ಮಡಿಕೇರಿ ಏ.2 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್, 08 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಲೇಖಕ: admin
ಕಾರ್ಕಳ ಏ.2 NEWS DESK : ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ಮೂರು ದಿನಗಳ ಬೇಸಿಗೆ ಶಿಬಿರಕ್ಕೆ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್ .ಎಲ್. ಅವರು, ನಾಲ್ಕು ಗೋಡೆಗಳ ಮಧ್ಯೆ ನಡೆಯುವಪಾಠ ಪ್ರವಚನಗಳಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯಬೇಕು. ಮಕ್ಕಳು ತಮ್ಮ ಸುಂದರ ಬಾಲ್ಯವನ್ನು ಮೊಬೈಲ್ ನಿಂದ ದೂರವಿದ್ದು ತಮ್ಮ ಬದುಕನ್ನು ಸವಿಯಬೇಕೆಂಬ ಸದಾಶಯವನ್ನಿಟ್ಟುಕೊಂಡು ಈ ಚಿಲಿಪಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ. ಮಾತ್ರವಲ್ಲದೆ ಕ್ರಿಯೇಟಿವ್ ಸಂಸ್ಥೆಯ ಹೊಸ ಪರಿಕಲ್ಪನೆಯಾದ ಎಳೆಯ ಮನಸ್ಸುಗಳಿಗೆ ಮುಂದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಮತ್ತು ನಮ್ಮ ಸಂಸ್ಕೃತಿ, ದೇಶಾಭಿಮಾನವನ್ನು ಹೊಂದಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಇಂದು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು. ಸಹ ಸಂಸ್ಥಾಪಕರಲ್ಲಿ ಓರ್ವರಾದ ಡಾ.ಗಣನಾಥ…
ವಿರಾಜಪೇಟೆ ಏ.2 NEWS DESK : ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಡ ಕೂಲಿ ಕಾರ್ಮಿಕ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುತ್ತಿರುವುದರಿಂದ ಬಡ ಕುಟುಂಬಗಳಿಗೆ ಸರಕಾರದ ಪಡಿತರ ಸೌಲಭ್ಯಗಳು ದೊರಕುತ್ತಿಲ್ಲ. ತಕ್ಷಣವೇ ಸರಕಾರ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ [ಮಾರ್ಕ್ಸ್ವಾದಿ] ವಿರಾಜಪೇಟೆ ನಗರ ಸಮಿತಿ ಆಗ್ರಹಿಸಿದೆ. ವಿರಾಜಪೇಟೆ ವಿರಾಜಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪ್ರವೀಣ್ ಕುಮಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭ ಸಿ.ಪಿ.ಐ.ಎಂ. ಪಕ್ಷದ ಜಿಲ್ಲಾ ಸಮಿತಿಯ ಎ.ಸಿ. ಸಾಬು ಅವರು ಮಾತನಾಡಿ, ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯ ಸರಕಾರ ಬಡ ಕೂಲಿ ಕಾರ್ಮಿಕರ ಪಡಿತರ ಸೌಲಭ್ಯವನ್ನು ರದ್ದು ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ 7,76 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಆಹಾರ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ 3 ಲಕ್ಷದ 65 ಸಾವಿರ ಪಡಿತರ…
