ್ರೀಕ್ಷೇತ್ರ ಅಯ್ಯಪ್ಪ ಸ್ವಾಮಿ ದೇವಾಲಯದ 55ನೇ ವರ್ಷದ ಮಂಡಲ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಮಂಡಲ ಪೂಜೋತ್ಸವದ ಅಂಗವಾಗಿ ಪಟ್ಟಣದ ಮುಖ್ಯಬೀದಿಗಳಲ್ಲಿ ಶೋಭಯಾತ್ರೆ ನಡೆಯಿತು. ಸಂಜೆ ದೇವಾಲಯದಲ್ಲಿ ಪೂಜೆ ಮುಗಿಸಿದ ನಂತರ ಅಯ್ಯಪ್ಪ ಕ್ಷೇತ್ರದಿಂದ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯ ಮೆರವಣಿಗೆಯೊಂದಿಗೆ ಕೇರಳದ ಆಕರ್ಷಕ ಚಂಡೆಮೇಳಗಳೊಂದಿಗೆ ಅಯ್ಯಪ್ಪ ವೃತಧಾರಿಗಳು ಹಾಗೂ ಭಕ್ತಾದಿಗಳು ಮೆರವಣಿಗೆಯಲ್ಲಿ ಅಯ್ಯಪ್ಪನ ಸ್ಮರಣೆ ಭಜನೆಗಳನ್ನು ಮಾಡುತ್ತಾ ಸಾಗಿದರು. ಮಾದಾಪುರ ರಸ್ತೆಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯ, ಪಟ್ಟಣ ಪ್ರಮುಖ ಬೀದಿಯಲ್ಲಿ ಅಯ್ಯಪ್ಪ ಸ್ವಾಮಿಯ ಉದ್ಘೋಷದೊಂದಿಗೆ ಗದ್ದೆಹಳ್ಳದವರೆಗೆ ಸಾಗಿ, ಅಲ್ಲಿಂದ ಹಿಂತಿರುಗಿ ದೇವಾಲಯದಲ್ಲಿ ಸಮಾಪ್ತಿ ಗೊಂಡಿತು. ಮೆರವಣಿಗೆಯ ಸಂದರ್ಭ ಬಣ್ಣಬಣ್ಣದ ಸಿಡಿಮದ್ದುಗಳ ಚಿತ್ತಾರ ಜನಾಕರ್ಷಣೆಗೊಂಡಿತು. ನಂತರ ದೇವಾಲಯದಲ್ಲಿ ಪ್ರಧಾನ ಅರ್ಚಕ ಗಣೇಶ್ ಭಟ್ ಅವರ ನೇತೃತ್ವದಲ್ಲಿ ದೀಪರಾಧನೆ ನೆರವೇರಿತು. ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಬಳಿಕ ಅನ್ನದಾನ ನಡೆಯಿತು.
ಕುಶಾಲನಗರ ಡಿ.29 NEWS DESK : ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಮತ್ತು ವಂದೇ ಮಾತರಂ ಹಾಗೂ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಗೆ ಶತಮಾನ ಸಂಭ್ರಮ ಹಿನ್ನೆಲೆಯಲ್ಲಿ ಹಾರಂಗಿಯ ಸಮೀಪದ ಅತ್ತೂರು ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ಶತ ಕಂಠದಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ಸಿರಿ ಸ್ನೇಹ ಬಳಗ ಆಶ್ರಯದಲ್ಲಿ ಕುಶಾಲನಗರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಸಾಹಿತಿ ಕಣಿವೆ ಭಾರಧ್ವಾಜ್ ಆನಂದ ತೀರ್ಥ ಉದ್ಘಾಟಿಸಿದರು. ನಂತರ ಮಾತನಾಡಿದ ಭಾರದ್ವಾಜ್, ದೇಶದೊಳಗೆ ವಿವಾದಗಳು, ಎಲ್ಲಾ ಕಡೆಯಲ್ಲಿಯೂ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುವುದು ಸರ್ವೆ ಸಾಮಾನ್ಯ. ಅವೆಲ್ಲವನ್ನು ಬದಿಗೊತ್ತಿ ಎಲ್ಲರೂ ಒಗ್ಗೂಡಿ ನಡೆಯುವ ಕೆಲಸ ನಿರಂತರವಾಗಿ ಸಾಗಬೇಕಾಗಿದೆ. ಮಹಾ ಸಾಹಿತ್ಯಗಳಲ್ಲಿ ಹುದುಗಿರುವ ಒಳ ಅರ್ಥವನ್ನು ಮನದಟ್ಟು ಮಾಡಿಕೊಂಡಲ್ಲಿ ಅದನ್ನು ಆಸ್ವಾದಿಸಲು ಸುಲಭ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ವಿವಿಧ ಸಂಘ ಸಂಸ್ಥೆಗಳ…
