ಲೇಖಕ: admin

ಮಡಿಕೇರಿ ಜು.31 NEWS DESK : ಇದೇ ಆಗಸ್ಟ್, 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಆಗಿರುವುದರಿಂದ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರತೀ ವರ್ಷದಂತೆ ಈ ಬಾರಿಯೂ ಸಹ ಅದೇ ಮಾದರಿಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಾಟರ್ ಪ್ರೂಪ್ ವೇದಿಕೆ ನಿರ್ಮಾಣ ಹಾಗೂ ಶಾಮಿಯಾನ, ಮೈಕ್ ಮತ್ತಿತರ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಧ್ವಜಾರೋಹಣ ಸಮಿತಿಯವರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು, ರಿಹರ್ಸಲ್ ಸಂದರ್ಭದಲ್ಲಿ ವಿವಿಧ ತಂಡಗಳ ಜೊತೆಗೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಲಹೆ ಮಾಡಿದರು. ಸಾಂಸ್ಕøತಿಕ ಕಾರ್ಯಕ್ರಮ ಸಮಿತಿಯವರು ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ ಹಾಡಲು ಸಿದ್ಧತೆ ಮಾಡಿಕೊಳ್ಳಬೇಕು. ರಾಷ್ಟ್ರದ ಐಕ್ಯತೆ, ಸಮಗ್ರತೆ ಬಿಂಬಿಸುವ ಹಾಡುಗಳನ್ನು…

Read More

ಮಡಿಕೇರಿ ಜು.31 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ಆಗಸ್ಟ್, 01 ರಂದು ಬೆಳಗ್ಗೆ 10.30 ಗಂಟೆಗೆ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯು ನಗರದ ಎಫ್‍ಎಂಸಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ವಿರಾಜಪೇಟೆ ಜು.31 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕಿನ ವಿರಾಜಪೇಟೆ ವಲಯದ ಗಾಂಧಿನಗರ ಕಾರ್ಯಕ್ಷೇತ್ರದ ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ವಿರಾಜಪೇಟೆಯ ಶಿಕ್ಷಕರ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಗೋವಿಂದ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಿಕ್ಷಣವೆಂದರೆ ಕೇವಲ ಪುಸ್ತಕದ ಓದು ಮತ್ತು ಅಂಕ ಗಳಿಸುವುದು ಮಾತ್ರವಲ್ಲ. ಅಂಕಗಳಿಗಿಂತ ಮಿಗಿಲಾಗಿ ಅವರಿಗೆ ಬಾಲ್ಯದಲ್ಲೇ ಸಂಸ್ಕಾರ, ನೈತಿಕ ಮೌಲ್ಯ ಹಾಗೂ ನಮ್ಮ ನಾಡಿನ ಸಂಸ್ಕೃತಿಯನ್ನು ಧಾರೆ ಎರೆಯುವುದು ಅತ್ಯಂತ ಅಗತ್ಯ. ಸುಸಂಸ್ಕೃತ ಹಾಗೂ ಶಿಸ್ತಿನ ಜೀವನವನ್ನು ನಡೆಸಲು ಸಹಕಾರಿಯಾಗುವಂತಹ ನೈಜ ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿಗೂ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು, ದೈಹಿಕವಾಗಿ ಮಾನಸಿಕವಾಗಿ ಸದೃಢರಾಗುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಜ್ಞಾನದ ವಿಕಾಸವಾಗಬೇಕು ಎನ್ನುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಈ ರೀತಿಯ ವಿಕಾಸ ಕೇಂದ್ರಗಳ ಸ್ಥಾಪನೆ ಮಾಡಿ ಮಹಿಳೆಯರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುನ್ನೆಲೆಗೆ ತರುವ ಪ್ರಯತ್ನ…