ಸುಂಟಿಕೊಪ್ಪ ಏ.2 NEWS DESK : ಯಾವುದೇ ಶಾಲಾ ಕಾಲೇಜುಗಳಲ್ಲಿ ವಿದ್ಯೆ ಕಲಿಸಿದ ಗುರುಗಳನ್ನು ಎದುರಿಗೆ ಕಂಡಾಗ ನಮಸ್ಕರಿಸಿ ಗೌರವಿಸಲು ಆಗದಿದ್ದರೂ ಕನಿಷ್ಠ ಕಿರುನಗೆಯನ್ನಾದರೂ ಬಿರುವಂತೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹೇಳಿದರು. ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಗದ್ದೆಹಳ್ಳದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಮಕ್ಕಳು ತಾವು ಕಲಿತ ಶಾಲೆಯನ್ನು ಮರೆಯಬಾರದು, ಶಿಕ್ಷಣ ನೀಡದ ಶಿಕ್ಷಕರನ್ನು ಎಂದಿಗೂ ಕಡೆಗಣಿಸ ಬೇಡಿ ಪ್ರಾಥಮಿಕ ಹಂತದಲ್ಲಿ ಪಡೆದಿರುವ ಶಿಕ್ಷಣವೇ ಪ್ರಮುಖ ಘಟ್ಟವಾಗಿರುತ್ತದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ತೋರುವಂತಾಗಬೇಕು ಎಂದು ಪಿ.ಆರ್.ಸುನಿಲ್ಕುಮಾರ್ ಕರೆ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯನಿ ಹೆಚ್.ಸಿ.ಹೇಮಕುಮಾರಿ ಮಾತನಾಡಿ, ಕಠಿಣ ಪರಿಶ್ರಮದಿಂದ ಮಾತ್ರ ಶಿಕ್ಷಣದಲ್ಲಿ ಉತ್ತಮ ಸಾಧನೆಯನ್ನು ಮಾಡಲು ಸಾಧ್ಯ. ಇದರಿಂದ ಉನ್ನತ ಹುದ್ದೆಗಳು ದೊರೆಯಲು ಸಾಧ್ಯವೆಂದು ಹೇಮಲತಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನಿತಾ ವಹಿಸಿದ್ದರು. ಇದೇ ಸಂದರ್ಭ ತಮ್ಮಗೆ ಶಿಕ್ಷಣ ನೀಡಿದ ಶಿಕ್ಷಕರುಗಳನ್ನು ನೆನಪಿನ ಕಾಣಿಕೆಗಳನ್ನು…
ಮಡಿಕೇರಿ ಏ.2 NEWS DESK : ಛಾಯಾಗ್ರಹಣಕ್ಕೆ ಸಂಬಂಧಿಸಿದ ಉಪಕರಣಗಳ ಬೆಲೆ ದುಪ್ಪಟ್ಟಾಗಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳನ್ನು ಒಳಗೊಂಡ ದಕ್ಷಿಣ ಕೊಡಗಿನ ವೃತ್ತಿನಿರತ ಛಾಯಾಗ್ರಾಹಕರಿಗೆ ಅನ್ವಯವಾಗುವಂತೆ ಛಾಯಾಗ್ರಹಣದ ದರವನ್ನು ಶೇ.10ರಷ್ಟು ಹೆಚ್ಚಿಸಿರುವುದಾಗಿ ದಕ್ಷಿಣ ಕೊಡಗು ಛಾಯಾಚಿತ್ರಗಾರರ ಸಂಘದ ಅಧ್ಯಕ್ಷರಾದ ಡಿ.ಸಿ.ರವೀಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪ್ರಸ್ತುತ ಪ್ರೊಫೇಷನಲ್ ಕ್ಯಾಮರಾಗಳ ಬೆಲೆ ಗಗನಕ್ಕೇರಿದ್ದರೆ, ವೃತ್ತಿಗೆ ಸಂಬಂಧಿಸಿದ ಪರಿಕರಗಳಾದ ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಮೆಮೋರಿ ಕಾರ್ಡ್, ಫೋಟೋ ಪ್ರಿಂಟ್, ಆಲ್ಬಮ್ ಮೊದಲಾದವುಗಳ ದರ ದುಪ್ಪಟ್ಟಾಗಿದೆ. ಇದರಿಂದ ಈಗಿನ ದರದಲ್ಲಿ ಸ್ಟುಡಿಯೋಗಳನ್ನು ನಡೆಸುವುದು ಪ್ರಯಾಸಕರವಾಗಿರುವುದರಿಂದ ದರ ಹೆಚ್ಚಳ ಮಾಡಿರುವುದಾಗಿ ಹೇಳಿದರು. ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚಿನ ಸ್ಟುಡಿಯೋಗಳಿದ್ದು, ಇದನ್ನು ನಂಬಿ ಬದುಕು ಕಟ್ಟಿಕೊಂಡಿರುವ ಕುಟುಂಬಗಳ ಸಂಖ್ಯೆ 150 ರಿಂದ 180ರಷ್ಟ್ಟಿದೆ. ಇಂದಿನ ದರ ಹೆಚ್ಚಳದ ಅವಧಿಯಲ್ಲಿ ಕುಟುಂಬ ನಿರ್ವಹಣೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗದಂತೆ ದರವನ್ನು ಹೆಚ್ಚಿಸಲಾಗಿದೆಯೆಂದರು. ಯಾವುದಕ್ಕೆ…
ಸುಂಟಿಕೊಪ್ಪ ಏ.2 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ವಿಶೇಷ ಬಲಿಪೂಜೆಯನ್ನು ಸಂತ ಮೇರಿ ಶಾಲಾವರಣದಲ್ಲಿ ಪ್ರಾರ್ಥನಾ ಕೂಟವನ್ನು ಬೆಂಗಳೂರಿನ ಧರ್ಮಕೇಂದ್ರ ಪ್ರೇಮ್ಕುಮಾರ್ ಹಾಗೂ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಅವರು ನೇರವೇರಿಸಿದರು. ಈ ದಿನವು ಕ್ರೈಸ್ತರಿಗೆ ಪ್ರಥಮ ಬಲಿಪೂಜೆಯ ಸಂಸ್ಕಾರ ಸ್ಥಾಪನೆಯ ದಿನವಾಗಿದೆ, ಕ್ರೈಸ್ತ ಬಾಂಧದವರಿಗೆ ಗುರು ದೀಕ್ಷೆಯ ಸ್ಥಾಪಿತವಾದ ಸ್ಮರಣೆಯ ದಿನವಾಗಿದೆ, ಕ್ರೈಸ್ತ ಧರ್ಮ ಸಭೆಯು ಸೇವೆಯನ್ನು ಸ್ಮರಿಸಿಕೊಳ್ಳುವ ಸೇವಾ ಕಾರ್ಯವನ್ನು ವೃದ್ಧಿಸುವ ದಿನವಾಗಿದೆ. ನಾನು ನಿಮ್ಮನು ಪ್ರೀತಿಸಿದಂತೆ ಪರರನ್ನು ಪ್ರೀತಿಸಿ ಎಂಬ ಹೊಸ ಆಜ್ಞೆಯನ್ನು ಪ್ರಭು ಕ್ರಿಸ್ತರು ನೇರವೇರಿಸಿದ ದಿನವಾಗಿದೆ. ಪವಿತ್ರ ಗುರುವಾರ ಕಡೆಯ ಭೋಜನದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಬಲಿಪೂಜೆ ಹಾಗೂ ಪ್ರಭುಕ್ರಿಸ್ತರು ತಾವು ಮರಣಹೊಂದುವ ಮುನ್ನದಿನ ತಮ್ಮ ಶಿಷ್ಯರೊಂದಿಗೆ ಕಡೆಯ ಬೋಜನಕ್ಕೂ ಮುನ್ನ ಶಿಷ್ಯರ ಪಾದಗಳನ್ನು ತೊಳೆದು ಕಡೆಯ ಭೋಜನವನ್ನು ಸವಿದಿದ್ದ ಸ್ಮರಣೆಯ ಅಂಗವಾಗಿ ದೇವಾಲಯದಲ್ಲಿ ಬೆಂಗಳೂರಿನ ಧರ್ಮಕೇಂದ್ರದ ಪ್ರೇಮ್ಕುಮಾರ್ ಹಾಗೂ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್…
