ಲೇಖಕ: admin

ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲದ ಅಂಬಟ್ಟಿಯಲ್ಲಿರುವ ಶ್ರೀ ನಾರಾಯಣ ಗುರು ಮಂದಿರದಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಸಮಾರಂಭದಲ್ಲಿ ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಗಣೇಶ್, ಗೌರವಾಧ್ಯಕ್ಷ ಬಿ.ಆರ್. ರಾಜ, ಉಪಾಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಜನಾರ್ದನ್, ಖಜಾಂಚಿ ಬಿ.ಎಂ. ಸತೀಶ್, ಸಹ ಕಾರ್ಯದರ್ಶಿಗಳಾದ ಲಕ್ಷ್ಮಣ್ ಹಾಗೂ ಮಣಿ, ಮಹಿಳಾ ಘಟಕದ ಪ್ರಮುಖರಾದ ರೂಪ ಹಾಗೂ ಚಿತ್ರಾ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.28 NEWS DESK : ಮಾನವ- ವನ್ಯಜೀವಿ ಸಂಘರ್ಷ ಹಾಗೂ ಅರಣ್ಯ ವಿಷಯಗಳ ಕುರಿತು ಸಾರ್ವಜನಿಕರ ಜತೆ ಸಮಾಲೋಚನಾ ಸಭೆಯು ಅರಣ್ಯ ಸಚಿವರಾದ ರಾಮಲಿಂಗ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯ ವಿಡಿಯೋ ಸಂವಾದ ಕೊಠಡಿಯಲ್ಲಿ ನಡೆಯಿತು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಎಂ.ಲಕ್ಷ್ಮಣ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣ ಅಧಿಕಾರಿ ಮೀನಾಕ್ಷಿ‌ ನೇಗಿ, ಪಿಸಿಸಿಎಫ್ (ವನ್ಯಜೀವಿ ವಿಭಾಗ) ಪುಷ್ಕರ್, ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಇತರರು ಇದ್ದರು. ಅರಣ್ಯ…

Read More

ಮಡಿಕೇರಿ, NEWS DESK ಆ.28: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಬಿಟ್ಟು ಕೊಡಗಿನ ಜನರು ಹಾಗೂ ರೈತರ ಹಿತಾಸಕ್ತಿಗೆ ಅನುಗುಣವಾಗಿ ಸ್ಪಷ್ಟವಾದ ದಾಖಲೆ ಆಧಾರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಶಾಸಕರು ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಇದು ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ರೈತರಿಗೆ ಸರಕಾರ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು 2013ರಲ್ಲಿ ಅಂದಿನ ಕೇಂದ್ರ ಸರಕಾರ ಒಪ್ಪಿಕೊಂಡಿದ್ದು, ವರದಿ ಅಂಗೀಕಾರಗೊಂಡ ಬಳಿಕವೂ ಇದನ್ನು ಏಕೆ ಅನುಷ್ಠಾನಗೊಳಿಸಲಾಗಿಲ್ಲ ಎಂಬುದಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೇಂದ್ರ ಸರಕಾರವನ್ನು ಪ್ರಶ್ನಿಸುತ್ತಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ರಾಜ್ಯ ಸರಕಾರಕ್ಕೆ ಅವಕಾಶವಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ…

Read More

ಮಡಿಕೇರಿ ಆ.28 NEWS DESK : ಮಹಾನ್ ಚೇತನಗಳ ಜಯಂತಿಯನ್ನು ಆಚರಿಸುವುದರಿಂದ ದೇಶದ ಶ್ರೀಮಂತ ಇತಿಹಾಸ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಮರುಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ ಕುರಿತು ಉಪನ್ಯಾಸ ನೀಡಿದ ಮಕ್ಕಂದೂರು ಸಾಧ್ಯ ಟ್ರಸ್ಟಿ ಆಫ್ ಸೋಶಿಯಲ್ ಡೆವಲಪ್‍ಮೆಂಟ್ ಟ್ರಸ್ಟಿ ಬಿ.ಎನ್.ರಮೇಶ್ ಅವರು ಸಮಾಜದಲ್ಲಿ ಜಾತಿ, ಅಸ್ಪೃಶ್ಯತೆ ಹಾಗೂ ಅಸಮಾನತೆ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಆತ್ಮವಿಶ್ವಾಸ, ಶಿಕ್ಷಣ, ಸಂಘಟನೆ ಮತ್ತು ಸಾಮಾಜಿಕ ಸಮಾನತೆಯ ಅರಿವು ಮೂಡಿಸಿದ ಮಹಾನ್ ಸಮಾಜ ಸುಧಾರಕರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರಮುಖರಾಗಿದ್ದಾರೆ ಎಂದರು. ದೇಶದ ಕೋಟ್ಯಾಂತರ ಜನರಲ್ಲಿ ಕೆಲವರು ಮಾತ್ರ ತಮ್ಮದೇ ಆದ…