Read More

ವಿರಾಜಪೇಟೆ ಜು.31 NEWS DESK : ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಕೆ.ಜಿ.ವಿಭಾಗದ ನೂತನ ಬಾಲ ನಾಯಕರ ‘ಪದಗ್ರಹಣ ಸಮಾರಂಭ’ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಬಾಲ ನಾಯಕರಿಗೆ ಬ್ಯಾಡ್ಜ್ ನೀಡಿ ಮಾತನಾಡಿದ ಲೇಖಕಿ ರಜಿತಾ ಕಾರ್ಯಪ್ಪ, ನಾಯಕತ್ವ ಬಾಲ್ಯದಲ್ಲೇ ಮೊಳಕೆಯೊಡೆಯಬೇಕು, ನಾಯಕತ್ವ ಎಂಬುದು ಕೇವಲ ದೊಡ್ಡವರ ಆಸ್ತಿಯಲ್ಲ; ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ಜವಾಬ್ದಾರಿ, ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿದಾಗ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ರೋಟರಿ ಶಾಲೆಯ ಈ ಪ್ರಯತ್ನ ಶ್ಲಾಘನೀಯ ಎಂದರು. ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ನಾಯಕತ್ವ, ಶಿಸ್ತು ಮತ್ತು ಜವಾಬ್ದಾರಿಯ ಗುಣಗಳನ್ನು ಬೆಳೆಸುವುದು ಅವರ ಭವಿಷ್ಯಕ್ಕೆ ಬಲವಾದ ಬುನಾದಿ ಹಾಕುತ್ತದೆ. ಪ್ರತಿಯೊಬ್ಬ ಮಗುವಿನಲ್ಲೂ ಅಪಾರ ಶಕ್ತಿಯಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಮತ್ತು ಶಿಕ್ಷಕರಿಂದಾಗಬೇಕು”. ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬಾಲ್ಯದಲ್ಲೇ ಬಿತ್ತಿ, ಅವರನ್ನು ವೇದಿಕೆಯ ಮೇಲೆ ಆತ್ಮವಿಶ್ವಾಸದಿಂದ ನಿಲ್ಲುವಂತೆ ರೂಪಿಸಿದ ಕೆ.ಜಿ. ವಿಭಾಗದ ಶಿಕ್ಷಕಿಯರ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ರೋಟರಿ ಸಂಸ್ಥೆಯ ಕಾರ್ಯದರ್ಶಿ…