ಬೆಂಗಳೂರು, NEWS DESK ಏಪ್ರಿಲ್ 02: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ,ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ,ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ.ಸ್ಪರ್ಧೆಯು ಏಪ್ರೀಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ನಡೆಯಲಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ,ವಿದ್ಯಾರ್ಹತೆಯ ನಿರ್ಬಂಧ ಇರುವುದಿಲ್ಲ,ಎಲ್ಲ ಆಸಕ್ತರಿಗೂ ಮುಕ್ತ ಅವಕಾಶವಿರುತ್ತದೆ.ರಾಜ್ಯದ ಯಾವುದೇ ಜಿಲ್ಲೆಗಳ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡಿನ ನಕಲು ಪ್ರತಿ ಒದಗಿಸಿ ಭಾಗವಹಿಸಬಹುದು.ಮೊದಲ ಸುತ್ತಿನಲ್ಲಿ 50 ಅಂಕಗಳ ಬಹುಆಯ್ಕೆ ಮಾದರಿಯ ಸುತ್ತು , ಈ ಸುತ್ತಿನಲ್ಲಿ ಅತಿಹೆಚ್ಚು ಅಂಕಗಳಿಸಿದ ಮೊದಲ 12 ಅಭ್ಯರ್ಥಿಗಳು ಎರಡನೇ ಸುತ್ತಿಗೆ ಆಯ್ಕೆಯಾಗುತ್ತಾರೆ. ಈ 12 ಅಭ್ಯರ್ಥಿಗಳನ್ನು 6 ತಂಡಗಳಾಗಿ ವಿಂಗಡಿಸಿ ಎರಡನೇ ಹಂತದ ಮೌಖಿಕ ಸುತ್ತು ನಡೆಸಲಾಗುವುದು.ವಿಜೇತ ತಂಡಗಳಿಗೆ…
ಮಡಿಕೇರಿ NEWS DESK ಏ.2 : ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಸತ್ಯಾಗ್ರಹ ನಡೆಯಿತು. ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವರು ಪ್ರಕೃತಿಯ ಆರಾಧಕರು, ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಇವರು ಆದಿಮಸಂಜಾತ ಸಮುದಾಯದವರಾಗಿದ್ದು, ಭಾರತದ ಪ್ರಜಾಪ್ರಭುತ್ವ ರಚನೆಯಲ್ಲಿ ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ವಿಶೇಷ ಪ್ರಾತಿನಿಧ್ಯದ ಅಗತ್ಯವಿದೆ ಎಂದರು. ಈ “ವರ್ಚುವಲ್ ಕ್ಷೇತ್ರ” ವು ಯಾವುದೇ ನಿರ್ದಿಷ್ಟ ಭೌಗೋಳಿಕ ಗಡಿಗಳನ್ನು ಹೊಂದಿರುವುದಿಲ್ಲ. 1958 ರಲ್ಲಿ ರಚಿಸಲಾದ ಸಿಕ್ಕಿಂ ಸಂಘದ ಮಾದರಿಯಲ್ಲಿ, ಕೊಡಗು ಜಿಲ್ಲೆಯ ಎಲ್ಲೇ ವಾಸವಿದ್ದರೂ, ಕೊಡವ ಸಮುದಾಯದ ಸದಸ್ಯರು ಮಾತ್ರ ಸ್ಪರ್ಧಿಸಲು ಮತ್ತು ಮತ ಚಲಾಯಿಸಲು ಇದು ಅವಕಾಶ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು. ಭಾರತದಲ್ಲಿ ಸಿಕ್ಕಿಂ ಸಂಘ ಕ್ಷೇತ್ರವು ಒಂದು ವಿಶಿಷ್ಟವಾದ, ಭೌಗೋಳಿಕವಲ್ಲದ ಕ್ಷೇತ್ರವಾಗಿದ್ದು,…