Read More

ಮಡಿಕೇರಿ, NEWS DESK ಆ.28: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಇಂದು ಸನ್ಮಾನಿಸಿ ಅಭಿನಂದಿಸಲಾಯಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು, ರಕ್ಷಾಬಂಧನದ ಅಂಗವಾಗಿ ಶಾಸಕರಿಗೆ ರಕ್ಷೆಯನ್ನು ಕಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾದ ಪೊನ್ನಕ್ಕಿ, ಪ್ರಧಾನ ಕಾರ್ಯದರ್ಶಿ ಕಾವೇರಮ್ಮ, ಟೀನಾ ಹಾಗೂ ಪ್ರಭಾ ಮುದ್ದಪ್ಪ ಉಪಸ್ಥಿತರಿದ್ದರು.

Read More

ಮಡಿಕೇರಿ, NEWS DESK ಆ.28 : ಮಡಿಕೇರಿ ದಸರಾ ಸಮಿತಿ ನಗರದ ಇತಿಹಾಸ ಪ್ರಸಿದ್ಧ ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿಗೆ ನಾಂದಿ ಹಾಡಿತು. ಮಡಿಕೇರಿ ದಸರಾ ಉತ್ಸವ ಅ.11 ರಂದು ಆರಂಭಗೊಳ್ಳಲಿದ್ದು, 21 ರಂದು ವಿಜಯದಶಮಿಯ ದಶಮಂಟಪಗಳ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಳ್ಳಲಿದೆ. ರಾಜ್ಯ ಸರಕಾರ ಈಗಾಗಲೇ ಮಡಿಕೇರಿ ದಸರಾ ಸಂಭ್ರಮಕ್ಕೆ 2 ಕೋಟಿ ರೂ. ಅನುದಾನವನ್ನು ಘೋಷಿಸಿದೆ. ದಸರಾ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆ ಅಗತ್ಯ ಸಿದ್ಧತೆಗಾಗಿ ದಸರಾ ಸಮಿತಿ ಹಾಗೂ ದಶಮಂಟಪ ಸಮಿತಿ ಕಾರ್ಯೋನ್ಮುಖವಾಗಿವೆ. ಪ್ರತಿವರ್ಷದ ಸಂಪ್ರದಾಯದAತೆ ದಸರಾ ಪೂರ್ವಭಾವಿ ಸಿದ್ಧತೆಗೂ ಮೊದಲು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಮಿತಿಗಳ ಪ್ರಮುಖರು ಜನೋತ್ಸವದ ಯಶಸ್ಸಿಗಾಗಿ ಪ್ರಾರ್ಥಿಸಿದರು. ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರಾಗಿರುವ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ದಶಮಂಟಪ ಸಮಿತಿ ಅಧ್ಯಕ್ಷ ಪಾಂಡೀರ ಪೂಣಚ್ಚ, ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ, ಪದಾಧಿಕಾರಿಗಳಾದ ಚುಮ್ಮಿ…

