ಲೇಖಕ: admin

ಮಡಿಕೇರಿ ಜ.20 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ‘ಸಾಮಾಜಿಕ ಅರಿವು’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ‘ನಗಾರಿ’ ಬಾರಿಸುವ ಮೂಲಕ ಚಾಲನೆ ನೀಡಿದರು. ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕ  ಎಂ.ಪಿ.ಅಪ್ಪಚ್ಚುರಂಜನ್ ಸರ್ಕಾರ ಪ್ರಸಕ್ತ ಬಜೆಟ್‍ನಲ್ಲಿ ಘೋಷಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಸಾಮಾಜಿಕ ಅರಿವು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಿದೆ ಎಂದು ಅವರು ತಿಳಿಸಿದರು. ಸಮಾಜದಲ್ಲಿ ಕಟ್ಟಕಡೆಯ ಜನರು ಸಹ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು. ಸಮಾಜದಲ್ಲಿ ಎಲ್ಲರೂ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಇದುವರೆಗೆ 140 ಕೋಟಿ ರೂ.ಗೂ ಹೆಚ್ಚು ಬೆಳೆ ಪರಿಹಾರ ವಿತರಿಸಲಾಗಿದ್ದು, ಆ ನಿಟ್ಟಿನಲ್ಲಿ ಬೆಳಕು ಚೆಲ್ಲುವಂತಾಗಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಅವರು ಮಾತನಾಡಿ ಸರ್ಕಾರದ…

Read More

ಮಡಿಕೇರಿ ಜ.20 : ಆಧುನಿಕ ಮೊಬೈಲ್ ಯುಗದಲ್ಲಿ ಮೊಬೈಲ್, ಟಿವಿ ಜೊತೆಗೆ ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಕಲೆ ಹಾಗೂ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕರೆ ನೀಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‍ಮನೆ ಕೆಫೆ ಸಹಕಾರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ/ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮಕ್ಕೆ ‘ದುಡಿ’ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ದಿನದಲ್ಲಿ ಮೊಬೈಲ್ ಇಲ್ಲದೆ ಬದುಕುವುದು ಕಷ್ಟಸಾಧ್ಯ ಎಂಬಂತಾಗಿದೆ. ಆದರೂ ಎಷ್ಟು ಬೇಕು ಅಷ್ಟನ್ನು ಬಳಸಿಕೊಂಡು, ಹಿಂದಿನ ಕಲೆ, ಜಾನಪದ ಸಂಸ್ಕೃತಿಗೂ ಒತ್ತು ನೀಡುವಂತಾಗಬೇಕು ಎಂದು ಶಾಸಕರು ಹೇಳಿದರು. ಇತ್ತೀಚಿನ ದಿನಗಳಲ್ಲಿ ಅಂಕಿ ಅಂಶಗಳನ್ನು ಕ್ಯಾಲಿಕ್ಯೂಲೇಟರ್ ಬಳಸಿ ಉತ್ತರಿಸುತ್ತೇವೆ. ಆದರೆ ಹಿಂದೆ ಮಗ್ಗಿ/ ಕೈ ಬೆರಳಿನ ಮೂಲಕ ಅಂಕಿ ಅಂಶಗಳ ಮಾಹಿತಿಯನ್ನು ನೀಡುತ್ತಿದ್ದರು ಎಂದರು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುವಂತಾಗಬೇಕು. ವಿದ್ಯೆ…

Read More

ಮಡಿಕೇರಿ ಜ.20 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಪೊನ್ನಂಪೇಟೆ ಹಾಕಿ ಟರ್ಫ್‍ನಲ್ಲಿ ಖೇಲೋ ಇಂಡಿಯಾ ತರಬೇತಿಗೆ ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆಯ ಹಾಕಿ ಟರ್ಫ್‍ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ಆಸಕ್ತಿ ಇರುವ ಕ್ರಿಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-229985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 : ಸಾಂಬಾರ ಮಂಡಳಿ ವತಿಯಿಂದ ಜ.24 ರಂದು ಬೆಳಗ್ಗೆ 10.30 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಹೋಟೆಲ್ ಕ್ರಿಸ್ಟಲ್ ಕೋರ್ಟ್‍ನಲ್ಲಿ ಖರೀದಿದಾರರು ಮತ್ತು ಮಾರಾಟಗಾರರ ಜತೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಸಾಂಬಾರ ಮಂಡಳಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯನ್ನು ಸರ್ಕಾರದ ಆದೇಶದಂತೆ 2023 ರ ಜನವರಿ, 13 ರ ಪ್ರಕಾರ ಅನುಷ್ಠಾನಗೊಳಿಸುತ್ತಿದ್ದು, ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಜನವರಿ, 17 ರಿಂದ ಮಾರ್ಚ್, 02 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಉಪ್ಪಾರ ಮತ್ತು ಇದರ ಉಪಜಾತಿಯ ಸಮಾಜದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು. ಘಟಕ ವೆಚ್ಚವು 2.50 ಲಕ್ಷ ರೂ.ಗಳಾಗಿದೆ. ಇದರಲ್ಲಿ ರೂ.2 ಲಕ್ಷಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ.50 ಸಾವಿರಗಳ ಸಾಲವನ್ನು ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ 3 ವರ್ಷಗಳ ಮರುಪಾವತಿ…