ಮಡಿಕೇರಿ ಏ.2 NEWS DESK : ಹಿಂದೂ ಸುರಕ್ಷಾ ಸಮಿತಿ ವತಿಯಿಂದ ನಾಪೋಕ್ಲುವಿನಲ್ಲಿ ಹಿಂದೂ ಸಮಾಜದ ಸಂಘಟನೆಯ ಧ್ಯೇಯದೊಂದಿಗೆ ಬೃಹತ್ ಜನಜಾಗೃತಿ ಜಾಥ ನಡೆಯಿತು. ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಯೋಜಿತ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯ ಕಾರ್ಯಕಾರಿ ಸಮಿತಿಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ, ಹಿಂದು ಸಮಾಜಕ್ಕೆ ಸಂಕಷ್ಟ ತಲೆದೋರಿದಾಗ ಅದನ್ನು ದಿಟ್ಟವಾಗಿ ಎದುರಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ ಎಂದರು. ಹಿಂದೂ ವಿರೋಧಿ ಶಕ್ತಿಗಳು ಸಮಾಜವನ್ನು ಕೆಣಕುವ ಮೊದಲು ಸಾವಿರ ಬಾರಿ ಯೋಚಿಸಬೇಕೆಂದು ತಿಳಿಸಿದ ಅವರು, ಇಂದು ಹಿಂದೂ ಸಮಾಜ ಜಾಗೃತವಾಗಿದೆ. ಒಂದು ಸಣ್ಣ ಘಟನೆಗೆ ಜಾಗೃತವಾಗಿ ಕೊಡಗಿನ ವೀರತ್ವ ಶೂರತ್ವವನ್ನು ಎಲ್ಲರಿಗೂ ಮನದಟ್ಟು ಮಾಡಿದೆ. ಹಿಂದೂ ಸಮಾಜದಲ್ಲಿ ಅನೇಕ ಜಾತಿ ಮತಗಳಿದ್ದು, ಇದನ್ನೆ ಅಸ್ತ್ರವನ್ನಾಗಿ ಹಿಂದೂ ಸಮಾಜದೊಳಗಡೆ ಜಾತಿಯ ವಿಷ ಬೀಜ ಬಿತ್ತುವ ಕೆಲಸ ಆಗುತ್ತಿದೆ, ಸಮಾಜದಲ್ಲಿ ಬೆಂಕಿ ಹುಟ್ಟದ ಹಾಗೆ ಜಾಗೃತೆ ವಹಿಸಬೇಕಿದ್ದು, ಇದಕ್ಕಾಗಿ ಹಿಂದೂ ಸಮಾಜ ಸಂಘಟನೆಯಾಗಬೇಕಾದ ಅನಿವಾರ್ಯತೆ ಇದೆ ಎಂದರು. ನಾಪೋಕ್ಲು ಸುರಕ್ಷಾ…
ಮಡಿಕೇರಿ ಏ.2 NEWS DESK : ಚೇರಂಬಾಣೆ ಸಮೀಪದ ಬೇಂಗೂರಿನ ಶ್ರೀ ಸುಬ್ರಹ್ಮಣ್ಯ ದೇವಾಲಯದ ಪಂಚ ಲೋಹದ ಬಿಂಬ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಾಭೀಷೆಕ ಏ.8ರಿಂದ 10ರವರೆಗೆ ನಡೆಯಲಿದೆಯೆಂದು ದೇವಾಲಯ ಸಮಿತಿ ಅಧ್ಯಕ್ಷರಾದ ಪಟ್ಟಮಾಡ ಡಿ.ಪೊನ್ನಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪಟ್ಟಮಾಡ ಕುಟುಂಬಸ್ಥರ ವತಿಯಿಂದ ದೇವಸ್ಥಾನದಲ್ಲಿ ಕಾರ್ಯಕ್ರಮಗಳು ಆಯೋಜಿತವಾಗಿದೆಯೆಂದರು. ಏ.8 ರಂದು ಸಂಜೆ 7 ಗಂಟೆಗೆ ಪ್ರಾರ್ಥನೆ, ಬಿಂಬ ಪರಿಗ್ರಹ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ ಮತ್ತು ವಾಸ್ತು ಬಲಿ ನಡೆಯಲಿದೆ. ಏ.9 ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಸ್ಕಂದ ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಪ್ರೋಕ್ತ ಹೋಮ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಪ್ರಾರ್ಥನೆ, ಸಂಹಾರ ತತ್ವ ಹೋಮ, ಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋದ್ವಾಸನೆ, ಜೀವಕಲಶ,…