Read More

ಮಡಿಕೇರಿ, NEWS DESK ಆ.28 : ಕಸ್ತೂರಿ ರಂಗನ್ ವರದಿ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲ. ವರದಿ ಜಾರಿಯಿಂದ ಕೊಡಗಿನ ಕಾಫಿ ಬೆಳೆಗಾರರಿಗೆ ಯಾವುದೇ ತೊಂದರೆಗಳೂ ಇಲ್ಲ. ಈ ವರದಿಯಿಂದ ಕಾವೇರಿ ನೀರನ್ನು ಬಳಸುವ ರಾಜ್ಯದ ಎಲ್ಲಾ ಜನರಿಗೆ ಲಾಭವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರಕಾರ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನ ಭಾರತದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಕೇಂದ್ರ ಮತ್ತು ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಅಗತ್ಯವಿಲ್ಲದ ಅಂಶಗಳನ್ನು ಕೈಬಿಡಲು ಪ್ರಯತ್ನಿಸಬೇಕು. ಆ ಮೂಲಕ ಜನರ ಆತಂಕವನ್ನು ದೂರ ಮಾಡಬೇಕು ಎಂದರು. ಕಸ್ತೂರಿ ರಂಗನ್ ವರದಿಯಲ್ಲಿ ಕೊಡಗಿನ 53 ಗ್ರಾಮಗಳನ್ನು ಸೂಕ್ಷö್ಮ ಪರಿಸರ ವಲಯಕ್ಕೆ ಒಳಪಡಿಸಲಾಗಿದೆ. ಇದರಲ್ಲಿ ಮಡಿಕೇರಿ ತಾಲ್ಲೂಕಿನ…

Read More

ಮಡಿಕೇರಿ, NEWS DESK ಆ.28: ಕೊಡಗು ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯನ್ನು ಆಗಸ್ಟ್ 29ರಂದು ಆಯೋಜಿಸಲಾಗಿದೆ. ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಜಿಲ್ಲೆಯ ವಿವಿಧ ಉಪವಿಭಾಗಗಳ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರು ಸಭೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಪ್ರಸ್ತಾಪಿಸಿ, ಸೂಕ್ತ ಪರಿಹಾರಕ್ಕಾಗಿ ಮನವಿ ಸಲ್ಲಿಸಬಹುದಾಗಿದೆ. ಸಭೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಸಭೆಯ ಕುರಿತು ಸಂಬಂಧಪಟ್ಟ ಸಮುದಾಯದ ಮುಖಂಡರಿಗೆ ಮಾಹಿತಿ ನೀಡಿ, ತಪ್ಪದೇ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಆ.28 : ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ.  ಅವರು  ಕರೆ ನೀಡಿದರು. ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ವತಿಯಿಂದ ಸಾರಸ್ವತ್ IAS/KAS ಅಕಾಡೆಮಿ, ಮೈಸೂರು ಇವರ ಸಹಯೋಗದಲ್ಲಿ ‘Career Opportunities in Government Sector and Civil Services’ ವಿಷಯದ ಕುರಿತು ಶುಕ್ರವಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು IQAC ಸಂಚಾಲಕರಾದ ಡಾ. ಸೌಮ್ಯ ಕೆ. ಸ್ವಾಗತಿಸಿ, ಕಾರ್ಯಾಗಾರದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕದ ಖ್ಯಾತ GMAT ತರಬೇತುದಾರರು ಹಾಗೂ RIMSEಯ ಮಾಜಿ ಪ್ರಾಂಶುಪಾಲರಾದ ಪ್ರೊ. ಚಂದ್ರಶೇಖರನ್ ಜಿ. ಭಾಗವಹಿಸಿದ್ದರು. ಸಾರಸ್ವತ್ IAS/KAS ಅಕಾಡೆಮಿ, ಮೈಸೂರಿನ…

Read More

ಮಡಿಕೇರಿ NEWS DESK ಆ.28 : ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣಾಷ್ಟಮಿ ಹಾಗೂ ಶ್ರೀ ಕೃಷ್ಣ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 4ರಂದು ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ರಾತ್ರಿ ವಿಶೇಷ ಪೂಜೆ ನೆರವೇರಲಿದ್ದು, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮವೂ ನಡೆಯಲಿದೆ. *ಮೊಸರು ಕುಡಿಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಛದ್ಮವೇಷ ಸ್ಪರ್ಧೆ* ಸೆಪ್ಟೆಂಬರ್ 6ರಂದು ಭಾನುವಾರ ಸಂಜೆ 4 ಗಂಟೆಗೆ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 6 ವರ್ಷದೊಳಗಿನ ಮಕ್ಕಳಿಗಾಗಿ ಶ್ರೀ ಕೃಷ್ಣ ಹಾಗೂ ರಾಧೆ ಛದ್ಮವೇಷ ಸ್ಪರ್ಧೆಯನ್ನೂ ಹಮ್ಮಿಕೊಳ್ಳಲಾಗಿದೆ. ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಕೃಷ್ಣನ ಆರಾಧನೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮನವಿ ಮಾಡಿದೆ. ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸುವವರು ಕೆಳಗಿನ…

Read More