Read More

ವಿರಾಜಪೇಟೆ ಜು.31 NEWS DESK : ಅವರ್ಸ್ ಕ್ಲಬ್ ವತಿಯಿಂದ ಆ.5 ರಂದು ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಕಕ್ಕಡ ನಮ್ಮೆ ಆಚರಣೆ, ಸಂತೋಷ ಕೂಟ ಏರ್ಪಡಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷೆ ಮುಳ್ಳಂಡ ಶೋಭಾ ಚಂಗಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶೋಭಾ ಚಂಗಪ್ಪ ವಹಿಸಲಿದ್ದಾರೆ. ಕಕ್ಕಡ ಹಬ್ಬದ ಪ್ರಯುಕ್ತ ಕಕ್ಕಡ ತಿಂಗಳಿನ ವಿಶೇಷ ಆಹಾರ ಪದಾರ್ಥಗಳಿಂದ ಮದ್ದು ಪಾಯಸ, ಮದ್ದ್ ಪುಟ್ಟ್, ಹಲಸಿನ ಬೀಜದ ಚಟ್ನಿ, ಬೈಮಬಳೆ ಕರಿ, ಪಲ್ಯ, ಮದ್ದು ನೀರ್ ಜೆಲ್ಲಿ, ಕುವಾಲೆ ಪುಟ್ಟ್, ಪತ್ರೋಡೆ, ಏಡಿ ಕರಿ, ನಾಟಿ ಕೋಳಿ ಕರಿ, ಪ್ರೈ, ಹಂದಿಮಾಂಸ ಕರಿ, ಪ್ರೈ, ತಯಾರಿಕ ಸ್ಪರ್ಧೆ ಮತ್ತು ನಡೆಯಲಿದೆ. ಅಲ್ಲದೆ ಮನರಂಜನಾತ್ಮಕ ಆಟೋಟಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಕ್ಲಬ್‍ನ ಎಲ್ಲಾ ಸದಸ್ಯರ ಸಹಭಾಗಿತ್ವದಲ್ಲಿ ನಡೆಯಲಿದೆ ಎಂದು ಕ್ಲಬ್‍ನ ಆಡಳಿತ ಮಂಡಳಿ ಹಾಗೂ ಸದಸ್ಯರ ಪರವಾಗಿ ಅದ್ಯಕ್ಷರಾದ ಶೋಭಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಜು.31 NEWS DESK : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಯೋಜನಾಧಿಕಾರಿಗಳಾದ ಪುರುಷೋತ್ತಮ್ ಹೇಳಿದರು. ಚೆಟ್ಟಳ್ಳಿ ಪ್ರೌಢಶಾಲೆಯ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಬಿ ಸಿ ಟ್ರಸ್ಟ್ ಹಾಗೂ ಸುಂಟಿಕೊಪ್ಪ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದುಶ್ಚಟಗಳ ದಾಸತ್ವದಿಂದ ನಮ್ಮ ಆರೋಗ್ಯ ಕುಟುಂಬ ಮತ್ತು ಸಮಾಜದಿಂದ ದೂರವಿರಿಸುತ್ತದೆ. ಅಲ್ಲದೆ ಮಾನವರ ದೇಹಕ್ಕೆ ಕ್ಯಾನ್ಸರ್, ಶ್ವಾಸಕೋಶ, ಲಿವರ್ ಸೇರಿದಂತೆ ಇತರ ಅಂಗಾಗಳನ್ನು ನಾಶಪಡಿಸುತ್ತದೆ. ಮೊಬೈಲ್, ಸಾಮಾಜಿಕ ಜಾಲತಾಣದ ಅತಿಯಾದ ಬಳಕೆಯಿಂದ ನಿದ್ರೆ ಕಡಿಮೆ, ಏಕಾಗ್ರತೆ ಸಮಸ್ಯೆ ಕಾಡಲಾರಂಭಿಸುತ್ತದೆ ದುಶ್ಚಟಗಳಿಂದ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದೆ ಎಂದು ಹೇಳಿದರು. ವಕೀಲರಾದ ರೇವತಿ ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ಕಂಡು ಬರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಅವರು ಲೈಂಗಿಕ ಕಿರುಕುಳ ಬಂದಲ್ಲಿ ತಕ್ಷಣವೇ 1098 ಕರೆ ಮಾಡಿ ಮಾಹಿತಿಯನ್ನು ಹಂಚಿಕೊಳ್ಳಿ,ನಿಮ್ಮ ಸುತ್ತ ಮುತ್ತಲಿನಲ್ಲಿ ಬಾಲ್ಯ…

