ಮಡಿಕೇರಿ ಜ.5 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ(ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ ಮತ್ತು ಪ್ರತಿಭೆ ಯೋಜನೆ ಈ 08 ಯೋಜನೆಗಳಿಗೆ 2022-23 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು https://sevasindhu.karnataka.gov.in/Sevasindhu/DepartmentServicesKannadaಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 15, ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.5 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಫೆಬ್ರವರಿ, 11 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ…
ಮಡಿಕೇರಿ ಜ.05 : ಕರ್ನಾಟಕ ಪೌರಸುಧಾರಣೆಗಳ ಕೋಶ ಬೆಂಗಳೂರು ಅವರ ನಿರ್ದೇಶನದಂತೆ ನಗರಸಭೆ ವ್ಯಾಪ್ತಿಯೊಳಗೆ ಬರುವ ಪ್ರತಿ ವಾಸ, ವಾಣಿಜ್ಯ, ಕೈಗಾರಿಕಾ, ಇತರೇ ಕಟ್ಟಡ ಮತ್ತು ಖಾಲಿ ಜಾಗಗಳ ವಿವರವನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಿ, ಸಾರ್ವಜನಿಕರಿಗೆ ತಮ್ಮ ಮಾಲೀಕತ್ವದ ಸ್ವತ್ತಿನ ಇ-ಸ್ವತ್ತು, ಫಾರಂ ನಂ.3 ಸುಲಭವಾಗಿ ಲಭ್ಯವಾಗುವಂತೆ ಮಾಡಲು ಅವಶ್ಯವಿರುವ ಮಾಹಿತಿಯ ದಾಖಲೆಗಳನ್ನು ಪಡೆದು ಲಭ್ಯವಿರುವ ದಾಖಲೆಗಳೊಂದಿಗೆ ಪರಿಶೀಲಿಸಿಕೊಂಡು ಆಸ್ತಿ ಕಣಜ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಉದ್ದೇಶಿಸಲಾಗಿದೆ. ನಗರಸಭೆಯಿಂದ ಈ ಸರ್ವೆ ಕೆಲಸಕ್ಕೆ ಎಸ್ಜಿಒ, ಏಜೆನ್ಸಿ ಮುಖಾಂತರ ನಿಯೋಜನೆಗೊಂಡ ನಿಯೋಜಿತ ತಾತ್ಕಾಲಿಕ ಹೊರಗುತ್ತಿಗೆ ನೌಕರ ಮತ್ತು ನಗರಸಭೆ ಸಿಬ್ಬಂದಿಗಳು ಜನವರಿ, 06 ರಿಂದ ಪ್ರತಿ ವಾರ್ಡ್ನ ಪ್ರತಿ ಮನೆ, ಕಟ್ಟಡ, ಖಾಲಿ ಜಾಗಕ್ಕೆ ಸರ್ವೆಗೆ ಬರಲಿದ್ದು, ಇವರಿಗೆ ಆಸ್ತಿ ಮಾಹಿತಿ ಅನುಬಂಧ-2 ರ ನಮೂನೆಯಲ್ಲಿ ಕೇಳಿರುವ ಮಾಹಿತಿಗಳನ್ನು ಮತ್ತು ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ, ಡ್ರೈವಿಂಗ್ ಲೆಸನ್ಸ್, ಪಾಸ್ಪೋರ್ಟ್ ಪ್ರತಿ ಇದರಲ್ಲಿ ಯಾವುದಾದರೊಂದು ಪ್ರತಿ, ಕಟ್ಟಡ ಪರವಾನಿಗೆ…
ಮಡಿಕೇರಿ ಜ.5 : ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಅವರು ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಮತಗಟ್ಟೆ ಸಂಖ್ಯೆ 29, 30, 31 ಮತಗಟ್ಟೆಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಹಾಗೆಯೇ ಈ ಮತಗಟ್ಟೆಗಳ ಬಿಎಲ್ಒ ಅವರಿಂದ ಒಟ್ಟು ಮತದಾರರ ವಿವರ, ಹೊಸದಾಗಿ ಯುವ ಮತದಾರರ ಸೇರ್ಪಡೆ, ನಮೂನೆ 7 ರಂತೆ ತೆಗೆದಿರುವ ಮತದಾರರ ಸಂಖ್ಯೆ ಮತ್ತು ಯಾವ ಕಾರಣಕ್ಕೆ ತೆಗೆದಿರುವುದು ಹಾಗೂ ಸ್ಥಳಾಂತರ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ನರಗುಂದ, ಕಂದಾಯ ಪರಿವೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಬಿಎಲ್ಒಗಳು ಇತರರು ಹಾಜರಿದ್ದರು.
ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ಜ.7ರಂದು ಏರ್ಪಡಿಸಿರುವ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಐಮಂಡ ಗೋಪಾಲ್ ಸೋಮಯ್ಯ ವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಎನ್. ಮಂಜುನಾಥ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಎನ್.ಎನ್. ದಿನೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪೊನ್ನಂಪೇಟೆ ತಹಸೀಲ್ದಾರ್ ಎನ್.ಎಸ್. ಪ್ರಶಾಂತ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ವಿರಾಜಪೇಟೆ ಲಿಟ್ಲ್ ಸ್ಕಾಲರ್ ಅಕಾಡೆಮಿ ಅಧ್ಯಕ್ಷೆ ಪೂಜಾ ರವೀಂದ್ರ, ವಿರಾಜಪೇಟೆ ಕೂರ್ಗ್ ಅವೆನ್ಯೂ ಸೂಪರ್ ಮಾರ್ಕೇಟ್ ಪಾಲುದಾರ ಹನೀಫ್, ವಿರಾಜಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷ…
ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಉದ್ಘಾಟನೆ, ಬೆಳ್ಳಿ ಮಹೋತ್ಸವ ಲಾಂಛನ ಅನಾವರಣ ಹಾಗೂ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಜ.7ರಂದು ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗೋಣಿಕೊಪ್ಪ ಕಾಲ್ಸ್ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ವಹಿಸಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಬೆಳ್ಳಿ ಮಹೋತ್ಸವ ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಲಾಂಛನ ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸುತ್ತಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾಲ್ಸ್ ವಿದ್ಯಾ ಸಂಸ್ಥೆ ಪ್ರಾಂಶುಪಾಲರಾದ…
ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ವಿಕಸನ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಗೋಣಿಕೊಪ್ಪ ಲಯನ್ಸ್ ಸಂಸ್ಥೆ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.7ರಂದು 2022-23ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ವಿಶೇಷ ತರಗತಿ ಏರ್ಪಡಿಸಲಾಗಿದೆ. ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಡಿಡಿಪಿಐ ಸಿ. ರಂಗಧಾಮಯ್ಯ ಉದ್ಘಾಟಿಸಲಿದ್ದಾರೆ. ಮೋಟಿವೇಷನ್ ಗುರು ತೀತಮಾಡ ಅರ್ಜುನ್ ದೇವಯ್ಯ ಸ್ಫೂರ್ತಿಯ ಮಾತುಗಳನ್ನಾಡಲಿದ್ದಾರೆ. ಗೋಣಿಕೊಪ್ಪ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಅಮ್ಮಂಡ ಚಿಣ್ಣಪ್ಪ, ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಬಿಇಒ ಶ್ರೀಶೈಲ ಬಿಳಗಿ, ಕೊಡಗು ವಿಕಸನ ಸಂಸ್ಥೆ ಸಂಸ್ಥಾಪಕ ಚೈಯ್ಯಂಡ ಸತ್ಯ ಗಣಪತಿ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು…