ಮಡಿಕೇರಿ NEWS DESK ಡಿ.28 : ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಸಮಾರೋಪ ಸಮಾರಂಭ ಡಿ.30 ರಂದು ನಡೆಯಲಿದೆ. ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಎಸ್ಎಲ್ಎನ್ ಗ್ರೂಪ್ನ ಅಧ್ಯಕ್ಷ ಎನ್.ಸಾತಪ್ಪನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥನ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಹಾಕಿ ಒಲಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ವಿ.ಆರ್.ರಘುನಾಥ್, ಹಾಕಿ…
ಮಡಿಕೇರಿ NEWS DESK ಡಿ.28 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನಲ್ಲಿ ನಡೆಯುತ್ತಿರುವ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್ ಡಿ.29 ರಂದು ಬೆಳಿಗ್ಗೆ 10.30 ಗಂಟೆಗೆ ಚೆಪ್ಪುಡಿರ ಮತ್ತು ಮಂಡೇಪಂಡ ಹಾಗೂ 12.30 ಗಂಟೆಗೆ ಕುಲ್ಲೇಟಿರ ಮತ್ತು ಕುಪ್ಪಂಡ (ಕೈಕೇರಿ) ತಂಡಗಳ ನಡುವೆ ನಡೆಯಲಿದೆ. ಮೊದಲ ಪಂದ್ಯದ ಉದ್ಘಾಟನೆಯ ಸಂದರ್ಭ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ನಂಜಪ್ಪ ಹಾಗೂ ಬಾಡಗ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಕಂಬೀರಂಡ ಸತೀಶ್ ಮುತ್ತಪ್ಪ ಪಾಲ್ಗೊಳ್ಳಿದ್ದಾರೆ. ಎರಡನೇ ಪಂದ್ಯದ ಉದ್ಘಾಟನೆಯ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಮೂರ್ನಾಡು ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಚೌರಿರ ಜಗತ್ ತಿಮ್ಮಯ್ಯ ಹಾಗೂ ಕಾರ್ಯದರ್ಶಿ ಪೆಮ್ಮುಡಿಯಂಡ ಅಪ್ಪಣ್ಣ ಉಪಸ್ಥಿತರಿರುವರು. ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮಡಿಕೇರಿ NEWS DESK ಡಿ.28 : ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಮೂರನೇ ದಿನದ ಪಂದ್ಯದಲ್ಲಿ ಮಂಡೇಪಂಡ ಮತ್ತು ಕೋಣೇರಿರ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮಂಡೇಪಂಡ ತಂಡ ಜಯ ಸಾಧಿಸಿತು. ಮಂಡೇಪಂಡ ಚಂಗಪ್ಪ ತಲಾ ಎರಡು, ಮುತ್ತಪ್ಪ, ಕಾಳಪ್ಪ ಹಾಗೂ ಕರುಂಬಯ್ಯ ತಲಾ ಒಂದು ಗೋಲು ದಾಖಲಿಸಿದರು. ಮುಕ್ಕಾಟೀರ ಮತ್ತು ಪಳಂಗಂಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಪಳಂಗಂಡ ತಂಡ ಗೆಲುವು ದಾಖಲಿಸಿತು. ಪಳಂಗಂಡ ಪೊನ್ನಪ್ಪ ಭರ್ಜರಿ ನಾಲ್ಕು ಹಾಗೂ ಅಮರ್ ಎರಡು ಗೋಲು ಬಾರಿಸಿದರು. ಕುಲ್ಲೇಟಿರ ಮತ್ತು ನೆಲ್ಲಮಕ್ಕಡ ನಡುವಿನ ಪಂದ್ಯದಲ್ಲಿ 1-0 ಗೋಲಿನ ಅಂತರದಲ್ಲಿ ಕುಲ್ಲೇಟಿರ ತಂಡ ಗೆಲುವು ಸಾಧಿಸಿತು. ಕುಲ್ಲೇಟಿರ ಮುತ್ತಣ್ಣ ಒಂದು ಗೋಲು ದಾಖಲಿಸಿದರು. ಶೂನ್ಯ ಸಾಧನೆಯ ಹಿನ್ನೆಲೆ ಕೂತಂಡ ಮತ್ತು ಕಲಿಯಂಡ ನಡುವಿನ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.