Read More

ಮಡಿಕೇರಿ ಜು. 31 NEWS DESK : ಸೈನಿಕಶಾಲೆಗಳ 6 ಮತ್ತು 9ನೇ ತರಗತಿಗೆ ಸೇಪ೯ಡೆ ಸಂಬಂಧಿತ ವಿದ್ಯಾಥಿ೯ ಮತ್ತು ಪೋಷಕರಲ್ಲಿ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ತರಬೇತಿ ಕಾಯಾ೯ಗಾರ ಆಯೋಜಿಸಲಾಗಿದೆ. ನಗರದ ಸಕಾ೯ರಿ ಬಸ್ ನಿಲ್ದಾಣ ಬಳಿಯಿರುವ ಕೊಡಗು ಶಿಶುಕಲ್ಯಾಣ ಸಂಸ್ಥೆಯಲ್ಲಿ ಆ.9 ಭಾನುವಾರದಿಂದ ಪ್ರತೀ ಭಾನುವಾರಗಳಂದು 20 ಭಾನುವಾರಗಳ ಕಾಲ ಸೈನಿಕ ಶಾಲಾ ಪರೀಕ್ಷಾ ಮಾಹಿತಿ ಕಾಯಾ೯ಗಾರ ಪ್ರತೀ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜರುಗಲಿದೆ. ಸರಗೂರು ಸೈನಿಕಶಾಲೆಯ ಪರಿಣಿತ ಅಧ್ಯಾಪಕರು ಸೇರಿದಂತೆ ವಿವಿಧ ವಿಷಯ ತಜ್ಞರು ಈ ಕಾಯಾ೯ಗಾರದಲ್ಲಿ ಉಪಯುಕ್ತ ಮಾಹಿತಿ ನೀಡಲಿದ್ದಾರೆ. ಆಗಸ್ಟ್ 9 ರಂದು ಭಾನುವಾರ ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯಲ್ಲಿ ಉದ್ಘಾಟನೆ ನಂತರ ವಿದ್ಯಾರ್ಥಿಗಳ ಪೋಷಕರಿಗೂ ಮಾಹಿತಿ ಶಿಬಿರ ಆಯೋಜಿತವಾಗಿದೆ. ಸೈನಿಕಶಾಲೆಗೆ ಸೇರಲಿಚ್ಚಿಸುವ ಕೊಡಗಿನ ವಿದ್ಯಾಥಿ೯ಗಳು ಈ ಉಚಿತ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ…

Read More

ಕುಶಾಲನಗರ, ಜು.31 NEWS DESK : ನೀಟ್‌ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಕುಶಾಲನಗರದಲ್ಲಿ ಕ್ಯಾಂಡಲ್ ಲೈಟ್‌ ಮಾರ್ಚ್‌ ಆಯೋಜಿಸಲಾಯಿತು. ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಕ್ಯಾಂಡಲ್ ಲೈಟ್‌ ಮಾರ್ಚ್‌ ನಡೆಸಿದ ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‌ ಮುಖಂಡರು ಬಳಿಕ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿ ಮೊಂಬತ್ತಿ ಬೆಳಗಿ ಅಗಲಿದ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ನೀಟ್‌ ಪರೀಕ್ಷೆ ಸಂಬಂಧ ಉಂಟಾಗಿರುವ ವಿವಾದಗಳ ಕುರಿತು ಆತಂಕ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವಂತೆ ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ರಫೀಕ್ ಅಲಿ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ್, ಮಾಜಿ ಅಧ್ಯಕ್ಷ ಹಾಗೂ ಯುವ ಕಾಂಗ್ರೆಸ್‌ ಮುಖಂಡ ತ್ರಿನೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ವಿ.ಪಿ. ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಕುಶಾಲನಗರ ನಗರ ಕಾಂಗ್ರೆಸ್‌ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ…