ಮಡಿಕೇರಿ ಜ.4 : ಸೋಮವಾರಪೇಟೆ ತಾಲೂಕಿನ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯ ಧರ್ಮದರ್ಶಿ ಮಂಡಳಿ ಆಶ್ರಯದಲ್ಲಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೆ ಹಾಗೂ 64ನೇ ಮಹಾರಥೋತ್ಸವ ಜ.13 ರಿಂದ ಜ.17 ರವರೆಗೆ ನಡೆಯಲಿದೆ. ಜ.13 ರಂದು ‘ಬೆಳ್ಳಿ ಬಂಗಾರ ದಿನ’ದಂದು ಜಾತ್ರೆ ಆರಂಭವಾಗಲಿದ್ದು, ಸಂಜೆ 6.30 ರಿಂದ 7.30 ರವರೆಗೆ ಜಾತ್ರಾ ಪ್ರಾರಂಭೋತ್ಸವ ಪೂಜೆ ಮತ್ತು ಪಾರ್ಥನೆ ನೆರವೇರಲಿದೆ. ಜ.14 ರಂದು ‘ಮಕರ ಸಂಕ್ರಮಣ ಕರುವಿನ ಹಬ್ಬ’ ಆಚರಿಸಲಿದ್ದು, ರಾತ್ರಿ 7 ಗಂಟೆಗೆ ಗರುಡ ಗಂಬದ ಅಗ್ರ ಪೀಠದಲ್ಲಿ ತುಪ್ಪದ ನಂದಾದೀಪ ಬೆಳಗಿಸುವುದು, ಅಂಕುರಾರ್ಪಣಾ ಪೂಜೆ, ಮಹಾ ಮಂಗಳಾರತಿ, ಪ್ರಾರ್ಥನೆ ನೆರವೇರಲಿದೆ. ಜ.15 ರಂದು ‘ಅರಸು ಬಲ ಸೇವೆ’ ಆಚರಿಸಲಿದ್ದು, ಪೂರ್ವಾಹ್ನ 11 ರಿಂದ 1 ರವರೆಗೆ ಉತ್ತರಾಯಣ, ಮಣ್ಯಕಾಲ ಪೂಜೆ ನಡೆಯಲಿದೆ. ರಾತ್ರಿ 7.30 ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಜರುಗಲಿದೆ. ಮಹಾರಥೋತ್ಸವ: ಜ.16 ರಂದು ಮಧ್ಯಾಹ್ನ 12.5 ಗಂಟೆಗೆ ಶುಭ ಮುಹೂರ್ತದಲ್ಲಿ ಶ್ರೀ ಕುಮಾರಲಿಂಗೇಶ್ವರ…
ಮಡಿಕೇರಿ ಜ.5 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಜ.6 ರಂದು ಕುಶಾಲನಗರದಲ್ಲಿ ಹೃದ್ರೋಗ ತಪಾಸಣಾ ಶಿಬಿರ ನಡೆಯಲಿದೆ. ನಾರಾಯಣ ಸೂಪರ್ಸ್ಪೆಷಾಲಿಟಿ ಒಪಿಡಿ ಸೆಂಟರ್ನಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ರವಿಶಂಕರ್ ಎದೆನೋವು, ಎದೆಯ ಬಿಗಿತ, ಎದೆಯ ಒತ್ತಡ ಮತ್ತು ಎದೆಯ ಅಸ್ವಸ್ಥತೆ, ಉಸಿರಾಟದ ತೊಂದರೆ, ವೇಗವಾದ ಹೃದಯ ಬಡಿತಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 9513408004, 8904258788, 08276273221 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.5 : ರೋಟರಿ ಮಡಿಕೇರಿ ವುಡ್ಸ್ ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ಆರಂಭಿಕ ವರ್ಷವೇ ಸಾಧನೆಯ ಹೆಗ್ಗುರುತುಗಳನ್ನು ಸೃಷ್ಟಿಸಿದೆ ಎಂದು ರೋಟರಿ ವುಡ್ಸ್ನ 3181 ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಮೂರನೇ ರೋಟರಿ ಸಂಸ್ಥೆಯಾಗಿ 2022ರ ಮೇ 15 ರಂದು ಉದಯಿಸಿದ ರೋಟರಿ ಮಡಿಕೇರಿ ವುಡ್ಸ್ 35 ಸದಸ್ಯರ ತಂಡಗಳನ್ನೊಳಗೊಂಡು ಸಾಕಷ್ಟು ಜನೋಪಯೋಗಿ ಕಾರ್ಯ ಯೋಜನೆಗಳ ಮೂಲಕ ಜನಸ್ನೇಹಿಯಾಗಿದೆ. ಮುಂದಿನ ವರ್ಷಗಳಲ್ಲಿಯೂ ಮತ್ತಷ್ಟು ಸಾಮಾಜಿಕ ಕಳಕಳಿಯ ಯೋಜನೆಗಳಲ್ಲಿ ಸಕ್ರಿಯವಾಗಲಿದೆ ಎಂದರು. ರೋಟರಿ ವುಡ್ಸ್ ಸಂಸ್ಥೆ ಶುದ್ಧ ಕುಡಿಯುವ ನೀರು, ಜನರಿಗೆ ಸೂರು, ಶಿಕ್ಷಣ, ಪರಿಸರದ ಬಗ್ಗೆ ವಿಶೇಷ ಕಾಳಜಿ ವಹಿಸಿದೆ. ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜೆನಿಫರ್ ಜಾನ್ ಅವರ ಆಶಯದಂತೆ ಶಿಕ್ಷಣ ಮತ್ತು ಪರಿಸರಕ್ಕೆ ಪೂರಕವಾದ ವನಸಿರಿ, ವಿದ್ಯಾಸಿರಿ, ಆರೋಗ್ಯ ಸಿರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ಲಬ್ ಸರ್ವಿಸ್, ಜನರನ್ನು ಬಲಪಡಿಸುವ ನಿಟ್ಟಿನಲ್ಲಿ ಕಮ್ಯೂನಿಟಿ ಸರ್ವಿಸ್, ಯುವಕರನ್ನು ಬಲಪಡಿಸುವ…