Read More

ಮಡಿಕೇರಿ ಜ.20 : ರಾಷ್ಟ್ರೀಯ ಮತದಾರರ ದಿನ ಪ್ರಯುಕ್ತ ಜ.25 ರಂದು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಶಾಲಾ-ಕಾಲೇಜು ಮುಖ್ಯಸ್ಥರು ತಮ್ಮ ಕಚೇರಿಯಲ್ಲಿ, ಶಾಲಾ-ಕಾಲೇಜುಗಳಲ್ಲಿ ಜನವರಿ, 25 ರಂದು ಬೆಳಗ್ಗೆ 11.30 ಗಂಟೆಗೆ ಭಾರತ ಚುನಾವಣಾ ಆಯೋಗ ಸಿದ್ದಪಡಿಸಿರುವ ವೋಟರ್ ಪ್ಲೆಡ್ಜ್‍ನೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಸೋಮವಾರಪೇಟೆ ತಾಲ್ಲೂಕಿನ ಕೂಡ್ಲೂರು ಗ್ರಾಮದ ಗೋಪಾಲ ಅವರಿಗೆ ಉದ್ಯಮಶೀಲತಾ ಯೋಜನೆಯಡಿ ನಿಗಮದಿಂದ 3.50 ಲಕ್ಷ ರೂ.ಸಹಾಯಧನದಡಿ ಪಿಕ್ ಅಪ್ ವಾಹನವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ವಾಹನದ ಕೀ ನೀಡುವ ಮೂಲಕ ಹಸ್ತಾಂತರಿಸಿದರು. ನಿಗಮದ ವ್ಯವಸ್ಥಾಪಕರಾದ ಎನ್.ಬಿ.ಚಂದ್ರಶೇಖರ್, ಬಸವನಹಳ್ಳಿ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷರಾದ ಆರ್.ಕೆ.ಚಂದ್ರು, ಇತರರು ಇದ್ದರು.

Read More

ಮಡಿಕೇರಿ ಜ.20 : ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ತೋಟವನ್ನಾಗಿ ಪರಿವರ್ತಿಸಿರುವ ಪ್ರಕರಣಗಳಲ್ಲಿ, ಗುತ್ತಿಗೆ ಆಧಾರದಲ್ಲಿ 30 ವರ್ಷಗಳ ಅವಧಿಗೆ ಜಾಗ ನೀಡುವ ಕುರಿತು ಸರ್ಕಾರ ಹೊರಡಿಸಿರುವ ಆದೇಶದಂತೆ ಕ್ರಮ ಕೈಗೊಳ್ಳಬೇಕೆ ಹೊರತು ಬಡಕೃಷಿಕರನ್ನು ತೆರವುಗೊಳಿಸಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಶಾಖೆಯ ಸಂಚಾಲಕ ಗರಗಂದೂರು ಲಕ್ಷ್ಮಣ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಣ್ಣ ಬೆಳೆಗಾರರು ಅತಿಕ್ರಮಿಸಿ ತೋಟವನ್ನಾಗಿ ಪರಿವರ್ತಿಸಿರುವ ಸರ್ಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಒತ್ತುವರಿ ಜಾಗದ ಕೃಷಿಯನ್ನು ನಾಶ ಪಡಿಸುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಫಿ ತೋಟಗಳಲ್ಲಿ ಸಾಕಷ್ಟು ಮರಗಿಡಗಳನ್ನು ಬೆಳೆಸುವುದರಿಂದ ಅದು ಪರಿಸರ ಸಂರಕ್ಷಣೆಗೂ ಪೂರಕವಾಗಿದೆ. ಸರ್ಕಾರಿ ಪೈಸಾರಿ ಜಾಗದಲ್ಲಿರುವ ಕಾಫಿ ತೋಟಗಳನ್ನು ತೆರವುಗೊಳಿಸುವ ಭಾಗವಾಗಿ ಅಲ್ಲಿನ ಗಿಡಗಳನ್ನು ಕಡಿದು ಹಾಕುವುದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಷ್ಟ್ರಕ್ಕೆ ದೊಡ್ಡ ಮಟ್ಟದ ವಿದೇಶಿ ವಿನಿಮಯ ಗಳಿಸಿಕೊಡುವ ಕಾಫಿ ಉತ್ಪಾದನೆಯ ಮೇಲೂ…