Read More

ಮಡಿಕೇರಿ, ಜು.31 NEWS DESK : ಬೆಂಗಳೂರಿನ ಕೊರಮಂಗಲದ ಚಿನ್ಮಯ ವಿದ್ಯಾಲಯದಲ್ಲಿ  ಆಯೋಜಿಸಲಾಗಿದ್ದ  ‘ಚಿನ್ಮಯ ಕಪ್–2026′ ಅಂತರಶಾಲಾ ರಾಜ್ಯಮಟ್ಟದ ರಿಂಕ್ ಹಾಕಿ (5–ಎ–ಸೈಡ್) ಪಂದ್ಯಾವಳಿಯಲ್ಲಿ  ಮಡಿಕೇರಿಯ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳ 14 ವರ್ಷದೊಳಗಿನ ಬಾಲಕರ ತಂಡವು  – ಚಾಂಪಿಯನ್ ಪಟ್ಟವನ್ನೂ,17 ವರ್ಷದೊಳಗಿನ ಬಾಲಕಿಯರ ತಂಡವು  ಸತತವಾಗಿ ಎರಡನೇ ಬಾರಿಯೂ ಚಾಂಪಿಯನ್ ಪಟ್ಟವನ್ನೂ ಹಾಗೂ 17 ವರ್ಷದೊಳಗಿನ ಬಾಲಕರ ತಂಡ  ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಪಂದ್ಯಾವಳಿಯ ಅತ್ಯುತ್ತಮ ಪ್ರದರ್ಶನಕ್ಕಾಗಿ  17 ವರ್ಷದೊಳಗಿನ ವಿಭಾಗದಲ್ಲಿ ಕೊಡಗು ವಿದ್ಯಾಲಯದ  ತೇಜಲ್ ಬೋಪಣ್ಣ ಮತ್ತು 14 ವರ್ಷದೊಳಗಿನ ವಿಭಾಗದ ಎಂ.ಎಸ್. ಚಿನ್ನಪ್ಪ  ಅವರು ಪಂದ್ಯಾವಳಿಯ ಅತ್ಯುತ್ತಮ ಆಟಗಾರ’  ಪ್ರಶಸ್ತಿಯನ್ನು ಪಡೆದರು. 17 ವರ್ಷದೊಳಗಿನ ವಿಭಾಗದಲ್ಲಿ ವರ್ಣ ಬೋಜಮ್ಮ  ಅವರು  ಪಂದ್ಯಾವಳಿಯ ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಗೆ ಭಾಜನರಾದರು. ಈ ಸಾಧನೆಗೆ ತರಬೇತುದಾರರಾದ ದೀನಾ  ಹಾಗೂ ಪಾರ್ವತಿ  ಅವರ ನಿಖರ ತರಬೇತಿ ಮತ್ತು ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ ಎಂದು ಶಾಲೆಯ ಪ್ರಾಂಶುಪಾಲರಾದ  ಸುಮಿತ್ರಾ ಕೆ ಎಸ್  ಹಾಗೂ ಆಡಳಿತ…

Read More

ಸೋಮವಾರಪೇಟೆ NEWS DESK ಜು.31 : ಸೋಮವಾರಪೇಟೆ ತಾಲೂಕಿನ ಸಮೀಪದ ಚೌಡ್ಲು ಗ್ರಾಮದ ಅರೆಬೆಟ್ಟ ಪ್ರದೇಶದಲ್ಲಿ ಹಾಡುಹಗಲೇ ಚಿರತೆ ದಾಳಿ ನಡೆಸಿ ಮೇಯಲು ಕಟ್ಟಿದ್ದ ನಾಲ್ಕು ಆಡುಗಳನ್ನು ಕೊಂದು ತಿಂದಿರುವ ಘಟನೆ ಶುಕ್ರವಾರ ನಡೆದಿದೆ. ಚೌಡ್ಲು ಗ್ರಾಮದ ಅರೆಬೆಟ್ಟ ನಿವಾಸಿ ದೇವರಾಜು ಅವರಿಗೆ ಸೇರಿದ ಎರಡು ಗಂಡು ಹಾಗೂ ಎರಡು ಹೆಣ್ಣು ಗರ್ಭಿಣಿ ಆಡುಗಳನ್ನು ತಮ್ಮ ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ನಾಲ್ಕು ಆಡುಗಳೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವು ಭಾಗಗಳನ್ನು ಚಿರತೆ ತಿಂದಿರುವುದು ಕಂಡುಬoದಿದೆ. ಘಟನೆಯಿAದ ಆಡು ಸಾಕಾಣಿಕೆ ನಡೆಸುತ್ತಿದ್ದ ದೇವರಾಜು ಅವರಿಗೆ ಭಾರೀ ನಷ್ಟ ಉಂಟಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಟದ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದು, ಇದೀಗ ನಡೆದ ದಾಳಿಯಿಂದ ಭಯ ಮತ್ತಷ್ಟು ಹೆಚ್ಚಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾಳಿ…

Read More