ಮಡಿಕೇರಿ NEWS DESK ಡಿ.28 : ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣನವರು ಭಾರತದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ ಘೋಷವಾಕ್ಯ ವನ್ನು ಪುನರುಚ್ಚರಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪೂಜಾರಿರ ರಾಮಪ್ಪ ಅವರ ಹೆಸರಿನಲ್ಲಿ ಮೇಕೇರಿ ಬಿಳಿಗೇರಿ, ಅರ್ವತ್ತೋಕ್ಲು ಲಿಂಕ್ ರಸ್ತೆಗೆ ನಾಮಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡಗಿನ ಅನೇಕ ಮಹನೀಯರು ತಮ್ಮ ಬದುಕನ್ನು ತ್ಯಾಗ ಮಾಡಿ ಪಾಲ್ಗೊಳ್ಳುವ ಮೂಲಕ ತಮ್ಮ ದೇಶ ಪ್ರೇಮದ ಬದ್ದತೆಯನ್ನು ಮೆರೆದಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳಲ್ಲಿ ದಿವಂಗತ ಪೂಜಾರಿ ರಾಮಪ್ಪ ನವರು ಒಬ್ಬರಾಗಿದ್ದು ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಂದಿಸುವ ಅವಕಾಶ ದೊರಕಿದ್ದು ಸಂತಸದ ಕ್ಷಣವಾಗಿದೆ ಎಂದು ಹೇಳಿದರು. ಇಂತಹ ಒಂದು ಐತಿಹಾಸಿಕ ಕಾರ್ಯಕ್ಕೆ ಪ್ರಯತ್ನ ಪಟ್ಟು ಯಶಸ್ವಿಯಾದ ಅರ್ವತ್ತೋಕ್ಲು, ಮೇಕೇರಿ ಮತ್ತು ಬಿಳಿಗೇರಿ ಹಾಗೂ ಕೊಡಗಿನಾದ್ಯಂತ ನೆಲಸಿರುವ…
ಮಡಿಕೇರಿ NEWS DESK ಡಿ.28 : ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ವತಿಯಿಂದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನಾ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ನಡೆ ತೆಗೆಯುವುದು, ನಿರ್ಮಲ್ಯ ಪೂಜೆ, ಗಣಪತಿ ಹೋಮ, ಅಷ್ಟಾಭಿಷೇಕ ಸೇವೆ, ತುಳಸಿ ಸಹಸ್ರನಾಮಾರ್ಚನೆ, ಮಹಾಪೂಜೆ, ಪಾಲಕೊಂಬು ಪ್ರತಿಷ್ಠಾಪನೆ ಹಾಗೂ ತಾಯಂಬಕಂ (ಚಂಡೆಸೇವೆ) ನಡೆಯಿತು. ಅಲಂಕೃತ ಮಂಟಪದಲ್ಲಿ ಚಂಡೆ ಮೇಳದೊಂದಿಗೆ ನಗರದ ಅಶ್ವಿನಿ ಗಣಪತಿ ದೇವಾಯಲಯದಿಂದ ಮುಖ್ಯಬೀದಿಗಳಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿ ಮತ್ತು ಪಾಲಕೊಂಬು ಮೆರವಣಿಗೆ ಸಾಗಿತು. ನಂತರ ದೀಪಾರಾಧನೆ, ಅಲಂಕಾರ ಪೂಜೆ, ಪಡಿ ರಂಗಪೂಜೆ, ದುರ್ಗಾಪೂಜೆ ಹಾಗೂ ಸುಬ್ರಹ್ಮಣ್ಯ ಪೂಜೆ ಜರುಗಿತು. ಮಹಾಪೂಜೆಯ ನಂತರ ತೀರ್ಥ ಪ್ರಸಾದ ವಿತರಣೆಯೊಂದಿಗೆ ಭಕ್ತರಿಗೆ ಅನ್ನ ಸಂತರ್ಪಣೆಯಾಯಿತು. ರಾತ್ರಿ ಅಗ್ನಿಪೂಜೆ, ಪೊಲಿಪಾಟ್, ಪಾಲ್ಕಿಂಡಿ ತಿರಿ ಉಳಿಚಲ್, ವೆಟ್ಟುಂತಡವುಂ ನಡೆಯಿತು. ಭಾನುವಾರ ಬೆಳಿಗ್ಗೆ ಅಗ್ನಿ ಕೊಂಡ…