Read More

ವಿರಾಜಪೇಟೆ ಜ.19 : ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿನ ವೈಜ್ಞಾನಿಕ ಮತ್ತು ಕೌಶಲ್ಯ ಆಧಾರಿತ ಕಲೆಗಳನ್ನು ಗುರುತಿಸಲು ಮಕ್ಕಳ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಹೇಳಿದರು. ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕಲ್ತೋಡು ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬವನ್ನು ಬಣ್ಣ ತುಂಬಿದ ಬಲೂನು ಒಡೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಕ್ಕಳಿಗೆ ಸಮಗ್ರ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಈ ಕಲಿಕಾ ಹಬ್ಬವನ್ನು ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಆಚರಿಸಲಾಗುತ್ತಿದೆ. ಈ ಹಬ್ಬದಲ್ಲಿ ವಿದ್ಯಾರ್ಥಿಗಳು ತಾವೇ ಚರ್ಚಿಸಿ, ತಾರ್ಕಿಕವಾಗಿ ಆಲೋಚಿಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗಗಳನ್ನು ತಾವೇ ಕಂಡುಕೊಳ್ಳುತ್ತಾರೆ. ಶಿಕ್ಷಕರ ಸಹಾಯದ ಮೂಲಕ ಅನೇಕ ವೈಜ್ಞಾನಿಕ ಮತ್ತು ಕೌಶಲ್ಯ ಕಲೆಗಳನ್ನು ಸೃಷ್ಟಿಸುವ ಮೂಲಕ ತಮ್ಮಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ಹಾಕುತ್ತಾರೆ. ಮಕ್ಕಳ ಸರ್ವಾಂಗೀಣ ಪ್ರಗತಿ ಮತ್ತು ಸ್ವಕಲಿಕೆಯ ಮಾದರಿಯ ಕಲೆಗಳ ವಿಧಾನವನ್ನು ಕಲಿಸಿಕೊಡುವುದೇ ಈ ಕಲಿಕಾ…

Read More

ಸುಂಟಿಕೊಪ್ಪ, ಜ.20: ಕಲಿಕೆ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಶಿಕ್ಷಣದಿಂದ ಯಾವ ಮಕ್ಕಳು ವಂಚಿತರಾಗಬಾರದು. ಕಲಿಕಾಹಬ್ಬ ಮಕ್ಕಳ ವಿವಿಧ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಹಾಗೂ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗೆ ಹೋಗದೆ ಅವಿತು ಕುಳಿತುಕೊಳ್ಳುವ ಮಕ್ಕಳನ್ನು ಹುರಿದುಂಬಿಸಿ ಶಾಲೆಗೆ ಕರೆ ತರಲು ವಿದ್ಯಾರ್ಥಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಮುಂದಾಗಬೇಕು. ಶಾಲೆಗಳು ದೇವಾಲಯವಿದ್ದಂತೆ ಜ್ಞಾನದೇಗುಲವಾಗಿದೆ. ನಿರ್ಮಲ ಮನಸ್ಸಿನಿಂದ ಶಾಲೆಗೆ ಬಂದು ಪಾಠಪ್ರವಚನ ಪಠ್ಯೇತರ ಚಟುವಟಿಕೆಗಳು ಮಕ್ಕಳು ತೊಡಗಿಸಿಕೊಳ್ಳಬೇಕೆಂದು ಶಾಸಕರು ಕರೆ ನೀಡಿದರು. ಕೊಡಗು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಉಪನಿರ್ದೇಶಕ ವಿ.ರಂಗದಾಮಯ್ಯ ಮಾತನಾಡಿ ಕಲಿಕಾ ಹಬ್ಬ ಮಕ್ಕಳಿಗೆ ನಾಡಹಬ್ಬವಿದ್ದಂತೆ ಸಾಹಿತ್ಯ, ಚಿತ್ರಕಲೆ, ನೃತ್ಯ ಹಾಗೂ ಹಾಡು ಮೊದಲಾದ ವಿಭಾಗದಲ್ಲಿ ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸಲು ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ಸೋಮವಾರಪೇಟೆ ತಾಲೂಕು ಕ್ಷೇತ್ರ…

Read More